Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಕರ್ನಾಟಕ ಸೇರಿದಂತೆ ದೇಶಾದ್ಯಂತ 5872 ಕೋಟಿ ರೂ. ವೆಚ್ಚದಲ್ಲಿ 85 ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆ

ಹೊಸ ಕೆವಿ ಶಾಲೆ ಪ್ರಾರಂಭದಿಂದ 82,560 ವಿದ್ಯಾರ್ಥಿಗಳಿಗೆ ಓದಲು ಅವಕಾಶ, 5,388 ಜನರಿಗೆ ನೇರ ಶಾಶ್ವತ ಉದ್ಯೋಗಾವಕಾಶ ಲಭ್ಯ | ಸದ್ಯ 1256 ಕೆವಿಗಳಲ್ಲಿ 13.56 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ.

by Bengaluru Wire Desk
December 7, 2024
in News Wire
Reading Time: 1 min read
0

ನವದೆಹಲಿ, ಡಿ.07 www.bengaluruwire.com : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (Cabinet Committee on Economic Affairs)ಯು ಕರ್ನಾಟಕದಲ್ಲಿ ಮೂರು  ಸೇರಿದಂತೆ ದೇಶಾದ್ಯಂತ ಹೊಸದಾಗಿ ನಾಗರಿಕ/ರಕ್ಷಣಾ ವಲಯದಡಿಯಲ್ಲಿ 85 ಕೇಂದ್ರೀಯ ವಿದ್ಯಾಲಯ (Kendriya Vidyalaya KV)ಗಳ ಸ್ಥಾಪನೆಗೆ ಅನುಮೋದನೆ ನೀಡಿದೆ.

2025-26 ರಿಂದ ಎಂಟು ವರ್ಷಗಳ ಅವಧಿಯಲ್ಲಿ 85 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ ಮತ್ತು ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದಲ್ಲಿ ಕೇಂದ್ರೀಯ ವಿದ್ಯಾಲಯ ಯೋಜನೆಯಡಿಯಲ್ಲಿ (ಕೇಂದ್ರ ವಲಯದ ಯೋಜನೆ) ಎಲ್ಲಾ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ವಿಸ್ತರಣೆಗೆ ಒಟ್ಟು ಅಂದಾಜು ಹಣದ ಅವಶ್ಯಕತೆಯು 5872.08 ಕೋಟಿ ರೂ. ಆಗಿದೆ. ಇದರಲ್ಲಿ 2862.71 ಕೋಟಿ ರೂ.ಗಳ ಬಂಡವಾಳ ವೆಚ್ಚದ ಘಟಕವನ್ನು (ಅಂದಾಜು) ಮತ್ತು 3009.37 ಕೋಟಿ ರೂ.ಗಳ ನಿರ್ವಹಣಾ ವೆಚ್ಚದ ಘಟಕವನ್ನು (ಅಂದಾಜು) ಒಳಗೊಂಡಿದೆ.

ರಾಜ್ಯದಲ್ಲಿ ಯಾದಗಿರಿ ಜಿಲ್ಲೆ, ಮುದ್ನಾಳ್ ಗ್ರಾಮ, ಚಿತ್ರದುರ್ಗ ಜಿಲ್ಲೆ ಕುಂಚಿಗನಾಳ್ ಗ್ರಾಮ, ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಎಳರಗಿ (ಡಿ) ಗ್ರಾಮದಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಯಾಗಲಿದೆ.

ದೇಶದಲ್ಲಿ ಸದ್ಯ, ಮಾಸ್ಕೋ, ಕಠ್ಮಂಡು ಮತ್ತು ಟೆಹ್ರಾನ್ ನಲ್ಲಿರುವ ಮೂರು ಸಾಗರೋತ್ತರ ಕೆವಿಗಳು ಸೇರಿದಂತೆ 1256 ಕ್ರಿಯಾತ್ಮಕ ಕೇಂದ್ರೀಯ ವಿದ್ಯಾಲಯಗಳಿವೆ ಮತ್ತು ಒಟ್ಟು 13.56 ಲಕ್ಷ (ಅಂದಾಜು) ವಿದ್ಯಾರ್ಥಿಗಳು (Students) ಈ ಕೆವಿಗಳಲ್ಲಿ ಓದುತ್ತಿದ್ದಾರೆ.

ಯೋಜನೆಯನ್ನು ಕಾರ್ಯಗತಗೊಳಿಸಲು, ಸರಿಸುಮಾರು 960 ವಿದ್ಯಾರ್ಥಿಗಳ ಸಾಮರ್ಥ್ಯದ ಪೂರ್ಣ ಪ್ರಮಾಣದ ಕೆವಿಯನ್ನು ನಡೆಸಲು ಸಂಘಟನೆಯು ನಿಗದಿಪಡಿಸಿದ ಮಾನದಂಡಗಳ ಪ್ರಕಾರ ಆಡಳಿತ ರಚನೆಯಲ್ಲಿ ಹುದ್ದೆಗಳನ್ನು ರಚಿಸಬೇಕಾಗುತ್ತದೆ. ಹೀಗಾಗಿ, 960×86 = 82,560 ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಾರೆ.

ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ, ಪೂರ್ಣ ಪ್ರಮಾಣದ ಕೇಂದ್ರೀಯ ವಿದ್ಯಾಲಯವು 63 ಜನರಿಗೆ ಉದ್ಯೋಗ (Employment)ವನ್ನು ಒದಗಿಸುತ್ತದೆ ಮತ್ತು ಅದರ ಪ್ರಕಾರ, 85 ಹೊಸ ಕೆವಿಗಳನ್ನು ಮಂಜೂರು ಮಾಡುವುದರಿಂದ ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಯು 33 ಹೊಸ ರೀತಿಯ ಹುದ್ದೆಗಳನ್ನು ಸೇರಿಸುತ್ತದೆ. ಒಟ್ಟು 5,388 ನೇರ ಶಾಶ್ವತ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಎಲ್ಲಾ ಕೆವಿಗಳಲ್ಲಿ ವಿವಿಧ ಸೌಲಭ್ಯಗಳ ಕಲ್ಪಿಸಿ ಕಟ್ಟಡ ನಿರ್ಮಾಣ ಮತ್ತು ಸಂಬಂಧಿತ ಚಟುವಟಿಕೆಗಳು ಅನೇಕ ಕುಶಲ ಮತ್ತು ಕೌಶಲ್ಯರಹಿತ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನ್ವಯ ಕಾರ್ಯನಿರ್ವಹಣೆ :

ರಾಷ್ಟ್ರೀಯ ಶಿಕ್ಷಣ ನೀತಿ 2020 (National Education Policy 2020) ರ ಅನುಸಾರವಾಗಿ, ಬಹುತೇಕ ಎಲ್ಲಾ ಕೇಂದ್ರೀಯ ವಿದ್ಯಾಲಯಗಳನ್ನು ಪಿಎಂಶ್ರೀ ಶಾಲೆಗಳಾಗಿ ಮಾಡಲಾಗಿದೆ. ಗುಣಮಟ್ಟದ ಬೋಧನೆ, ನವೀನ ಕಲಿಕಾ ವಿಧಾನ ಮತ್ತು ನವೀಕೃತ ಮೂಲಸೌಕರ್ಯದಿಂದಾಗಿ ಕೆವಿಗಳು ಹೆಚ್ಚು ಬೇಡಿಕೆಯಿರುವ ಶಾಲೆಗಳಾಗಿವೆ. ಪ್ರತಿ ವರ್ಷ ಕೆವಿಗಳಲ್ಲಿ ಒಂದನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ನಿರಂತರ ಹೆಚ್ಚಳ ಕಂಡುಬಂದಿದೆ ಮತ್ತು ಸಿ ಬಿ ಎಸ್‌ ಇ ನಡೆಸುವ ಬೋರ್ಡ್ ಪರೀಕ್ಷೆಗಳಲ್ಲಿ ಕೇಂದ್ರೀಯ ವಿದ್ಯಾಲಯಗಳ ವಿದ್ಯಾರ್ಥಿಗಳ ಸಾಧನೆಯು ಎಲ್ಲಾ ಶೈಕ್ಷಣಿಕ ವ್ಯವಸ್ಥೆಗಳಲ್ಲಿ ಸತತವಾಗಿ ಅತ್ಯುತ್ತಮವಾಗಿದೆ.

ದೇಶದ ವಿವಿಧೆಡೆ 28 ನವೋದಯ ವಿದ್ಯಾಲಯ ಸ್ಥಾಪನೆ :

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ನವೋದಯ ವಿದ್ಯಾಲಯ ಯೋಜನೆ (Navodaya Vidyalaya Scheme)ಯಡಿ ಬಳ್ಳಾರಿ ಸೇರಿದಂತೆ ದೇಶದ ವಿವಿಧೆಡೆ 28 ನವೋದಯ ವಿದ್ಯಾಲಯಗಳನ್ನು (ಎನ್‌ ವಿ) ಸ್ಥಾಪಿಸಲು ಅನುಮೋದನೆ ನೀಡಿದೆ. 

2024-25 ರಿಂದ 2028-29 ರವರೆಗಿನ ಐದು ವರ್ಷಗಳ ಅವಧಿಯಲ್ಲಿ 28 ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಒಟ್ಟು ಅಂದಾಜು 2359.82 ಕೋಟಿ ರೂ.ಗೆ ಸಮಿತಿಯು ಒಪ್ಪಿಗೆ ನೀಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Railway Safety ITMS System | ಶೀಘ್ರದಲ್ಲೇ ದೇಶದ ಎಲ್ಲಾ ವಲಯಗಳಲ್ಲಿ ಹೈಟೆಕ್ ಟ್ರ್ಯಾಕ್ ಮಾನಿಟರಿಂಗ್ ವ್ಯವಸ್ಥೆ : ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

Next Post

BBMP E-Khata | ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಇ-ಖಾತಾ ಕುರಿತು ಏನೇ ಸಮಸ್ಯೆ ಇದ್ದರೂ ಈ ನಾಗರೀಕ ಸಹಾಯವಾಣಿಗೆ ಕರೆ ಮಾಡಿ

Next Post

BBMP E-Khata | ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಇ-ಖಾತಾ ಕುರಿತು ಏನೇ ಸಮಸ್ಯೆ ಇದ್ದರೂ ಈ ನಾಗರೀಕ ಸಹಾಯವಾಣಿಗೆ ಕರೆ ಮಾಡಿ

ಚೆನ್ನೈನಲ್ಲಿ ಮಿಂಚಿನ ವೇಗದಲ್ಲಿ ಸಂಚರಿಸುವ ದೇಶದ ಮೊದಲ ಹೈಪರ್ ಲೂಪ್ ರೈಲಿನ ಟ್ರ್ಯಾಕ್ ಉದ್ಘಾಟನೆ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d