Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

Maha Kumbh 2025 | ಮಹಾ ಕುಂಭಮೇಳ ಅಮೃತ ಸ್ನಾನ ಸಂಗಮದ ಜೊತೆಗೆ ಸಾಂಸ್ಕೃತಿಕ ಆಕರ್ಷಣೆಯ ಸಮಾಗಮ

ವಿಶ್ವದ ಬಹುದೊಡ್ಡ ಜನಜಾತ್ರೆ ಪ್ರಯಾಗ್ ರಾಜ್ ಮಹಾ ಕುಂಭದಲ್ಲಿ ಕಣ್ತುಂಬಿಕೊಳ್ಳಲ ಇವೆ ಹಲವು ಕಾರಣಗಳು

by Bengaluru Wire Desk
January 11, 2025
in BW Special, Life Style
Reading Time: 3 mins read
0

ವಿಶೇಷ ಲೇಖನ ಬರಹ : ವ್ಯೋಮಕೇಶ.ಎಂ

ಹಿಂದೂ ಸಂಸ್ಕೃತಿಯ ಆಧ್ಯಾತ್ಮ ಮತ್ತು ಧಾರ್ಮಿಕ ಆಚಾರ ವಿಚಾರಗಳು ಇಡೀ ಜಗತ್ತಿಗೇ ಮಾದರಿ. ಅಂತಹ ಸನಾತನ ಪರಂಪರೆಯ ಭಾಗವಾಗಿರುವ ನೂರಾರು ವರ್ಷಗಳ ಇತಿಹಾಸವಿರುವ 2025ರ ಪ್ರಯಾಗರಾಜ್ ನ ಮಹಾ ಕುಂಭಮೇಳ ಇದೇ ಜ.13ರಿಂದ ಫೆ.26ರ ತನಕ ನಡೆಯಲಿದೆ.  

ಈ ಬಾರಿಯ ಕುಂಭಮೇಳ ನಡೆಯುವ ಪ್ರಯಾಗ್ ರಾಜ್ ನಗರ ಹಾಗೂ ಅಲ್ಲಿನ ಗಂಗಾ, ಯಮುನಾ ಮತ್ತು ಗುಪ್ತಗಾಮಿನಿ ಸರಸ್ವತಿಯ ಸಂಗಮಸ್ಥಳದ ಪರಿಸರ ಹತ್ತು ಹಲವು ವಿಶೇಷ ಆಕರ್ಷಣೆಗಳಿಂದ ಕೂಡಿದ್ದು ದೇಶ ವಿದೇಶಗಳಿಂದ ಕೋಟ್ಯಂತರ ಜನರನ್ನು ಸೆಳೆಯುತ್ತಿದೆ. ಪುರಾಣ ಪ್ರಸಿದ್ಧ ದೇವಸ್ಥಾನ, ಆಶ್ರಮ, ಕಲೆ- ಸಂಸ್ಕೃತಿ ಗ್ರಾಮ, ಲೇಸರ್ ಶೋ, ಡ್ರೋಣ್ ಶೋ, ಸತ್ಸಂಗ, ಅಖಾಡ ಶಿಬಿರಗಳು ಸೇರಿದಂತೆ ಹಲವು  ಕಾರಗಯಕ್ರಮಗಳನ್ನು ಆಯೋಜಿಸಲಾಗಿದೆ.

ಶಯನ ಹನುಮಾನ್ ದೇಗುಲ :

ಮೊದಲನೆಯದಾಗಿ ಪ್ರಯಾಗದ ದಾರಾಗಂಜ್ ಬಡಾವಣೆ ವ್ಯಾಪ್ತಿಯಲ್ಲಿ ಗಂಗಾ ನದಿಯ ದಂಡೆಯ ಮೇಲಿರುವ ಪ್ರಸಿದ್ಧ ಸಂಕಟ ಮೋಚನ ಹನುಮಾನ್ ದೇಗುಲದಲ್ಲಿ ಮಲಗಿದಂತೆ ಕಾಣುವ ಈ ಮೂರ್ತಿಯನ್ನು ಸಂತ ಸಮರ್ಥ ರಾಮದಾಸರು ಸ್ಥಾಪಿಸಿದರೆಂದು ಹೇಳಲಾಗುತ್ತದೆ. ಇಲ್ಲಿ ಮಾರುತಿಯ ಜೊತೆಗೆ ಶಿವ-ಪಾರ್ವತಿ, ಗಣೇಶ, ಭೈರವ, ದುರ್ಗೆ ಮತ್ತು ನವಗ್ರಹಗಳ ವಿಗ್ರಹಗಳೂ ಇವೆ. ಅಲ್ಲೇ ಹತ್ತಿರದಲ್ಲಿ ಶ್ರೀ ರಾಮ, ಜಾನಕಿ ಮತ್ತು ಹರಿತ್ ಮಾಧವನ ದೇಗುಲಗಳೂ ಇವೆ.

ಅಕ್ಷಯ ವಟಿ ಮತ್ತು ಪಾತಾಳ್ ಪುರಿ ದೇವಸ್ಥಾನ :

ಅಕ್ಷಯ ವಟಿ ಅನ್ನುವುದು ಎಂದಿಗೂ ನಶಿಸಿಹೋಗದ ಆಲದ ಮರ ಎಂದು ಪುರಾಣಗಳಲ್ಲಿ ಉಲ್ಲೇಖವಾಗಿದೆ. ರಾಮ, ಸೀತೆ ಮತ್ತು ಲಕ್ಷ್ಮಣರು ತಮ್ಮ ವನವಾಸದ ವೇಳೆ ಇಲ್ಲಿ ವಿಶ್ರಾಂತಿ ಪಡೆದಿದ್ದರಂತೆ. 

ಅಕ್ಷಯ ವಟಿಗೆ ಹತ್ತಿರದಲ್ಲೇ ಇರುವ ಪಾತಾಳ ಪುರಿ ದೇವಸ್ಥಾನ ಅತ್ಯಂತ ಹಳೆಯ ದೇಗುಲಗಳಲ್ಲಿ ಒಂದಾಗಿದ್ದು, ಇದೂ ಕೂಡ ಅಲಹಾಬಾದ್ ಕೋಟೆಯ ಆವರಣದಲ್ಲೇ ಇದೆ.

ಪ್ರಸಿದ್ಧ ಸರಸ್ವತಿ ಬಾವಿ :

ಸರಸ್ವತಿ ಕೂಪ್ ಅಥವ ಸರಸ್ವತಿ ಬಾವಿ ಅನ್ನುವುದು ಒಂದು ಪವಿತ್ರ ಬಾವಿಯಾಗಿದ್ದು ಪ್ರಯಾಗ್ ರಾಜದ  ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರುತ್ತದೆ.

ಮನಕಾಮೇಶ್ವರ್ ದೇಗುಲ :

ಇದೂ ಕೂಡ ಅಲಹಾಬಾದ್ ಕೋಟೆಯ ಪಶ್ಚಿಮ ಭಾಗದಲ್ಲಿರುವ ಮಿಂಟೊ ಪಾರ್ಕ್ ಬಳಿಯ ಯಮುನಾ ನದಿಯ ದಂಡೆಯಲ್ಲಿದೆ. ಇಲ್ಲಿ ನಂದಿ ಮತ್ತು ಗಣೇಶನ ಸಹಿತವಾಗಿರುವ ಕಪ್ಪು ಕಲ್ಲಿನ ಶಿವಲಿಂಗ ಇಲ್ಲಿನ ಆಕರ್ಷಣೆ.

ಮಹರ್ಷಿ ಭಾರದ್ವಾಜ ಆಶ್ರಮ :

ಮಹರ್ಷಿ ಭಾರದ್ವಾಜ ಆಶ್ರಮವೂ ಕೂಡ ಪ್ರಯಾಗ ರಾಜದಲ್ಲಿ ಧಾರ್ಮಿಕ ಮಹತ್ವ ಪಡೆದಿರುವ ಸ್ಥಳ. ಭಾರದ್ವಾಜರ ಕಾಲದಲ್ಲಿ ಇದು ವಿದ್ಯಾರ್ಜನೆಯ ಕೇಂದ್ರವಾಗಿತ್ತು. ಶ್ರೀರಾಮಚಂದ್ರನು ತನ್ನ ವನವಾಸದ ವೇಳೆ ಚಿತ್ರಕೂಟಕ್ಕೆ ತೆರಳುವ ಮುನ್ನ ಈ ಸ್ಥಳಕ್ಕೆ ಭೇಟಿ ನೀಡಿದ್ದನೆಂಬ ಪ್ರತೀತಿ ಇದೆ. ಇಲ್ಲಿ ಭಾರದ್ವಾಜೇಶ್ವರ ಮಹಾದೇವನ ದೇಗಲವಿದೆ. ಹತ್ತಿರದಲ್ಲ ಸುಂದರ ಉದ್ಯಾನವನವೂ ಇದೆ.

ವಿವಿಧ ರಾಜ್ಯಗಳ ವಿಶೇಷ ಪೆವಿಲಿಯನ್ :

ಭಾರತ ದೇಶ ವಿವಿಧತೆಯಲ್ಲಿ ಏಕತೆ ಮೆರೆಯುವ ರಾಷ್ಟ್ರ. ಈ ಮಹಾಕುಂಭ ಮೇಳದ ಪ್ರಯುಕ್ತ ಭಾರತದ ವಿವಿಧ ರಾಜ್ಯಗಳ ಕಲೆ, ಸಂಸ್ಕೃತಿ ಮತ್ತು ಪ್ರವಾಸಿ ತಾಣಗಳನ್ನು ಸ್ವದೇಶ ಮತ್ತು ವಿದೇಶಿ ಪ್ರವಾಸಿಗರಿಗೆ ಪರಿಚಯಿಸುವ ಸಲುವಾಗಿ 35 ವಿಶೇಷ ಪೆವಿಲಿಯನ್ ಗಳನ್ನು ನಿರ್ಮಿಸಲಾಗಿದೆ. ಇಲ್ಲಿ ವಿವಿಧ ರಾಜ್ಯಗಳ ಕಲೆ, ಸಂಸ್ಕೃತಿ, ಪಾರಂಪರಿಕ ಕೈ ಮಗ್ಗದ ವಸ್ತುಗಳು ಇತ್ಯಾದಿಗಳ ತಯಾರಿಕೆ ಮತ್ತು ಮಾರಾಟಕ್ಕೂ ಏರ್ಪಾಡುಮಾಡಲಾಗಿದೆ. ಇದರ ಜೊತೆಗೆ ಪ್ರತಿದಿನವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ನಡೆಸಲಾಗುತ್ತದೆ.

ಸಂಸ್ಕೃತಿ ಗ್ರಾಮ :

ಈ ಬಾರಿಯ ಮಹಾಕುಂಭದ ಮತ್ತೊಂದು ವಿಶೇಷವೇ ಸಂಸ್ಕೃತಿ ಗ್ರಾಮ. 6 ವಿವಿಧ ವಲಯಗಳಾಗಿ ವಿಂಗಡಿಸಲಾಗಿರುವ ಸಂಸ್ಕೃತಿ ಗ್ರಾಮದಲ್ಲಿ ವಿವಿಧ ಪ್ರದರ್ಶನಗಳು ಮತ್ತು ಪ್ರಾತ್ಯಕ್ಷಿಕೆಗಳನ್ನು ದೇಶ ಮತ್ತು ಜಗತ್ತಿನ ಜನರಿಗೆ ತೋರಿಸುವ ವ್ಯವಸ್ಥೆ ಮಾಡಲಾಗಿದೆ. ಭಾರತದ ಪ್ರಾಚೀನ ಪರಂಪರೆ, ದಂತಕತೆಗಳು, ಪುರಾಣಗಳು ಮತ್ತು ಮಹಾಕುಂಭದ ಬಗೆಗಿನ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ಇಲ್ಲಿ ಬಿಂಬಿಸಲಾಗುತ್ತದೆ.

ಇದರ ಜೊತೆಗೆ ಭಾರತದ ಆಹಾರ ಕ್ರಮ ಮತ್ತು ಸಾಂಪ್ರದಾಯಕ ತಿಂಡಿ ತಿನಿಸುಗಳು ಬಗ್ಗೆಯೂ ಜನರಿಗೆ ಮಾಹಿತಿ ಸಿಗುತ್ತದೆ.

ಭಾರತೀಯ ಕಲೆಯ ಕಲಾ ಗ್ರಾಮ :

ಕುಂಭಮೇಳಕ್ಕೆ ಬರುವ ಪ್ರವಾಸಿಗಳಿಗೆ ಸುಂದರ ಅನುಭವವನ್ನು ಕಟ್ಟಿಕೊಡುವ ಸಲುವಾಗಿ ಕಲಾ ಗ್ರಾಮವನ್ನು ನಿರ್ಮಿಸಲಾಗಿದ್ದು, ಇಲ್ಲಿ ಭಾರತೀಯ ಕಲೆ ಮತ್ತು ಸಂಸ್ಕೃತಿಯ ವಿಶೇಷಗಳನ್ನು, ವೈವಿಧ್ಯತೆಗಳನ್ನು ಪರಿಚಯಿಸಲಾಗುತ್ತದೆ. 

ಕಾಳಿಘಾಟ್ ಬಳಿ ಜಲ ಲೇಸರ್ ಶೋ :

ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ಆಯೋಜಿಸಲಾಗಿರುವ ಜಲ ಲೇಸರ್ ಶೋ ಕೂಡ ಕುಂಭ ಮೇಳದ ಮತ್ತೊಂದು ವಿಶೇಷ ಆಕರ್ಷಣೆ. ಯಮುನಾ ನದಿಯ ಕಾಳಿಘಾಟ್ ಬಳಿಯ ಬೋಟ್ ಕ್ಲಬ್ ನಲ್ಲಿ ನಡೆಯಲಿರುವ ವಾಟರ್ ಲೇಸರ್ ಶೋನಲ್ಲಿ ದೃಶ್ಯ ವೈಭವವೇ ಅನಾವರಣಗೊಳ್ಳಲಿದೆ.  

ಕುಂಭಮೇಳದಲ್ಲಿ ಡ್ರೋನ್ ಶೋ :

ಜನವರಿ 20 ಮತ್ತು ಫೆಬ್ರವರಿ 5 ರಂದು ಆಯೋಜಿಸಲಾಗುವ ಡ್ರೋನ್ ಶೋ ಕುಂಭಮೇಳದಲ್ಲಿ ಸೇರುವ ಕೋಟ್ಯಂತರ ಜನರನ್ನು ಮಂತ್ರಮುಗ್ಧರನ್ನಾಗಿಸದೇ ಇರದು. ಅತ್ಯಾಧುನಿಕ ತಂತ್ರಜ್ಞಾನ ಬಳಕೆಮಾಡಿಕೊಂಡು ಹಲವಾರು ದೈವಿಕ ದೃಶ್ಯಾವಳಿಯನ್ನು ಸೃಷ್ಟಿಸುವ ಮೂಲಕ ಮೇಳದಲ್ಲಿ ಪಾಲ್ಗೊಳ್ಳುವ ಎಲ್ಲರಲ್ಲಿ ಪಾರಮಾರ್ಥಿಕ ಅನುಭೂತಿ ಮೂಡಿಸುವುದೇ ಇದರ ಉದ್ದೇಶ. 

ಅಖಾಡ ಶಿಬಿರಗಳು :

ಮಹಾಕುಂಭದ ಪ್ರಯುಕ್ತ ಪ್ರಯಾಗರಾಜಕ್ಕೆ ಆಗಮಿಸಿರುವ ಸಾವಿರಾರು ನಾಗಾ ಸಾಧುಗಳು, ಅಘೋರಿಗಳು, ಸಂತರು, ಹಠಯೋಗಿಗಳು, ತಪಸ್ವಿಗಳು ಇತ್ಯಾದಿ ಸಾಧಕರು ಉಳಿದುಕೊಳ್ಳುವ ಅಖಾಡಗಳಿಗೆ ಜನಸಾಮಾನ್ಯರಿಗೂ ಕೂಡ ಪ್ರವೇಶ ಸಿಗುವಂತೆ ಮಾಡಿ, ಅವರನ್ನು ಹತ್ತಿರದಿಂದ ಕಂಡು, ಅವರೊಂದಿಗೆ ಸಂವಾದ ನಡೆಸುವ ವಿಶೇಷ ವ್ಯವಸ್ಥೆಯೇ ಆಖಾಡ ಶಿಬಿರಗಳು.

ಸತ್ಸಂಗ ಮತ್ತು ಕಥಾಕಾಲಕ್ಷೇಪಗಳು : 

ಕುಂಭಮೇಳದ ವಿವಿಧ ಕಡೆಗಳಲ್ಲಿ ಪ್ರತಿನಿತ್ಯ ಸತ್ಸಂಗ ಮತ್ತು ಕಥಾಕಾಲಕ್ಷೇಪಗಳನ್ನು ಆಯೋಜಿಸಲಾಗುತ್ತದೆ. ಇಲ್ಲಿ ಹೆಸರಾಂತ ದಾಸರು, ಪ್ರವಚನಕಾರರು ವಿಶೇಷ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರಕೂಡ ಏರ್ಪಡಿಸಲಾಗಿದೆ. ವಿವಿಧ ರೀತಿಯ ಮನೋದೈಹಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಯೋಗ ಮತ್ತು ಆಧ್ಯಾತ್ಮಿಕ ಶಿಬಿರಗಳು ನೆರವಾಗಲಿವೆ.

ದೇಶದ ಕೋಟ್ಯಂತರ ಜನರ ನಂಬಿಕೆಯ ಈ ಬೃಹತ್ ಮಹಾ ಕುಂಭಮೇಳವನ್ನು ಯಶಸ್ವಿಗೊಳಿಸಲು ಭಾರತ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಸಕಲ ಸಿದ್ಧತೆಗಳನ್ನು ನಡೆಸಿವೆ. ಹೀಗಾಗಿ, ಈ ಬಾರಿಯ ಮಹಾ ಕುಂಭ ಮೇಳ ಶ್ರದ್ಧೆ, ಭಕ್ತಿ, ವಿಶ್ವಾಸ ಮತ್ತು ಉತ್ಸಾಹಗಳ ಮಹಾ ಸಂಗಮವೇ ಆಗಲಿದೆ ಅನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಜಿಎಸ್ ಟಿ Online ಪೋರ್ಟಲ್ ತಾಂತ್ರಿಕ ತೊಂದರೆ : ಜಿಎಸ್ ಟಿ ಸಲ್ಲಿಕೆಗೆ ಗಡುವು ವಿಸ್ತರಣೆ ಸಾಧ್ಯತೆ

Next Post

National Youth Day | “ನನ್ನ ಸಂಕಲ್ಪದ ಮುಂದೆ ಪರ್ವತಗಳೇ ಪುಡಿ ಪುಡಿಯಾಗುತ್ತವೆ” – ನರೇಂದ್ರರ ಕಿಡಿನುಡಿ

Next Post

National Youth Day | "ನನ್ನ ಸಂಕಲ್ಪದ ಮುಂದೆ ಪರ್ವತಗಳೇ ಪುಡಿ ಪುಡಿಯಾಗುತ್ತವೆ" - ನರೇಂದ್ರರ ಕಿಡಿನುಡಿ

MahaKumbh 2025 | ಇಂದಿನಿಂದ ಆರಂಭವಾಗಿದೆ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳ : ಈ ಬಾರಿಯ ಮೇಳ ಏಕೆ ವಿಶೇಷ?

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d