Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಭಾರತದ ಎಸ್ ಡಿಐ ಏರ್ ಫೋರ್ಸ್ : ಜಾಗತಿಕ ಮಟ್ಟದಲ್ಲಿ ಏರ್ ಫೋರ್ಸ್ ಸಾಫ್ಟ್ ವೇರ್ ಉತ್ಕೃಷ್ಟತೆ ಸಾಧಿಸಿದ ವಿಶ್ವದ ಮೊದಲ ಸಂಸ್ಥೆ ಎಂಬ ಗರಿ

by Bengaluru Wire Desk
October 22, 2024
in News Wire
Reading Time: 1 min read
0
ತೇಜಸ್ ಯುದ್ಧ ವಿಮಾನದ ಸಾಂದರ್ಭಿಕ ಚಿತ್ರ.

ತೇಜಸ್ ಯುದ್ಧ ವಿಮಾನದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಅ.22 www.bengaluruwire.com : ಭಾರತೀಯ ವಾಯುಪಡೆ (IAF)ಯ ಯೋಧರಿಗೆ ಯುದ್ಧ ವಿಮಾನ ತರಬೇತಿ, ಸಮರ ವಿಮಾನಗಳಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಅಳವಡಿಕೆಗೆ ಸೂಕ್ತ ಸಾಫ್ಟ್ ವೇರ್ ಗಳನ್ನು ನಿರ್ಮಿಸುವ ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ (Software Development Institute – SDI) ವಾಯುಪಡೆಯಲ್ಲಿನ ರಕ್ಷಣಾ ವ್ಯವಸ್ಥೆಯಲ್ಲಿ ಸಾಫ್ಟ್ ವೇರ್ ಉತ್ಕೃಷ್ಟತೆಯ ಪ್ರಗತಿ ಸಾಧಿಸಿದ ವಿಶ್ವದ ಮೊದಲ ಏರ್ ಫೋರ್ಸ್ ಇನ್ಸ್ಟಿಟ್ಯೂಟ್ ಎಂಬ ಖ್ಯಾತಿಗೆ ಈಗ ಪಾತ್ರವಾಗಿದೆ.

ವಾಯುಪಡೆಯ ಯುದ್ಧವಿಮಾನಕ್ಕೆ ಸಾಫ್ಟ್ ವೇರ್ ನಿರ್ಮಾಣದಲ್ಲಿ ಉತ್ಕೃಷ್ಟತೆಯ ಅನ್ವೇಷಣೆಯಲ್ಲಿ, ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ ಸಂಸ್ಥೆಯ ಹೊಸ ಸಿಎಂಎಂಐ (Capability Maturity Model Integration- CMMI)   ಆವೃತ್ತಿ 3.0 ಗೆ ಮರು ಊರ್ಜಿತಗೊಳಿಸುವಿಕೆಗಾಗಿ ಸೆಪ್ಟೆಂಬರ್ 24ರಲ್ಲಿ ತನಗೇ ತಾನೇ ಪ್ರಾಮಾಣಿಕರಣ ನೀಡಿದೆ. ಈ ರೀತಿ ವಾಯುಪಡೆಯಲ್ಲಿನ ರಕ್ಷಣಾ ವ್ಯವಸ್ಥೆಯಲ್ಲಿ ಸಾಫ್ಟ್ ವೇರ್ ಉತ್ಕೃಷ್ಟತೆಯ ಪ್ರಗತಿ ಸಾಧಿಸಿದ ವಿಶ್ವದ ಮೊದಲ ಏರ್ ಫೋರ್ಸ್ ಇನ್ಸ್ಟಿಟ್ಯೂಟ್ ಆಗಿದೆ. ಇದು ಸಾಫ್ಟ್ ವೇರ್ ಉನ್ನತ ಗುಣಮಟ್ಟವನ್ನು ಸಮರ್ಥಿಸುತ್ತದೆ. ಇದಲ್ಲದೆ ಎಸ್‌ಡಿಐನಲ್ಲಿ ಮಿಷನ್ ಕ್ರಿಟಿಕಲ್ ಏವಿಯಾನಿಕ್ಸ್ ಸಾಫ್ಟ್‌ವೇರ್‌ನ ವಿನ್ಯಾಸ ಮತ್ತು ಅಭಿವೃದ್ಧಿಗಾಗಿ  ಅಶ್ಯೂರೆನ್ಸ್ ಪ್ರಕ್ರಿಯೆಗಳನ್ನು ಅಳವಡಿಸಲಾಗಿದೆ.

ಬೆಂಗಳೂರಿನಲ್ಲಿ ನೆಲೆಗೊಂಡಿರುವ ಈ ಎಸ್ ಡಿಐ, ಐಎಎಫ್‌ನ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಹೆಚ್ಚಿಸುವ ಪ್ರಮುಖ ಪಾತ್ರವನ್ನು ವಹಿಸುವ ಸಂಸ್ಥೆಯಾಗಿದೆ. ಈ ಕಾರ್ಯವು ಐಎಎಫ್‌ನ ಮುಂಚೂಣಿಯ ಫೈಟರ್ ಪ್ಲಾಟ್‌ಫಾರ್ಮ್‌ಗಳಾದ ಸುಖೋಯ್-30 (Su30), ಹಗುರ ಯುದ್ಧ ವಿಮಾನ (LCA), ಮಿಗ್ 29 (MiG29) ಮತ್ತು ಜಾಗ್ವಾರ್ ವಿಮಾನಗಳಲ್ಲಿ ಉನ್ನತ ತಂತ್ರಜ್ಞಾನದ ಸ್ಮಾರ್ಟ್ ಶಸ್ತ್ರಾಸ್ತ್ರಗಳು ಮತ್ತು ಸಂವೇದಕಗಳ ಏಕೀಕರಣಕ್ಕಾಗಿ ಮಿಷನ್ ಕ್ರಿಟಿಕಲ್ ಏವಿಯಾನಿಕ್ಸ್ ಸಾಫ್ಟ್‌ವೇರ್‌ನ ವಿನ್ಯಾಸ ಮತ್ತು ಅಭಿವೃದ್ಧಿ (D&D) ಕಾರ್ಯವನ್ನು ಎಸ್ ಡಿಐ ಸಂಸ್ಥೆಯು ನಿರ್ವಹಿಸುತ್ತದೆ. ಯುದ್ಧ ವಿಮಾನಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳು ಮತ್ತು ನೆಟ್‌ವರ್ಕ್ ಸೆಂಟ್ರಿಕ್ ಕಾರ್ಯಾಚರಣೆಗಳು, ಸುಖೋಯ್-30 ಸಮರ ವಿಮಾನದಲ್ಲಿ ಅಪ್‌ಗ್ರೇಡ್ ಪ್ರೋಗ್ರಾಂಗಳು ಮತ್ತು ಏರ್‌ಬೋರ್ನ್ ಪ್ಲಾಟ್‌ಫಾರ್ಮ್‌ಗಳಿಗಾಗಿ ಎಐ (AI) ಆಧಾರಿತ ಅಪ್ಲಿಕೇಶನ್‌ಗಳ ಅಭಿವೃದ್ಧಿಯಲ್ಲಿ ಎಸ್ ಡಿಐ ಸಂಸ್ಥೆ ಉತ್ಕೃಷ್ಟತೆಯನ್ನು ಕಾಯ್ದುಕೊಂಡಿದೆ.  

ಈ ಕಾರ್ಯಗಳಲ್ಲದೆ ಎಸ್ ಡಿಐ ಸಂಸ್ಥೆಯು, ವಾಯು ಯುದ್ಧ, ವಾಯು ರಕ್ಷಣೆ, ವಾಯು ಸಂಚಾರ ನಿಯಂತ್ರಣ ಮತ್ತು ನ್ಯಾವಿಗೇಷನ್ ಕುರಿತು ಐಎಎಫ್ ಯೋಧರಿಗೆ ತರಬೇತಿ ನೀಡಲು ಅತ್ಯಾಧುನಿಕ ಸಿಮ್ಯುಲೇಶನ್ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುತ್ತದೆ. ಈ ವ್ಯವಸ್ಥೆಗಳು ಐಎಎಫ್ ಸಿಬ್ಬಂದಿಗೆ ಅತ್ಯಂತ ವಾಸ್ತವಿಕ ಕಾರ್ಯಾಚರಣೆಯ ತರಬೇತಿಗಾಗಿ ಅತ್ಯುತ್ತಮವಾದ ಹೈಟೆಕ್ ಸಿಮ್ಯುಲೇಶನ್ ಸಿಸ್ಟಮ್‌ಗಳನ್ನು ಒದಗಿಸುವ ಕಾರ್ಯವನ್ನು ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ ಮಾಡುತ್ತದೆ.

ಏರ್ ಕಾಂಬ್ಯಾಟ್‌ನ ಮುಂಚೂಣಿಯಲ್ಲಿರುವ ಮಿಷನ್ ಕ್ರಿಟಿಕಲ್ ಏವಿಯಾನಿಕ್ಸ್ ಮತ್ತು ಸಿಮ್ಯುಲೇಶನ್ ಸಾಫ್ಟ್‌ವೇರ್‌ನ ವಿನ್ಯಾಸ ಮತ್ತು ಅಭಿವೃದ್ಧಿಗೆ ಉತ್ತಮ ಜ್ಞಾನ ಮತ್ತು ಅನುಭವದ ಅಗತ್ಯವಿರುತ್ತದೆ. ಇದಲ್ಲದೆ ಅತ್ಯುತ್ತಮ ಸಾಫ್ಟ್ ವೇರ್ ಗುಣಮಟ್ಟ ಭರವಸೆ ಅಭ್ಯಾಸಗಳ ಕಟ್ಟುನಿಟ್ಟಾದ ಅನುಷ್ಠಾನದ ಅಗತ್ಯವಿರುತ್ತದೆ. ಸವಾಲಿನ ಕಾರ್ಯಾಚರಣೆಯ ಅಗತ್ಯತೆಗಳ ಹೊರತಾಗಿಯೂ, ಉತ್ತಮ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳುವಾಗ ಸಂಪನ್ಮೂಲಗಳು ಮತ್ತು ಸಮಯದ ಅತ್ಯುತ್ತಮ ಬಳಕೆಯನ್ನು ಇದು ಖಾತ್ರಿಗೊಳಿಸುತ್ತದೆ.

2012 ರಲ್ಲಿ ಉದ್ಯಮದ ಅತ್ಯುತ್ತಮ ಅಭ್ಯಾಸಗಳ ಗೋಲ್ಡ್ ಸ್ಟ್ಯಾಂಡರ್ಡ್, ಕೆಪಾಬಿಲಿಟಿ ಮೆಚ್ಯೂರಿಟಿ ಮಾಡೆಲ್ ಇಂಟಿಗ್ರೇಷನ್ ಡೆವಲಪ್ ಮೆಂಟ್ ಲೆವೆಲ್ 3ರ ಆವೃತ್ತಿ 1.3 ಪ್ರಮಾಣೀಕರಣವನ್ನು ಎಸ್ ಡಿಐ ಸಂಸ್ಥೆಯು ಸಾಧಿಸಿದ ದೇಶದ ಮೊದಲ ರಕ್ಷಣಾ ಸಂಸ್ಥೆ ಎಂಬ ಹೆಗ್ಗಳಿಕೆ ಪಾತ್ರವಾಗಿತ್ತು. ಅದಾದ ಬಳಿಕ ಒಂದು ದಶಕದಲ್ಲಿ, ಸಿಎಂಎಂಐ ಮಾನದಂಡಗಳಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಹೊಸ ಸಿಎಂಎಂಐ ಆವೃತ್ತಿ 3.0 ನಲ್ಲಿ ಹೆಚ್ಚು ಕಠಿಣ ಮತ್ತು ಹೊಸ ಪ್ರಕ್ರಿಯೆಗಳನ್ನು ಸೇರಿಸಲಾಗಿದೆ ಎಂದು ರಕ್ಷಣಾ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಮಳೆ ಆರ್ಭಟ : ಸಾವಿರಾರು ಮನೆಗಳಿಗೆ ನೀರು ನುಗ್ಗಿ ಅವಾಂತರ, ಕಟ್ಟಡ ಕುಸಿದು ಹಲವು ಕಾರ್ಮಿಕರು ಸಿಲುಕಿರುವ ಶಂಕೆ ; ಕೆಂಗೇರಿಯಲ್ಲಿ ಅಣ್ಣ- ತಂಗಿ ಕಾಣೆ

Next Post

BW EXCLUSIVE | 83 ಕೆರೆಗಳು ತುಂಬಿದರೂ ಸಂತೋಷಪಡುವ ಸ್ಥಿತಿಯಲ್ಲಿಲ್ಲ ಬೆಂಗಳೂರು : ಯಲಹಂಕ, ಮಹದೇವಪುರ ವಲಯಗಳಲ್ಲಿ ಮಳೆಹಾನಿಗೆ ನಿಖರ ಕಾರಣಗಳೇನು? ಪಾಲಿಕೆ ಎಡವಿದ್ದೆಲ್ಲಿ?

Next Post
ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಮಪುರ ಕೆರೆ ತುಂಬಿ ಕೋಡಿ ಹರಿಯುತ್ತಿರುವ ದ್ರೋಣ್ ಕ್ಯಾಮರಾ ಚಿತ್ರ.

BW EXCLUSIVE | 83 ಕೆರೆಗಳು ತುಂಬಿದರೂ ಸಂತೋಷಪಡುವ ಸ್ಥಿತಿಯಲ್ಲಿಲ್ಲ ಬೆಂಗಳೂರು : ಯಲಹಂಕ, ಮಹದೇವಪುರ ವಲಯಗಳಲ್ಲಿ ಮಳೆಹಾನಿಗೆ ನಿಖರ ಕಾರಣಗಳೇನು? ಪಾಲಿಕೆ ಎಡವಿದ್ದೆಲ್ಲಿ?

ಇಂದಿನಿಂದ ಹಾಸನಾಂಬೆ ಜಾತ್ರೋತ್ಸವ ಆರಂಭ : ಒಟ್ಟು 9 ದಿನಗಳ ಕಾಲ ಸಾರ್ವಜನಿಕರಿಗೆ ದರ್ಶನ ಅವಕಾಶ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group