Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | ಮೆಟ್ರೊಗೆ ಮಳೆ ತಂದ ಸೌಭಾಗ್ಯ : ಬಿಎಂಆರ್ ಸಿಎಲ್ ಪ್ರಯಾಣಿಕರ ಸಂಖ್ಯೆ, ಆದಾಯದಲ್ಲಿ ಭಾರೀ ಹೆಚ್ಚಳ

ಅಕ್ಟೋಬರ್ 1 ರಿಂದ 24 ರ ಅವಧಿಯಲ್ಲಿ ನಗರದಲ್ಲಿ ಸರಾಸರಿಯಾಗಿ ಸುರಿಯುವ ವಾಡಿಕೆ ಮಳೆಯ ಪ್ರಮಾಣ 131 ಮಿ.ಮೀ ಬದಲಿಗೆ ಶೇ.65ರಷ್ಟು ಹೆಚ್ಚಿನ, ಅಂದರೆ 217 ಮಿ.ಮೀ ಮಳೆಯಾಗಿದೆ. | ಭಾರಿ ಮಳೆಗೆ ಸಂಚಾರ ವ್ಯವಸ್ಥೆಗೆ ತೊಡಕಾದಾಗ ಸಾರ್ವಜನಿಕರು ನಮ್ಮ ಮೆಟ್ರೊ ರೈಲಿನಲ್ಲಿ ಹೆಚ್ಚಾಗಿ ಪ್ರಯಾಣಿಸಿದ್ದಾರೆ.

by Bengaluru Wire Desk
October 26, 2024
in Bengaluru Focus, BW Special, Public interest
Reading Time: 2 mins read
0
Namma Metro Purple Line

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ.

ಬೆಂಗಳೂರು, ಅ.26 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಈ ತಿಂಗಳು 1ನೇ ತಾರೀಖಿನಿಂದ 24ರವರೆಗೆ ಸುರಿದ ಮಳೆಯು ಅಕ್ಟೋಬರ್ ತಿಂಗಳಲ್ಲೇ ಮೂರನೇ ಅತ್ಯಧಿಕ ಮಳೆಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಿದೆ. ರಾಜಧಾನಿ ಬೆಂಗಳೂರಿನ ಜನರು ಈ ಅವಧಿಯಲ್ಲಿ ಸುರಿದ ತೀವ್ರ ಮಳೆಯಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆಯಲ್ಲಿ ಸಿಲುಕುವುದಕ್ಕಿಂತ ಸಿಲಿಕಾನ್ ಸಿಟಿ ಜನರು ತಮ್ಮ ಸಂಚಾರ ಸಾರಿಗೆಯಾಗಿ ಮೆಟ್ರೊದಲ್ಲಿ ಹೆಚ್ಚಾಗಿ ಸಂಚರಿಸುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

2023ನೇ ಇಸವಿಯಲ್ಲಿ ಅಕ್ಟೋಬರ್ 1 ರಿಂದ 24ನೇ ತಾರೀಖಿನವರೆಗಿನ 24 ದಿನಗಳ ಅವಧಿಯಲ್ಲಿ ನೇರಳೆ ಮತ್ತು ಹಸಿರು ಮಾರ್ಗದಲ್ಲಿ 1.52 ಕೋಟಿ ಜನರು ಮೆಟ್ರೊದಲ್ಲಿ ಪ್ರಯಾಣಿಸಿದ್ದರೆ, 2024 ಇಸವಿಯಲ್ಲಿನ ಇದೇ ಅವಧಿಯಲ್ಲಿ 1.85 ಕೋಟಿ ಜನರು ಮೆಟ್ರೊ ಬಳಸಿದ್ದಾರೆ. ಅಲ್ಲಿಗೆ ಮೆಟ್ರೊದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ 32.90 ಲಕ್ಷ ಜನರು ಹೆಚ್ಚಾಗಿ ಮೆಟ್ರೊದಲ್ಲಿ ಪ್ರಯಾಣಿಸಿರುವುದು ನಮ್ಮ ಮೆಟ್ರೊ ಅಧಿಕೃತ ಅಂಕಿ ಅಂಶಗಳು ಇದನ್ನು ಪುಷ್ಟೀಕರಿಸುತ್ತದೆ. ಈ ಅವಧಿಯಲ್ಲಿ ಅತಿ ಹೆಚ್ಚು ಪ್ರಯಾಣಿಕರು ಮೆಜಿಸ್ಟಿಕ್ ನಲ್ಲಿನ ಮೆಟ್ರೊ ನಿಲ್ದಾಣವನ್ನು ಬಳಸಿದ್ದಾರೆ.

ವರುಣ ಆರ್ಭಟಕ್ಕೆ ಮೆಟ್ರೊ ನೆಚ್ಚಿಕೊಂಡ ಪ್ರಯಾಣಿಕರು

ಅಕ್ಟೋಬರ್ ನಲ್ಲಿ 9.22 ಕೋಟಿ ರೂ. ಹೆಚ್ಚಿನ ಆದಾಯ

ಬಿಎಂಆರ್ ಸಿಎಲ್ ಆದಾಯ ಸಂಗ್ರಹದ ದೃಷ್ಟಿಯಿಂದ ನೋಡುವುದಾದರೆ, 2023ನೇ ಇಸವಿಯ ಅಕ್ಟೋಬರ್ ತಿಂಗಳ ಈ 24 ದಿನಗಳ ಅವಧಿಯಲ್ಲಿ 39.12 ಕೋಟಿ ರೂ. ಸಂಗ್ರಹವಾಗಿದ್ದರೆ, 2024ನೇ ಇಸವಿಯಲ್ಲಿ 48.35 ಕೋಟಿ ರೂ. ಹಣ ಪ್ರಯಾಣಿಕರ ಟಿಕೆಟ್ ಮೂಲಕ ಮೆಟ್ರೊಗೆ ಆದಾಯ ರೂಪದಲ್ಲಿ ಹರಿದು ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 9.22 ಕೋಟಿ ರೂ. ಹೆಚ್ಚಿನ ಆದಾಯ ಬಿಎಂಆರ್ ಸಿಎಲ್ ಗೆ ಲಭಿಸಿದಂತಾಗಿದೆ. ವರುಣನ ಆರ್ಭಟದಿಂದಾಗಿ ವೈಟ್ ಫೀಲ್ಡ್ ನಿಂದ ಚೆಲ್ಲಘಟ್ಟದವರೆಗಿನ 37 ಸ್ಟೇಷನ್ ಗಳನ್ನು ಹೊಂದಿರುವ 43.49 ಕಿ.ಮೀ ಉದ್ದದ ನೇರಳೆ ಮಾರ್ಗದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಅಕ್ಟೋಬರ್ 1 ರಿಂದ 24 ವರೆಗಿನ ಅವಧಿಯಲ್ಲಿ ಮೆಟ್ರೊದಲ್ಲಿ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಈ ವರ್ಷ 22,93,127 (22.93 ಲಕ್ಷ) ಹೆಚ್ಚಾಗಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಇನ್ನು ನಾಗಸಂದ್ರದಿಂದ ಸಿಲ್ಕ್ ಇನ್ಸಿಟ್ಯೂಟ್ ವರೆಗಿನ 29 ಸ್ಟೇಷನ್ ಗಳನ್ನು ಹೊಂದಿರುವ 30.5 ಕಿ.ಮೀ ಉದ್ದದ ಹಸಿರು ಮಾರ್ಗದಲ್ಲಿ 2023ನೇ ಇಸವಿ ಅಕ್ಟೋಬರ್ ತಿಂಗಳ 24 ದಿನಗಳ ಅವಧಿಗೆ ಹೋಲಿಸಿದರೆ ಈ ವರ್ಷ ಒಟ್ಟು 9,97,343 (9.97 ಲಕ್ಷ) ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.

ಅಕ್ಟೋಬರ್ 1 ರಿಂದ 24ನೇ ತಾರೀಖಿನ ವರೆಗಿನ ದಿನದ ಸರಾಸರಿ ಪ್ರಯಾಣಿಕರ ಸಂಖ್ಯೆ
ಇಸವಿ2023 (A)2024 (B)(B-A = ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ
ನೇರಳೆ ಮಾರ್ಗ3,44,8094,40,35695,547
ಹಸಿರು ಮಾರ್ಗ2,90,4973,32,05341,556
ಒಟ್ಟಾರೆ6,35,3067,72,4091,37,103

2023ರ ಅಕ್ಟೋಬರ್ 1 ರಿಂದ 24ನೇ ಅವಧಿಯಲ್ಲಿ ಪ್ರತಿ ದಿನ ಪ್ರಯಾಣಿಸಿದ ಪ್ರಯಾಣಿಕರ ಸರಾಸರಿ ಹೋಲಿಸಿದಾಗ ಎರಡು ಮಾರ್ಗಗಳಿಂದ ಒಟ್ಟಾರೆ ಈ ವರ್ಷ ಪ್ರತಿ ದಿನದ ಸರಾಸರಿ ಪ್ರಯಾಣಿಕರ ಸಂಖ್ಯೆ 1,37,103 ನಷ್ಟು ಹೆಚ್ಚಾಗಿದೆ. ಇನ್ನು ಬಿಎಂಆರ್ ಸಿಎಲ್ ದೈನಂದಿನ ಸರಾಸರಿ ಆದಾಯ ಈ 24 ದಿನಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ 38.44 ಲಕ್ಷ ರೂ. ನಷ್ಟು ಹೆಚ್ಚಾಗಿ ಸಂಗ್ರಹವಾಗಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಾರಿ ಅಕ್ಟೋಬರ್ 1 ರಿಂದ 24ನೇ ತಾರೀಖಿನ ಅವಧಿಯಲ್ಲಿ ಸುರಿದ ಮಳೆಯು ಈವರೆಗೆ ನಗರದಲ್ಲಿ ಸುರಿದ ಮೂರನೇ ಅತ್ಯಧಿಕ (156 ಮಿ.ಮೀ) ದಾಖಲೆಯ ಮಳೆಯಾಗಿದೆ. 1991ರಲ್ಲಿ 250 ಮಿ.ಮೀ ಮೊದಲನೇ ಅತ್ಯಧಿಕ ಮಳೆಯಾಗಿದ್ದರೆ, 1997ನೇ ಇಸವಿಯಲ್ಲಿ 178 ಮಿ.ಮೀ ಮಳೆಯಾಗಿ ಎರಡನೇ ಅತಿ ಹೆಚ್ಚಿನ ಮಳೆಯಾಗಿತ್ತು ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮೂಲಗಳು ಬೆಂಗಳೂರು ವೈರ್ ಗೆ ಮಾಹಿತಿ ನೀಡಿದೆ.

ಅಕ್ಟೋಬರ್ 1 ರಿಂದ 24ನೇ ತಾರೀಖಿನ ವರೆಗಿನ ಮಳೆಯ ಪ್ರಮಾಣ
ಕ್ರಮ ಸಂಖ್ಯೆಬಿಬಿಎಂಪಿ ವಲಯದ ಹೆಸರುವಾಡಿಕೆ ಮಳೆಯ ಪ್ರಮಾಣ (ಮಿ.ಮೀ ಗಳಲ್ಲಿ)ವಾಸ್ತವಿಕವಾಗಿ ಸುರಿದ ಮಳೆಯ ಪ್ರಮಾಣ (ಮಿ.ಮೀ ಗಳಲ್ಲಿ)
1.ಯಲಹಂಕ130292
2.ರಾಜರಾಜೇಶ್ವರಿ ನಗರ136259
3.ಪಶ್ಚಿಮ127254
4.ದಾಸರಹಳ್ಳಿ128231
5.ಬೆಂಗಳೂರು ದಕ್ಷಿಣ138202
6.ಬೊಮ್ಮನಹಳ್ಳಿ126178
7.ಮಹದೇವಪುರ132162
8.ಪೂರ್ವ135156
ಒಟ್ಟಾರೆ ಸರಾಸರಿ131217

ಅಕ್ಟೋಬರ್ 1 ರಿಂದ 24ನೇ ತಾರೀಖಿನ ವರೆಗೆ ಬೆಂಗಳೂರಿನ ಬಿಬಿಎಂಪಿಯ 8 ವಲಯಗಳಲ್ಲಿ ವಾಡಿಕೆ ಮಳೆಯ ಪ್ರಮಾಣ ಸರಾಸರಿಯಾಗಿ 131 ಮಿ.ಮೀ ಆಗಿದ್ದರೆ, ಬರೋಬ್ಬರಿ 217 ಮಿ.ಮೀ ಮಳೆಯಾಗಿದೆ. ಅಂದರೆ ವಾಡಿಕೆಗಿಂತ ಶೇ.65ರಷ್ಟು ಹೆಚ್ಚು ಮಳೆ ಸುರಿದ ಕಾರಣ ನಗರದ ಬಹುತೇಕ ಭಾಗಗಳಲ್ಲಿ ಕೆರೆ, ರಾಜಕಾಲುವೆಗಳು ತುಂಬಿದ್ದಲ್ಲದೆ, ಹಲವು ಮನೆಗಳಿಗೆ ನೀರು ನುಗ್ಗಿ, ರಸ್ತೆಗಳಲ್ಲಿ ಮೊಣಕಾಲು ಮುಳುಗುವಷ್ಟು ಮಳೆಯಾಗಿತ್ತು. ಹೀಗಾಗಿ ವಾಹನ ದಟ್ಟಣೆ ಅವಧಿಯಲ್ಲಿ ಕೆಲಸಕ್ಕೆ ಹೋಗುವವರು ಪರಿತಪಿಸುವಂತಾಗಿ ಹೆಚ್ಚಿನವರು ಸಾರಿಗೆ ವ್ಯವಸ್ಥೆಗಾಗಿ ಮೆಟ್ರೊನಲ್ಲಿ ಸಂಚರಿಸುವುದು ಮೇಲಿನ ಅಂಕಿ- ಅಂಶಗಳಿಂದ ತಿಳಿದು ಬಂದಿದೆ. ಒಟ್ಟಾರೆ ಬೆಂಗಳೂರಿನ ಟ್ರಾಫಿಕ್ ಗೆ ನಮ್ಮ ಮೆಟ್ರೊ ಒಂದು ಪರಿಣಾಮಕಾರಿ ಸಾರಿಗೆ ಸಂಪರ್ಕ ವ್ಯವಸ್ಥೆಯಾಗಿ ಬೆಳೆಯುತ್ತಿರುವುದು ಸಮಾಧಾನಕರ ಸಂಗತಿ.

WhatsApp Join our WhatsApp Channel
Previous Post

ರಾಜಕಾಲುವೆ ಒತ್ತುವರಿ ನವೆಂಬರ್ 15ರ ಒಳಗೆ ತೆರವಿಗೆ, ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ

Next Post

ರಾಜ್ಯದಲ್ಲಿ ನೆರೆ ಹಾವಳಿಯಿಂದ ಹಾನಿ : ದೀಪಾವಳಿ ಒಳಗೆ ಪರಿಹಾರ ವಿತರಣೆಗೆ ವಿಪಕ್ಷ ಬಿಜೆಪಿ ಆಗ್ರಹ

Next Post

ರಾಜ್ಯದಲ್ಲಿ ನೆರೆ ಹಾವಳಿಯಿಂದ ಹಾನಿ : ದೀಪಾವಳಿ ಒಳಗೆ ಪರಿಹಾರ ವಿತರಣೆಗೆ ವಿಪಕ್ಷ ಬಿಜೆಪಿ ಆಗ್ರಹ

MP Tejaswi Surya

IRONMAN 70.3 RACE | ಗೋವಾದ ಐರನ್ ಮ್ಯಾನ್ 70.3 ಕಠಿಣ ಸವಾಲು ಪೂರ್ಣಗೊಳಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ : ಪ್ರಧಾನಿ ಮೋದಿ ಮೆಚ್ಚುಗೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group