Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Viral Video News | ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಾಮಾನ್ಯ : ಈಗ ಏರ್ ಪೋರ್ಟ್ ರನ್ ವೇ ಸರದಿ

ಬೆಂಗಳೂರಿನ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ 2013-14ರಲ್ಲಿ 60 ಲಕ್ಷವಿತ್ತು. ಆದರೀಗ 2024ರ ನವೆಂಬರ್ ನಲ್ಲಿ 1.2 ಕೋಟಿಗೆ ತಲುಪಿದೆ. | 2024 ರ ಹಣಕಾಸು ವರ್ಷದಲ್ಲಿ, ಕೆಐಎಎಲ್ ಏರ್ ಪೋರ್ಟ್ ನಲ್ಲಿ ಒಟ್ಟು 2,45,880 ವಾಯು ಸಂಚಾರ ಚಲನೆಗಳನ್ನು ದಾಖಲಿಸಿದೆ. | ರಸ್ತೆಯಲ್ಲೂ – ಏರ್ ಪೋರ್ಟ್ ನಲ್ಲೂ ಜಾಮ್ ಜಾಮ್

by Bengaluru Wire Desk
November 9, 2024
in Bengaluru Focus, Public interest
Reading Time: 1 min read
0
KIAL Airport Flight Que

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಟೇಕಾಫ್ ಆಗಲು ಒಂದರ ಹಿಂದೆ ಒಂದು ಸಾಲುಗಟ್ಟಿ ನಿಂತಿರುವ ವಿಡಿಯೋ ಪೋಸ್ಟ್ ವೊಂದರ ಚಿತ್ರ.

ಬೆಂಗಳೂರು, ನ.09 www.bengaluruwire.com : ಐಟಿ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಅನ್ನೋದು ಸಾಮಾನ್ಯ. ಆದರೆ ಇತ್ತೀಚೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport Limited – KIAL) ದಲ್ಲಿ ಟ್ರಾಫಿಕ್ ಜಾಮ್ ಕಂಡುಬಂದಿದೆ. ಅದು ಅಲ್ಲಿಗೆ ಸಂಪರ್ಕಿಸುವ ರಸ್ತೆಯಲ್ಲಲ್ಲ. ಬದಲಿಗೆ ಏರ್ ಪೋರ್ಟ್ ನಲ್ಲಿ.

ಸಾಮಾಜಿಕ ಮಾಧ್ಯಮದಲ್ಲಿ ವಿಮಾನಗಳು ಹಾರಲು ಒಂದರ ಹಿಂದೆ ಒಂದು ಸರತಿ ಸಾಲಲ್ಲಿ ನಿಂತಿರುವ ಅಪರೂಪದ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದ್ದು, ಹಲವು ನೆಟ್ಟಿಗರ ಆಸಕ್ತಿಯನ್ನು ಕೆರಳಿಸಿದೆ. ಈ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ “ರನ್‌ವೇ ಟ್ರಾಫಿಕ್ ಜಾಮ್” ಬಗ್ಗೆ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರನ್‌ವೇಯಲ್ಲಿನ ಈ ಅನಿರೀಕ್ಷಿತ ವಿಳಂಬವು ನಗರದಲ್ಲಿ ಹೆಚ್ಚುತ್ತಿರುವ ವಾಯು ಸಂಚಾರ ಮತ್ತು ವಿಮಾನ ನಿಲ್ದಾಣದ ಕಾರ್ಯಾಚರಣೆಗಳ ಮೇಲೆ ಹೇರುತ್ತಿರುವ ಒತ್ತಡದ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ. ಇದಲ್ಲದೆ ಈ ಘಟನೆಯು ವಿಮಾನ ಪ್ರಯಾಣಕ್ಕೆ ಹೆಚ್ಚುತ್ತಿರುವ ಬೇಡಿಕೆ ಮತ್ತು ವಿಮಾನ ನಿಲ್ದಾಣದ ಮೂಲಸೌಕರ್ಯದ ಸಾಮರ್ಥ್ಯದ ಮಿತಿಗಳ ಬಗ್ಗೆ ಪ್ರಶ್ನೆಗಳು ಏಳುವಂತೆ ಮಾಡಿದೆ. 2024 ರ ಹಣಕಾಸು ವರ್ಷದಲ್ಲಿ, ಕೆಐಎಎಲ್ ಏರ್ ಪೋರ್ಟ್ ನಲ್ಲಿ ಒಟ್ಟು 2,45,880 ವಾಯು ಸಂಚಾರ ಚಲನೆಗಳನ್ನು ದಾಖಲಿಸಿದೆ. ಎರಡು ರನ್ ವೇಗಳನ್ನು ಹೊಂದಿರುವ ಕೆಐಎಎಲ್ ನಲ್ಲಿ ಪ್ರತಿದಿನ ಸರಾಸರಿಯಾಗಿ 750 ವಿಮಾನಗಳನ್ನು ನಿರ್ವಹಿಸಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ 2013-14ರಲ್ಲಿ 60 ಲಕ್ಷವಿತ್ತು. ಆದರೀಗ 2024ರ ನವೆಂಬರ್ ನಲ್ಲಿ  1.2 ಕೋಟಿಗೆ ತಲುಪಿದೆ. ಪ್ರತಿದಿನ 6 ಸಾವಿರ ವಾಹನಗಳು ಹೊಸದಾಗಿ ನೋಂದಣಿಯಾಗಿ ರಸ್ತೆಗಿಳಿಯುತ್ತಿದೆ. ಈಗಿನ ಪರಿಸ್ಥಿತಿಯಲ್ಲಿ ಸರಾಸರಿಯಾಗಿ ನಗರದ ಪ್ರತಿಯೊಬ್ಬ ನಿವಾಸಿ ಬಳಿ ಒಂದು ವಾಹನವನ್ನು ಹೊಂದಿದ್ದಾರೆ.ಇದೇ ವೇಗದಲ್ಲಿ ವಾಹನಗಳ ಸಂಖ್ಯೆ ಏರುತ್ತಿದ್ದರೆ ಮುಂದಿನ ಐದು ವರ್ಷಗಳ ಒಳಗಾಗಿ ನಗರದ ಜನಸಂಖ್ಯೆಯನ್ನು ಮೀರಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

Kempegowda International Airport
ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಾಂಗಣ ಚಿತ್ರ.

ಈಗಾಗಲೇ ತೀವ್ರ ರಸ್ತೆ ಸಂಚಾರ ದಟ್ಟಣೆಗೆ ಹೆಸರುವಾಸಿಯಾಗಿರುವ ಬೆಂಗಳೂರು ಈಗ ತನ್ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ರೀತಿಯ ಸವಾಲನ್ನು ಎದುರಿಸುತ್ತಿದೆ. ಈ ರೀತಿಯ ಘಟನೆಯು ಅಸಾಮಾನ್ಯವಾಗಿದ್ದರೂ, ಇದು ವಾಯು ಸಂಚಾರದ ಸುಧಾರಿತ ನಿರ್ವಹಣೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ. “ಬೆಂಗಳೂರು ರಸ್ತೆ ಸಂಚಾರ ದಟ್ಟಣೆಗೆ ಹೆಸರುವಾಸಿಯಾಗಿದೆ, ಆದರೆ ಇಂದು ಬೆಂಗಳೂರು ವಿಮಾನ ನಿಲ್ದಾಣದ ರನ್‌ವೇ ಕೂಡ ಇದೇ ರೀತಿಯ ಪರಿಸ್ಥಿತಿಯನ್ನು ಅನುಭವಿಸಿದೆ. ಗಮನಾರ್ಹ ಸಂಖ್ಯೆಯ ವಿಮಾನಗಳು ಸರದಿಯಲ್ಲಿ ನಿಂತು, ಟೇಕ್ ಆಫ್ ಆಗಲು ಕಾಯುತ್ತಿದ್ದವು, ಅಪರೂಪದ ‘ಟ್ರಾಫಿಕ್ ಜಾಮ್’ ಅನ್ನು ಇದು ಸೃಷ್ಟಿಸಿದೆ. ವಿಮಾನ ನಿಲ್ದಾಣದ ರನ್‌ವೇಯಲ್ಲಿ ಈ ಅಸಾಮಾನ್ಯ ದೃಶ್ಯವು ಹೆಚ್ಚುತ್ತಿರುವ ವಾಯು ದಟ್ಟಣೆ ಮತ್ತು ಬೆಂಗಳೂರು ವಿಮಾನನಿಲ್ದಾಣದಲ್ಲಿ ಗದ್ದಲದ ಚಟುವಟಿಕೆಯನ್ನು ಎತ್ತಿ ತೋರಿಸುತ್ತದೆ, ಇದು ನಗರದ ಕ್ಷಿಪ್ರ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ಅದರ ಪ್ರಮುಖ ಟ್ರಾವೆಲ್ ಹಬ್ ಅನ್ನು ಪ್ರತಿಬಿಂಬಿಸುತ್ತದೆ” ಎಂದು ವಿಡಿಯೋ ಪೋಸ್ಟ್ ಮಾಡಿದ ಎಕ್ಸ್ ಖಾತೆಯಲ್ಲಿ ಕರ್ನಾಟಕ ಪೋರ್ಟ್ ಫೊಲಿಯೋ ಖಾತೆದಾರರು ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ತನಕ 32.7 ಸಾವಿರ ಜನರು ಇದನ್ನು ವೀಕ್ಷಿಸಿದ್ದಾರೆ. ಆದಾಗ್ಯೂ, ಬೆಂಗಳೂರು ವೈರ್, ಕರ್ನಾಟಕ ಪೋರ್ಟ್‌ಫೋಲಿಯೊ ಹಂಚಿಕೊಂಡ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಾಧ್ಯವಾಗಿಲ್ಲ.

ಈ ಪೋಸ್ಟ್ ಬಗ್ಗೆ ನೆಟ್ಟಿಗರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ‘ ಇದು ಸಮಾನಾಂತರ ರನ್ವೇಗಳನ್ನು ಹೊಂದಿಲ್ಲವೇ? ಒಂದು ರನ್ ವೇ, ಟೇಕ್ ಆಫ್ ಮಾಡಲು ಮತ್ತು ಇನ್ನೊಂದು ರನ್ ವೇಯನ್ನು ಸಮಾನಾಂತರವಾಗಿ ಲ್ಯಾಂಡಿಂಗ್ ಮಾಡಲು ಬಳಸಬಹುದೇ? ಅವರು ಅದನ್ನು ಬಳಸುತ್ತಿಲ್ಲವೇ?” ಎಂದು ಬಳಕೆದಾರರು ಪ್ರಶ್ನಿಸಿದ್ದಾರೆ. ಇದೇ ವಿಡಿಯೋ ಪೋಸ್ಟ್ ಬಗ್ಗೆ ಮತ್ತೊಬ್ಬ ಖಾತೆದಾರರು, “’ಮೊದಲ ಬಾರಿಯಲ್ಲ, ಈ ಹಿಂದೆಯೂ ಇದೇ ಪರಿಸ್ಥಿತಿ ಅನುಭವಿಸಿದ್ದೇನೆ” ಎಂದು ಅವರು ಹೇಳಿದ್ದಾರೆ. “ಇದು ಬೆಂಗಳೂರಿನ ಕ್ಷಿಪ್ರ ಬೆಳವಣಿಗೆಯ ಪ್ರತಿಬಿಂಬವಲ್ಲ.  ಆದರೆ ಕೇವಲ ಒಂದು ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಕರ್ನಾಟಕದ ಸಮರ್ಥನೀಯವಲ್ಲದ, ಯೋಜಿತವಲ್ಲದ ಬೆಳವಣಿಗೆಯ ಸಂಕೇತವಾಗಿದೆ” ಎಂದು ಮೂರನೇ ಬಳಕೆದಾರರು ಟೀಕಿಸಿದ್ದಾರೆ.

"Bengaluru is not only famous for its road traffic congestion, but today even the runway at Bengaluru Airport experienced a similar situation. A significant number of aircraft were seen queued up, waiting for their turn to take off, creating a rare 'traffic jam' in the airport… pic.twitter.com/SeXJ7cVaBu

— Karnataka Portfolio (@karnatakaportf) November 8, 2024

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Food Adulteration | ಎಚ್ಚರ!! : ಕೇರಳದಿಂದ ಕರ್ನಾಟಕದಲ್ಲಿ ಮಾರಾಟವಾಗುವ ಈ 31 ತಿನಿಸುಗಳಲ್ಲಿ ಕೃತಕ ಬಣ್ಣ

Next Post

Digital Population Clock | ಬೆಂಗಳೂರಿನ ಮೊದಲ ಡಿಜಿಟಲ್ ಜನಸಂಖ್ಯಾ ಗಡಿಯಾರ ಐಸೆಕ್ ಸಂಸ್ಥೆಯಲ್ಲಿ ಅನಾವರಣ

Next Post

Digital Population Clock | ಬೆಂಗಳೂರಿನ ಮೊದಲ ಡಿಜಿಟಲ್ ಜನಸಂಖ್ಯಾ ಗಡಿಯಾರ ಐಸೆಕ್ ಸಂಸ್ಥೆಯಲ್ಲಿ ಅನಾವರಣ

"ಕೇಸರಿ" ಹೂಗಳಿಂದ ಕಣ್ಮನ ಸೆಳೆಯುತ್ತಿದೆ ಕಾಶ್ಮೀರ : ನೇರಳೆ ಬಣ್ಣ ಪುಷ್ಪದ ಸೌಂದರ್ಯ ಕಾಣಲು ಪ್ರವಾಸಿಗರು ಕಾತುರ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d