Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluru Tech Summit 2024 | ರಾಜ್ಯದಲ್ಲಿ ಮೂರು ಗ್ಲೋಬಲ್ ಇನ್ನೊವೇಷನ್ ಪಾರ್ಕ್ ಸ್ಥಾಪನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ತಂತ್ರಜ್ಞಾನ ಶೃಂಗ ಉದ್ಘಾಟನೆ | ದೇಶದ ಮೊತ್ತಮೊದಲ “ಜಿಸಿಸಿ ಕಾರ್ಯನೀತಿ” ಅನಾವರಣ | “ನಿಪುಣ” ಯೋಜನೆಯಡಿ ವರ್ಷದಲ್ಲಿ 1 ಲಕ್ಷ ಜನರಿಗೆ ಕೌಶಲ ತರಬೇತಿ ನೀಡಲು ಐದು ಕಂಪನಿಗಳ ಜೊತೆ ಒಡಂಬಡಿಕೆಗೆ ಸಹಿ

by Bengaluru Wire Desk
November 19, 2024
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ನ.19 www.bengaluruwire.com : ರಾಜ್ಯದಲ್ಲಿ ಉದ್ಯಮ ವಲಯದ ಬೆಳವಣಿಗೆ ಉತ್ತೇಜಿಸಲು ಬೆಂಗಳೂರು, ಮೈಸೂರು ಮತ್ತು ಬೆಳಗಾವಿಗಳಲ್ಲಿ ಮೂರು ಜಾಗತಿಕ ನಾವೀನ್ಯತಾ ಪಾರ್ಕ್ ಗಳನ್ನು (ಗ್ಲೋಬಲ್ ಇನ್ನೊವೇಷನ್ ಡಿಸ್ಟ್ರಿಕ್ಟ್ಸ್) ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಘೋಷಿಸಿದರು.

ನಗರದ ಅರಮನೆ ಮೈದಾನದಲ್ಲಿ ಮೂರು ದಿನಗಳ “ಬೆಂಗಳೂರು ತಂತ್ರಜ್ಞಾನ ಶೃಂಗ-24” (Bengaluru Tech Summit 2024)ವನ್ನು  (27ನೇ ಆವೃತ್ತಿ) ಉದ್ಘಾಟಿಸಿದ ಅವರು, ಸರ್ಕಾರ ಸ್ಥಾಪಿಸಲಿರುವ ಈ ಮೂರು ಜಾಗತಿಕ ನಾವೀನ್ಯತಾ ಪಾರ್ಕ್ ಗಳಲ್ಲಿ (Global Capability Center – GCC) ತಮ್ಮ ಕೇಂದ್ರಗಳನ್ನು ತೆರೆದು ಕಾರ್ಯಾಚರಣೆ ಆರಂಭಿಸಲು ಅನುವು ಮಾಡಿಕೊಡಲಿದ್ದೇವೆ.  ಜೊತೆಗೆ ಮೈಸೂರಿನ ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ ತಯಾರಿಕಾ ಕ್ಲಸ್ಟರ್  (Electronics manufacturing cluster) ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ರಾಜ್ಯದ ಸೆಮಿಕಂಡಕ್ಟರ್ (Semicounductor)  ಉತ್ಪಾದಕತೆಯನ್ನು ಕೋಚನಹಳ್ಳಿಯಲ್ಲಿಯ ಎಲೆಕ್ಟ್ರಾನಿಕ್ಸ್ ಮ್ಯಾನಫ್ಯಾಕ್ಚರಿಂಗ್ ಕ್ಲಸ್ಟರ್ ಸದೃಢಗೊಳಿಸಲಿದೆ. ಇದು ಉದ್ಯೋಗಗಳನ್ನು ಸೃಷ್ಟಿಸುವ ಜೊತೆಗೆ ನಗರ-ಗ್ರಾಮೀಣ ಸಮಾನತೆಯನ್ನು ತರುವುದಕ್ಕೂ ಸಹಾಯಕವಾಗಲಿದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ, ದೇಶದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೂಪಿಸಲಾಗಿರುವ “ಜಿಸಿಸಿ ಕಾರ್ಯನೀತಿ”ಯನ್ನು ಅನಾವರಣಗೊಳಿಸಿದರು. ಈ ಕುರಿತು ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಈಗ ಇರುವ  875 ಜಿಸಿಸಿ ಘಟಕಗಳ ಜೊತೆಗೆ ಇನ್ನೂ 500 ಜಿಸಿಸಿ ಘಟಕಗಳ ಸ್ಥಾಪನೆ, 3.5 ಲಕ್ಷ ಉದ್ಯೋಗಗಳ ಸೃಷ್ಟಿ ಹಾಗೂ ಆರ್ಥಿಕ ಉತ್ಪಾದನೆಯನ್ನು 50 ಶತಕೋಟಿ ಡಾಲರ್ ಗಳಷ್ಟು ಹೆಚ್ಚಿಸುವ ಗುರಿಯನ್ನು “ಜಿಸಿಸಿ ಕಾರ್ಯನೀತಿ” ಹೊಂದಿದೆ ಎಂದು ವಿವರಿಸಿದರು.

ಮಂಗಳೂರನ್ನು ಫಿನ್ ಟೆಕ್ ವಲಯವನ್ನಾಗಿ, ಹುಬ್ಬಳ್ಳಿ-ಧಾರವಾಡ ಇವಿ ವಲಯವನ್ನಾಗಿ ಹಾಗೂ ಮೈಸೂರನ್ನು  ಡ್ರೋನ್ ವಲಯವನ್ನಾಗಿ ರೂಪಿಸಲು ಸರ್ಕಾರ ಒತ್ತು ನೀಡಲಿದೆ.  ನಾವೀನ್ಯತೆ, ಸುಸ್ಥಿರತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಗೆ ಸರ್ಕಾರ ಬದ್ಧವಾಗಿದ್ದು, ಉದ್ಯಮದ ಬೆಳವಣಿಗೆಗೆ ಒತ್ತಾಸೆಯಾಗಿ ನಿಲ್ಲಲಿದೆ ಎಂದರು.

20ನೇ ಶತಮಾನದ ಆರಂಭಿಕ ಅವಧಿಯಲ್ಲಿ ರಕ್ಷಣಾ ಸಾಮಗ್ರಿಗಳ ತಯಾರಿಕೆ ಹಾಗೂ ವೈಮಾಂತರಿಕ್ಷ ಉದ್ದಿಮೆಗಳ ಮೂಲಕ ಗಮನಸೆಳೆದ ಬೆಂಗಳೂರು ಈಗ ಮಾಹಿತಿ ತಂತ್ರಜ್ಞಾನ ಮತ್ತು ಸ್ಟಾರ್ಟ್ ಅಪ್ ನೆಲೆಯಾಗಿ ಬೆಳೆದಿದೆ. ಐಟಿ, ಡೀಪ್ ಟೆಕ್, ಬಯೋಟೆಕ್, ಜೀವಿವಿಜ್ಞಾನಗಳು. ಬಯೋ ಮ್ಯಾನುಫ್ಯಾಕ್ಚರಿಂಗ್, ಅಡ್ವಾನ್ಸ್ಡ್ ಮ್ಯಾನು ಫ್ಯಾಕ್ಚರಿಂಗ್ ಇತ್ಯಾದಿಗಳಿಗೆ ನಗರವು ಹೆಸರಾಗಿದೆ. ಅಲ್ಲದೆ, ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಎಂಜಿನಿಯರಿಂಗ್ ಪ್ರತಿಭೆಗಳು ಹಾಗೂ ಎಐ ವೃತ್ತಿಪರರು ಇರುವ ನಗರವೂ ಇದಾಗಿದೆ ಎಂದು ನುಡಿದರು.

ಬೆಂಗಳೂರು ವಿಮಾನ ನಿಲ್ದಾಣದಿಂದ 50 ಕಿ.ಮೀ. ನಿಲ್ದಾಣದಲ್ಲಿ ನಾವೀನ್ಯತೆಯ ಪರಿಕಲ್ಪನೆಯಿಂದ ಕೂಡಿಡ ‘ಕ್ವಿನ್ ಸಿಟಿ’ ನಿರ್ಮಾಣವಾಗಲಿದೆ.  ಇದರ ಜೊತೆಗೆ “ ನಮ್ಮ ಗ್ರಾಮ, ನಮ್ಮ ರಸ್ತೆ”,  “ಬಿಯಾಂಡ್ ಬೆಂಗಳೂರು” ದಂತಹ ಉಪಕ್ರಮಗಳು ರಾಜ್ಯದ ಸಮತೋಲಿತ ಬೆಳವಣಿಗೆಗೆ ಪೂರಕವಾಗಲಿವೆ ಎಂದು ಸಿದ್ದರಾಮಯ್ಯ ನುಡಿದರು.

“ನಿಪುಣ” ಯೋಜನೆಯಡಿ ಕೌಶಲ ತರಬೇತಿ:

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅವರು ರಾಜ್ಯದಲ್ಲಿ ಯುವಜನತೆಗೆ ಕೌಶಲ ತರಬೇತಿ ನೀಡುವ ಉದ್ದೇಶದಿಂದ  ರೂಪಿಸಲಾಗಿರುವ ‘ನಿಪುಣ’ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.”ನಿಪುಣ” ಯೋಜನೆಯಡಿ  ಒಂದು ವರ್ಷದಲ್ಲಿ ಒಂದು ಲಕ್ಷ ಜನರಿಗೆ ಕೌಶಲ ತರಬೇತಿ ನೀಡುವ ಸಲುವಾಗಿ ಮೈಕ್ರೋಸಾಫ್ಟ್, ಇಂಟೆಲ್, ಆಕ್ಸೆಂಚರ್, ಐಬಿಎಂ, ಬಿಎಫ್ ಎಸ್ಐ ಕನ್ಸಾರ್ಷಿಯಂ, ಈ ಐದು ಸಂಸ್ಥೆಗಳ ಜೊತೆ ಒಡಂಬಡಿಕೆಗೆ ಇಂದು ಸಹಿ ಹಾಕಲಾಗಿದೆ ಎಂದರು.

ನಗರದಲ್ಲಿ ಉದ್ಯಮಗಳ ಬೆಳವಣಿಗೆಗೆ ಪೂರಕವಾದ ಮೂಲಸೌಕರ್ಯ ನಿರ್ಮಿಸಲು ಹಾಗೂ ಸಂಚಾರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಸರ್ಕಾರ ಒತ್ತು ನೀಡಲಿದೆ. ಈಗ ಬೆಂಗಳೂರಿನಲ್ಲಿ ಉದ್ದಿಮೆಗಳಿಗೆ ಗುಣಮಟ್ಟದ ನಿರಂತರ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಯಾವ ಸಮಸ್ಯೆಯೂ ಇಲ್ಲ. ಮುಂಬರುವ ದಿನಗಳಲ್ಲಿ ಸಂಚಾರ ಸೇರಿದಂತೆ ಇರುವ ಇನ್ನಿತರ ಒಂದಿಷ್ಟು ಸಮಸ್ಯೆಗಳನ್ನು ಆದ್ಯತೆ ಮೇಲೆ ನಿವಾರಿಸಲಾಗುವುದು ಎಂದರು.

ಬೆಂಗಳೂರಿನಂತಹ ನಗರ ಅಭಿವೃದ್ಧಿಯಾಗಲು ಸರ್ಕಾರವೊಂದೇ ಕಾರಣವಲ್ಲ. ಇಲ್ಲಿನ ನಗರದಲ್ಲಿ ಉದ್ಯಮಿಗಳ ಪಾಲೂ ದೊಡ್ಡದಿದೆ.  ಇನ್ಫೋಸಿಸ್ ನ ನಾರಾಯಣ ಮೂರ್ತಿ,  ಬಯೋಕಾನ್ ನ ಕಿರಣ್ ಮಜುಂದಾರ್ ಷಾ ಅವರಂತಹ ಉದ್ಯಮಿಗಳು ಇಲ್ಲದಿದ್ದರೆ ಬೆಂಗಳೂರು ಈಗ ಇರುವಂತೆ ಇರುತ್ತಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಟೆಕ್ಸಸ್ ಇನ್ಸ್ಟ್ರುಮೆಂಟ್ಸ್ ನ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್, ಸ್ವಿಗ್ಗಿಯ ಸಹಸ್ಥಾಪಕ ಶ್ರೀಹರ್ಷ ಮಜೇತಿ ಅವರನ್ನು ಸನ್ಮಾನಿಸಲಾಯಿತು.

ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಯಮಿಗಳಾದ ಕ್ರಿಸ್ ಗೋಪಾಲಕೃಷ್ಣ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಐಟಿ ಬಿಟಿ ನಿರ್ದೇಶಕ ದರ್ಶನ್, ಉಪ ಕಾರ್ಯದರ್ಶಿ ರುಚಿ ಬಿಂದಲ್ ಮತ್ತಿತರರು ಇದ್ದರು.

WhatsApp Join our WhatsApp Channel
Previous Post

Defence News | ಮದ್ರಾಸ್ ಸ್ಯಾಪರ್ಸ್ 244ನೇ ವಾರ್ಷಿಕೋತ್ಸವ : ಮಂಗಳೂರು ತಲುಪಿದ ಇ-ಬೈಕ್ ರ್‍ಯಾಲಿ

Next Post

Bengaluru Tech Summit 2024 | ‘ಭವಿಷ್ಯದಲ್ಲಿ ಎಐ ತಂತ್ರಜ್ಞಾನ ಐನ್‌ಸ್ಟೀನ್‌ ಅವರಿಗೆ ಸರಿಸಮನಾದ ಬುದ್ದಿವಂತಿಕೆಯನ್ನು ಗಳಿಸಲಿದೆ’

Next Post

Bengaluru Tech Summit 2024 | 'ಭವಿಷ್ಯದಲ್ಲಿ ಎಐ ತಂತ್ರಜ್ಞಾನ ಐನ್‌ಸ್ಟೀನ್‌ ಅವರಿಗೆ ಸರಿಸಮನಾದ ಬುದ್ದಿವಂತಿಕೆಯನ್ನು ಗಳಿಸಲಿದೆ’

BPL Card | ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಆತಂಕಪಡುವ ಅಗತ್ಯವಿಲ್ಲ, ಮತ್ತೆ ನೀಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group