Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | BDA PRR Project | ಬಿಡಿಎ ಪಿಆರ್ ಆರ್ ರಸ್ತೆ ಯೋಜನೆಗೆ ಹುಡ್ಕೋದಿಂದ 27000 ಕೋಟಿ ರೂ. ಸಾಲಕ್ಕೆ ಒಪ್ಪಿಗೆ

by Bengaluru Wire Desk
January 3, 2025
in Bengaluru Focus, BW Special, Public interest
Reading Time: 1 min read
0
BDA PRR Road

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೆರಿಫಿರಿಯಲ್ ರಿಂಗ್ ರೋಡ್ ರಸ್ತೆಯ ನಕ್ಷೆಯಿರುವ ಸಾಂಧರ್ಭಿಕ ಚಿತ್ರ.

ಬೆಂಗಳೂರು, ಜ.03 www.bengaluruwire.com  : ಬಹುಕಾಲದಿಂದ ಸಿಲಿಕಾನ್ ಸಿಟಿಯ ಜನತೆ ಕಾಯುತ್ತಿರುವ ಪೆರಿಫಿರಿಯಲ್ ರಿಂಗ್ ರಸ್ತೆ (Peripheral Ring Road- PRR) ಅಥವಾ ಹೊಸದಾಗಿ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (Bengaluru Business Corridor – BBC) ಎಂದು ಕರೆಯಲ್ಪಡುವ  ಯೋಜನೆ ಅನುಷ್ಠಾನದ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ಕಂಡು ಬಂದಿದೆ. ಕೇಂದ್ರದ ಗೃಹ ಮತ್ತು ನಗರಾಭಿವೃದ್ಧಿ ನಿಗಮ (Housing and Urban Development Corporation – HUDCO) ಬಿಡಿಎ ಕೈಗೊಂಡಿರುವ 27,000 ಕೋಟಿ ರೂ. ಬೃಹತ್ ಮೊತ್ತದ ಯೋಜನೆಗೆ ಶೇ.100ರಷ್ಟು ಸಾಲ ನೀಡಲು ಒಪ್ಪಿಗೆ ಸೂಚಿಸಿದೆ.

ಈ ಕುರಿತಂತೆ ಹುಡ್ಕೋ ಮತ್ತು ಬಿಡಿಎ ಮಧ್ಯೆ ಒಪ್ಪಂದ ಏರ್ಪಡಬೇಕಿದೆ. ವಾರ್ಷಿಕ ಶೇ.9ರಷ್ಟು ಬಡ್ಡಿದರದಲ್ಲಿ ಬೃಹತ್ ಮೊತ್ತದ ಸಾಲ ನೀಡುವುದಾಗಿ ಹುಡ್ಕೋ ಬಿಡಿಎಗೆ ತಿಳಿಸಿತ್ತು. ಆನಂತರ ಉಪಮುಖ್ಯಮಂತ್ರಿ ನೇತೃತ್ವದಲ್ಲಿ ಹುಡ್ಕೋ ಅಧಿಕಾರಿಗಳೊಂದಿಗೆ ಚೌಕಾಶಿ ನಡೆದು ಅಂತಿಮವಾಗಿ ಶೇ.8.95 ಬಡ್ಡಿ ದರದಲ್ಲಿ ಸುಮಾರು 24 ವರ್ಷಗಳ ದೀರ್ಘಾವಧಿ ಸಾಲವನ್ನು ಬಿಡಿಎ ಪಡೆದುಕೊಂಡಿದೆ. ಮೊದಲ 4 ವರ್ಷದ ಕಾಲ ಸರ್ಕಾರವೇ ಬಡ್ಡಿಯನ್ನು ಭರಿಸಲಿದೆ. ಆ ಬಳಿಕ ಬಿಡಿಎ ಯೋಜನೆಗಾಗಿ ಹುಡ್ಕೋದಿಂದ ಹಣ ಪಡೆದಂತೆಲ್ಲಾ ಶೇ.8.95ರಷ್ಟು ಬಡ್ಡಿಯನ್ನು ಕಟ್ಟಬೇಕಿದೆ. ಸಾಲವನ್ನು ಅವಧಿಗೆ ಮುನ್ನವೇ ತೀರಿಸುವ ಅವಕಾಶವನ್ನು ಹೊಂದಿದೆ ಎಂದು ಬಿಡಿಎ ಮೂಲಗಳು ಬೆಂಗಳೂರು ವೈರ್ ತಿಳಿಸಿದೆ.

ದಶಕಗಳಿಗೂ ಹೆಚ್ಚು ಅವಧಿಯಿಂದ ಬಾಕಿ ಉಳಿದಿದ್ದ ಈ ಯೋಜನೆಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಸರ್ಕಾರಿಂದ ಒಪ್ಪಿಗೆ ದೊರೆಯುವ ನಿರೀಕ್ಷೆಯಿದೆ. ಬಿಬಿಸಿ ಯೋಜನೆ ಜಾರಿಗಾಗಿ ಬಿಡಿಎ 2560 ಎಕರೆ ಭೂಸ್ವಾಧೀನಪಡಿಸಿಕೊಳ್ಳಬೇಕಿದೆ. ಆ ಪೈಕಿ 2007ರಲ್ಲಿ ಬಿಡಿಎ 1810 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಇನ್ನು 2022ನೇ ಇಸವಿಯಲ್ಲಿ 608 ಎಕರೆ ಜಮೀನು ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ಅಂತಿಮ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟಾರೆ 27,000 ಕೋಟಿ ರೂ. ವೆಚ್ಚದ ಯೋಜನೆಯಲ್ಲಿ 21,000 ಕೋಟಿ ರೂ. ಹಣವನ್ನು ಭೂಸ್ವಾಧೀನಕ್ಕೆ ಹಾಗೂ ಉಳಿದ 6,000 ಕೋಟಿ ರೂ. ಹಣವನ್ನು ಪಿಆರ್ ಆರ್ ರಸ್ತೆ ನಿರ್ಮಾಣಕ್ಕೆ ಬಿಡಿಎ ಬಳಸಿಕೊಳ್ಳಲಿದೆ.

ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ಈ ಯೋಜನೆಗೆ ಹುಡ್ಕೋ ಸಾಲ ಖಾತರಿಯು ಬಹುದೊಡ್ಡ ಶಕ್ತಿಯಾಗಿದ್ದು, ಯೋಜನೆ ಅನುಷ್ಠಾನದಲ್ಲಿ ಪ್ರಮುಖ ಸವಾಲು ನಿವಾರಣೆಯಾದಂತಾಗಿದೆ. ಭೂಸ್ವಾಧೀನ ಕಾಯ್ದೆ ಹಾಗೂ ಪುನರ್ವಸತಿ ಕಾಯ್ದೆಯಡಿ ಭೂಮಿ ನೀಡಿದ ರೈತರಿಗೆ ಭೂ ಪರಿಹಾರ ನೀಡಲಾಗುತ್ತದೆ. ಆನಂತರವಷ್ಟೇ ಬಿಡಿಎ ಭೂಸ್ವಾಧೀನ ವಿಭಾಗದಿಂದ ಭೂಮಿ ಪಡೆದು ಯೋಜನೆ ಅನುಷ್ಠಾನ ಕೈಗೊಳ್ಳಲಾಗುತ್ತದೆ. ಬಿಬಿಸಿ ಯೋಜನೆಗಾಗಿ ಬಿಡಿಎ ಈಗಾಗಲೇ ವಿಸ್ತ್ರತ ಯೋಜನಾ ವರದಿ (DPR)ಯನ್ನು ತಯಾರಿಸಿದೆ.

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಯಡಿ ಒಟ್ಟು 77 ಹಳ್ಳಿಗಳು ಬರಲಿದೆ. ಈ ಪ್ರದೇಶದಲ್ಲಿ ಭೂಸ್ವಾಧೀನಕ್ಕಾಗಿ 9 ವಿಶೇಷ ಭೂಸ್ವಾಧೀನಾಧಿಕಾರಿ (Special Land Acquisition Officers – SLAO)ಗಳು, 7 ಸರ್ವೇಯರ್, ಒಬ್ಬರು ಭೂದಾಖಲೆಗಳ ಸಹಾಯಕ ನಿರ್ದೇಶಕರಗಳನ್ನು ಸರ್ಕಾರ ಈಗಾಗಲೇ ಪಿಆರ್ ಆರ್ ಯೋಜನೆಗೆ ನಿಯೋಜಿಸಿದೆ. ಪ್ರತಿಯೊಬ್ಬ ಎಸ್ಎಲ್ಎಒಗಳಿಗೂ 7 ಹಳ್ಳಿಗಳಲ್ಲಿ ಸರಾಸರಿಯಾಗಿ 250 ಎಕರೆ ಭೂಮಿಯನ್ನು ಬಿಡಿಎಗೆ ಸ್ವಾಧೀನಪಡಿಸಿಕೊಳ್ಳಲು ಗುರಿ ನಿಗದಿಪಡಿಸಲಾಗಿದೆ. ಯೋಜನೆಗೆ ಅಗತ್ಯವಾದ ಶೇ.70ರಷ್ಟು ಭೂಸ್ವಾಧೀನ ಅಧಿಸೂಚನೆಗೊಳಿಸುವ ಕಾರ್ಯವು ಮುಗಿದಿದ್ದು, ಅಂತಹ ಅಧಿಸೂಚನೆಯಾದ ಭೂಮಾಲೀಕರಿಗೆ ಪರಿಹಾರ ನೀಡಿ ಭೂಮಿಯನ್ನು ಬಿಡಿಎ ಸ್ವಾಧೀನಪಡಿಸಿಕೊಳ್ಳಬೇಕಿದೆಯಷ್ಟೆ ಎಂದು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ಖಚಿತಪಡಿಸಿದ್ದಾರೆ.

ಬೆಂಗಳೂರಿನ ಬೃಹತ್ ವಾಹನ ದಟ್ಟಣೆಯನ್ನು ತಗ್ಗಿಸುವ ನಿಟ್ಟಿನಲ್ಲಿ 73 ಕಿ.ಮೀ ಉದ್ದ ಹಾಗೂ 100 ಮೀಟರ್ ಅಗಲದ ಬಿಬಿಸಿ ಯೋಜನೆ ಪ್ರಮುಖವಾಗಿದ್ದು, ತುಮಕೂರು ಹಾಗೂ ಹೊಸೂರು ರಸ್ತೆಯನ್ನು ಸಂಪರ್ಕಿಸುತ್ತದೆ. ಹೊಸ ಎಕ್ಸ್‌ಪ್ರೆಸ್‌ವೇ ಪ್ರಯಾಣಿಕರಿಗೆ ಹೆಚ್ಚು ಅಗತ್ಯವಿರುವ ಪರ್ಯಾಯ ಮಾರ್ಗವನ್ನು ಒದಗಿಸುತ್ತದೆ, ಅಸ್ತಿತ್ವದಲ್ಲಿರುವ ರಸ್ತೆಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ ಮತ್ತು ಒಟ್ಟಾರೆ ಟ್ರಾಫಿಕ್ ಹರಿವನ್ನು ಸುಧಾರಿಸುತ್ತದೆ. ಹೆಚ್ಚುವರಿಯಾಗಿ, ಯೋಜನೆಯು ಬೆಂಗಳೂರು ಮತ್ತು ಸುತ್ತಮುತ್ತಲಿನ ಪಟ್ಟಣಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ, ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ತೆರೆಯುತ್ತದೆ.

ಪಿಆರ್ ಆರ್ ಯೋಜನೆಗೆ ಹೆಚ್ಚುವರಿಯಾಗಿ, ಪೆರಿಫೆರಲ್ ರಿಂಗ್ ರೋಡ್-2 (PRR-2) ಯೋಜನೆಯಡಿ ಆರು ಹೊಸ ಲೇಔಟ್‌ಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಬಿಡಿಎ ಪ್ರಕಟಿಸಿದೆ. ಈ ಲೇಔಟ್‌ಗಳು 50,000 ಹೊಸ ವಸತಿ ನಿವೇಶನಗಳನ್ನು ಒದಗಿಸಲಿದ್ದು, ಬೆಂಗಳೂರಿನಲ್ಲಿನ ವಸತಿಗಾಗಿ ಹೆಚ್ಚಿನ ಬೇಡಿಕೆಯನ್ನು ಪೂರೈಸುತ್ತವೆ. ಪಿಆರ್ ಆರ್-2 ಯೋಜನೆಯು ಹೊಸೂರು ರಸ್ತೆಯಿಂದ ಬೆಂಗಳೂರು-ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ. ಬನ್ನೇರುಘಟ್ಟ ಮತ್ತು ಕನಕಪುರ ರಸ್ತೆಗಳ ಮೂಲಕ ಹಾದುಹೋಗುತ್ತದೆ. ಈ ಯೋಜನೆಯು ಎರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೆರಿಫೆರಲ್ ರಿಂಗ್ ರೋಡ್ ಯೋಜನೆಯು ಬೆಂಗಳೂರಿನ ಸಾರಿಗೆ ವ್ಯವಸ್ಥೆಯನ್ನು ಪರಿವರ್ತಿಸುವಷ್ಟು ಪ್ರಭಾವಶಾಲಿಯಾಗಿದೆ.  ಇದು ನಗರದ ಸಂಚಾರ ದಟ್ಟಣೆ ಮತ್ತು ಸಂಪರ್ಕ ಸಮಸ್ಯೆಗಳಿಗೆ ಹೆಚ್ಚು ಅಗತ್ಯವಿರುವ ಪರಿಹಾರವನ್ನು ಒದಗಿಸುತ್ತದೆ. ಹುಡ್ಕೊದಿಂದ ಆರ್ಥಿಕ ಉತ್ತೇಜನ ಮತ್ತು ಸುಸ್ಥಿರ ಅಭಿವೃದ್ಧಿ ಅಭ್ಯಾಸಗಳ ಅಳವಡಿಕೆಯೊಂದಿಗೆ, ಯೋಜನೆಯು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಮತ್ತು ನಿವಾಸಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ಸಿದ್ಧವಾಗಿದೆ. ಬೆಂಗಳೂರು ಬೆಳೆಯುತ್ತಿರುವಂತೆ, ನಗರದ ಭವಿಷ್ಯವನ್ನು ರೂಪಿಸುವಲ್ಲಿ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಯು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW SPECIAL | ಇಲ್ಲಿ ಮೂಗು ಮುಚ್ಚಿ ತಿಂಡಿ ತಿನ್ನಿ!! ಇದು ವಿವಿ ಪುರಂ Food Street : ಅವ್ಯವಸ್ಥೆಯ ಅಗರವಾಗಿದೆ ನವೀಕರಣವಾದ ತಿಂಡಿ ಬೀದಿ

Next Post

ನಿಮ್ಹಾನ್ಸ್ ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಸಮಗ್ರ ಆರೋಗ್ಯ ವಿಧಾನದ ಕಾರ್ಯವೈಖರಿಗೆ ರಾಷ್ಟ್ರಪತಿ ಮುರ್ಮು ಶ್ಲಾಘನೆ

Next Post
ನಗರದಲ್ಲಿ ಶುಕ್ರವಾರ ನಿಮ್ಹಾನ್ಸ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪಾಲ್ಗೊಂಡಿದ್ದರು. ಕೇಂದ್ರ ಸಚಿವ ಜೆಪಿ ನಡ್ಡಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಪಿ.ಸಿ.ಮೋಹನ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪಾಲ್ಗೊಂಡಿದ್ದರು.

ನಿಮ್ಹಾನ್ಸ್ ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಸಮಗ್ರ ಆರೋಗ್ಯ ವಿಧಾನದ ಕಾರ್ಯವೈಖರಿಗೆ ರಾಷ್ಟ್ರಪತಿ ಮುರ್ಮು ಶ್ಲಾಘನೆ

ಬಿಬಿಎಂಪಿ ವೃಂದ ಮತ್ತು ನೇಮಕಾತಿ ನಿಯಮಾವಳಿ 2020ರ ದಾಖಲೆ.

BW SPECIAL | ಬಿಬಿಎಂಪಿ ವೃಂದ ಮತ್ತು ನೇಮಕಾತಿ ನಿಯಮಾವಳಿ, ನಿಯೋಜನಾ ನೀತಿ ಉಲ್ಲಂಘಿಸಿ ನಗರ ಯೋಜನೆ ವಿಭಾಗದಲ್ಲಿ “ಡೆಪ್ಯೂಟೇಷನ್ ದಂಧೆ”: ಇಲ್ಲಿದೆ ದಾಖಲೆ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d