Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

“ಗುಬ್ಬಚ್ಚಿಗಳನ್ನು ಮರಳಿ ಮನೆಯ ಗೂಡಿಗೆ ತರಲು ಪ್ರಯತ್ನಿಸಿ” : ಮನ್ ಕಿ ಬಾತ್ 116ನೇ ಸಂಚಿಕೆಯಲ್ಲಿ ರಾಷ್ಟ್ರಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

“ತಾಯಿಯ ಹೆಸರಿನಲ್ಲಿ ಒಂದು ಮರ” ಅಭಿಯಾನದಡಿ 5 ತಿಂಗಳಲ್ಲಿ ದೇಶದಲ್ಲಿ 100 ಕೋಟಿ ಗಿಡ ನೆಟ್ಟ ಭಾರತೀಯರು | ಇಂದೋರ್ ನಲ್ಲಿ 24 ಗಂಟೆಗಳಲ್ಲಿ 12 ಲಕ್ಷ ಗಿಡ ನೆಟ್ಟು ದಾಖಲೆ ನಿರ್ಮಾಣ | ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಈ ವಿಷಯವನ್ನು ದೇಶದ ಜನತೆಗೆ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

by Bengaluru Wire Desk
November 24, 2024
in News Wire, Public interest
Reading Time: 2 mins read
0
Sparrow Bird

ಗುಬ್ಬಚ್ಚಿ ಹಕ್ಕಿಯ ಸಾಂದರ್ಭಿಕ ಚಿತ್ರ.

ನವದೆಹಲಿ, ನ.24 www.bengaluruwire.com : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ನಾಗರೀಕರನ್ನು ಉದ್ದೇಶಿಸಿ ತಮ್ಮ ಮನ್ ರಿ ಬಾತ್ 116ನೇ ಸಂಚಿಕೆಯಲ್ಲಿ, ಭಾರತದಲ್ಲಿ ಕ್ಷೀಣಿಸುತ್ತಿರುವ ಗುಬ್ಬಚ್ಚಿಗಳ ಸಂತತಿಯನ್ನು ಉದ್ದೇಶಿಸಿ ಭಾನುವಾರ ಮಾತನಾಡಿ, ಪಕ್ಷಿಗಳ ಸಂತತಿಯನ್ನು ಪುನರುಜ್ಜೀವನಗೊಳಿಸಲು ಕೈಗೊಂಡಿರುವ ವಿಶಿಷ್ಟ ಪ್ರಯತ್ನಗಳ ಬಗ್ಗೆ ಅವರು ಬೆಳಕು ಚೆಲ್ಲಿದರು.

“ಬಾಲ್ಯದಲ್ಲಿ ನಾವು ನಮ್ಮ ಮನೆಯ ಛಾವಣಿಯ ಮೇಲೆ ಗುಬ್ಬಚ್ಚಿಗಳನ್ನು ನೋಡುತ್ತಿದ್ದೆವು, ಅವು ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ, ನಗರೀಕರಣದ ಹೆಚ್ಚಳದಿಂದಾಗಿ ನಾವು ನಗರಗಳಲ್ಲಿ ಗುಬ್ಬಚ್ಚಿಯನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ಇಂದಿನ ಪೀಳಿಗೆಯ ಅನೇಕ ಮಕ್ಕಳು ಗುಬ್ಬಚ್ಚಿಗಳನ್ನು ನೋಡಿದ್ದಾರೆ. ಅಂತಹ ಮಕ್ಕಳ ಜೀವನದಲ್ಲಿ ಈ ಸುಂದರ ಪಕ್ಷಿಯನ್ನು ಮರಳಿ ತರಲು ಕೆಲವು ವಿಶಿಷ್ಟ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ಅವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ಗುಬ್ಬಚ್ಚಿಗಳಿಗಾಗಿ 10 ಸಾವಿರ ಮರದ ಗೂಡು :

ಚೆನ್ನೈನ ಕುಡುಗಲ್ ಟ್ರಸ್ಟ್‌ನ ಉದಾಹರಣೆಯನ್ನು ಉಲ್ಲೇಖಿಸಿದ ಪ್ರಧಾನಿ, ಈ ಸಂಸ್ಥೆಯು ತನ್ನ ಪ್ರಯತ್ನಗಳ ಮೂಲಕ ಈ ಪ್ರದೇಶದಲ್ಲಿ ಗುಬ್ಬಚ್ಚಿಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಈ ಸಂಸ್ಥೆಯು ಗುಬ್ಬಚ್ಚಿಗಳಿಗೆ ಸಣ್ಣ ಮರದ ಮನೆಯನ್ನು ಮಾಡಲು ಮಕ್ಕಳಿಗೆ ತರಬೇತಿ ನೀಡುತ್ತಿದೆ ಮತ್ತು ಕಳೆದ 4 ವರ್ಷಗಳಲ್ಲಿ ಆ ಟ್ರಸ್ಟ್ ನಲ್ಲಿ ತರಬೇತಿ ಪಡೆದ ಮಕ್ಕಳು ಅಂತಹ 10,000 ಗೂಡುಗಳನ್ನು ಮಾಡಿದ್ದಾರೆ ಎಂಬ ಮಾಹಿತಿ ತಿಳಿಸಿದರು.

ಚೆನ್ನೈನ ಕುಡುಗಲ್ ಟ್ರಸ್ಟ್ ಮಕ್ಕಳಿಗೆ ತರಬೇತಿ ನೀಡಿ ತಯಾರಿಸಿದ ಗುಬ್ಬಚ್ಚಿ ಗೂಡುಗಳಲ್ಲಿ ವಾಸಿಸುತ್ತಿರುವ ಪಕ್ಷಿಗಳ ಸಾಂದರ್ಭಿಕ ಚಿತ್ರ.

ಗುಬ್ಬಚ್ಚಿಗಳ ಸಂಖ್ಯೆಯನ್ನು ಹೆಚ್ಚಿಸಲು ಚೆನ್ನೈನ ಕುಡುಗಲ್ ಟ್ರಸ್ಟ್ ತನ್ನ ಅಭಿಯಾನದಲ್ಲಿ ಶಾಲಾ ಮಕ್ಕಳನ್ನು ತೊಡಗಿಸಿಕೊಂಡಿದೆ. ಗುಬ್ಬಚ್ಚಿಗಳು ದೈನಂದಿನ ಜೀವನದಲ್ಲಿ ಬಹಳ ಮುಖ್ಯ ಎಂದು ಸಂಸ್ಥೆಯ ಜನರು ಶಾಲೆಯ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಈ ಸಂಸ್ಥೆಯು ಗುಬ್ಬಚ್ಚಿಗಳ ಗೂಡು ಮಾಡಲು ಮಕ್ಕಳಿಗೆ ತರಬೇತಿ ನೀಡುತ್ತಿದೆ. ಚಿಕ್ಕ ಮರದ ಮನೆಯನ್ನು ಮಾಡಲು ಮಕ್ಕಳಿಗೆ ಕಲಿಸಿದರು. ಇದಲ್ಲದೆ ಗುಬ್ಬಚ್ಚಿಗಳ ಜೀವನ ಮತ್ತು ಆಹಾರ ನೀಡುವ ಕಾರ್ಯಕ್ರಮದಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು. ಇದರಿಂದಾಗಿ 4 ವರ್ಷಗಳಲ್ಲಿ ಅಂತಹ 10,000 ಗೂಡುಗಳನ್ನು ನಿರ್ಮಿಸಲಾಗಿದೆ. ಹೀಗಾಗಿ ಗುಬ್ಬಚ್ಚಿಗಳ ಸಂಖ್ಯೆಯು ಈ ಪ್ರದೇಶದಲ್ಲಿ ಗಮನಾರ್ಹವಾಗಿ ಹೆಚ್ಚುತ್ತಿದೆ” ಎಂದರು.

ಮೈಸೂರಿನಲ್ಲಿ ಮಕ್ಕಳಿಗಾಗಿ ಪಕ್ಷಿಗಳ ಬಗ್ಗೆ ಜಾಗೃತಿ ಅಭಿಯಾನ :

ಕರ್ನಾಟಕದ ಮೈಸೂರಿನಲ್ಲಿರುವ ಸಂಸ್ಥೆಯೊಂದು ಮಕ್ಕಳಿಗಾಗಿ ‘ಅರ್ಲಿ ಬರ್ಡ್’ ಎಂಬ ಅಭಿಯಾನ ಆರಂಭಿಸಿದೆ. ಈ ಸಂಸ್ಥೆಯು ಮಕ್ಕಳಿಗೆ ಪಕ್ಷಿಗಳ ಬಗ್ಗೆ ತಿಳಿಸಲು ವಿಶೇಷ ರೀತಿಯ ಗ್ರಂಥಾಲಯವನ್ನು ನಡೆಸುತ್ತಿದೆ. ಇಷ್ಟು ಮಾತ್ರವಲ್ಲದೆ ಮಕ್ಕಳಲ್ಲಿ ನಿಸರ್ಗದ ಬಗೆಗಿನ ಜವಾಬ್ದಾರಿ ಪ್ರಜ್ಞೆ ಮೂಡಿಸಲು ‘ನೇಚರ್ ಎಜುಕೇಶನ್ ಕಿಟ್’ ಸಿದ್ಧಪಡಿಸಲಾಗಿದೆ. ಅಂತಹ ಜವಾಬ್ದಾರಿಗಳನ್ನು ಮತ್ತು ಮಾಹಿತಿಯನ್ನು ಮಕ್ಕಳಲ್ಲಿ ತುಂಬಲು ನೀವು ಅಂತಹ ಪ್ರಯತ್ನಗಳನ್ನು ಮಾಡಬಹುದು” ಎಂದು ಗುಬ್ಬಚ್ಚಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ನಾಗರೀಕರು ಕೈಗೊಳ್ಳಲು ಪ್ರಧಾನಿ ಹುರಿದುಂಬಿಸಿದರು.

‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದಡಿ 100 ಕೋಟಿ ಗಿಡ :

‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದ ಯಶಸ್ಸನ್ನು ಎತ್ತಿ ಹಿಡಿದ ಅವರು, ಈ ಅಭಿಯಾನದ ಅಡಿಯಲ್ಲಿ ಕೇವಲ ಐದು ತಿಂಗಳಲ್ಲಿ ದೇಶವು ಸುಮಾರು 100 ಕೋಟಿ ಗಿಡಗಳನ್ನು ನೆಟ್ಟಿದೆ ಎಂದು ಹೇಳಿದರು.

ಗಯಾನಾದಲ್ಲಿ ಜನರು ಈ ಅಭಿಯಾನದಲ್ಲಿ ಭಾಗವಹಿಸುತ್ತಿರುವುದನ್ನು ಕಂಡು ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನವು ಜಾಗತಿಕ ಮಟ್ಟದಲ್ಲಿ ಸಾಗಿದೆ ಎಂದು ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಹೇಳಿದರು. ಗಯಾನಾ ಅಧ್ಯಕ್ಷ ಇರ್ಫಾನ್ ಅಲಿ, ಅವರ ಅತ್ತೆ ಮತ್ತು ಇತರ ಕುಟುಂಬ ಸದಸ್ಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು ಎಂದು ಅವರು ಹೇಳಿದರು.

ಗಯಾನಾ ರಾಷ್ಟ್ರದಲ್ಲೂ ಸದ್ದು ಮಾಡಿದ ಅಭಿಯಾನ :

“ಕೆಲವು ತಿಂಗಳ ಹಿಂದೆ, ನಾವು ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನವನ್ನು ಪ್ರಾರಂಭಿಸಿದ್ದೇವೆ ಮತ್ತು ರಾಷ್ಟ್ರದಾದ್ಯಂತ ಜನರು ಉತ್ಸಾಹದಲ್ಲಿ ಇದರಲ್ಲಿ ಪಾಲ್ಗೊಂಡರು. ಈ ಯೋಜನೆಯಡಿ ನಾವು 100 ಕೋಟಿ ಗಿಡಗಳನ್ನು ನೆಟ್ಟಿದ್ದೇವೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ, ಕೇವಲ 5 ತಿಂಗಳಲ್ಲಿ ಇದು ಸಾಧ್ಯವಾಗಿದೆ. ಗಯಾನಾ ಅಧ್ಯಕ್ಷ ರಲ್ಲೂ ಇರ್ಫಾನ್ ಅಲಿ, ಅವರ ಅತ್ತೆ ಮತ್ತು ಕುಟುಂಬದ ಇತರ ಸದಸ್ಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು. ‘ಏಕ್ ಪೆಡ್ ಮಾ ಕೆ ನಾಮ್’ ಸಾಕಷ್ಟು ಪ್ರಚಾರವಾಗುತ್ತಿದೆ ಎಂದು ನೀವು ತಿಳಿದಾಗ ಹೆಮ್ಮೆ ಪಡುತ್ತೀರಿ” ಎಂದು ‘ಮನ್ ಕಿ ಬಾತ್’ ನ 116 ನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು.

ಯೋಧರಿಂದ ಖಾಲಿ ಜಾಗದಲ್ಲಿ ಗಿಡ ನೆಡುತ್ತಿರುವ ಸಾಂದರ್ಭಿಕ ಚಿತ್ರ.

ಈ ಅಭಿಯಾನದಡಿಯಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಒಂದೇ ದಿನದಲ್ಲಿ 12 ಲಕ್ಷ ಗಿಡಗಳನ್ನು ಮತ್ತು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಕೇವಲ 1 ಗಂಟೆಯಲ್ಲಿ 25,000 ಗಿಡಗಳನ್ನು ನೆಡುವುದು ಸೇರಿದಂತೆ ಹಲವಾರು ದಾಖಲೆಗಳನ್ನು ರಚಿಸಲಾಗಿದೆ ಎಂದು ಪ್ರಧಾನಿ ವಿವರಿಸಿದರು. ವಿವಿಧ ಸಾಮಾಜಿಕ ಸಂಘಟನೆಗಳ ಉದಾಹರಣೆಗಳನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಈ ಅಭಿಯಾನವು ರಾಷ್ಟ್ರದ ಹಲವಾರು ಭಾಗಗಳಲ್ಲಿ ನಡೆಯುತ್ತಿದೆ. ಬಿಹಾರದ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಸ್ವಸಹಾಯ ಗುಂಪು ಜೀವಿಕಾ, ಭವಿಷ್ಯದಲ್ಲಿ ಆರ್ಥಿಕ ಚಟುವಟಿಕೆಗೆ ಕಾರಣವಾಗುವ ನಿಟ್ಟಿನಲ್ಲಿ 75 ಲಕ್ಷ ಫಲ ನೀಡುವ ಗಿಡಗಳನ್ನು ನೆಡುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಇಂದೋರ್ ನಲ್ಲಿ 24 ಗಂಟೆಗಳಲ್ಲಿ 12 ಲಕ್ಷ ಗಿಡ ನೆಟ್ಟು ದಾಖಲೆ ನಿರ್ಮಾಣ :

ಈ ಅಭಿಯಾನದ ಅಡಿಯಲ್ಲಿ ಒಬ್ಬ ವ್ಯಕ್ತಿಯು ತನ್ನ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡಬಹುದು. ರಾಷ್ಟ್ರದ ವಿವಿಧ ಭಾಗಗಳಲ್ಲಿ ಈ ಅಭಿಯಾನ ನಡೆಯುತ್ತಿದೆ, ಮಧ್ಯಪ್ರದೇಶದ ಇಂದೋರ್‌ನಲ್ಲಿ ಕೇವಲ 24 ಗಂಟೆಗಳಲ್ಲಿ 12 ಲಕ್ಷ ಗಿಡಗಳನ್ನು ನೆಟ್ಟು ದಾಖಲೆ ನಿರ್ಮಿಸಲಾಗಿದೆ. ಈ ಅಭಿಯಾನದಿಂದಾಗಿ ಮಧ್ಯಪ್ರದೇಶದ ಇಂದೋರ್‌ನ ರೇವತಿ ಬೆಟ್ಟಗಳ ಬರಡು ಭೂಮಿ ಮುಂದೆ ಹಸಿರು ಹೊದಿಕೆಯ ಪ್ರದೇಶವಾಗಿ ಬದಲಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

 ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದ ಅಡಿಯಲ್ಲಿ ಜೈಸಲ್ಮೇರ್‌ನಲ್ಲಿ 25,000 ಗಿಡಗಳನ್ನು ನೆಟ್ಟು ಇಲ್ಲಿನವರು ಬೇರೆಯವರಿಗೂ ಪ್ರೇರಣೆಯಾಗಿದ್ದಾರೆ. ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದಡಿ ಹಲವಾರು ಸ್ಥಳಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ವಿವಿಧ ಸಾಮಾಜಿಕ ಸಂಸ್ಥೆಗಳು, ಗಿಡಗಳನ್ನು ನೆಡುತ್ತಿವೆ, ಈ ಮೂಲಕ ಅವರು ಪರಿಸರಕ್ಕೆ ಅನುಗುಣವಾಗಿ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗೆಯೇ ಬಿಹಾರದಲ್ಲಿ ಜೀವಿಕಾ ಸ್ವಸಹಾಯ ಗುಂಪಿನ ಮಹಿಳೆಯರು 75 ಲಕ್ಷ ಫಲ ನೀಡುವ ಗಿಡಗಳನ್ನು ನೆಡಲು ಪ್ರಚಾರ ಮಾಡುತ್ತಿದ್ದಾರೆ” ಎಂದು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದರು.

ಇದಲ್ಲದೆ, ಸ್ವಚ್ಛ ಭಾರತ ಅಭಿಯಾನದಲ್ಲಿ ಯುವಕರ ಕೊಡುಗೆಯ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಅವರು ನಿಷ್ಪ್ರಯೋಜಕವೆಂದು ಪರಿಗಣಿಸಿದ ವಸ್ತುಗಳಿಂದ ಉಪಯುಕ್ತ ವಸ್ತುಗಳನ್ನು ತಯಾರಿಸುತ್ತಿರುವುದರಿಂದ ಅವರು “ತ್ಯಾಜ್ಯವನ್ನು ಚಿನ್ನವಾಗಿ ಪರಿವರ್ತಿಸುತ್ತಿದ್ದಾರೆ” ಎಂದು ಹೇಳಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Forest News | ಕಗ್ಗಲಿಪುರ- ಬನ್ನೇರುಘಟ್ಟ ರಸ್ತೆ ಬಳಿಯ 25 ಕೋಟಿ ರೂ. ಮೌಲ್ಯದ 4 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Next Post

Bengaluru Bulls | ಬೆಂಗಳೂರು ಬುಲ್ಸ್ ನಿಂದ ಮಕ್ಕಳಿಗಾಗಿ ನ.28 ರಂದು “ಬುಲ್ಸ್ ಜೂನಿಯರ್ ಶೋ ಡೌನ್” ಕಬಡ್ಡಿ ಪಂದ್ಯಾವಳಿ ಆಯೋಜನೆ

Next Post
Children kabaddi

Bengaluru Bulls | ಬೆಂಗಳೂರು ಬುಲ್ಸ್ ನಿಂದ ಮಕ್ಕಳಿಗಾಗಿ ನ.28 ರಂದು "ಬುಲ್ಸ್ ಜೂನಿಯರ್ ಶೋ ಡೌನ್" ಕಬಡ್ಡಿ ಪಂದ್ಯಾವಳಿ ಆಯೋಜನೆ

ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತದಂತೆ ರೈತರಲ್ಲಿ ಅರಿವು ಮೂಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

Please login to join discussion

Like Us on Facebook

Follow Us on Twitter

Recent News

ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d