Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

Maha Kumbh 2025 | ಮಹಾ ಕುಂಭಮೇಳ ಅಮೃತ ಸ್ನಾನ ಸಂಗಮದ ಜೊತೆಗೆ ಸಾಂಸ್ಕೃತಿಕ ಆಕರ್ಷಣೆಯ ಸಮಾಗಮ

ವಿಶ್ವದ ಬಹುದೊಡ್ಡ ಜನಜಾತ್ರೆ ಪ್ರಯಾಗ್ ರಾಜ್ ಮಹಾ ಕುಂಭದಲ್ಲಿ ಕಣ್ತುಂಬಿಕೊಳ್ಳಲ ಇವೆ ಹಲವು ಕಾರಣಗಳು

by Bengaluru Wire Desk
January 11, 2025
in BW Special, Life Style
Reading Time: 3 mins read
0

ವಿಶೇಷ ಲೇಖನ ಬರಹ : ವ್ಯೋಮಕೇಶ.ಎಂ

ಹಿಂದೂ ಸಂಸ್ಕೃತಿಯ ಆಧ್ಯಾತ್ಮ ಮತ್ತು ಧಾರ್ಮಿಕ ಆಚಾರ ವಿಚಾರಗಳು ಇಡೀ ಜಗತ್ತಿಗೇ ಮಾದರಿ. ಅಂತಹ ಸನಾತನ ಪರಂಪರೆಯ ಭಾಗವಾಗಿರುವ ನೂರಾರು ವರ್ಷಗಳ ಇತಿಹಾಸವಿರುವ 2025ರ ಪ್ರಯಾಗರಾಜ್ ನ ಮಹಾ ಕುಂಭಮೇಳ ಇದೇ ಜ.13ರಿಂದ ಫೆ.26ರ ತನಕ ನಡೆಯಲಿದೆ.  

ಈ ಬಾರಿಯ ಕುಂಭಮೇಳ ನಡೆಯುವ ಪ್ರಯಾಗ್ ರಾಜ್ ನಗರ ಹಾಗೂ ಅಲ್ಲಿನ ಗಂಗಾ, ಯಮುನಾ ಮತ್ತು ಗುಪ್ತಗಾಮಿನಿ ಸರಸ್ವತಿಯ ಸಂಗಮಸ್ಥಳದ ಪರಿಸರ ಹತ್ತು ಹಲವು ವಿಶೇಷ ಆಕರ್ಷಣೆಗಳಿಂದ ಕೂಡಿದ್ದು ದೇಶ ವಿದೇಶಗಳಿಂದ ಕೋಟ್ಯಂತರ ಜನರನ್ನು ಸೆಳೆಯುತ್ತಿದೆ. ಪುರಾಣ ಪ್ರಸಿದ್ಧ ದೇವಸ್ಥಾನ, ಆಶ್ರಮ, ಕಲೆ- ಸಂಸ್ಕೃತಿ ಗ್ರಾಮ, ಲೇಸರ್ ಶೋ, ಡ್ರೋಣ್ ಶೋ, ಸತ್ಸಂಗ, ಅಖಾಡ ಶಿಬಿರಗಳು ಸೇರಿದಂತೆ ಹಲವು  ಕಾರಗಯಕ್ರಮಗಳನ್ನು ಆಯೋಜಿಸಲಾಗಿದೆ.

ಶಯನ ಹನುಮಾನ್ ದೇಗುಲ :

ಮೊದಲನೆಯದಾಗಿ ಪ್ರಯಾಗದ ದಾರಾಗಂಜ್ ಬಡಾವಣೆ ವ್ಯಾಪ್ತಿಯಲ್ಲಿ ಗಂಗಾ ನದಿಯ ದಂಡೆಯ ಮೇಲಿರುವ ಪ್ರಸಿದ್ಧ ಸಂಕಟ ಮೋಚನ ಹನುಮಾನ್ ದೇಗುಲದಲ್ಲಿ ಮಲಗಿದಂತೆ ಕಾಣುವ ಈ ಮೂರ್ತಿಯನ್ನು ಸಂತ ಸಮರ್ಥ ರಾಮದಾಸರು ಸ್ಥಾಪಿಸಿದರೆಂದು ಹೇಳಲಾಗುತ್ತದೆ. ಇಲ್ಲಿ ಮಾರುತಿಯ ಜೊತೆಗೆ ಶಿವ-ಪಾರ್ವತಿ, ಗಣೇಶ, ಭೈರವ, ದುರ್ಗೆ ಮತ್ತು ನವಗ್ರಹಗಳ ವಿಗ್ರಹಗಳೂ ಇವೆ. ಅಲ್ಲೇ ಹತ್ತಿರದಲ್ಲಿ ಶ್ರೀ ರಾಮ, ಜಾನಕಿ ಮತ್ತು ಹರಿತ್ ಮಾಧವನ ದೇಗುಲಗಳೂ ಇವೆ.

ಅಕ್ಷಯ ವಟಿ ಮತ್ತು ಪಾತಾಳ್ ಪುರಿ ದೇವಸ್ಥಾನ :

ಅಕ್ಷಯ ವಟಿ ಅನ್ನುವುದು ಎಂದಿಗೂ ನಶಿಸಿಹೋಗದ ಆಲದ ಮರ ಎಂದು ಪುರಾಣಗಳಲ್ಲಿ ಉಲ್ಲೇಖವಾಗಿದೆ. ರಾಮ, ಸೀತೆ ಮತ್ತು ಲಕ್ಷ್ಮಣರು ತಮ್ಮ ವನವಾಸದ ವೇಳೆ ಇಲ್ಲಿ ವಿಶ್ರಾಂತಿ ಪಡೆದಿದ್ದರಂತೆ. 

ಅಕ್ಷಯ ವಟಿಗೆ ಹತ್ತಿರದಲ್ಲೇ ಇರುವ ಪಾತಾಳ ಪುರಿ ದೇವಸ್ಥಾನ ಅತ್ಯಂತ ಹಳೆಯ ದೇಗುಲಗಳಲ್ಲಿ ಒಂದಾಗಿದ್ದು, ಇದೂ ಕೂಡ ಅಲಹಾಬಾದ್ ಕೋಟೆಯ ಆವರಣದಲ್ಲೇ ಇದೆ.

ಪ್ರಸಿದ್ಧ ಸರಸ್ವತಿ ಬಾವಿ :

ಸರಸ್ವತಿ ಕೂಪ್ ಅಥವ ಸರಸ್ವತಿ ಬಾವಿ ಅನ್ನುವುದು ಒಂದು ಪವಿತ್ರ ಬಾವಿಯಾಗಿದ್ದು ಪ್ರಯಾಗ್ ರಾಜದ  ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರುತ್ತದೆ.

ಮನಕಾಮೇಶ್ವರ್ ದೇಗುಲ :

ಇದೂ ಕೂಡ ಅಲಹಾಬಾದ್ ಕೋಟೆಯ ಪಶ್ಚಿಮ ಭಾಗದಲ್ಲಿರುವ ಮಿಂಟೊ ಪಾರ್ಕ್ ಬಳಿಯ ಯಮುನಾ ನದಿಯ ದಂಡೆಯಲ್ಲಿದೆ. ಇಲ್ಲಿ ನಂದಿ ಮತ್ತು ಗಣೇಶನ ಸಹಿತವಾಗಿರುವ ಕಪ್ಪು ಕಲ್ಲಿನ ಶಿವಲಿಂಗ ಇಲ್ಲಿನ ಆಕರ್ಷಣೆ.

ಮಹರ್ಷಿ ಭಾರದ್ವಾಜ ಆಶ್ರಮ :

ಮಹರ್ಷಿ ಭಾರದ್ವಾಜ ಆಶ್ರಮವೂ ಕೂಡ ಪ್ರಯಾಗ ರಾಜದಲ್ಲಿ ಧಾರ್ಮಿಕ ಮಹತ್ವ ಪಡೆದಿರುವ ಸ್ಥಳ. ಭಾರದ್ವಾಜರ ಕಾಲದಲ್ಲಿ ಇದು ವಿದ್ಯಾರ್ಜನೆಯ ಕೇಂದ್ರವಾಗಿತ್ತು. ಶ್ರೀರಾಮಚಂದ್ರನು ತನ್ನ ವನವಾಸದ ವೇಳೆ ಚಿತ್ರಕೂಟಕ್ಕೆ ತೆರಳುವ ಮುನ್ನ ಈ ಸ್ಥಳಕ್ಕೆ ಭೇಟಿ ನೀಡಿದ್ದನೆಂಬ ಪ್ರತೀತಿ ಇದೆ. ಇಲ್ಲಿ ಭಾರದ್ವಾಜೇಶ್ವರ ಮಹಾದೇವನ ದೇಗಲವಿದೆ. ಹತ್ತಿರದಲ್ಲ ಸುಂದರ ಉದ್ಯಾನವನವೂ ಇದೆ.

ವಿವಿಧ ರಾಜ್ಯಗಳ ವಿಶೇಷ ಪೆವಿಲಿಯನ್ :

ಭಾರತ ದೇಶ ವಿವಿಧತೆಯಲ್ಲಿ ಏಕತೆ ಮೆರೆಯುವ ರಾಷ್ಟ್ರ. ಈ ಮಹಾಕುಂಭ ಮೇಳದ ಪ್ರಯುಕ್ತ ಭಾರತದ ವಿವಿಧ ರಾಜ್ಯಗಳ ಕಲೆ, ಸಂಸ್ಕೃತಿ ಮತ್ತು ಪ್ರವಾಸಿ ತಾಣಗಳನ್ನು ಸ್ವದೇಶ ಮತ್ತು ವಿದೇಶಿ ಪ್ರವಾಸಿಗರಿಗೆ ಪರಿಚಯಿಸುವ ಸಲುವಾಗಿ 35 ವಿಶೇಷ ಪೆವಿಲಿಯನ್ ಗಳನ್ನು ನಿರ್ಮಿಸಲಾಗಿದೆ. ಇಲ್ಲಿ ವಿವಿಧ ರಾಜ್ಯಗಳ ಕಲೆ, ಸಂಸ್ಕೃತಿ, ಪಾರಂಪರಿಕ ಕೈ ಮಗ್ಗದ ವಸ್ತುಗಳು ಇತ್ಯಾದಿಗಳ ತಯಾರಿಕೆ ಮತ್ತು ಮಾರಾಟಕ್ಕೂ ಏರ್ಪಾಡುಮಾಡಲಾಗಿದೆ. ಇದರ ಜೊತೆಗೆ ಪ್ರತಿದಿನವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ನಡೆಸಲಾಗುತ್ತದೆ.

ಸಂಸ್ಕೃತಿ ಗ್ರಾಮ :

ಈ ಬಾರಿಯ ಮಹಾಕುಂಭದ ಮತ್ತೊಂದು ವಿಶೇಷವೇ ಸಂಸ್ಕೃತಿ ಗ್ರಾಮ. 6 ವಿವಿಧ ವಲಯಗಳಾಗಿ ವಿಂಗಡಿಸಲಾಗಿರುವ ಸಂಸ್ಕೃತಿ ಗ್ರಾಮದಲ್ಲಿ ವಿವಿಧ ಪ್ರದರ್ಶನಗಳು ಮತ್ತು ಪ್ರಾತ್ಯಕ್ಷಿಕೆಗಳನ್ನು ದೇಶ ಮತ್ತು ಜಗತ್ತಿನ ಜನರಿಗೆ ತೋರಿಸುವ ವ್ಯವಸ್ಥೆ ಮಾಡಲಾಗಿದೆ. ಭಾರತದ ಪ್ರಾಚೀನ ಪರಂಪರೆ, ದಂತಕತೆಗಳು, ಪುರಾಣಗಳು ಮತ್ತು ಮಹಾಕುಂಭದ ಬಗೆಗಿನ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ಇಲ್ಲಿ ಬಿಂಬಿಸಲಾಗುತ್ತದೆ.

ಇದರ ಜೊತೆಗೆ ಭಾರತದ ಆಹಾರ ಕ್ರಮ ಮತ್ತು ಸಾಂಪ್ರದಾಯಕ ತಿಂಡಿ ತಿನಿಸುಗಳು ಬಗ್ಗೆಯೂ ಜನರಿಗೆ ಮಾಹಿತಿ ಸಿಗುತ್ತದೆ.

ಭಾರತೀಯ ಕಲೆಯ ಕಲಾ ಗ್ರಾಮ :

ಕುಂಭಮೇಳಕ್ಕೆ ಬರುವ ಪ್ರವಾಸಿಗಳಿಗೆ ಸುಂದರ ಅನುಭವವನ್ನು ಕಟ್ಟಿಕೊಡುವ ಸಲುವಾಗಿ ಕಲಾ ಗ್ರಾಮವನ್ನು ನಿರ್ಮಿಸಲಾಗಿದ್ದು, ಇಲ್ಲಿ ಭಾರತೀಯ ಕಲೆ ಮತ್ತು ಸಂಸ್ಕೃತಿಯ ವಿಶೇಷಗಳನ್ನು, ವೈವಿಧ್ಯತೆಗಳನ್ನು ಪರಿಚಯಿಸಲಾಗುತ್ತದೆ. 

ಕಾಳಿಘಾಟ್ ಬಳಿ ಜಲ ಲೇಸರ್ ಶೋ :

ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ಆಯೋಜಿಸಲಾಗಿರುವ ಜಲ ಲೇಸರ್ ಶೋ ಕೂಡ ಕುಂಭ ಮೇಳದ ಮತ್ತೊಂದು ವಿಶೇಷ ಆಕರ್ಷಣೆ. ಯಮುನಾ ನದಿಯ ಕಾಳಿಘಾಟ್ ಬಳಿಯ ಬೋಟ್ ಕ್ಲಬ್ ನಲ್ಲಿ ನಡೆಯಲಿರುವ ವಾಟರ್ ಲೇಸರ್ ಶೋನಲ್ಲಿ ದೃಶ್ಯ ವೈಭವವೇ ಅನಾವರಣಗೊಳ್ಳಲಿದೆ.  

ಕುಂಭಮೇಳದಲ್ಲಿ ಡ್ರೋನ್ ಶೋ :

ಜನವರಿ 20 ಮತ್ತು ಫೆಬ್ರವರಿ 5 ರಂದು ಆಯೋಜಿಸಲಾಗುವ ಡ್ರೋನ್ ಶೋ ಕುಂಭಮೇಳದಲ್ಲಿ ಸೇರುವ ಕೋಟ್ಯಂತರ ಜನರನ್ನು ಮಂತ್ರಮುಗ್ಧರನ್ನಾಗಿಸದೇ ಇರದು. ಅತ್ಯಾಧುನಿಕ ತಂತ್ರಜ್ಞಾನ ಬಳಕೆಮಾಡಿಕೊಂಡು ಹಲವಾರು ದೈವಿಕ ದೃಶ್ಯಾವಳಿಯನ್ನು ಸೃಷ್ಟಿಸುವ ಮೂಲಕ ಮೇಳದಲ್ಲಿ ಪಾಲ್ಗೊಳ್ಳುವ ಎಲ್ಲರಲ್ಲಿ ಪಾರಮಾರ್ಥಿಕ ಅನುಭೂತಿ ಮೂಡಿಸುವುದೇ ಇದರ ಉದ್ದೇಶ. 

ಅಖಾಡ ಶಿಬಿರಗಳು :

ಮಹಾಕುಂಭದ ಪ್ರಯುಕ್ತ ಪ್ರಯಾಗರಾಜಕ್ಕೆ ಆಗಮಿಸಿರುವ ಸಾವಿರಾರು ನಾಗಾ ಸಾಧುಗಳು, ಅಘೋರಿಗಳು, ಸಂತರು, ಹಠಯೋಗಿಗಳು, ತಪಸ್ವಿಗಳು ಇತ್ಯಾದಿ ಸಾಧಕರು ಉಳಿದುಕೊಳ್ಳುವ ಅಖಾಡಗಳಿಗೆ ಜನಸಾಮಾನ್ಯರಿಗೂ ಕೂಡ ಪ್ರವೇಶ ಸಿಗುವಂತೆ ಮಾಡಿ, ಅವರನ್ನು ಹತ್ತಿರದಿಂದ ಕಂಡು, ಅವರೊಂದಿಗೆ ಸಂವಾದ ನಡೆಸುವ ವಿಶೇಷ ವ್ಯವಸ್ಥೆಯೇ ಆಖಾಡ ಶಿಬಿರಗಳು.

ಸತ್ಸಂಗ ಮತ್ತು ಕಥಾಕಾಲಕ್ಷೇಪಗಳು : 

ಕುಂಭಮೇಳದ ವಿವಿಧ ಕಡೆಗಳಲ್ಲಿ ಪ್ರತಿನಿತ್ಯ ಸತ್ಸಂಗ ಮತ್ತು ಕಥಾಕಾಲಕ್ಷೇಪಗಳನ್ನು ಆಯೋಜಿಸಲಾಗುತ್ತದೆ. ಇಲ್ಲಿ ಹೆಸರಾಂತ ದಾಸರು, ಪ್ರವಚನಕಾರರು ವಿಶೇಷ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರಕೂಡ ಏರ್ಪಡಿಸಲಾಗಿದೆ. ವಿವಿಧ ರೀತಿಯ ಮನೋದೈಹಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಯೋಗ ಮತ್ತು ಆಧ್ಯಾತ್ಮಿಕ ಶಿಬಿರಗಳು ನೆರವಾಗಲಿವೆ.

ದೇಶದ ಕೋಟ್ಯಂತರ ಜನರ ನಂಬಿಕೆಯ ಈ ಬೃಹತ್ ಮಹಾ ಕುಂಭಮೇಳವನ್ನು ಯಶಸ್ವಿಗೊಳಿಸಲು ಭಾರತ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಸಕಲ ಸಿದ್ಧತೆಗಳನ್ನು ನಡೆಸಿವೆ. ಹೀಗಾಗಿ, ಈ ಬಾರಿಯ ಮಹಾ ಕುಂಭ ಮೇಳ ಶ್ರದ್ಧೆ, ಭಕ್ತಿ, ವಿಶ್ವಾಸ ಮತ್ತು ಉತ್ಸಾಹಗಳ ಮಹಾ ಸಂಗಮವೇ ಆಗಲಿದೆ ಅನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.

WhatsApp Join our WhatsApp Channel
Previous Post

ಜಿಎಸ್ ಟಿ Online ಪೋರ್ಟಲ್ ತಾಂತ್ರಿಕ ತೊಂದರೆ : ಜಿಎಸ್ ಟಿ ಸಲ್ಲಿಕೆಗೆ ಗಡುವು ವಿಸ್ತರಣೆ ಸಾಧ್ಯತೆ

Next Post

National Youth Day | “ನನ್ನ ಸಂಕಲ್ಪದ ಮುಂದೆ ಪರ್ವತಗಳೇ ಪುಡಿ ಪುಡಿಯಾಗುತ್ತವೆ” – ನರೇಂದ್ರರ ಕಿಡಿನುಡಿ

Next Post

National Youth Day | "ನನ್ನ ಸಂಕಲ್ಪದ ಮುಂದೆ ಪರ್ವತಗಳೇ ಪುಡಿ ಪುಡಿಯಾಗುತ್ತವೆ" - ನರೇಂದ್ರರ ಕಿಡಿನುಡಿ

MahaKumbh 2025 | ಇಂದಿನಿಂದ ಆರಂಭವಾಗಿದೆ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳ : ಈ ಬಾರಿಯ ಮೇಳ ಏಕೆ ವಿಶೇಷ?

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group