Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಇನ್ನು ಮುಂದೆ ಬಿಡಿಎ ಅನುಮೋದನೆಯಿಲ್ಲದೆ ಖಾತಾ ನೋಂದಣಿ, ವಿಭಜನೆ ಆಗಲ್ಲ : ನಾಗರೀಕರ ಸಂಕಷ್ಟಕ್ಕೆ ಕಾರಣವಾಗುತ್ತಾ ಬಿಬಿಎಂಪಿ ಪರಿಷ್ಕೃತ ಸುತ್ತೋಲೆ?

ಪರಿಷ್ಕೃತ ಸುತ್ತೋಲೆ ಭ್ರಷ್ಟಾಚಾರ ಪ್ರಮಾಣ ಹೆಚ್ಚಿಸಲು ಕಾರಣವಾಗುತ್ತಾ? ಏನನ್ನುತ್ತೆ ಹೊಸ ಸುತ್ತೋಲೆ?

by Bengaluru Wire Desk
January 9, 2025
in Bengaluru Focus
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಜ.09 www.bengaluruwire.com : ಬಿಬಿಎಂಪಿ ಮುಖ್ಯ ಆಯುಕ್ತರು ಖಾತಾ ವಿಭಜನೆ ಕಾರ್ಯಕ್ಕೆ ಸಂಬಂಧಿಸಿದಂತೆ ಜ.07 ರಂದು ಹೊರಡಿಸಿರುವ ಪರಿಷ್ಕೃತ ಸುತ್ತೋಲೆಯಿಂದ ಮತ್ತಷ್ಟು ಭ್ರಷ್ಟಾಚಾರ, ಸಾಮಾನ್ಯ ನಾಗರೀಕರು ಪಾಲಿಕೆ- ಬಿಡಿಎ ಕಚೇರಿಗಳಿಗೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗು ಸಾಧ್ಯತೆಯಿದೆ.

ಈ ಪರಿಷ್ಕೃತ ಸುತ್ತೋಲೆಯಿಂದ ಪಾಲಿಕೆಯ ವ್ಯಾಪ್ತಿಯಲ್ಲಿರುವ ಸ್ವತ್ತುಗಳಿಗೆ ಖಾತಾ ನೊಂದಣಿ ಮತ್ತು ವಿಭಜನೆ ಮಾಡುವ ಕಾರ್ಯ ಮತ್ತಷ್ಟು ಸಂಕೀರ್ಣವಾಗಲಿದೆ. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 ರ ಪ್ರಕರಣ 17 ಕ್ಕೆ 2021 ರಲ್ಲಿ ತಿದ್ದುಪಡಿ ಮಾಡಿರುವ ವಿಷಯವನ್ನು ನಮೂದಿಸಿ “ಬಿಬಿಎಂಪಿ ವ್ಯಾಪ್ತಿಯ ಸ್ವತ್ತುಗಳಿಗೆ ಸಂಬಂಧಿಸಿದ ಖಾತೆಗಳನ್ನು ವಿಭಜನೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅವಕಾಶವಿರುವುದಿಲ್ಲ ಮತ್ತು ಈ ಅಧಿಕಾರವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಸಕ್ಷಮ ಪ್ರಾಧಿಕಾರಕ್ಕೆ ಮಾತ್ರ ಇರುತ್ತದೆ” ಎಂಬುದಾಗಿ ಮುಖ್ಯ ಆಯುಕ್ತರು ತಮ್ಮ ಸುತ್ತೋಲೆಯಲ್ಲಿ ತಿಳಿಸಿರುತ್ತಾರೆ. 

ಇಲ್ಲಿಯವರೆಗೂ ಸುಗಮವಾಗಿ ನಡೆದುಕೊಂಡು ಬರುತ್ತಿದ್ದ ಖಾತಾ ವಿಭಜನೆ ಕಾರ್ಯವು ಮುಖ್ಯ ಆಯುಕ್ತರ ಪರಿಷ್ಕೃತ ಸುತ್ತೋಲೆ ಆದೇಶದಿಂದ ಬೆಂಗಳೂರು ಮಹಾನಗರದ ನಾಗರಿಕರು ಬಿಬಿಎಂಪಿ ಮತ್ತು ಬಿಡಿಎ ಕಚೇರಿಗಳಿಗೆ ಅಲೆದಾಡಬೇಕಾದಂತಹ ಸ್ಥಿತಿ ಬರುತ್ತದೆ ಎಂಬುದರಲ್ಲಿ ಸಂಶಯವಿಲ್ಲ. ಈ ಆದೇಶದಿಂದ ಪರಿಸ್ಥಿತಿ ಸುಧಾರಿಸಬಹುದು ಎಂದು ಭಾವಿಸಿದ್ದರೆ ಅದು ಖಂಡಿತ ಸುಳ್ಳಾಗುತ್ತದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಎನ್.ಆರ್.ರಮೇಶ್ ಹೇಳಿದ್ದಾರೆ.

ಈ ಬಗ್ಗೆ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದು, ಆಯುಕ್ತರ ಈ ಆದೇಶದಿಂದಾಗಿ ಭ್ರಷ್ಟಾಚಾರದ ಪ್ರಮಾಣವು ಮತ್ತಷ್ಟು ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಂತೂ ಆಗುವುದಿಲ್ಲ ಎಂದಿದ್ದಾರೆ. 

ಪ್ರತಿಯೊಂದು ವಾರ್ಡ್ ಗಳಲ್ಲಿ ಕಂದಾಯ ಇಲಾಖೆಯ ಕಛೇರಿಗಳನ್ನು ಹೊಂದಿರುವಂತಹ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಲ್ಲಿಯವರೆಗೆ ಖಾತಾ ವಿಭಜನೆ, ಖಾತಾ ಒಂದುಗೂಡಿಸುವಿಕೆ ಸೇರಿದಂತೆ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುತ್ತಿತ್ತು. ಆದರೆ, ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಂದಾಯ ಇಲಾಖೆಗೆ ಸಂಬಂಧಿಸಿದ ಆರೇಳು ಕಚೇರಿಗಳು ಮಾತ್ರವೇ ಇದ್ದು, ಪ್ರತಿಯೊಂದು ವಾರ್ಡ್ ನ ನಾಗರಿಕರು ತಮ್ಮ ಖಾತಾ ವಿಭಜನೆ ಕಾರ್ಯಕ್ಕೆ ಹತ್ತಾರು ಕಿ.ಮೀ. ದೂರವನ್ನು ಕ್ರಮಿಸಿ ಹೋಗಬೇಕಾದಂತಹ ಪರಿಸ್ಥಿತಿ ಉದ್ಭವವಾಗುತ್ತದೆ.

ಅಲ್ಲದೇ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಂದಾಯ ಇಲಾಖೆ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ / ನೌಕರರುಗಳ ಪ್ರಮಾಣ ಬಹಳ ಕಡಿಮೆಯಿದೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯ ಖಾತಾ ವಿಭಜನೆ ಕಾರ್ಯಕ್ಕೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಾಧ್ಯವಾಗುವುದಿಲ್ಲ ಹಾಗೂ ಬೆಂಗಳೂರಿನ ನಾಗರಿಕರು ಒಂದು ಸಣ್ಣ ಕೆಲಸಕ್ಕೆ ಹತ್ತಾರು ದಿನಗಳು ಅಲೆದಾಡಬೇಕಾಗುವಂತಹ ಪರಿಸ್ಥಿತಿ ಉದ್ಭವಿಸುತ್ತದೆ.

ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜೊತೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು “ಭ್ರಷ್ಟಾಚಾರಿಗಳ ಅಭಿವೃದ್ಧಿ ಪ್ರಾಧಿಕಾರ”ಎಂಬ ಕುಖ್ಯಾತಿಯನ್ನು ಪಡೆದಿರುವ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತರ ಈ ಆದೇಶದಿಂದ ನಗರದ ನಾಗರಿಕರು ಪ್ರಸ್ತುತ ಚಾಲ್ತಿಯಲ್ಲಿರುವ ಲಂಚದ ಪ್ರಮಾಣಕ್ಕಿಂತಲೂ ಶೇ.10 ರಿಂದ ಶೇ.25ರಷ್ಟು ಹೆಚ್ಚಿನ ಪ್ರಮಾಣದ ಲಂಚವನ್ನು ಪಾವತಿಸಲೇಬೇಕಾದ ಹೀನಾಯ ಸ್ಥಿತಿಗೆ ತಲುಪುತ್ತಾರೆ ಎಂಬುದು ನಿಸ್ಸಂಶಯವಾಗಿ ಸತ್ಯ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಭ್ರಷ್ಟಾಚಾರದ ಪ್ರಮಾಣವನ್ನು ಹೆಚ್ಚಿಸುವ ತಮ್ಮ ಬೆಂಗಳೂರು ನಾಗರಿಕರ ವಿರೋಧಿ ಆದೇಶವನ್ನು ಕೂಡಲೇ ಹಿಂಪಡೆದು ಈ ಹಿಂದಿನಂತೆಯೇ ಪಾಲಿಕೆ ವ್ಯಾಪ್ತಿಯ ಸ್ವತ್ತುಗಳ ಖಾತಾ ವಿಭಜನೆ ಕಾರ್ಯವನ್ನು ಬಿಬಿಎಂಪಿಯ ಕಂದಾಯ ಇಲಾಖೆಯ ಅಧಿಕಾರಿಗಳೇ ನಿರ್ವಹಿಸುವ ಬಗ್ಗೆ ಆದೇಶ ಹೊರಡಿಸಬೇಕೆಂದು ಮುಖ್ಯ ಆಯುಕ್ತರನ್ನು ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಭೂಪರಿವರ್ತನೆಯಾದ ಭೂಮಿಗೂ ಬಿಡಿಎ ಅನುಮೋದನೆ ಅಗತ್ಯ :

ಬಿಬಿಎಂಪಿ ಮುಖ್ಯ ಆಯುಕ್ತರ ಪರಿಷ್ಕೃತ ಸುತ್ತೋಲೆಯಲ್ಲಿ ಕೃಷಿ ಭೂಮಿಯಿಂದ ಕೃಷಿಯೇತರ ಭೂಮಿಗೆ ಭೂಪರಿವರ್ತನೆಯಾದ ಸ್ವತ್ತುಗಳಿಗೆ ಈ ಹಿಂದಿನಂತೆ ಎ ಖಾತೆ ಅಥವಾ ಬಿ ಖಾತಾ ವಹಿಗೆ ದಾಖಲಿಸುವಂತಿಲ್ಲ. ಸಕ್ಷಮ ಯೋಜನಾ ಪ್ರಾಧಿಕಾರದ ಅನುಮೋದನೆಯ ನಂತರವಷ್ಟೇ ಎ ಖಾತೆ ಅಥವಾ ಬಿ ಖಾತಾ ವಹಿಯಲ್ಲಿ ದಾಖಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬಿಬಿಎಂಪಿಯಲ್ಲಿ ಈಗಾಗಲೇ ಎ ಖಾತೆಯ ಸ್ವತ್ತುಗಳಲ್ಲಿ ಸಕ್ಷಮ ಪ್ರಾಧಿಕಾರದಿಂದ ಆನುಮೋದನೆ ಪಡೆದು, ಬಿಬಿಎಂಪಿಯಿಂದ ಸ್ವಾಧೀನ ಪತ್ರ (OC) ಪಡೆದ ಏಕ ಘಟಕ ಅಥವಾ ಬಹು ಘಟಕದಲ್ಲಿನ ಪ್ರತಿ ಘಟಕಗಳನ್ನು ಎ ರಿಜಿಸ್ಟರ್ ನಲ್ಲಿ ದಾಖಲಿಸಿ ಎ ಖಾತಾ ಮಾಡಬಹುದು. ಆದರೆ 2024ರ ಸೆ.29ಕ್ಕಿಂತ ಮುಂಚೆ ಬಿಡಿಎ ಅನುಮೋದನೆ ಪಡೆಯದೆ ಎ ಅಥವಾ ಬಿ ಖಾತೆಯಲ್ಲಿನ ಸ್ವತ್ತುಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ಬೆಸ್ಕಾಂ ಹಾಗೂ ಬಿಡ್ಲ್ಯುಎಸ್ ಎಸ್ ಬಿಯಿಂದ ವಿದ್ಯುತ್ ಹಾಗೂ ನೀರು ಸಂಪರ್ಕ ಪಡೆದ ಏಕ ಘಟಕ ಅಥವಾ ಬಹು ಘಟಕದ ಕಟ್ಟಡಗಳಿಗೆ ಬಿ ಖಾತಾ ನೀಡಬಹುದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

WhatsApp Join our WhatsApp Channel
Previous Post

-20 ಡಿಗ್ರಿ ಸೆಲ್ಸಿಯಸ್‌ ಕಡಿಮೆ ತಾಪಮಾನದಲ್ಲೂ ಚಲಿಸಲಿದೆ ಜಮ್ಮು-ಶ್ರೀನಗರ ವಂದೇ ಭಾರತ್ ರೈಲು : ಸದ್ಯದಲ್ಲೇ ಸೇವೆ ಪ್ರಾರಂಭ 

Next Post

ಜಿಎಸ್ ಟಿ Online ಪೋರ್ಟಲ್ ತಾಂತ್ರಿಕ ತೊಂದರೆ : ಜಿಎಸ್ ಟಿ ಸಲ್ಲಿಕೆಗೆ ಗಡುವು ವಿಸ್ತರಣೆ ಸಾಧ್ಯತೆ

Next Post
ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ಜಿಎಸ್ ಟಿ Online ಪೋರ್ಟಲ್ ತಾಂತ್ರಿಕ ತೊಂದರೆ : ಜಿಎಸ್ ಟಿ ಸಲ್ಲಿಕೆಗೆ ಗಡುವು ವಿಸ್ತರಣೆ ಸಾಧ್ಯತೆ

Maha Kumbh 2025 | ಮಹಾ ಕುಂಭಮೇಳ ಅಮೃತ ಸ್ನಾನ ಸಂಗಮದ ಜೊತೆಗೆ ಸಾಂಸ್ಕೃತಿಕ ಆಕರ್ಷಣೆಯ ಸಮಾಗಮ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group