Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ನಿಂದ ಸುವರ್ಣ ಸಂಭ್ರಮ ರಾಜ್ಯೋತ್ಸವ ಕಾರ್ಯಕ್ರಮ

ಡಿಜಿಟಲ್ ಮಾಧ್ಯಮದಲ್ಲಿ ಪತ್ರಕರ್ತರಿಗಿರುವ ಸವಾಲುಗಳು- ಅವಕಾಶಗಳ ಬಗ್ಗೆ ಕಾರ್ಯಕ್ರಮದಲ್ಲಿ ಬೆಳಕು ಚೆಲ್ಲಿದ ತಜ್ಞರು | ನೋಬ್ಲಿ ಕ್ರೀಮ್ ಎಂಬ ನೂತನ ಸ್ವದೇಶಿ ಸಾಮಾಜಿಕ ಮಾಧ್ಯಮದಲ್ಲಿ ಪತ್ರಕರ್ತರಿಗಿದೆ ನಾನಾ ಅವಕಾಶ

by Bengaluru Wire Desk
November 30, 2024
in Bengaluru Focus
Reading Time: 1 min read
0
Karnataka State Digital Media Association

ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ನ ಸುವರ್ಣ ಸಂಭ್ರಮ ರಾಜ್ಯೋತ್ಸವ ಕಾರ್ಯಕ್ರಮವನ್ನು ಗಣ್ಯರು ಶನಿವಾರ ಉದ್ಘಾಟಿಸುತ್ತಿರುವ ದೃಶ್ಯ.

ಬೆಂಗಳೂರು, ನ.30 www.bengaluruwire.com :  ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ (ಕೆಎಸ್ ಡಿಎಂಎ) ನಗರದ ಬಸವನಗುಡಿಯಲ್ಲಿ ಶನಿವಾರ ಸುವರ್ಣ ಸಂಭ್ರಮ ರಾಜ್ಯೋತ್ಸವ-2024 ಕಾರ್ಯಕ್ರಮ ನಡೆಯಿತು.

ಸುವರ್ಣ ಸಂಭ್ರಮ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅಬಲಾಶ್ರಮ ಅಧ್ಯಕ್ಷರು ಹಾಗೂ ಖ್ಯಾತ ಅಂಕಲಾಜಿಸ್ಟ್  ಡಾ.ವಿಜಯಲಕ್ಷ್ಮಿ ದೇಶಮಾನೆ, ಅಬಲಾಶ್ರಮ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳ ಬಗ್ಗೆ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಇಂಡಿಯಾ ಯೋಜನೆ ಮೂಲಕ ಅತಿದೊಡ್ಡ ಕೊಡುಗೆ ಸಮಾಜಕ್ಕೆ ನೀಡಿದಂತಾಗಿದೆ. ಇದರಿಂದಾಗಿ ಆರೋಗ್ಯ ಮತ್ತಿತರ ಕ್ಷೇತ್ರಗಳಲ್ಲಿ ಉತ್ತಮ ಸಂವಹನ, ಮಾಹಿತಿ ಹಂಚಿಕೆಗೆ ಅನುಕೂಲವಾಗಿದೆ ಎಂದು ಹೇಳಿದರು.

ಮಾಧ್ಯಮ ಸಂವಾದದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಹೊಸ ಅವಿಷ್ಕಾರಗಳ ವಿಷಯದ ಬಗ್ಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಬಾಂಬೆ ಐಐಟಿ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ತಜ್ಞರಾದ ಚೈತನ್ಯ ಬೈಲಿ.

ಮಾಧ್ಯಮ ಸಂವಾದದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಹೊಸ ಅವಿಷ್ಕಾರಗಳ ವಿಷಯದ ಬಗ್ಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಬಾಂಬೆ ಐಐಟಿ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ತಜ್ಞರಾದ ಚೈತನ್ಯ ಬೈಲಿ, ನೋವು (Pain) ಹಾಗೂ  ಸಂತೋಷ (Pleasure) ಸುದ್ದಿಗಳಿಗೆ ಹೆಚ್ಚು ಹೆಚ್ಚು ಮಾರ್ಕೆಟಿಂಗ್ ಮಾಡುವ ಅವಶ್ಯಕತೆಯಿದೆ. ಯೂಟ್ಯೂಬ್, ಗೂಗಲ್ ಆಡ್, ಗೂಗಲ್ ಮೈ ಬ್ಯುಸಿನೆಸ್ ನಿಂದ ಆಗುವ ಅನುಕೂಲಗಳು ಹಾಗೂ ಇರುವ ಮಾರ್ಗಗಳ ಬಗ್ಗೆ ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ತಿಳಿಸಿಕೊಟ್ಟರು.

ದಿ ಫೈಲ್ ಕನ್ನಡ ವೆಬ್ ನ್ಯೂಸ್ ಪೋರ್ಟಲ್ ಸಂಪಾದಕರಾದ ಮಹಂತೇಶ್ ಭದ್ರಾವತಿಯವರನ್ನು ಸುವರ್ಣ ಸಂಭ್ರಮ ರಾಜ್ಯೋತ್ಸವ-2024 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ (ಚಿತ್ರದಲ್ಲಿ ಎಡದಿಂದ) ಕೆಎಸ್ ಡಿಎಂಎ ಅಧ್ಯಕ್ಷ ಹನುಮೇಶ್ ಯಾವಗಲ್, ಆಶಾ ಕೃಷ್ಣಸ್ವಾಮಿ, ಅಬಲಾಶ್ರಮ ಅಧ್ಯಕ್ಷರಾದ ಡಾ.ವಿಜಯಲಕ್ಷ್ಮಿ ದೇಶಮಾನೆ ಹಾಗೂ ನೋಬ್ಲಿ ಕ್ರೀಮ್ ಸಾಫ್ಟ್ ವೇರ್ ಸಂಸ್ಥೆಯ ಪ್ರಶಾಂತ್ ಹೆಬ್ಬಾರ್ ಜೊತೆಯಲ್ಲಿದ್ದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ದಿ ಫೈಲ್ ಡಿಜಿಟಲ್ ವೆಬ್ ನ್ಯೂಸ್ ಪೋರ್ಟಲ್ ಸಂಪಾದಕರಾದ ಮಹಂತೇಶ್ ಭದ್ರಾವತಿ, ಕಾಲ ಬದಲಾದಂತೆ, ತಂತ್ರಜ್ಞಾನ ಬದಲಾದಂತೆ ಡಿಜಿಟಲ್ ಮಾಧ್ಯಮದ ಸ್ವರೂಪ ಬದಲಾಗಿದೆ. ಕೋವಿಡ್ ನಂತರ ಡಿಜಿಟಲ್ ಮಾಧ್ಯಮ ಹೆಚ್ಚು ಪ್ರವರ್ಧಮಾನಕ್ಕೆ ಬಂದಿತು. ನಾವು ಪ್ರಾರಂಭಿಸಿದ ದಿ ಫೈಲ್ ವೆಬ್ ನ್ಯೂಸ್ ಪೋರ್ಟಲ್ ದಾಖಲೆ ಸಹಿತ ಸುದ್ದಿ ಹಾಕುತ್ತಾ ಬಂದಿದ್ದೇವೆ. ಯಾವುದೇ ಹಣಕಾಸು ನೆರವು ಇಲ್ಲದೇ ಕಳೆದ ನಾಲ್ಕು ವರ್ಷದಿಂದ ಆರ್ ಟಿಐ ಆಧಾರಿತ, ದಾಖಲೆ ಆಧಾರಿತ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ದಿ ಫೈಲ್ ನಲ್ಲಿ ಸುದ್ದಿಗಳನ್ನು, ನಿರಂತರವಾಗಿ ಹಾಕುತ್ತಾ ಬಂದಿದ್ದೇವೆ.

2020 ರಲ್ಲಿ ಕೊವಿಡ್ ಅಕ್ರಮ ಕುರಿತು ಸುದ್ದಿ ಪ್ರಕಟಿಸಿದ ದಾಖಲೆಗಳನ್ನು ಸರ್ಕಾರ ನೇಮಿಸಿದ ಮೈಕಲ್ ಡಿ ಕುನ್ಹಾ ಸಮಿತಿ ದಾಖಲೆಗಳನ್ನು ಸಲ್ಲಿಸಲು ಸೂಚಿಸಿತ್ತು.‌ ಅದರಂತೆ ದಾಖಲೆಗಳನ್ನು ಸಲ್ಲಿಸಿದ್ದೇವೆ. ಇಂತಹ ಸುದ್ದಿಗಳು ಉತ್ತಮ ಸರ್ಕಾರ, ಆಡಳಿತ ನಡೆಸಲು ಸಹಕಾರಿ ಎಂದು ಅಭಿಪ್ರಾಯಪಟ್ಟರು.

ಟಿವಿ ಸುದ್ದಿ ವಾಹಿನಿಗಳು ಸುದ್ದಿ ಹಾಕುವ ಧಾವಂತದಲ್ಲಿ  ಸುದ್ದಿಯನ್ನು ಒಂದು ಬಾರಿ ಕ್ರಾಸ್ ಚೆಕ್ ಮಾಡಿ ಹಾಕಬೇಕಿದೆ. ಈಗಂತೂ ವೆಬ್ ನ್ಯೂಸ್ ಪೋರ್ಟಲ್ ಹೆಚ್ಚೆಚ್ಚು ಪ್ರಾರಂಭವಾಗುತ್ತಿವೆ. ಈ ನಿಟ್ಟಿನಲ್ಲಿ ಸುದ್ದಿಗಳು ಹಾಕುವಲ್ಲಿ  ಗುಣಮಟ್ಟ ಕಾಯ್ದುಕೊಳ್ಳಬೇಕು. ವಾರ್ತಾ ಇಲಾಖೆ ಜಾರಿಗೆ ತಂದಿರುವ ಡಿಜಿಟಲ್ ನೀತಿ ಸಣ್ಣ ಮಟ್ಟದ ವೆಬ್ ನ್ಯೂಸ್ ಪೋರ್ಟಲ್ ಪ್ರಾರಂಭಿಸಿದವರಿಗೆ ಸಹಕಾರಿಯಾಗಿಲ್ಲ. ಆ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಕೂಡ ಇಲಾಖೆಗೆ ಸ್ವತಂತ್ರ ಮಾಧ್ಯಮಗಳಿಗೂ ಅನುಕೂಲವಾಗುವಂತೆ ಸರ್ಕಾರಕ್ಕೆ ನೀತಿಯಲ್ಲಿ ಬದಲಾವಣೆ ಮಾಡುವಂತೆ ಕೋರುವಂತೆ ಮನವಿ ಮಾಡಿದರು.

ನೋಬ್ಲಿ ಕ್ರೀಮ್  ಎಂಬ ಸ್ವದೇಶಿ ಸಾಮಾಜಿಕ ಮಾಧ್ಯಮ :

ನೋಬ್ಲಿ ಕ್ರೀಮ್ ಸಾಫ್ಟ್ ವೇರ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಿರಿಯ ಪತ್ರಕರ್ತ ಪ್ರಶಾಂತ್ ಹೆಬ್ಬಾರ್ ಡಿಜಿಟಲ್ ಮಾಧ್ಯಮ ಮತ್ತು ಆಧುನಿಕ ತಂತ್ರಜ್ಞಾನ ವಿಷಯವಾಗಿ ಮಾತನಾಡುತ್ತಾ, ಭಾರತ 323 ಮಿಲಿಯನ್ ಯುಎಸ್ ಡಾಲರ್ ನಮ್ಮ ದೇಶದ ಹಣ ಸೋಶಿಯಲ್ ಮೀಡಿಯಾ ಕ್ಷೇತ್ರದಿಂದ ವಿದೇಶಕ್ಕೆ ಹೊರಕ್ಕೆ ಹೋಗುತ್ತಿದೆ. ವಿದೇಶಕ್ಕೆ ಹರಿದು ಹೋಗುವ ನಮ್ಮ ಸಂಪನ್ಮೂಲ ಸ್ವದೇಶದಲ್ಲಿನ ಸಂಸ್ಥೆಗಳಿಗೆ ಬಳಕೆಯಾದರೆ ಇಲ್ಲಿನ ಅರ್ಥವ್ಯವಸ್ಥೆಗೆ ಸಹಕಾರಿಯಾಗಲಿದೆ ಎಂದ ಅವರು, ನೋಬ್ಲಿ ಕ್ರೀಮ್ ವೆಬ್ ಸೈಟ್ (ನೋಬ್ಲಿಕ್ರೀಮ್.ಕಾಮ್) ಹಾಗೂ ಸೋಶಿಯಲ್ ಮೀಡಿಯಾ 2020ರಲ್ಲಿ ತಾವು ಪ್ರಾರಂಭಿಸಿದ್ದು, ವರ್ಲ್ಡ್ ಪ್ರೆಸ್ ಬದಲಾಗಿ ನೋಬ್ಲಿ ಕ್ರೀಮ್ ಸಾಫ್ಟ್ ವೇರ್ ಬಳಸಬಹುದು. ಇದು ಸ್ವದೇಶಿ ಆಪ್ ಆಗಿದೆ. ಈ ಅಪ್ ನಲ್ಲಿ ನ್ಯೂಸ್ ಲೆಟರ್ ಅನ್ನು 10 ರಿಂದ 1 ಲಕ್ಷ ಜನರಿಗೆ ನ್ಯೂಸ್ ಲೆಟರ್ ಕಳಿಸಬಹುದು. ಸಾಮಾನ್ಯ ಜನರು ಬ್ಲಾಗ್ ಬರೆಯಬಹುದು. ಅಮೆರಿಕ, ಸಿಂಗಾಪುರ ಮತ್ತಿತರ ದೇಶಗಳಲ್ಲಿ ಇದರ ಸಾಫ್ಟ್ ವೇರ್ ಸಬ್ ಸ್ಕ್ರೈಬರ್ಸ್ ಇದ್ದಾರೆ.

ನೋಬ್ಲಿಕ್ರೀಮ್.ಕಾಮ್ ಅಥವಾ ಗೂಗಲ್ ಆಪ್ ಸ್ಟೋರ್ ನಲ್ಲಿ ಅಪ್ ಡೌನ್ ಲೋಡ್ ಮಾಡಿಕೊಂಡು, ಸೈನಪ್ ಮಾಡಿ ಸೋಶಿಯಲ್ ಮೀಡಿಯಾ, ಜನರ ಅಭಿಪ್ರಾಯ ವ್ಯಕ್ತಪಡಿಸಲು, ಕ್ರಿಯೇಟರ್ ಟೂಲ್, ಎಐ ಬಳಸಿ ಕಂಟೆಂಟ್ ಸೇರಿದಂತೆ ವಿವಿಧ ಅವಕಾಶಗಳನ್ನು ಮಾಡಿಕೊಡಲಾಗಿದೆ. ಈ ಸಾಫ್ಟ್ ವೇರ್ ಅನ್ನು ಬೆಂಗಳೂರಿನ ತಂತ್ರಜ್ಞರೇ ನಿರ್ಮಿಸಿದ್ದಾರೆ. ಈ ಆಪ್ ನಲ್ಲಿ ಕಂಟೆಂಟ್ ಸೃಷ್ಟಿಸಿ, ಹೆಚ್ಚಿನ ಜನರನ್ನು ತಲುಪಬಹುದು. ಪಬ್ಲಿಷ್ ಮಾಡಿರುವ ಕಂಟೆಂಟ್ ಎಷ್ಟು ಜನರು ನೋಡಿದ್ದಾರೆ ಅದರ ಮಾಹಿತಿ ತಿಳಿಯಲಿದೆ. ಈ ಆಪ್ ಮೂಲಕ ಹಣ ಗಳಿಸಬಹುದಾದ ಆಪ್ ಇದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದಿಂದ ಫ್ರೀಡಂ ಟಿವಿ ಡಿಜಿಟಲ್ ಮಾಧ್ಯದ ಮುಖ್ಯಸ್ಥರಾದ ನಾಗರಾಜ್, ಸಮಾಜಸೇವೆ ಕ್ಷೇತ್ರದಲ್ಲಿ ಜ್ಯೋತಿ ಗೌಡ, ಶಾಂತಕುಮಾರ್, ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬಿ.ಎಂ.ಶಿವರುದ್ರಯ್ಯ ಸೇರಿದಂತೆ ಐವರು ಗಣ್ಯರಿಗೆ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ನಿಂದ ಸುವರ್ಣ ಸಂಭ್ರಮ ರಾಜ್ಯೊತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಆಶಾ ಕೃಷ್ಣಸ್ವಾಮಿ ಪ್ರಸ್ತುತ ಮಾಧ್ಯಮ ಕ್ಷೇತ್ರದಲ್ಲಿನ ಪರಿಸ್ಥಿತಿ, ಅವಕಾಶ ಮತ್ತು ಸವಾಲುಗಳ ಬಗ್ಗೆ ತಿಳಿಸಿದರು. ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಹನುಮೇಶ್ ಕೆ ಯಾವಗಲ್, ಹಿರಿಯ ಪತ್ರಕರ್ತರಾದ ಶ್ರೀನಾಥ್ ಜೋಶಿ ಹಾಗೂ ಹಾಗೂ ವಿವಿಧ ಡಿಜಿಟಲ್ ಮಾಧ್ಯಮಗಳ ಪತ್ರಕರ್ತರು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
Previous Post

BMCRI News | ಪಿಎಂಎಸ್‌ ಎಸ್‌ ವೈ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಎಂದಿನಂತೆ ಎಲೆಕ್ಟಿವ್ ಶಸ್ತ್ರಚಿಕಿತ್ಸೆಗಳು ಆರಂಭ

Next Post

ಬಿಬಿಎಂಪಿ ವ್ಯಾಪ್ತಿಯ 13 ಕೆರೆಗಳ ಒತ್ತುವರಿ ತೆರವು : 242.5 ಕೋಟಿ ರೂ. ಮೌಲ್ಯದ 7 ಎಕರೆ ಪ್ರದೇಶ ಪಾಲಿಕೆ ವಶ ; ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್

Next Post
ಬಿಬಿಎಂಪಿ ವ್ಯಾಪ್ತಿಯ ಕೆರೆ ಅಂಗಳದಲ್ಲಿ ಒತ್ತುವರಿ ತೆರವಿಗೆ ಗುರುತು ಮಾಡುತ್ತಿರುವ ಕೆರೆ ವಿಭಾಗದ ಸಿಬ್ಬಂದಿ.

ಬಿಬಿಎಂಪಿ ವ್ಯಾಪ್ತಿಯ 13 ಕೆರೆಗಳ ಒತ್ತುವರಿ ತೆರವು : 242.5 ಕೋಟಿ ರೂ. ಮೌಲ್ಯದ 7 ಎಕರೆ ಪ್ರದೇಶ ಪಾಲಿಕೆ ವಶ ; ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್

Dance In Front Of Jail

Viral Video News | ಜೈಲಿನಿಂದ ರಿಲೀಸ್ ಆದ ಖುಷಿಯಲ್ಲಿ ಬಂಧೀಖಾನೆ ಮುಂದೆಯೇ ನೃತ್ಯ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d