Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ

ಪತ್ರಿಕೋದ್ಯಮ, ಪತ್ರಕರ್ತರು ಸೇರಿದಂತೆ ನ್ಯೂಸ್ ರೂಂ ನ ಎಲ್ಲಾ ಆಯಾಮಗಳ ಕುರಿತು ಚಿಂತನ-ಮಂಥನ ಮಾಡುವುದು , ಈ ಮೂಲಕ ಪತ್ರಿಕೋದ್ಯಮದ ಸಮಗ್ರ ಹಿನ್ನೋಟ, ಮುನ್ನೋಟಗಳನ್ನು ಕಾಣುವುದು ಸಮ್ಮೇಳನದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

by Bengaluru Wire Desk
January 15, 2025
in Bengaluru Focus
Reading Time: 1 min read
0

ಬೆಂಗಳೂರು, ಜ.15 www.bengaluruwire.com : ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಮಾಡುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಜ.18ರಂದು ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.

ಡಿವಿಜಿ ಸಂಸ್ಥಾಪಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಶತಮಾನೋತ್ಸದತ್ತ ಮುನ್ನಡೆಯುತ್ತಿದ್ದು, ರಾಜ್ಯದ ಹತ್ತು ಸಾವಿರಕ್ಕೂ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವ ಉಳ್ಳ ದೇಶದ ಏಕೈಕ ಬೃಹತ್ ಸಂಘಟನೆಯಾಗಿದೆ ಎಂದರು.

ಪತ್ರಕರ್ತರು ಎದುರಿಸುತ್ತಿರುವ ವೃತ್ತಿ ಪರ ಸಮಸ್ಯೆಗಳು , ಆರೋಗ್ಯ, ಪ್ರೋತ್ಸಾಹಕ ಯೋಜನೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲು ಸಮ್ಮೇಳನಗಳು ಸಮರ್ಥ ವೇದಿಕೆಯಾಗುತ್ತವೆ. ಈ ಎಲ್ಲಾ ಸಂಘಟನಾತ್ಮಕ ಚಟುವಟಿಕೆಗಳನ್ನು ವಾರ್ಷಿಕ ಸಮ್ಮೇಳನಗಳಲ್ಲಿ ಮಂಥನ ಮಾಡುವ ಅವಕಾಶವನ್ನು ಸೃಷ್ಟಿಕೊಳ್ಳಲಾಗಿದೆ. ಪತ್ರಿಕೋದ್ಯಮ, ಪತ್ರಕರ್ತರು ಸೇರಿದಂತೆ ನ್ಯೂಸ್ ರೂಂ ನ ಎಲ್ಲಾ ಆಯಾಮಗಳ ಕುರಿತು ಚಿಂತನ-ಮಂಥನ ಮಾಡುವುದು , ಈ ಮೂಲಕ ಪತ್ರಿಕೋದ್ಯಮದ ಸಮಗ್ರ ಹಿನ್ನೋಟ, ಮುನ್ನೋಟಗಳನ್ನು ಕಾಣುವುದು ಸಮ್ಮೇಳನದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ ಎಂದರು.

ಜ. 18 ರಂದು ಬೆಳಗ್ಗೆ 8.30ಕ್ಕೆ ತುಮಕೂರಿನ ಟೌನ್ ಹಾಲ್ ಬಿಜಿಎಸ್ ವೃತ್ತದಿಂದ ಪತ್ರಕರ್ತರ ಸಾಂಸ್ಕೃತಿಕ ಮೆರಗಿನ ಮೆರವಣಿಗೆಯನ್ನು ಗೃಹ ಸಚಿವರೂ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಜಿ ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಈ ಸಮಾರಂಭಗಳಲ್ಲಿ ಹಿರೇ ಮಠಾಧೀಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಡಾ. ಶ್ರೀ ವಿರೇಶಾನಂದ ಸರಸ್ವತಿ ಸ್ವಾಮೀಜಿ, ಸ್ವಾಮಿ ಜಪಾನಂದಜೀ ಸಾನಿಧ್ಯ ವಹಿಸಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಇದೇ ದಿನ ಬೆಳಗ್ಗೆ 11 ಗಂಟೆಗೆ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ವೇದಿಕೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ತುಮಕೂರು ಜಿಲ್ಲೆಯ ಹಾಲಿ ಶಾಸಕರು, ಮಾಜಿ ಶಾಸಕರು, ಸಂಸದರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಟಿ ವಿ ಶಿವಾನಂದ ತಗಡೂರು ವಹಿಸಲಿದ್ದು, ಕೇಂದ್ರ ಸಚಿವ ವಿ.ಸೋಮಣ್ಣ ಸಚಿವ ಕೆ.ಎನ್ ರಾಜಣ್ಣ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳು ಆತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂವಾದ ಗೋಷ್ಟಿಗಳು:

ಎರಡು ದಿನಗಳ ಸಮ್ಮೇಳನದಲ್ಲಿ ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ಮಹತ್ವದ ಸಂವಾದ ಮತ್ತು ಗೋಷ್ಟಿಗಳು ನಡೆಯಲಿವೆ. ಜ. 18 ರಂದು ಮಧ್ಯಾಹ್ನ 2 ಗಂಟೆಗೆ ಸಂವಿಧಾನ ಮತ್ತು ಮಾಧ್ಯಮ ವಿಷಯವಾಗಿ ನಡೆಯುವ ಗೋಷ್ಟಿಯನ್ನು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್ ಅವರು ಉದ್ಘಾಟಿಸಲಿದ್ದು, ಖ್ಯಾತ ಪತ್ರಕರ್ತ, ಮಾಧ್ಯಮ ತಜ್ಞ ಜಿ.ಎನ್ ಮೋಹನ್ ಅವರು ವಿಷಯ ಮಂಡಿಸಲಿದ್ದು, ಮುಖ್ಯಮಂತ್ರಿಗಳು ರಾಜಕೀಯ ಸಲಹೆಗಾರರಾದ ಬಿ.ಆರ್ ಪಾಟೀಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ, ಶಾಸಕರೂ ಆದ ಎ.ಎಸ್ ಪೊನ್ನಣ್ಣ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ 4.30ಕ್ಕೆ ಸುದ್ದಿಮನೆ ಮತ್ತು ಪೋಟೋಗ್ರಫಿ ಗೋಷ್ಟಿಯಲ್ಲಿ ಹಿರಿಯ ಪತ್ರಕರ್ತ ಕೆ.ಶಿವಸುಬ್ರಹ್ಮಣ್ಯ ಅವರು ಉದ್ಘಾಟಿಸಲಿದ್ದು, ಹಿರಿಯ ಪತ್ರಿಕಾ ಛಾಯಾಗ್ರಾಹಕ ಕೆ.ಗೋಪಿನಾಥ್, ಅನುಶಾಂತರಾಜ್, ಶರಣು ಬಸಪ್ಪ ಪಾಲ್ಗೊಳ್ಳಲಿದ್ದಾರೆ.

ಓದುಗರು /ನೋಡುಗರು/ಕೇಳುಗರು ಗೋಷ್ಟಿ :

ಜ. 19 ರಂದು ಬೆಳಗ್ಗೆ 10.30ಕ್ಕೆ ಮಾಧ್ಯಮ ಮತ್ತು ಓದುಗರು /ನೋಡುಗರು/ಕೇಳುಗರು ಗೋಷ್ಟಿಯನ್ನು ವಿಜಯವಾಣಿ ಸಂಪಾದಕರಾದ ಕೆ.ಎನ್ ಚನ್ನೇಗೌಡ ಉದ್ಘಾಟಿಸಿದರೆ, ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್ ಐನಕೈ ಅವರು ಅಧ್ಯಕ್ಷತಗೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತರಾದ ಅನಂತ ಚಿನಿವಾರ, ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಎಂ ಎಸ್ ಸ್ವಪ್ನ, ಅವರುಗಳು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಕ್ಕೆ ಸಾಮಾಜಿಕ ಜಾಲತಾಣ ಮತ್ತು ಪತ್ರಕರ್ತರ ಸವಾಲುಗಳು ಗೋಷ್ಟಿಯನ್ನು ಸುವರ್ಣ ನ್ಯೂಸ್ ಸಂಪಾದಕರ ಅಜಿತ್ ಹನುಮಕ್ಕನವರ್ ಉದ್ಘಾಟಿಸಲಿದ್ದು, ವಿಜಯಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಗೌರೀಶ್ ಅಕ್ಕಿ , ಕಸ್ತೂರಿ ಸಂಪಾದಕರಾದ ಶಾಂತಲಾ ಧರ್ಮರಾಜ್, ದಾವಣಗೆರೆವಿವಿ ಡಾ. ಶಿವಕುಮಾರ ಕಣಸೋಗಿ ಪಾಲ್ಗೋಳ್ಳಲಿದ್ದಾರೆ.

ಪತ್ರಿಕೆಗಳು /ಜಾಹೀರಾತು/ವಿತರಕರ ಗೋಷ್ಟಿ :

ಮಧ್ಯಾಹ್ನ 2.30ಕ್ಕೆ ಸ್ಥಳೀಯ ಪತ್ರಿಕೆಗಳು /ಜಾಹೀರಾತು/ವಿತರಕರು ಗೋಷ್ಟಿಯನ್ನು ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್ ಉದ್ಘಾಟಿಸಲಿದ್ದು ಹಿರಿಯ ಪತ್ರಿಕಾ ಸಂಪಾದಕರಾದ ಎಸ್ ನಾಗಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಎರಡು ದಿನಗಳ ಗೋಷ್ಟಿಗಳಲ್ಲಿ ಸಂವಾದಕರಾಗಿ ಹಿರಿಯ ಪತ್ರಕರ್ತರಾದ ಗಂಗಾಧರ ಮೊದಲಿಯಾರ್, ಶಿವಕುಮಾರ್ ಬೆಳ್ಳಿತಟ್ಟೆ, ಉಗಮ ಶ್ರೀನಿವಾಸ್, ಕುಚ್ಚಂಗಿ ಪ್ರಸನ್ನ, ಮರಿಯಪ್ಪ, ಉಮೇಶ್ ಭಟ್ , ಹರೀಶ್ ರೈ, ಗುರುನಾಥ್, ಬಿ.ಎಂ ಹನೀಫ್, ಟಿ ಎಂ ಸತೀಶ್ ಮೊದಲಾದವರು ಭಾಗವಹಿಸಲಿದ್ದಾರೆ.

ಕಲ್ಪತರು ಪ್ರಶಸ್ತಿ ಪ್ರದಾನ ಸಮಾರಂಭ :

ಸಮ್ಮೇಳನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳ ಸಭೆ ಮತ್ತು ಕಲ್ಪತರು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಶಾಖೆಯು ಸಮ್ಮೇಳನದ ಆತಿಥ್ಯ ವಹಿಸಿದ್ದು ಜಿಲ್ಲಾ ಘಟಕದ ಅಧ್ಯಕ್ಷರಾದ ಚಿ ನಿ ಪುರುಷೋತ್ತಮ, ಪ್ರಧಾನಕಾರ್ಯದರ್ಶಿ ರಘುರಾಮ್ ತಂಡ ಅವಿರತವಾಗಿ ಶ್ರಮಿಸುತ್ತಿದೆ.

ಸಮ್ಮೇಳನವು ಸಾಂಸ್ಕೃತಿಕ ಸಮಾರಂಭಗಳನ್ನು ಒಳಗೊಂಡಿದ್ದು ಖ್ಯಾತ ಗಾಯಕಿ ಶಮಿತ ಮಲ್ನಾಡ್ ಅವರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಶಿವಾನಂದ ತಗಡೂರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯರಾದ ದೇವರಾಜು, ಬೆಂಗಳೂರು ಘಟಕದ ಶಿವರಾಜು ಮತ್ತಿತರರು ಹಾಜರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

SALIGRAMA HABBA 2025 | ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ನಾಳೆ (ಜ.16) ವಾರ್ಷಿಕ “ಬ್ರಹ್ಮರಥೋತ್ಸವ”

Next Post

Saligrama Habba-2025 Live | ಸಾಲಿಗ್ರಾಮ ಶ್ರೀ ಗುರುನರಸಿಂಹ ಬ್ರಹ್ಮರಥೋತ್ಸವ ನೇರ ಪ್ರಸಾರ ಇಲ್ಲಿ ನೋಡಿ…!

Next Post

Saligrama Habba-2025 Live | ಸಾಲಿಗ್ರಾಮ ಶ್ರೀ ಗುರುನರಸಿಂಹ ಬ್ರಹ್ಮರಥೋತ್ಸವ ನೇರ ಪ್ರಸಾರ ಇಲ್ಲಿ ನೋಡಿ...!

ಇಂದಿನಿಂದ 217ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭ : ಸಿಎಂ ಸಿದ್ದರಾಮಯ್ಯರಿಂದ ಚಾಲನೆ ; ಸಂಚಾರ ಬದಲಾವಣೆ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d