Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಬೆಂಗಳೂರಿನಲ್ಲಿ 2312 ಅನಧಿಕೃತ ಕಟ್ಟಡಗಳ ಪತ್ತೆಹಚ್ಚಿದ ಬಿಬಿಎಂಪಿ : ಮುಂದುವರೆದ ಸಮೀಕ್ಷೆ

by Bengaluru Wire Desk
November 14, 2024
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ನ.14 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಅನಧಿಕೃತ ಕಟ್ಟಡ ನಿರ್ಮಾಣ ಹಾಗೂ ಮಂಜೂರಾತಿ ನಕ್ಷೆ ಉಲ್ಲಂಘಿಸಿ ನಿರ್ಮಿಸುತ್ತಿರುವ ಕಟ್ಟಡ ಭಾಗಗಳನ್ನು ತೆರವುಗೊಳಿಸಲು ಅಂತಹ ಕಟ್ಟಡಗಳ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಿದೆ. ಈ ತನಕ (ನ.13) 8 ವಲಯಗಳಲ್ಲಿ 2,312 ಕಟ್ಟಡಗಳು ನಿಯಮ ಉಲ್ಲಂಘಿಸಿರುವುದನ್ನು ಪಾಲಿಕೆ ಎಂಜಿನಿಯರ್ ಗಳು ಪತ್ತೆ ಹಚ್ಚಿದ್ದಾರೆ. 

ಎಂಟು ವಲಯಗಳ ಪೈಕಿ ಮಹದೇವಪುರ ವಲಯದಲ್ಲಿ ಈವರೆಗೆ 546ರಷ್ಟು ಅತಿಹೆಚ್ಚು ಅನಧಿಕೃತ ನಿರ್ಮಾಣಗಳನ್ನು ಪಾಲಿಕೆಯು ಪತ್ತೆಹಚ್ಚಿದೆ. ಪಶ್ಚಿಮ ವಲಯದಲ್ಲಿ 335, ಆರ್.ಆರ್.ನಗರ 332, ಬೊಮ್ಮನಹಳ್ಳಿ 307, ಬೆಂಗಳೂರು ಪೂರ್ವ 242, ದಾಸರಹಳ್ಳಿ 214, ಯಲಹಂಕ 180 ಹಾಗೂ ಬೆಂಗಳೂರು ದಕ್ಷಿಣದಲ್ಲಿ 156 ಅನಧಿಕೃತ ಕಟ್ಟಡ/ನಿರ್ಮಾಣಗಳನ್ನು ಪತ್ತೆ ಹಚ್ಚಲಾಗಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಪಾಲಿಕೆ ಆಯುಕ್ತ ತುಷಾರ್‌ ಗಿರಿನಾಥ್‌ ಇತ್ತೀಚೆಗೆ ತಿಳಿಸಿದ್ದರು. ಇದಲ್ಲದೆ ನ.05 ರಂದು ಹೊರಡಿಸಿದ ತಮ್ಮ ಸುತ್ತೋಲೆಯಲ್ಲಿ ಪಾಲಿಕೆಯ 8 ವಲಯಗಳ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಗಳ ವಿರುದ್ಧ ಬಿಬಿಎಂಪಿ ಕಾಯ್ದೆ 2020 ರ ಕಲಂ 248(1), 248(2) ಹಾಗೂ 248(3) ರಂತೆ ಅನಧಿಕೃತ ನಿರ್ಮಾಣದಾರರಿಗೆ ಜಾರಿಗೊಳಿಸಬೇಕಾದ ನೋಟಿಸ್/ಆದೇಶಗಳ ಮಾದರಿ ನಮೂನೆಗಳನ್ನು ಸುತ್ತೋಲೆಯಲ್ಲಿ ನೀಡಿದ್ದರು.

ಅ.28ರಿಂದ (ಸೋಮವಾರ)‌ ಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಯಲಿದ್ದು, ಯಾವುದಾದರೂ ಕಟ್ಟಡ ಕಾನೂನು ಬಾಹಿರವಾಗಿ ನಿರ್ಮಾಣವಾಗುತ್ತಿದೆಯೇ ಎಂದು ಪತ್ತೆ ಹಚ್ಚಲಾಗುವುದು ಎಂದು ಬೆಂಗಳೂರು ಉಸ್ತು ವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಾಬುಸಾಪಾಳ್ಯದ ದುರಂತದ ನಂತರ ಮಾಧ್ಯಮಗಳಿಗೆ ತಿಳಿಸಿದ್ದರು. ಸದ್ಯ ಕಿರಿಯ ಹಾಗೂ ಸಹಾಯಕ ಇಂಜಿನಿಯರ್​ಗಳು ಸೇರಿದಂತೆ ಹೊರಗುತ್ತಿಗೆ ಆಧಾರದಲ್ಲಿ 70 ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ಅಕ್ರಮ ಕಟ್ಟಡಗಳ ಸಮೀಕ್ಷೆ ಮಾಡಲಾಗುತ್ತಿದೆ.

ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುತ್ತಿದೆ. ಇತ್ತೀಚೆಗೆ ಬೆಂಗಳೂರಿನ ಬಾಬುಸಾ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದು ಬಿದ್ದು 9 ಕಾರ್ಮಿಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅಕ್ಟೋಬರ್‌ 29ರಿಂದ ಅಕ್ರಮ ಕಟ್ಟಡಗಳ ಸಮೀಕ್ಷೆಯನ್ನು ಪಾಲಿಕೆ ಆರಂಭಿಸಿತ್ತು. ನಿಯಮಗಳನ್ನು ಉಲ್ಲಂಘಿಸಿರುವ ಅಕ್ರಮ ಕಟ್ಟಡಗಳನ್ನು ಗುರುತಿಸಲು ಕಂದಾಯ ಇಲಾಖೆ ಮೊಬೈಲ್‌ ಆಪ್ ವೊಂದನ್ನು ಸಿದ್ದಪಡಿಸಿದೆ. ಆರಂಭದಲ್ಲಿ ಈ ಆಪ್‌ ಅನ್ನು ಆಸ್ತಿ ತೆರಿಗೆ ಸಂಗ್ರಹಕ್ಕೆ ಮಾತ್ರ ಬಳಸಲಾಗುತ್ತಿತ್ತು. ಇದೀಗ ಅಕ್ರಮ ಕಟ್ಟಡ ನಿರ್ಮಾಣ ಪತ್ತೆಹಚ್ಚುವ ಉದ್ದೇಶಗಳಿಗೂ ಬಳಸಲಾಗುತ್ತಿದೆ.

ಇದೇ ಆಪ್​ ಬಳಸಿ ಬಿಬಿಎಂಪಿ ಕಟ್ಟಡಗಳ ನಕ್ಷೆ, ಮೂಲ ನಕ್ಷೆಯನ್ನು ಬದಲಾಯಿಸಿ ಉಲ್ಲಂಘಿಸಿರುವುದನ್ನು ಪತ್ತೆ ಹಚ್ಚುತ್ತಿದೆ. ಬಿಡಿಎ ಲೇಔಟ್​ಗಳಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣವಾಗಿದ್ದರೆ ಅಲ್ಲಿನ ನಿವಾಸಿಗಳೇ ಸ್ವಯಂಪ್ರೇರಣೆಯಿಂದ ದೂರು ನೀಡುತ್ತಿದ್ದಾರೆ. ಕಟ್ಟಡದ ಭಾವಚಿತ್ರ ಅಪ್‌ ಲೋಡ್‌ ಮಾಡುತ್ತಿದ್ದಂತೆ ಆಪ್‌ ನಲ್ಲಿ ಆಸ್ತಿಯ ವಿವರಗಳು ಲಭ್ಯವಾಗುತ್ತಿದೆ. ಇದರಿಂದ ಹಾಲಿ ನಿರ್ಮಾಣ ಮಾಡುತ್ತಿರುವ, ಮಂಜೂರಾದ ನಕ್ಷೆ ಮತ್ತಿತರ ಕಟ್ಟಡಕ್ಕೆ ಸಂಬಂಧಿಸಿದ ವಿವರಗಳನ್ನು ಒದಗಿಸುತ್ತದೆ. ಇದು ಪಾಲಿಕೆ ನಗರ ಯೋಜನೆ ಎಂಜಿನಿಯರ್ ಗಳಿಗೆ ಸಹಾಯಕವಾಗಿದೆ.

ಅನಧಿಕೃತ ಕಟ್ಟಡ ಹಾಗೂ ನಿಯಮ ಉಲ್ಲಂಘಿಸಿದ ಕಟ್ಟಡಗಳನ್ನು ಗುರ್ತಿಸಿ, ಅಧಿಕೃತ ಪಟ್ಟಿ ಮಾಡುವಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಅನಧಿಕೃತ ಕಟ್ಟಡ ಪತ್ತೆಹಚ್ಚಲು ಮುಖ್ಯ ಆಯುಕ್ತರ ಆದೇಶವನ್ನೇ ನೆಪವಾಗಿಟ್ಟುಕೊಂಡು, ತಾವು ಫಿಕ್ಸ್ ಮಾಡಿದ ಲಂಚ ನೀಡದಿದ್ದರೆ ಅಂತಹ ಕಟ್ಟಡಗಳನ್ನು ನಿಯಮಬಾಹಿರ ನಿರ್ಮಾಣ ಪಟ್ಟಿಗೆ ಸೇರ್ಪಡೆಗೊಳಿಸುವ ಹುನ್ನಾರ ನಡೆಯುತ್ತಿದೆ ಎಂಬ ದೂರುಗಳಿವೆ. ಈ ಬಗ್ಗೆ ಆಯಾ ವಲಯ ಮಟ್ಟದ ಆಯುಕ್ತರು, ಜಂಟಿ ಆಯುಕ್ತರು ಪರಿಣಾಮಕಾರಿಯಾಗಿ ಮೇಲುಸ್ತುವಾರಿ ವಹಿಸುವ ಅವಶ್ಯಕತೆಯಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ನಿಯಮ ಉಲ್ಲಂಘಿಸಿದ ಕಟ್ಟಡಗಳ ಜೊತೆಗೆ ಕುಸಿಯುವ ಹಂತದಲಿರುವ ಶಿಥಿಲ ಸಾವಿರಾರು ಕಟ್ಟಡಗಳು ಬೆಂಗಳೂರಿನಲ್ಲಿವೆ. ಅಂತಹ ಒಂದೆರಡು ಕಟ್ಟಡಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಪಾಲಿಕೆ ಅಂತಹ ಕಟ್ಟಡಗಳನ್ನು ತೆರವುಗೊಳಿಸಿ ನಾಗರೀಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಿದೆ. 

WhatsApp Join our WhatsApp Channel
Previous Post

Viral Post | ಬೆಂಗಳೂರಿನಲ್ಲಿ ಬಾಡಿಗೆ ಮನೆಗೆ ದುಬಾರಿ ಭದ್ರತಾ ಠೇವಣಿ : ಭಾರೀ ಚರ್ಚೆ ಹುಟ್ಟು ಹಾಕಿದೆ ಈ ವೈರಲ್ ಪೋಸ್ಟ್

Next Post

ಸಭೆ ಸಮಾರಂಭಗಳಲ್ಲಿ ಕಳ್ಳತನ : ಇಬ್ಬರ ಬಂಧನ ; ಲಕ್ಷಾಂತರ ರೂ. ಮೌಲ್ಯದ 52 ಮೊಬೈಲ್ ಫೊನ್ ವಶ

Next Post

ಸಭೆ ಸಮಾರಂಭಗಳಲ್ಲಿ ಕಳ್ಳತನ : ಇಬ್ಬರ ಬಂಧನ ; ಲಕ್ಷಾಂತರ ರೂ. ಮೌಲ್ಯದ 52 ಮೊಬೈಲ್ ಫೊನ್ ವಶ

ಹೊಂಬಾಳೆ ಫಿಲಮ್ಸ್ ಪೌರಾಣಿಕ‌ 'ಮಹಾವತಾರ್ ನರಸಿಂಹ' ಟೀಸರ್ ಬಿಡುಗಡೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group