Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

76th Republic Day | ಮಾಣಿಕ್ ಷಾ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಗೆ ಭರದ ಸಿದ್ಧತೆ

by Bengaluru Wire Desk
January 24, 2025
in Bengaluru Focus, Public interest
Reading Time: 2 mins read
0

ಬೆಂಗಳೂರು, ಜ.24 www.bengaluruwire.com : ನಾಳೆ (ಜ. 26) ರಂದು ಬೆಂಗಳೂರಿನ (Bengaluru) ಮಾಣಿಕ್ ಷಾ ಪರೇಡ್ ಮೈದಾನದಲ್ಲಿ (Manik Shah Parade Ground) 76ನೇ ಗಣರಾಜ್ಯೋತ್ಸವ (Republic Day) ದಿನಾಚರಣೆ ಹಿನ್ನೆಲೆಯಲ್ಲಿ ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 

ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್, ನಗರ ಪೊಲೀಸ್ ಆಯುಕ್ತರಾದ ದಯಾನಂದ್ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ನಗರ ಪೊಲೀಸ್ ಆಯುಕ್ತ ದಯಾನಂದ್. ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ (ಬಲಬದಿ) ಹಾಗೂ ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ (ಎಡಬದಿ) ಅವರು ಉಪಸ್ಥಿತರಿದ್ದರು.

ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ (Thawar Chand Gehlot) ಧ್ವಜಾರೋಹಣ ನೆರವೇರಿಸಲಿದ್ದಾರೆ. ಇದಕ್ಕಾಗಿ ಮಾಣಿಕ್ ಷಾ ಪರೇಡ್ ಮೈದಾನವನ್ನು ಸಿದ್ಧಗೊಳಿಸಲಾಗಿರುತ್ತದೆ. ಧ್ವಜಾರೋಹಣದ ನಂತರ ರಾಜ್ಯಪಾಲರು ಗೌರವರಕ್ಷೆ ಸ್ವೀಕರಿಸಿ ನಂತರ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.

ಜ.22 ರಿಂದ ಒಟ್ಟು 3 ದಿನಗಳ ಕಾಲ ಸತತವಾಗಿ ಗೌರವರಕ್ಷೆ ಸ್ವೀಕರಿಸುವ ತಾಲಿಮನ್ನು ನಡೆಸಲಾಗುತ್ತಿದೆ. ಈ ಪಥಸಂಚಲನದಲ್ಲಿ ರಾಜ್ಯ ಪೊಲೀಸ್, ಕೇರಳ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್‌ ಸೇರಿದಂತೆ ಒಟ್ಟು 38 ತುಕಡಿಗಳಲ್ಲಿ ಸುಮಾರು 1150 ಮಂದಿ ಭಾಗವಹಿಸಲಿದ್ದಾರೆ.

ಒಟ್ಟು 2 ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 1500 ಶಾಲಾ ಮಕ್ಕಳು ಭಾಗವಹಿಸಲಿದ್ದಾರೆ. ಪೊಲೀಸ್ ಇಲಾಖಾ ವತಿಯಿಂದ 2 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಿಲಿಟರಿ ಇಲಾಖಾ ವತಿಯಿಂದ 3 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾಹಸ ಪ್ರದರ್ಶನ :

ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದವರಿಂದ ನಾಡಗೀತೆ ಮತ್ತು ರೈತಗೀತೆ, ಬೆಂಗಳೂರು ದಕ್ಷಿಣ ವಲಯ-3ರ ಅಗರದಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಒಟ್ಟು 800 ಮಕ್ಕಳಿಂದ “ನಾವೆಲ್ಲರೂ ಒಂದೇ ನಾವು ಭಾರತೀಯರು” ಎಂಬ ಸಾಂಸ್ಕೃತಿಕ ಕಾರ್ಯಕ್ರಮ, ಕುಕ್ರಿ ನೃತ್ಯ, ಬಾಂಗ್ರಾ ಪಂಜಾಬಿ ಜಾನಪದ ನೃತ್ಯ, ಪಂಜಾಬ್ ಘಾತಕ್ ಸೈನಿಕರ ತಂಡದಿಂದ ಸಾಹಸ ಪ್ರದರ್ಶನ, ಹೇರೋಹಳ್ಳಿಯ ಬಿ.ಬಿ.ಎಂ.ಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 650 ಮಕ್ಕಳಿಂದ “ಅರಿವೇ ಅಂಬೇಡ್ಕರ್?” ಪ್ರದರ್ಶನ,  ಮೈಸೂರಿನ ಕೆ.ಎಸ್.ಆರ್.ಪಿ ಮೌಂಟೆಡ್ ಪೊಲೀಸ್, ಶೈಲೇಂದ್ರ ಮತ್ತು ತಂಡದವರಿಂದ ಟೆಂಟ್ ಪೆಗ್ಗಿಂಗ್, ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಭಯೋತ್ಪಾದನಾ ನಿಗ್ರಹ ತಂಡದಿಂದ ಬಸ್ ಮೇಲೆ ಭಯೋತ್ಪಾದಕರ ದಾಳಿಯಾದಾಗ ಕಾರ್ಯಾಚರಣೆ ನಡೆಸುವ ಅಣುಕು ಪ್ರದರ್ಶನವಿರಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ರಾಜ್ಯಪಾಲರಿಂದ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ನಗರ  ಪೊಲೀಸ್ ಆಯುಕ್ತರಾದ ದಯಾನಂದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಕಾರ್ಯಕ್ರಮದ ಅಂಗವಾಗಿ 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್​​ಐ, 58 ಮಂದಿ ಎಎಸ್‌ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆಗೆ ಇರಲಿದ್ದಾರೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದರು.

ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ವಾಹನ ಸಂಚಾರ ನಿರ್ಬಂಧ :

ಜ.26ರಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರ ಸೂಚನೆ ನೀಡಿದ್ದಾರೆ.

ವಾಹನ ನಿಲುಗಡೆಗೆ ನಿಷೇಧ :

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್​​ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಈ ವೇಳೆ ಸಂಚಾರ ಪೊಲೀಸ್ ವಿಭಾಗದ ಜಂಟಿ ಆಯುಕ್ತರಾದ ಅನುಚೇತ್, ವಲಯ ಆಯುಕ್ತರಾದ ಸ್ನೇಹಲ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಎರಡು ಬಾರಿ ಗಡುವು ಮೀರಿದರೂ ಕೆಂಪೇಗೌಡ ಲೇಔಟ್ ಮೂಲಸೌಕರ್ಯ ಕಲ್ಪಿಸಿಲ್ಲ : ವಿಧಾನಸಭೆ ಅರ್ಜಿ ಸಮಿತಿ ಅಸಮಾಧಾನ

Next Post

Robotic surgery | ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಒಂದು ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ

Next Post

Robotic surgery | ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಒಂದು ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ

Mahakumbh 2025 | BW-1 | ಮಹಾಕುಂಭ ಮೇಳದಲ್ಲಿ ಪ್ರತ್ಯಕ್ಷ ವರದಿಗೆ ಸಾಕ್ಷಿಯಾಗುತ್ತಿದೆ ಬೆಂಗಳೂರು ವೈರ್ : ಬೆಂಗಳೂರಿಂದ ಆರಂಭವಾದ ಪ್ರಯಾಣ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group