Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Six Naxalites surrender | ಸಶಸ್ತ್ರ ಹೋರಾಟ ಕೈಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾದ ಆರು ನಕ್ಸಲರು

by Bengaluru Wire Desk
January 8, 2025
in News Wire, Public interest
Reading Time: 1 min read
0

ಬೆಂಗಳೂರು, ಜ.08 www.bengaluruwire.com : ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಕಳೆದ ಎರಡೂವರೆ ದಶಕಗಳಿಂದ ಅರಣ್ಯವಾಸಿಗಳು ಹಾಗೂ ದಲಿತರ ಸಂವಿಧಾನ ಬದ್ದ ಹಕ್ಕುಗಳಿಗಾಗಿ, ಭೂ ಮಾಲೀಕರ ಶೋಷಣೆ ವಿರುದ್ಧ ಸಮಾನತೆಗೆ ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುವ ಮೂಲಕ ಭೂಗತರಾಗಿದ್ದ  ಆರು ಮಂದಿ ನಕ್ಸಲೀಯರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾದರು. 

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ. ಮತ್ತು ರಾಯಚೂರಿನ ಮಾರಪ್ಪ ಅರೋಲಿ ಶರಣಾಗತಿ ಆಗಿರುವ ನಕ್ಸಲರಾಗಿದ್ದಾರೆ. ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರನ್ನು ಒಳಗೊಂಡ ಮಾವೋವಾದಿ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾದರು. ಇದರಿಂದಾಗಿ ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಇಂತಹದೊಂದು ಘಟನೆಗೆ ಸಿಎಂ ಕಚೇರಿ ಸಾಕ್ಷಿಯಾಯಿತು. ಸಿಎಂ ಸಿದ್ದರಾಮಯ್ಯ ಶರಣಾದ ಆರು ನಕ್ಸಲೀಯರಿಗೆ ಗುಲಾಬಿ ಹೂವ ಹಾಗೂ ಸಂವಿಧಾನ ಪುಸ್ತಕ ನೀಡಿದರು.

ದಶಕಗಳ ಕಾಲ ಮೂರು ರಾಜ್ಯಗಳಿಗೆ ತಲೆನೋವಾಗಿ ಪರಿಣಮಿಸಿದ್ದ ಈ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ‌.ಪರಮೇಶ್ವರ್, ಪೊಲೀಸ್ ಮಹಾ ನಿದೇರ್ಶಕ ಅಲೋಕ್ ಮೋಹನ್, ಎಡಿಜಿಪಿ ಹೇಮಂತ್ ನಿಂಬಾಳ್ಕರ್, ನಕ್ಸಲೀಯರ ಸಂಬಂಧಿಕರು ಸೇರಿದಂತೆ ಮತ್ತಿತರರ ಸಮ್ಮುಖದಲ್ಲಿ ಸಿ.ಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಬುಧವಾರ ಶರಣಾಗುವುದರೊಂದಿಗೆ ನಕ್ಸಲೀಯರು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದರೊಂದಿಗೆ ತಾವು ಕೂಡ ಸಮಾಜದಲ್ಲಿ ಸಾಮಾನ್ಯರಂತೆ  ಜೀವನ ಸಾಧಿಸುತ್ತೇವೆ ಎಂಬ ಸಂದೇಶವನ್ನು ಸಾರಿದರು.  ರಾಜ್ಯದ ಮುಖ್ಯಮಂತ್ರಿಯೊಬ್ಬರ ಸಮ್ಮುಖದಲ್ಲಿ ನಕ್ಸಲೀಯರು ಹಿಂಸೆ ಮಾರ್ಗವನ್ನು ತೊರೆದು, ಶಸ್ತ್ರಾಸ್ತ್ರಗಳನ್ನು ಬದಿಗಿಟ್ಟು ಶರಣಾಗಿದ್ದು ಇದೇ ಮೊದಲು  ಎನ್ನಲಾಗಿದೆ. 

ಬುಧವಾರ ಶರಣಾದ ಆರು ಮಂದಿ ನಕ್ಸಲೀಯರು.

ಶರಣಾದ ಇಬ್ಬರು ನಕ್ಸಲೀಯರಲ್ಲೇ ಮೋಸ್ಟ್ ವಾಂಟೆಡ್‌ ಲಿಸ್ಟ್ ನಲ್ಲಿದ್ದರು. ಇವರ ಪತ್ತೆಗಾಗಿ ಕರ್ನಾಟಕ ಮತ್ತು ಕೇರಳ ಸರ್ಕಾರ ತಲಾ 5 ಹಾಗೂ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾಗುತ್ತಿದ್ದಂತೆ ಪೊಲೀಸರು ಆರು ಮಂದಿ ನಕ್ಸಲೀಯರನ್ನು ವಶಕ್ಕೆ ಪಡೆದು ನಂತರ ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. 

ಎಲ್ಲರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದ್ದು, ಶರಣಾಗಿರುವ  ನಕ್ಸಲೀಯರನ್ನು ಸದ್ಯ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಯಿತು. 

ಇದಕ್ಕೂ ಮುನ್ನ ಬೆಳಗ್ಗೆ ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಕಣತಿ ಸಮೀಪ ಬರುತ್ತಿದ್ದಂತೆ ಬೆಂಗಳೂರಲ್ಲಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಅವರ ಸಮ್ಮುಖದಲ್ಲೇ ಶರಣಾಗತಿ ಆಗಬೇಕು ಎಂಬ ಸಂದೇಶದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಯಿತು. ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆ ಆಶ್ರಯದಲ್ಲಿ ಆರು ಮಂದಿ ನಕ್ಸಲರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎದುರು ಶರಣಾಗುತ್ತಾರೆ ಎಂದು ಮೊದಲು ಹೇಳಲಾಗಿತ್ತು. 

ಆದರೆ ಸರ್ಕಾರದ ನಕ್ಸಲ್​ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಮುಂದೆ ಶರಣಾಗತಿ ಪ್ರಕ್ರಿಯೆ ನಡೆಯಬೇಕೆಂಬ ಉದ್ದೇಶದಿಂದ ಅಂತಿಮ ಕ್ಷಣದಲ್ಲಿ ಶರಣಾಗತಿ ಪ್ರಕ್ರಿಯೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ವರ್ಗಾವಣೆಯಾಗಿದೆ. ಆನಂತರವಷ್ಟೇ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಯಿತು.

25 ವರ್ಷಗಳಿಂದ ಮಾವೋವಾದಿ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಇವರಲ್ಲಿ ಬಹುತೇಕರಿಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳು ಬಾಧಿಸುತ್ತಿವೆ. ಇತ್ತೀಚೆಗೆ ಮಲೆನಾಡು ಭಾಗದಲ್ಲಿ ನಕ್ಸಲರ ಹೆಜ್ಜೆಗುರುತುಗಳು ಕಾಣಿಸಿಕೊಂಡ ಕಾರಣಕ್ಕೆ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿತ್ತು. ಅದರಲ್ಲಿ ವಿಕ್ರಂಗೌಡ ಇತ್ತೀಚೆಗೆ ಎನ್‌ಕೌಂಟರ್‌ಗೆ ತುತ್ತಾಗಿ ಸಾವನಪ್ಪಿದ್ದ.

ವಿಕ್ರಂಗೌಡ ಬಲಿಯಾದ ನಂತರ ಉಳಿದ ನಕ್ಸಲರನ್ನು ಶರಣಾಗಿಸುವ ಪ್ರಕ್ರಿಯೆಗೆ ವೇಗ ಸಿಕ್ಕಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರು ನಕ್ಸಲರಿಗೆ ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಕರೆ ನೀಡಿದ್ದರು. ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಸೇರಿದಂತೆ ಅಧಿಕಾರಿಗಳು, ಶರಣಾಗತಿ/ಪುನರ್ವಸತಿ ಸಮಿತಿ, ಶಾಂತಿಗಾಗಿ ನಾಗರಿಕರ ವೇದಿಕೆ ಸದಸ್ಯರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ, ಕೇರಳ, ತಮಿಳುನಾಡಿನ 6 ಜನ ಸಮಾಜದ ಮುಖ್ಯವಾಹಿನಿಗೆ ಬರಲು ಒಪ್ಪಿದ್ದೇವೆ. ನಮ್ಮ ಕೊನೆ ಉಸಿರು ಇರುವವರೆಗೂ ಜನಪರ ಹೋರಾಟಕ್ಕೆ ಹಿಂಜರಿಯುವುದಿಲ್ಲ. ಶರಣಾಗತಿ/ಪುನರ್ವಸತಿ ಸಮಿತಿ, ಶಾಂತಿಗಾಗಿ ನಾಗರಿಕರ ವೇದಿಕೆಯವರು ಸರಕಾರ ನೀಡಿದ ಎಲ್ಲ ಭರವಸೆಗಳನ್ನು ಅರ್ಥ ಮಾಡಿಸಿದ್ದಾರೆ. ಸರ್ಕಾರ ಕೂಡ ನಮ್ಮ ಎಲ್ಲ ಬೇಡಿಕೆ ಈಡೇರಿಸುವ ಭರವಸೆ ಇದೆ ಎಂದು ಮುಂಡಗಾರು ಲತಾ (ವಿಡಿಯೊ ಸಂದೇಶ) ಹೇಳಿದ್ದಾರೆ.

ಬೆಳಗ್ಗೆ 7 ಗಂಟೆಗೆ ಶೃಂಗೇರಿಯಿಂದ ನಕ್ಸಲೀಯರು ಹಾಗೂ ಸಮಿತಿಯ ಕೆಲವು ಸದಸ್ಯರನ್ನು ಮುಖ್ಯಮಂತ್ರಿಗಳ   ಕಚೇರಿಗೆ ಒದಗಿಸಿದ್ದ ವಿಶೇಷ ವಾಹನ ಹಾಗೂ ಭದ್ರತೆಯೊಂದಿಗೆ  ಕೊಪ್ಪ, ಎನ್.ಆರ್.ಪುರ, ಬೇಲೂರು, ಹಾಸನದ ಮೂಲಕ ಬೆಂಗಳೂರಿಗೆ ಕರೆದು ತರಲಾಗಿತ್ತು. ನಂತರ ಕೃಷ್ಣಾದಲ್ಲಿ ನಡೆದ ಶರಣಾಗತಿ ಕಾರ್ಯಕ್ರಮದಲ್ಲಿ ನಕ್ಸಲೀಯರು ಶರಣಾಗುವ ಮೂಲಕ  ಹಿಂಸಾ ಮಾರ್ಗ ತೊರೆದು ಅಹಿಂಸಾ ಮಾರ್ಗದ ಮೂಲಕವೇ ಹೋರಾಟ ಮಾಡುತ್ತೇವೆ ಎಂದು ಶಪಥ ಮಾಡಿದರು.

ಶರಣಾಗಲು ಬಾಕಿಯಿರುವ ಏಕೈಕ ನಕ್ಸಲೀಯ :

ಶೃಂಗೇರಿ ತಾಲೂಕು ಕಿಗ್ಗಾ ಮೂಲದ ರವಿ ಎಂಬಾತ ಮಾತ್ರ ಶರಣಾಗುವುದು ಬಾಕಿ ಇದ್ದು, ಆ ಪ್ರಕ್ರಿಯೆ ಕೂಡ ನಡೆಯುತ್ತಿದೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ಹೊಸ ಪೀಳಿಗೆ ಮಾವೋವಾದಿ ಚಳವಳಿಗೆ ಧುಮುಕದೇ ಇದ್ದರೆ ಅಥವಾ ಬೇರೆಬೇರೆ ರಾಜ್ಯಗಳ ನಕ್ಸಲೀಯರು ಮಲೆನಾಡು ಭಾಗಕ್ಕೆ ಕಾಲಿಡದೇ ಇದ್ದರೆ ಕರ್ನಾಟಕ ಬಹುತೇಕ ನಕ್ಸಲ್ ಮುಕ್ತವಾಗುವ ಅವಕಾಶವಿದೆ. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Security at Maha Kumbh 2025 | ಮಹಾ ಕುಂಭಮೇಳ 2025 : ಭಕ್ತರ ಸುರಕ್ಷತೆಗೆ ಏಳು ಹಂತದ ಭದ್ರತಾ ಕ್ರಮ 

Next Post

Video News | ತಿರುಪತಿ ವೈಕುಂಠ ದ್ವಾರ ಸರ್ವ ದರ್ಶನ ಟಿಕೆಟ್ ಗಾಗಿ ತಳ್ಳಾಟ – ನೂಕಾಟ : ಕಾಲ್ತುಳಿತದಲ್ಲಿ ನಾಲ್ವರು ಸಾವು

Next Post

Video News | ತಿರುಪತಿ ವೈಕುಂಠ ದ್ವಾರ ಸರ್ವ ದರ್ಶನ ಟಿಕೆಟ್ ಗಾಗಿ ತಳ್ಳಾಟ - ನೂಕಾಟ : ಕಾಲ್ತುಳಿತದಲ್ಲಿ ನಾಲ್ವರು ಸಾವು

-20 ಡಿಗ್ರಿ ಸೆಲ್ಸಿಯಸ್‌ ಕಡಿಮೆ ತಾಪಮಾನದಲ್ಲೂ ಚಲಿಸಲಿದೆ ಜಮ್ಮು-ಶ್ರೀನಗರ ವಂದೇ ಭಾರತ್ ರೈಲು : ಸದ್ಯದಲ್ಲೇ ಸೇವೆ ಪ್ರಾರಂಭ 

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d