Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಲಕ್ಷ ಲಕ್ಷ ಜನರಿಂದ ತುಂಬಿ ತುಳುಕುತ್ತಿದೆ ಕಾಶಿ- ಅಯೋಧ್ಯೆ : ಸದ್ಯಕ್ಕೆ ನಿಮ್ಮ ಯಾತ್ರೆ ಮುಂದೂಡುವುದು ಉತ್ತಮ

ಕಾಶಿಯ ವಿಶ್ವನಾಥ ಮಂದಿರಕ್ಕೆ ಸಂಪರ್ಕ ನೀಡುವ ಎಲ್ಲ ರಸ್ತೆಗಳಲ್ಲೂ ಜನರು ಸುನಾಮಿಯೋಪಾದಿಯಲ್ಲಿ ಉಕ್ಕಿ ಉಕ್ಕಿ ಹರಿಯುತ್ತಿದ್ದಾರೆ.

by Bengaluru Wire Desk
February 3, 2025
in News Wire, Public interest
Reading Time: 1 min read
0

ವಾರಣಾಸಿ (ಉತ್ತರಪ್ರದೇಶ) ಫೆ.03 www.bengaluruwire.com : ಪ್ರಯಾಗ್ ರಾಜ್ (Prayagraj) ನಲ್ಲಿ ಜ.13 ರಿಂದ ಫೆ.26 ತನಕ ಮಹಾಕುಂಭ ಮೇಳ (Mahakumbh mela-2025)ನಡೆಯುತ್ತಿರುವ ಕಾರಣ ಈ ತೀರ್ಥಸ್ಥಳಕ್ಕೆ ಬಂದವರು ಸುತ್ತಮುತ್ತಲಿರುವ ಕಾಶಿ (Kashi), ಅಯೋಧ್ಯೆ (Ayodhya), ವಿಂಧ್ಯಾಂಚಲ (Vindhyanchala), ಚಿತ್ರಕೂಟ (Chithrakoota) ಎಲ್ಲಾ ಕಡೆಯೂ ದಿನೇ ದಿನೇ ಲಕ್ಷಾಂತರ ಭಕ್ತರಿಂದ ತುಂಬಿ ಹೋಗುತ್ತಿದೆ.

ಅದರಲ್ಲೂ ಕಾಶಿ, ಅಯೋಧ್ಯೆಯಲ್ಲಿ ರಾತ್ರಿ ಹಗಲ್ಲನ್ನದೆ ರೈಲು, ಬಸ್, ಖಾಸಗಿ ವಾಹನಗಳಲ್ಲಿ ಭಕ್ತರ ಜನಸಾಗರವೇ ಹರಿದುಬರುತ್ತಿದೆ. ನಿಮ್ಮಲ್ಲಿ ಹಲವರು ಪ್ರಯಾಗರಾಜದ ಕುಂಭ ಮೇಳಕ್ಕೆ ಬಂದು ನಂತರ ಕಾಶಿ, ಅಯೋಧ್ಯೆಗೂ ಹೋಗಿ ಬರೋಣ ಅಂದುಕೊಂಡಿರಬಹುದು ಅಲ್ಲವೇ? ಹಾಗಿದ್ರೆ ಸ್ವಲ್ಪ ತಾಳಿ… !!

ಸದ್ಯ ಕೋಟ್ಯಾಂತರ ಜನರು ಪ್ರಯಾಗ, ಅಯೋಧ್ಯೆ ಮತ್ತು ಕಾಶಿಗೆ ಬಂದು ಹೋಗುತ್ತಿದ್ದಾರೆ. ಇನ್ನು ಕಾಶಿಯ ವಿಶ್ವನಾಥ ಮಂದಿರಕ್ಕೆ ಸಂಪರ್ಕ  ನೀಡುವ ಎಲ್ಲ ರಸ್ತೆಗಳಲ್ಲೂ ಜನರು ಸುನಾಮಿಯೋಪಾದಿಯಲ್ಲಿ ಉಕ್ಕಿ ಉಕ್ಕಿ ಹರಿಯುತ್ತಿದ್ದಾರೆ. ಮಂದಿರದ ಸುತ್ತಲಿನ ಎಲ್ಲ ರಸ್ತೆಗಳಲ್ಲಿ ಸುಮಾರು 3 ಕಿ.ಮೀ ವರೆಗೆ ಯಾವುದೇ ರೀತಿಯ ಆಟೋ, ಎಲೆಕ್ಟ್ರಿಕ್ ಆಟೋ ಅಥವ ಸೈಕಲ್ ರಿಕ್ಷಾವನ್ನೂ ಬಿಡುತ್ತಿಲ್ಲ. ಏಕೆಂದರೆ ಅಲ್ಲಿ ಹೆಜ್ಜೆಯಿಡಲು ಆಗದಷ್ಟು ಭಕ್ತರು ಬರುತ್ತಿದ್ದಾರೆ. ಬೆಳಗಿನ ಜಾವದಿಂದ ಮಧ್ಯರಾತ್ರಿವರೆಗೂ ಕಿಲೋಮೀಟರ್ ಗಟ್ಟಲೆ ಕ್ಯೂ ಸಾಮಾನ್ಯವಾಗಿದೆ. ಕಾಶಿಯ ಶ್ರೀ ವಿಶ್ವನಾಥನ ದರ್ಶನಕ್ಕೆ ಕನಿಷ್ಠ 5-6 ಗಂಟೆ ಹಿಡಿಯುತ್ತಿದೆ.

ಕಾಶಿ ಶ್ರೀ ವಿಶ್ವನಾಥನ ದರ್ಶನಕ್ಕಾಗಿ ಕಿ.ಮೀಗಟ್ಟಲೆ ಕ್ಯೂನಲ್ಲಿ ನಿಂತಿರುವ ಜನಸ್ತೋಮ.

ಬ್ಯಾಗು ಇತ್ಯಾದಿಗಳನ್ನು ಹಿಡಿದುಕೊಂಡು ಜನರಿಂದ ತುಂಬಿ ತುಳುಕುತ್ತಿರುವ ರಸ್ತೆಯಲ್ಲಿ ಹರಸಾಹಸ ಪಟ್ಟು ನಡೆಯುವಂತಾಗಿದೆ. ವಸಂತ ಪಂಚಮಿ ಹಬ್ಬ ಇಂದು ಉತ್ತರ ಭಾರತದವರಿಗೆ ಬಹಳ ಪ್ರಮುಖ ದಿನ. ಹೀಗಾಗಿ ಭಕ್ತರ ದಂಡು ತುಸು ಹೆಚ್ಚೇ ಇದೆ. ಇಂತಹ ಪರಿಸ್ಥಿತಿಯಲ್ಲಿ ವಯಸ್ಸಾದವರು, ಮಕ್ಕಳ ಜೊತೆ ಬಂದರೆ ಕಷ್ಟವೇ. 

ಕಾಲ ಭೈರವನ ದೇಗುಲಕ್ಕೂ ಮೈಲುದ್ದದ ಸಾಲುಗಳಿವೆ. ಇದಲ್ಲದೆ ವಿಪರೀತ ಜನದಟ್ಟಣೆಯ ಕಾರಣಕ್ಕಾಗಿ ದಶಾಶ್ವಮೇಧ ಘಾಟ್ ನಲ್ಲಿ ಪ್ರತಿದಿನ ಸಂಜೆ ನಡೆಯುವ ಗಂಗಾ ಆರತಿ ಕಾರ್ಯಕ್ರಮಕ್ಕೆ ಇರುವ ಅಲ್ಪ ಸ್ಥಳದಲ್ಲೇ ಜನ ಕಿಕ್ಕಿರಿದು ತುಂಬುತ್ತಿರುವುದರಿಂದ ಇದನ್ನು ನಿರ್ವಹಿಸುವುದು ಜಿಲ್ಲಾಡಳಿತ, ಪೊಲೀಸರಿಗೂ ತುಸು ಕಷ್ಟವೇ. ಕಾಶಿಯ ಶ್ರೀ ವಿಶ್ವನಾಥ‌ ದೇವಸ್ಥಾನದ 2-3 ಕಿ.ಮೀ ಸುತ್ತಳತೆಯ ರಸ್ತೆಗಳಲ್ಲಿ ಜನ ಜಂಗಳಿಯನ್ನು ನಿರ್ವಹಿಸಲು ಬ್ಯಾರಿಕೇಡ್ ಹಾಕಲಾಗಿದೆ. 

ಸಂಜೆ ಗಂಗಾತಟದ ದಶಾಶ್ವಮೇಧ ಘಾಟ್ ನಲ್ಲಿ ಗಂಗಾರತಿಯ ದೃಶ್ಯ.

ಕಾಶಿ ಶ್ರಿ ವಿಶ್ವನಾಥ ದೇವರ ದರ್ಶನಕ್ಕಾಗಿ ಜನವರಿ 11 ರಿಂದ 28ರ ತಾರೀಖಿನ 17 ದಿನಗಳಲ್ಲಿ ಬರೋಬ್ಬರಿ 6,55,878 ಭಕ್ತರು ದೇವಸ್ಥಾನಕ್ಕೆ ಭೇಟಿಕೊಟ್ಟಿದ್ದರು. ಜನವರಿ 27ರಂದು ಒಂದೇ ದಿನ 6,55,878 ಯಾತ್ರಾರ್ಥಿಗಳು ದೇವರ ದರ್ಶನ ಪಡೆದಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಯೋಧ್ಯೆ ರಾಮಜನ್ಮ ಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು, “ಅಯೋಧ್ಯೆಯಲ್ಲಿನ ರಾಮಲಲ್ಲಾನ ಸುಗಮ ದರ್ಶನಕ್ಕಾಗಿ 10-15 ದಿನಗಳ ಕಾಲ ಯಾತ್ರೆಯನ್ನು ಮುಂದೂಡಿ” ಎಂದು ಭಕ್ತರಲ್ಲಿ ಮನವಿ ಮಾಡಿದ್ದಾರೆ.

ಹೀಗಾಗಿ ಕರ್ನಾಟಕದಿಂದ ಬರುವ ಭಕ್ತರು ಸೂಕ್ತ ರೈಲು, ವಿಮಾನ, ವಾಹನಗಳ ವ್ಯವಸ್ಥೆ ಜೊತೆಗೆ ಪ್ರಯಾಗ ನಗರ/ಕುಂಭಮೇಳದ ಟೆಂಟ್ ಪ್ರದೇಶ/ ಸಂಘ ಸಂಸ್ಥೆ/ ಮಠಗಳು ಇತ್ಯಾದಿಗಳಲ್ಲಿ ವಸತಿ ಖಚಿತವಾಗಿ ಸಿಗುವುದಾದರೆ ಮಾತ್ರ ಕುಂಭಮೇಳದಲ್ಲಿ ಪಾಲ್ಗೊಂಡು ಕಾಶಿ, ಅಯೋಧ್ಯೆಗೆ ಭೇಟಿ ನೀಡಿ. ಇಲ್ಲವಾದಲ್ಲಿ ಮಹಾಕುಂಭ ಮೇಳದ ನಂತರವೇ ಈ ತೀರ್ಥಯಾತ್ರಾ ಸ್ಥಳಗಳಿಗೆ ಭೇಟಿಕೊಟ್ಟರೆ ಒಳಿತು ಎಂಬುದು ಈ ಸ್ಥಳಗಳಿಗೆ ಭೇಟಿಕೊಟ್ಟವರ ಸಲಹೆ ಹಾಗೂ ಅಭಿಪ್ರಾಯವಾಗಿದೆ.

WhatsApp Join our WhatsApp Channel
Previous Post

ಬೆಂಗಳೂರು : ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ಕೆಂಚನಹಳ್ಳಿ ಸರ್ಕಾರಿ ಭೂಮಿ ಒತ್ತುವರಿ ತೆರವು

Next Post

ವಾಯುಮಾಲಿನ್ಯ ತಡೆಗಟ್ಟಲು ಸಾರ್ವಜನಿಕ ಸಾರಿಗೆಯಲ್ಲಿ ಇವಿ ವಾಹನ ಬಳಕೆ : ಸಚಿವ ದಿನೇಶ್ ಗುಂಡೂರಾವ್ ಸಲಹೆ

Next Post

ವಾಯುಮಾಲಿನ್ಯ ತಡೆಗಟ್ಟಲು ಸಾರ್ವಜನಿಕ ಸಾರಿಗೆಯಲ್ಲಿ ಇವಿ ವಾಹನ ಬಳಕೆ : ಸಚಿವ ದಿನೇಶ್ ಗುಂಡೂರಾವ್ ಸಲಹೆ

ದೆಹಲಿ ವಿಧಾನಸಭೆ ಚುನಾವಣೆ ; ಮಹಾಕುಂಭ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ತೀರ್ಥಸ್ನಾನದ ಲೆಕ್ಕಾಚಾರವೂ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group