Wednesday, June 18, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

  • Bengaluru Focus
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

  • Bengaluru Focus
    ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

    ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

    ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

    8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

    ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Public interest

2026ರ ವೇಳೆಗೆ ರಾಜ್ಯದ 5 ಸಾವಿರ ಆರೋಗ್ಯ ಕೇಂದ್ರಗಳಿಗೆ ಸೌರ ವಿದ್ಯುತ್ ಅಳವಡಿಕೆ : 10 ವರ್ಷಗಳಲ್ಲಿ ಸರ್ಕಾರಿ ಬೊಕ್ಕಸಕ್ಕೆ 100 ಕೋಟಿ ರೂ. ಉಳಿತಾಯ

by Bengaluru Wire Desk
November 21, 2024
in Public interest
Reading Time: 1 min read
0
ಸೌರ ವಿದ್ಯುತ್ ಫಲಕ ಅಳವಡಿಕೆಯಾದ ಸರ್ಕಾರಿ ಆಸ್ಪತ್ರೆಯೊಂದರ ಸಾಂದರ್ಭಿಕ ಚಿತ್ರ.

ಸೌರ ವಿದ್ಯುತ್ ಫಲಕ ಅಳವಡಿಕೆಯಾದ ಸರ್ಕಾರಿ ಆಸ್ಪತ್ರೆಯೊಂದರ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.21 www.bengaluruwire.com : ರಾಜ್ಯ ಸರ್ಕಾರವು ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಕೇಂದ್ರಗಳು ಸೇರಿದಂತೆ 500 ಆರೋಗ್ಯ ಕೇಂದ್ರಗಳಲ್ಲಿ 2026 ರ ಒಳಗೆ ಸೌರ ವಿದ್ಯುತ್ ಅಳವಡಿಸುವ ಗುರಿ ಹೊಂದಲಾಗಿದೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಸುವ “ಸೌರ ಸ್ವಾಸ್ಥ್ಯ” ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಗುರವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, 120 ಕೋಟಿ ರೂ. ವೆಚ್ಚದಲ್ಲಿ ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ಸಿಎಸ್ ಆರ್ ಯೋಜನೆ ಅಡಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಕೇಂದ್ರ ಮತ್ತಿತರ ಕಡೆಗಳಲ್ಲಿ ಸೌರ ಶಕ್ತಿ ಅಳವಡಿಸಲಾಗುತ್ತಿದೆ. ಹೀಗಾಗಿ 5 ಲಕ್ಷ ವಿದ್ಯುತ್ ಯುನಿಟ್ ಗಳ ಉಳಿತಾಯವಾಗಲಿದೆ. ಅಲ್ಲದೆ ಇದರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಪ್ರತಿ ತಿಂಗಳಿಗೆ ವಿದ್ಯುತ್ ಬಿಲ್ ನಲ್ಲಿ 50 ಲಕ್ಷ ರೂ.ನಷ್ಟು ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ. 10 ವರ್ಷಗಳಲ್ಲಿ ಸರಿಸುಮಾರು 100 ಕೋಟಿಯಷ್ಟು ಹಣ ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗಲಿದೆ ಎಂದರು.

Soura Swasthya Program Launch
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೆಲ್ಕೋ ಫೌಂಡೇಶನ್ ಸಹಯೋಗದಲ್ಲಿ ಸೌರ ಸ್ವಾಸ್ಥ್ಯ ಯೋಜನೆಗೆ ಗುರುವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸೆಲ್ಕೋ ಫೌಂಡೇಷನ್ ಸಹ ಸಂಸ್ಥಾಪಕ ಹರೀಶ್ ಹಂದೆ (ಎಡಗಡೆಯಿಂದ ಮೂರನೆಯವರು) ಉಪಸ್ಥಿತರಿದ್ದರು.

ಈ ವಿಷಯದಲ್ಲಿ ಸೆಲ್ಕೋ ಫೌಂಡೇಶನ್ ಆರೋಗ್ಯ ಇಲಾಖೆಯೊಂದಿಗೆ ನಿಜಕ್ಕೂ ಒಂದು ಕ್ರಾಂತಿಕಾರ ಹೆಜ್ಜೆಯಿಟ್ಟಿದೆ. ಈಗಾಗಲೇ ಪ್ರಥಮ ಹಂತದಲ್ಲಿ 1,152 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿ ಒದಗಿಸಲಾಗಿದೆ.  ರಾಯಚೂರಿನಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳು ಸಂಪೂರ್ಣವಾಗಿ ಸೌರಶಕ್ತಿ ಹೊಂದಿದೆ. ಇದರಿಂದಾಗಿ ಆರೋಗ್ಯ ಕೇಂದ್ರಗಳ ವಿದ್ಯುತ್ ಬಿಲ್‌ಗಳಲ್ಲಿ ಶೇಕಡ 70 ರಷ್ಟು ಉಳಿತಾಯವಾಗುತ್ತಿದೆ. ಈಗಾಗಲೇ ಸುಮಾರು‌ 3 ಮೆಗಾ ವ್ಯಾಟ್ ಸೌರ ವಿದ್ಯುತನ್ನು ಆರೋಗ್ಯ ಕೇಂದ್ರಗಳಲ್ಲಿ ಉತ್ಪಾದಿಸಲಾಗಿದೆ. ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರಕ್ಕೆ 100 ಕೋಟಿ ರೂಪಾಯಿ ಉಳಿತಾಯ ಮಾಡುವ ಯೋಜನೆ ಅಳವಡಿಸಿಕೊಂಡಿರುವ ದೇಶದ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.‌

ಈ ಮಹತ್ವದ ಯೋಜನೆಯಿಂದಾಗಿ 2026ರ ವೇಳೆಗೆ ಕರ್ನಾಟಕದಾದ್ಯಂತ 5,000 ಆರೋಗ್ಯ ಕೇಂದ್ರಗಳಿಗೆ ಸೌರ-ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಲು ಸಾಧ್ಯವಾಗಲಿದೆ. ಸುಸ್ಥಿರ ಶಕ್ತಿಯು ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲಿದೆ

ಯೋಜನೆಯ ಪ್ರಮುಖಾಂಶಗಳು ಈ ಕೆಳಕಂಡಂತಿದೆ :

* ಆರೋಗ್ಯ ಸೇವೆಗಳ ಅಗತ್ಯಗಳನ್ನು 24×7 ಚಾಲ್ತಿಯಲ್ಲಿರುವಂತೆ ಖಾತರಿಪಡಿಸಿಕೊಳ್ಳಲು ಸೋಲಾರ್ ಸೌಲಭ್ಯ ನೀಡಲಾಗುತ್ತೆ.

* ರಿಮೋಟ್ ಮಾನಿಟರಿಂಗ್ ಸಿಸ್ಟಮ್ (RMS) ಮುಖಾಂತರ ನಿರಂತರ ನಿಗಾ ಹಾಗೂ ಸೌರ ಇ-ಮಿತ್ರಾ ಮೊಬೈಲ್ ಆ್ಯಪ್ ಮೂಲಕ ಸೋಲಾರ್ ಸಾಧನಗಳ ನಿರ್ವಹಣೆ.

ಸೆಲ್ಕೊ ಫೌಂಡೇಷನ್ ಸಹಯೋಗದಲ್ಲಿ ಆರೋಗ್ಯ ಇಲಾಖೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮೊದಲ ಹಂತದಲ್ಲಿ ಸೌರ ವಿದ್ಯುತ್ ಫಲಕ ಅಳವಡಿಸಿರುವ ಕಟ್ಟಡದ ಚಿತ್ರ.

2026 ರ ವೇಳೆಗೆ 5000 ಆರೋಗ್ಯ ಕೇಂದ್ರಗಳಿಗೆ (3381 ಉಪ ಕೇಂದ್ರಗಳು, 1500 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 119 ತಾಲೂಕು ಆಸ್ಪತ್ರೆಗಳು) ಸೌರಶಕ್ತಿ ಅಳವಡಿಸಲಾಗುವುದು.

ಪ್ರಾಥಮಿಕ‌ ಆರೋಗ್ಯ ಕೇಂದ್ರಗಳಲ್ಲಿ ಬ್ಯಾಟರಿ ಆಧಾರಿತ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ನಿರಂತರವಾಗಿ 24/7 ವಿದ್ಯುತ್ ದೊರೆಯಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 4 ರಿಂದ 5 ಕಿ.ವ್ಯಾಟ್ ಸೌರ ಫಲಕ, 6 ಕೆವಿಎ  ಸೌರ ವಿದ್ಯುತ್ ಕಂಡೀಷನಿಂಗ್ ಘಟಕ, ತಾಲೂಕು ಆಸ್ಪತ್ರೆ ಸೋಲಾರ್ ಪ್ಯಾನಲ್  10 ಕಿ.ವ್ಯಾಟ್, ಸೌರ ವಿದ್ಯುತ್ ಕಂಡೀಷನಿಂಗ್ ಘಟಕ 10 ಕಿ.ವ್ಯಾಟ್ ಸಾಮರ್ಥ್ಯ ಹೊಂದಿರಲಿದೆ. ಈ ಮಹಾತ್ವಕಾಂಕ್ಷಿ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ನಿರಂತರ ಆರೋಗ್ಯ ಸೇವೆ ಒದಗಿಸಲು ಸಾಧ್ಯವಾಗಲಿದೆ. ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಈ ರೀತಿಯ ಸಂಪೂರ್ಣ ನಿರ್ವಹಣೆಯ ಸಂಯೋಜಿತ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.

ಸೌರ ಶಕ್ತಿ ಅಳವಡಿಕೆ ಯೋಜನಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸೆಲ್ಕೋ ಫೌಂಡೇಷನ್ ಸಹ ಸಂಸ್ಥಾಪಕ ಹರೀಶ್ ಹಂದೆ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ಎಪಿಎಲ್ ಕಾರ್ಡುಗಳಿಗೆ ಮೇ 2023ರಿಂದ ಪಡಿತರ ನೀಡದ ಆಹಾರ ಇಲಾಖೆ? : ಬಿಪಿಎಲ್ ನಿಂದ ಎಪಿಎಲ್ ಕಾರ್ಡ್ ವರ್ಗಾವಣೆ ಎಂಬ ಚಕ್ರವ್ಯೂಹ!!

Next Post

AKKA CAFE | ಮಹಿಳಾ ಉದ್ಯಮಿಗಳ ಸಬಲೀಕರಣಕ್ಕಾಗಿ ತಲೆ ಎತ್ತುತ್ತಿದೆ ಅಕ್ಕಾ ಕೆಫೆ!! ನೀವು ಕೂಡ ಅಕ್ಕಾ ಕೆಫೆ- ಕಿಯೋಸ್ಕ್ ತೆರೆಯಬೇಕಾ? ಇಲ್ಲಿದೆ ಮಾಹಿತಿ

Next Post
ದೇವನಹಳ್ಳಿಯಲ್ಲಿ ತಲೆ ಎತ್ತಿರುವ ಅಕ್ಕಾ ಕೆಫೆ ಮತ್ತು ಬೇಕರಿಯ ಹೊರಾಂಗಣ ನೋಟ.

AKKA CAFE | ಮಹಿಳಾ ಉದ್ಯಮಿಗಳ ಸಬಲೀಕರಣಕ್ಕಾಗಿ ತಲೆ ಎತ್ತುತ್ತಿದೆ ಅಕ್ಕಾ ಕೆಫೆ!! ನೀವು ಕೂಡ ಅಕ್ಕಾ ಕೆಫೆ- ಕಿಯೋಸ್ಕ್ ತೆರೆಯಬೇಕಾ? ಇಲ್ಲಿದೆ ಮಾಹಿತಿ

Kadalekai Parishe | ಬಿಬಿಎಂಪಿಯಿಂದ ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ : ವಾರಾಂತ್ಯದಲ್ಲಿ ಜನಜಂಗುಳಿ

Please login to join discussion

Like Us on Facebook

Follow Us on Twitter

Recent News

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

June 18, 2025

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

June 18, 2025

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

June 18, 2025
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

June 17, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d