Monday, June 9, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

BW Special | ಮೆಟ್ರೊಗೆ ಮಳೆ ತಂದ ಸೌಭಾಗ್ಯ : ಬಿಎಂಆರ್ ಸಿಎಲ್ ಪ್ರಯಾಣಿಕರ ಸಂಖ್ಯೆ, ಆದಾಯದಲ್ಲಿ ಭಾರೀ ಹೆಚ್ಚಳ

ಅಕ್ಟೋಬರ್ 1 ರಿಂದ 24 ರ ಅವಧಿಯಲ್ಲಿ ನಗರದಲ್ಲಿ ಸರಾಸರಿಯಾಗಿ ಸುರಿಯುವ ವಾಡಿಕೆ ಮಳೆಯ ಪ್ರಮಾಣ 131 ಮಿ.ಮೀ ಬದಲಿಗೆ ಶೇ.65ರಷ್ಟು ಹೆಚ್ಚಿನ, ಅಂದರೆ 217 ಮಿ.ಮೀ ಮಳೆಯಾಗಿದೆ. | ಭಾರಿ ಮಳೆಗೆ ಸಂಚಾರ ವ್ಯವಸ್ಥೆಗೆ ತೊಡಕಾದಾಗ ಸಾರ್ವಜನಿಕರು ನಮ್ಮ ಮೆಟ್ರೊ ರೈಲಿನಲ್ಲಿ ಹೆಚ್ಚಾಗಿ ಪ್ರಯಾಣಿಸಿದ್ದಾರೆ.

by Bengaluru Wire Desk
October 26, 2024
in Bengaluru Focus, BW Special, Public interest
Reading Time: 2 mins read
0
Namma Metro Purple Line

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ.

ಬೆಂಗಳೂರು, ಅ.26 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಈ ತಿಂಗಳು 1ನೇ ತಾರೀಖಿನಿಂದ 24ರವರೆಗೆ ಸುರಿದ ಮಳೆಯು ಅಕ್ಟೋಬರ್ ತಿಂಗಳಲ್ಲೇ ಮೂರನೇ ಅತ್ಯಧಿಕ ಮಳೆಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಿದೆ. ರಾಜಧಾನಿ ಬೆಂಗಳೂರಿನ ಜನರು ಈ ಅವಧಿಯಲ್ಲಿ ಸುರಿದ ತೀವ್ರ ಮಳೆಯಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆಯಲ್ಲಿ ಸಿಲುಕುವುದಕ್ಕಿಂತ ಸಿಲಿಕಾನ್ ಸಿಟಿ ಜನರು ತಮ್ಮ ಸಂಚಾರ ಸಾರಿಗೆಯಾಗಿ ಮೆಟ್ರೊದಲ್ಲಿ ಹೆಚ್ಚಾಗಿ ಸಂಚರಿಸುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

2023ನೇ ಇಸವಿಯಲ್ಲಿ ಅಕ್ಟೋಬರ್ 1 ರಿಂದ 24ನೇ ತಾರೀಖಿನವರೆಗಿನ 24 ದಿನಗಳ ಅವಧಿಯಲ್ಲಿ ನೇರಳೆ ಮತ್ತು ಹಸಿರು ಮಾರ್ಗದಲ್ಲಿ 1.52 ಕೋಟಿ ಜನರು ಮೆಟ್ರೊದಲ್ಲಿ ಪ್ರಯಾಣಿಸಿದ್ದರೆ, 2024 ಇಸವಿಯಲ್ಲಿನ ಇದೇ ಅವಧಿಯಲ್ಲಿ 1.85 ಕೋಟಿ ಜನರು ಮೆಟ್ರೊ ಬಳಸಿದ್ದಾರೆ. ಅಲ್ಲಿಗೆ ಮೆಟ್ರೊದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ 32.90 ಲಕ್ಷ ಜನರು ಹೆಚ್ಚಾಗಿ ಮೆಟ್ರೊದಲ್ಲಿ ಪ್ರಯಾಣಿಸಿರುವುದು ನಮ್ಮ ಮೆಟ್ರೊ ಅಧಿಕೃತ ಅಂಕಿ ಅಂಶಗಳು ಇದನ್ನು ಪುಷ್ಟೀಕರಿಸುತ್ತದೆ. ಈ ಅವಧಿಯಲ್ಲಿ ಅತಿ ಹೆಚ್ಚು ಪ್ರಯಾಣಿಕರು ಮೆಜಿಸ್ಟಿಕ್ ನಲ್ಲಿನ ಮೆಟ್ರೊ ನಿಲ್ದಾಣವನ್ನು ಬಳಸಿದ್ದಾರೆ.

ವರುಣ ಆರ್ಭಟಕ್ಕೆ ಮೆಟ್ರೊ ನೆಚ್ಚಿಕೊಂಡ ಪ್ರಯಾಣಿಕರು

ಅಕ್ಟೋಬರ್ ನಲ್ಲಿ 9.22 ಕೋಟಿ ರೂ. ಹೆಚ್ಚಿನ ಆದಾಯ

ಬಿಎಂಆರ್ ಸಿಎಲ್ ಆದಾಯ ಸಂಗ್ರಹದ ದೃಷ್ಟಿಯಿಂದ ನೋಡುವುದಾದರೆ, 2023ನೇ ಇಸವಿಯ ಅಕ್ಟೋಬರ್ ತಿಂಗಳ ಈ 24 ದಿನಗಳ ಅವಧಿಯಲ್ಲಿ 39.12 ಕೋಟಿ ರೂ. ಸಂಗ್ರಹವಾಗಿದ್ದರೆ, 2024ನೇ ಇಸವಿಯಲ್ಲಿ 48.35 ಕೋಟಿ ರೂ. ಹಣ ಪ್ರಯಾಣಿಕರ ಟಿಕೆಟ್ ಮೂಲಕ ಮೆಟ್ರೊಗೆ ಆದಾಯ ರೂಪದಲ್ಲಿ ಹರಿದು ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 9.22 ಕೋಟಿ ರೂ. ಹೆಚ್ಚಿನ ಆದಾಯ ಬಿಎಂಆರ್ ಸಿಎಲ್ ಗೆ ಲಭಿಸಿದಂತಾಗಿದೆ. ವರುಣನ ಆರ್ಭಟದಿಂದಾಗಿ ವೈಟ್ ಫೀಲ್ಡ್ ನಿಂದ ಚೆಲ್ಲಘಟ್ಟದವರೆಗಿನ 37 ಸ್ಟೇಷನ್ ಗಳನ್ನು ಹೊಂದಿರುವ 43.49 ಕಿ.ಮೀ ಉದ್ದದ ನೇರಳೆ ಮಾರ್ಗದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಅಕ್ಟೋಬರ್ 1 ರಿಂದ 24 ವರೆಗಿನ ಅವಧಿಯಲ್ಲಿ ಮೆಟ್ರೊದಲ್ಲಿ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಈ ವರ್ಷ 22,93,127 (22.93 ಲಕ್ಷ) ಹೆಚ್ಚಾಗಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಇನ್ನು ನಾಗಸಂದ್ರದಿಂದ ಸಿಲ್ಕ್ ಇನ್ಸಿಟ್ಯೂಟ್ ವರೆಗಿನ 29 ಸ್ಟೇಷನ್ ಗಳನ್ನು ಹೊಂದಿರುವ 30.5 ಕಿ.ಮೀ ಉದ್ದದ ಹಸಿರು ಮಾರ್ಗದಲ್ಲಿ 2023ನೇ ಇಸವಿ ಅಕ್ಟೋಬರ್ ತಿಂಗಳ 24 ದಿನಗಳ ಅವಧಿಗೆ ಹೋಲಿಸಿದರೆ ಈ ವರ್ಷ ಒಟ್ಟು 9,97,343 (9.97 ಲಕ್ಷ) ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.

ಅಕ್ಟೋಬರ್ 1 ರಿಂದ 24ನೇ ತಾರೀಖಿನ ವರೆಗಿನ ದಿನದ ಸರಾಸರಿ ಪ್ರಯಾಣಿಕರ ಸಂಖ್ಯೆ
ಇಸವಿ2023 (A)2024 (B)(B-A = ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ
ನೇರಳೆ ಮಾರ್ಗ3,44,8094,40,35695,547
ಹಸಿರು ಮಾರ್ಗ2,90,4973,32,05341,556
ಒಟ್ಟಾರೆ6,35,3067,72,4091,37,103

2023ರ ಅಕ್ಟೋಬರ್ 1 ರಿಂದ 24ನೇ ಅವಧಿಯಲ್ಲಿ ಪ್ರತಿ ದಿನ ಪ್ರಯಾಣಿಸಿದ ಪ್ರಯಾಣಿಕರ ಸರಾಸರಿ ಹೋಲಿಸಿದಾಗ ಎರಡು ಮಾರ್ಗಗಳಿಂದ ಒಟ್ಟಾರೆ ಈ ವರ್ಷ ಪ್ರತಿ ದಿನದ ಸರಾಸರಿ ಪ್ರಯಾಣಿಕರ ಸಂಖ್ಯೆ 1,37,103 ನಷ್ಟು ಹೆಚ್ಚಾಗಿದೆ. ಇನ್ನು ಬಿಎಂಆರ್ ಸಿಎಲ್ ದೈನಂದಿನ ಸರಾಸರಿ ಆದಾಯ ಈ 24 ದಿನಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ 38.44 ಲಕ್ಷ ರೂ. ನಷ್ಟು ಹೆಚ್ಚಾಗಿ ಸಂಗ್ರಹವಾಗಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಾರಿ ಅಕ್ಟೋಬರ್ 1 ರಿಂದ 24ನೇ ತಾರೀಖಿನ ಅವಧಿಯಲ್ಲಿ ಸುರಿದ ಮಳೆಯು ಈವರೆಗೆ ನಗರದಲ್ಲಿ ಸುರಿದ ಮೂರನೇ ಅತ್ಯಧಿಕ (156 ಮಿ.ಮೀ) ದಾಖಲೆಯ ಮಳೆಯಾಗಿದೆ. 1991ರಲ್ಲಿ 250 ಮಿ.ಮೀ ಮೊದಲನೇ ಅತ್ಯಧಿಕ ಮಳೆಯಾಗಿದ್ದರೆ, 1997ನೇ ಇಸವಿಯಲ್ಲಿ 178 ಮಿ.ಮೀ ಮಳೆಯಾಗಿ ಎರಡನೇ ಅತಿ ಹೆಚ್ಚಿನ ಮಳೆಯಾಗಿತ್ತು ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮೂಲಗಳು ಬೆಂಗಳೂರು ವೈರ್ ಗೆ ಮಾಹಿತಿ ನೀಡಿದೆ.

ಅಕ್ಟೋಬರ್ 1 ರಿಂದ 24ನೇ ತಾರೀಖಿನ ವರೆಗಿನ ಮಳೆಯ ಪ್ರಮಾಣ
ಕ್ರಮ ಸಂಖ್ಯೆಬಿಬಿಎಂಪಿ ವಲಯದ ಹೆಸರುವಾಡಿಕೆ ಮಳೆಯ ಪ್ರಮಾಣ (ಮಿ.ಮೀ ಗಳಲ್ಲಿ)ವಾಸ್ತವಿಕವಾಗಿ ಸುರಿದ ಮಳೆಯ ಪ್ರಮಾಣ (ಮಿ.ಮೀ ಗಳಲ್ಲಿ)
1.ಯಲಹಂಕ130292
2.ರಾಜರಾಜೇಶ್ವರಿ ನಗರ136259
3.ಪಶ್ಚಿಮ127254
4.ದಾಸರಹಳ್ಳಿ128231
5.ಬೆಂಗಳೂರು ದಕ್ಷಿಣ138202
6.ಬೊಮ್ಮನಹಳ್ಳಿ126178
7.ಮಹದೇವಪುರ132162
8.ಪೂರ್ವ135156
ಒಟ್ಟಾರೆ ಸರಾಸರಿ131217

ಅಕ್ಟೋಬರ್ 1 ರಿಂದ 24ನೇ ತಾರೀಖಿನ ವರೆಗೆ ಬೆಂಗಳೂರಿನ ಬಿಬಿಎಂಪಿಯ 8 ವಲಯಗಳಲ್ಲಿ ವಾಡಿಕೆ ಮಳೆಯ ಪ್ರಮಾಣ ಸರಾಸರಿಯಾಗಿ 131 ಮಿ.ಮೀ ಆಗಿದ್ದರೆ, ಬರೋಬ್ಬರಿ 217 ಮಿ.ಮೀ ಮಳೆಯಾಗಿದೆ. ಅಂದರೆ ವಾಡಿಕೆಗಿಂತ ಶೇ.65ರಷ್ಟು ಹೆಚ್ಚು ಮಳೆ ಸುರಿದ ಕಾರಣ ನಗರದ ಬಹುತೇಕ ಭಾಗಗಳಲ್ಲಿ ಕೆರೆ, ರಾಜಕಾಲುವೆಗಳು ತುಂಬಿದ್ದಲ್ಲದೆ, ಹಲವು ಮನೆಗಳಿಗೆ ನೀರು ನುಗ್ಗಿ, ರಸ್ತೆಗಳಲ್ಲಿ ಮೊಣಕಾಲು ಮುಳುಗುವಷ್ಟು ಮಳೆಯಾಗಿತ್ತು. ಹೀಗಾಗಿ ವಾಹನ ದಟ್ಟಣೆ ಅವಧಿಯಲ್ಲಿ ಕೆಲಸಕ್ಕೆ ಹೋಗುವವರು ಪರಿತಪಿಸುವಂತಾಗಿ ಹೆಚ್ಚಿನವರು ಸಾರಿಗೆ ವ್ಯವಸ್ಥೆಗಾಗಿ ಮೆಟ್ರೊನಲ್ಲಿ ಸಂಚರಿಸುವುದು ಮೇಲಿನ ಅಂಕಿ- ಅಂಶಗಳಿಂದ ತಿಳಿದು ಬಂದಿದೆ. ಒಟ್ಟಾರೆ ಬೆಂಗಳೂರಿನ ಟ್ರಾಫಿಕ್ ಗೆ ನಮ್ಮ ಮೆಟ್ರೊ ಒಂದು ಪರಿಣಾಮಕಾರಿ ಸಾರಿಗೆ ಸಂಪರ್ಕ ವ್ಯವಸ್ಥೆಯಾಗಿ ಬೆಳೆಯುತ್ತಿರುವುದು ಸಮಾಧಾನಕರ ಸಂಗತಿ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ರಾಜಕಾಲುವೆ ಒತ್ತುವರಿ ನವೆಂಬರ್ 15ರ ಒಳಗೆ ತೆರವಿಗೆ, ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ

Next Post

ರಾಜ್ಯದಲ್ಲಿ ನೆರೆ ಹಾವಳಿಯಿಂದ ಹಾನಿ : ದೀಪಾವಳಿ ಒಳಗೆ ಪರಿಹಾರ ವಿತರಣೆಗೆ ವಿಪಕ್ಷ ಬಿಜೆಪಿ ಆಗ್ರಹ

Next Post

ರಾಜ್ಯದಲ್ಲಿ ನೆರೆ ಹಾವಳಿಯಿಂದ ಹಾನಿ : ದೀಪಾವಳಿ ಒಳಗೆ ಪರಿಹಾರ ವಿತರಣೆಗೆ ವಿಪಕ್ಷ ಬಿಜೆಪಿ ಆಗ್ರಹ

MP Tejaswi Surya

IRONMAN 70.3 RACE | ಗೋವಾದ ಐರನ್ ಮ್ಯಾನ್ 70.3 ಕಠಿಣ ಸವಾಲು ಪೂರ್ಣಗೊಳಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ : ಪ್ರಧಾನಿ ಮೋದಿ ಮೆಚ್ಚುಗೆ

Please login to join discussion

Like Us on Facebook

Follow Us on Twitter

Recent News

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

June 9, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

June 9, 2025

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

June 8, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d