Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Video News | “ಕೇಂದ್ರ ಬಜೆಟ್ ಸೃಜನಶೀಲ ಕಾದಂಬರಿಯ ತುಣುಕು” : ಸಂಸದ ಕುಮಾರ್ ನಾಯಕ್ ಪ್ರಖರ ಭಾಷಣ

by Bengaluru Wire Desk
February 11, 2025
in News Wire, Public interest
Reading Time: 2 mins read
0

ನವದೆಹಲಿ, ಫೆ.11 www.bengaluruwire.com : “ಈ ಬಜೆಟ್ ನಮ್ಮ ಚಾಲ್ತಿಯಲ್ಲಿರುವ ವಾಸ್ತವವನ್ನು ಪ್ರತಿಬಿಂಬಿಸುವ ಕನ್ನಡಿಯೂ ಅಲ್ಲ, ಮುಂದಿನ ಹಾದಿಯನ್ನು ಬೆಳಗಿಸುವ ದೀಪವೂ ಅಲ್ಲ. ಬದಲಾಗಿ, ಇದು ಸೃಜನಶೀಲ ಕಾದಂಬರಿಯ ಉತ್ತಮ ತುಣುಕು – ಅದರ ಹಕ್ಕುಗಳಲ್ಲಿ ದಿಟ್ಟತನ, ಅದರ ಘೋಷಣೆಗಳಲ್ಲಿ ಮಹತ್ವಾಕಾಂಕ್ಷೆ ಮತ್ತು ಜನರ ಜೀವಂತ ಅನುಭವಗಳಿಂದ ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದೆ” 

ಇದು ರಾಯಚೂರು ಸಂಸದ ಹಾಗೂ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯಕ್ ಸೋಮವಾರ ಸಂಜೆ ಕೇಂದ್ರ ಸರ್ಕಾರದ 2025-26ನೇ ಸಾಲಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಪ್ರಾರಂಭದಲ್ಲಿ ಕನ್ನಡದಲ್ಲೇ ಮಾತನಾಡಿ, ಆಯವ್ಯಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸದನದಲ್ಲಿ ಮಂಡಿಸಿದರು.

ದೇಶದ ಜಿಡಿಪಿ ಬೆಳವಣಿಗೆಯು ಶೇ. 8.2 ರಿಂದ ಶೇ.6.4ಕ್ಕೆ ಕುಸಿದಿದೆ. ಗ್ರಾಹಕ ಆಹಾರ ಬೆಲೆ ಸೂಚ್ಯಂಕದಲ್ಲಿ ವರ್ಷದಿಂದ ವರ್ಷಕ್ಕೆ ಹಣದುಬ್ಬರವು ಶೇ.8.39ಕ್ಕೆ ಏರಿದೆ. ಇದು ಸಾಮಾನ್ಯ ಜನರ ಬಜೆಟ್‌ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಸಮಾನತೆಯು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ಶೇ.1 ರಷ್ಟು ಜನರು ದೇಶದ ಸಂಪತ್ತಿನ ಶೇ.40 ಪಾಲನ್ನು ನಿಯಂತ್ರಿಸುತ್ತಿದ್ದಾರೆ. ನಿರುದ್ಯೋಗವು ಅಪಾಯಕಾರಿ ಮಟ್ಟದಲ್ಲಿದೆ. ಸಾಮಾಜಿಕ ಸಾಮರಸ್ಯದ ಮೇಲೆ ಪರಿಣಾಮ ಬೀರುತ್ತದೆ. ಇದು ಪ್ರತ್ಯೇಕ ಸಮಸ್ಯೆಯಲ್ಲ ಆದರೆ ಇಡೀ ಭಾರತಕ್ಕೆ ಸಂಬಂಧಿಸಿದ ವಿದ್ಯಮಾನವಾಗಿದೆ. 

ವಾಸ್ತವ ಪರಿಸ್ಥಿತಿ ಗಮನಿಸಿ ರಾಜ್ಯದ ತೆರಿಗೆ ಪಾಲು ಹಂಚಿಕೆ ಮಾಡಿ :

“15 ನೇ ಹಣಕಾಸು ಆಯೋಗವು ಕೇಂದ್ರ ತೆರಿಗೆಗಳಲ್ಲಿ ಕರ್ನಾಟಕದ ಪಾಲನ್ನು ಈ ಮೊದಲು ಶೇ. 4.7 ರಷ್ಟಿದ್ದ ತೆರಿಗೆ ಪಾಲನ್ನು ಶೇ.3.6 ಕ್ಕೆ ಅಂದರೆ  ಶೇ.23% ರಷ್ಟು ತೀವ್ರವಾಗಿ ಕಡಿತಗೊಳಿಸಿದೆ. ಇದರಿಂದ ರಾಜ್ಯದ ಆದಾಯ ಕುಸಿತವಾಗಿದೆ. ಇದರಿಂದಾಗಿ ಕರ್ನಾಟಕಕ್ಕೆ ಘೋರ ಅನ್ಯಾಯವಾಗಿದೆ. ಹಣಕಾಸು ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ, 16ನೇ ಹಣಕಾಸು ಆಯೋಗದ ವರದಿಯಿಂದ ಹಣಕಾಸು ಸಚಿವರ ಕೈಗಳು ಶೀಘ್ರದಲ್ಲೇ ಮತ್ತೊಮ್ಮೆ ಕಟ್ಟಲ್ಪಡುತ್ತವೆ. ವರದಿಯನ್ನು ಕೇವಲ ಸೈದ್ಧಾಂತಿಕ ಆಯಾಮಕ್ಕೆ ಇಳಿಸದೆ  ರಾಜ್ಯದ ವಾಸ್ತವ ಪರಿಸ್ಥಿತಿಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ತೆರಿಗೆ ಪಾಲನ್ನು ಹಂಚಬೇಕಿದೆ”.

ಸಾಮಾಜಿಕ ಸಾಮರಸ್ಯ ಮತ್ತು ಆರ್ಥಿಕ ನ್ಯಾಯದ ಪ್ರಜ್ಞೆಯನ್ನು ಎತ್ತಿಹಿಡಿಯುವ ಚೌಕಟ್ಟನ್ನು ನಾವು ಭದ್ರಪಡಿಸಿಕೊಳ್ಳಬೇಕು. ರಾಜ್ಯಗಳು ತಮ್ಮ ಹಕ್ಕಿನ ಪಾಲನ್ನು ಪಡೆಯಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಸೋಮವಾರ ಬಜೆಟ್ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿರುವ ಸಂಸದ ಜಿ ಕುಮಾರ್ ನಾಯಕ್.

ರೈಲ್ವೇ ಯೋಜನೆಯಲ್ಲಿ ರಾಜ್ಯಕ್ಕೆ ಅನ್ಯಾಯ :

ಈ ಬಜೆಟ್ ಆದ್ಯತೆಗಳು ತಪ್ಪಾಗಿದೆ. ನಮಗೆ ದೇಶಾದ್ಯಂತ ದೃಢವಾದ ರೈಲ್ವೇ ಜಾಲ ಅಗತ್ಯವಿರುವಾಗ, ಸರ್ಕಾರವು ವಂದೇ ಭಾರತ್ ಮತ್ತು ನಮೋ ಭಾರತ್‌ನಂತಹ ಶೋ-ಪೀಸ್ ರೈಲುಗಳ ಮೇಲೆ ಗಮನಹರಿಸುತ್ತಿದೆ. ಈ ರೈಲುಗಳು ಈಗಾಗಲೇ ಉತ್ತಮ ಸಂಪರ್ಕ ಹೊಂದಿರುವ ಪ್ರದೇಶಗಳಿಗೆ ಸೇವೆ ಸಲ್ಲಿಸುತ್ತವೆ. ಆದರೆ ಕಡಿಮೆ ರೈಲ್ವೇ ಮೂಲಸೌಕರ್ಯ ಹೊಂದಿದ ಪ್ರದೇಶಗಳ ಅಗತ್ಯಗಳನ್ನು ನಿರ್ಲಕ್ಷಿಸುತ್ತಿವೆ. ಕರ್ನಾಟಕವು ದೇಶದಲ್ಲೇ ಅತ್ಯಂತ ಕಡಿಮೆ ರೈಲ್ವೆ ಸಾಂದ್ರತೆಯನ್ನು ಹೊಂದಿದೆ. ಪ್ರತಿ 100 ಚದರ ಕಿ.ಮೀ.ಗೆ, ರಾಜ್ಯದಲ್ಲಿ ಕೇವಲ 2.62 ಕಿ.ಮೀ ರೈಲ್ವೆ ಹಳಿಗಳನ್ನು ಹೊಂದಿದ್ದರೆ, ಉತ್ತರ ಪ್ರದೇಶವು ಎರಡು ಪಟ್ಟು ಹೆಚ್ಚು ಮತ್ತು ಪಶ್ಚಿಮ ಬಂಗಾಳವು ನಾಲ್ಕು ಪಟ್ಟು ಹೆಚ್ಚು ಉದ್ದವನ್ನು ಹೊಂದಿದೆ.

ತಾವು ರೈಲ್ವೆ ಸಚಿವರನ್ನು ಭೇಟಿಯಾದಾಗ, ಅವರು ಈ ಅಸಮಾನತೆಯನ್ನು ಕಳವಳದಿಂದ ಒಪ್ಪಿಕೊಂಡಿದ್ದರು. ಈ ಸಮಸ್ಯೆಯು ಉನ್ನತ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ಆದರೆ ವಾಸ್ತವದಲ್ಲಿ ಮಾತ್ರ ರಾಜ್ಯದಲ್ಲಿ ಹೊಸದಾಗಿ ರೈಲ್ವೆ ಹಳಿಗಳನ್ನು ಹಾಕುತ್ತಿಲ್ಲ. ಹೆಚ್ಚು ಅಗತ್ಯವಿರುವ ರೈಲ್ವೆ ಯೋಜನೆಗಳನ್ನು ವಿಶೇಷವಾಗಿ ಆಲಮಟ್ಟಿ-ಯಾದಗಿರಿ ರೈಲು ಮಾರ್ಗವನ್ನು ಪರಿಚಯಿಸಲು ಸರ್ಕಾರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ರಾಷ್ಟ್ರೀಯ ಎಸ್ ಸಿಎಸ್ ಪಿ ಹಾಗೂ ಟಿಎಸ್ ಪಿ ಕಾಯ್ದೆ ಜಾರಿಗೆ ಆಗ್ರಹ :

ಭಾರತದ ಒಟ್ಟು ಜನಸಂಖ್ಯೆಯಲ್ಲಿ ಶೇ. 25.2 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು, ಸುಮಾರು ಶೇ.19ರಷ್ಟು ಅಲ್ಪಸಂಖ್ಯಾತರಿದ್ದಾರೆ. ಆದರೆ ಅವರ ಬಜೆಟ್ ಹಂಚಿಕೆಗಳು ಅಸಮಾನವಾಗಿ ಕಡಿಮೆಯಿವೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಬಜೆಟ್ ಹಂಚಿಕೆಗಳು ಎಸ್ ಸಿ ಮತ್ತು ಎಸ್ ಟಿ ಜನಸಂಖ್ಯೆಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಕಾನೂನುಗಳನ್ನು ಜಾರಿಗೆ ತಂದಿವೆ. ಎಸ್ ಸಿ ಮತ್ತು ಎಸ್ ಟಿ ಬಜೆಟ್ ಹಂಚಿಕೆಗಳನ್ನು ಕಾನೂನುಬದ್ಧವಾಗಿ ಕಡ್ಡಾಯಗೊಳಿಸಲು ರಾಷ್ಟ್ರೀಯ ಎಸ್ ಸಿಎಸ್ ಪಿ ಹಾಗೂ ಟಿಎಸ್ ಪಿ ಕಾಯ್ದೆ (SCSP/TSP Act) ತುರ್ತಾಗಿ ಜಾರಿಗೆ ಅಗತ್ಯವಿದೆ. 

ಯಾವುದೇ ಸರ್ಕಾರ ಅಧಿಕಾರದಲ್ಲಿದ್ದರೂ ಅಥವಾ ಅದರ ಸೈದ್ಧಾಂತಿಕ ಒಲವು ಏನೇ ಇರಲಿ, ಐತಿಹಾಸಿಕ ಅಸಮಾನತೆಗಳನ್ನು ನಿವಾರಿಸಲು ಎಸ್ ಸಿ ಮತ್ತು ಎಸ್ ಟಿ ಅಭಿವೃದ್ಧಿಗೆ ಹಣಕಾಸು ಅವರ ಜನಸಂಖ್ಯೆಗೆ ಅನುಗುಣವಾಗಿರಬೇಕು. ಅಂತಹ ಕಾನೂನನ್ನು ಜಾರಿಗೆ ತರುವುದು ಈ ಸದನದ ಜವಾಬ್ದಾರಿಯಾಗಿದೆ ಎಂದು ಸಂಸದ ಕುಮಾರ್ ನಾಯಕ್ ತಮ್ಮ ಬಜೆಟ್ ಭಾಷಣದ ಮೇಲಿನ ಚರ್ಚೆಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ದೇಶಾದ್ಯಂತ ನಡೆದುಕೊಂಡೇ ಓಡಾಡಿ, ಬಡವರ ಹೋರಾಟಗಳನ್ನು ಆಲಿಸಿದರು ಮತ್ತು ಅವರ ನೋವನ್ನು ಮನಗಂಡರು.  ಹೆಚ್ಚು ಜನರಿಗೆ ಅಗತ್ಯವಿರುವ ಸಾರ್ವತ್ರಿಕ ಮೂಲ ಆದಾಯವನ್ನು ಖಚಿತಪಡಿಸುವ ಖಾತರಿ ಯೋಜನೆಗಳನ್ನು ಜಾರಿಗೆ ತಂದರು.

ಆದರೆ ಈ ಸರ್ಕಾರ ಏನು ಮಾಡುತ್ತಿದೆ?  ಭಾರತದ ತಲಾ ಆದಾಯಕ್ಕಿಂತ 12 ಪಟ್ಟು ಹೆಚ್ಚು ಗಳಿಸುವವರಿಗೆ ದೊಡ್ಡ ಪ್ರಮಾಣದಲ್ಲಿ ಆದಾಯ ತೆರಿಗೆ ಪ್ರಯೋಜನಗಳನ್ನು ಕೊಟ್ಟು, ಬಡವರಿಗೆ ಸಹಾಯ ಮಾಡುವ ವಿಚಾರದಲ್ಲಿ ಸಣ್ಣ ಮಿಠಾಯಿ ಹಂಚುವ ರೀತಿ ಕೆಲಸ ಮಾಡಲಾಗಿದೆ ಎಂದು ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ತೆರಿಗೆ ರಿಯಾಯಿತಿ ಘೋಷಿಸಿ ಬಡವರನ್ನು ಕಡೆಗಣಿಸಿದ ಬಗ್ಗೆ ಸಂಸದ ಕುಮಾರ್ ನಾಯಕ್ ತಮ್ಮದೇ ಧಾಟಿಯಲ್ಲಿ ಟೀಕಿಸಿದರು. 

ಕುಂಭಮೇಳದ ದುರಂತ ಸಾವುಗಳಲ್ಲಿ ಕಂಡುಬರುವಂತೆ, ವಿಐಪಿ ಸಂಸ್ಕೃತಿಯ ನೆರಳಿನಲ್ಲಿ ಬಡವರು ಬಳಲುತ್ತಿದ್ದಾರೆ. ಬಲಿಷ್ಠ ಸರ್ಕಾರ ಎಂದು ಕರೆಯಲ್ಪಡುವ ಸರ್ಕಾರವು ವಿದೇಶಿ ಶಕ್ತಿಗಳ ಮುಂದೆ ಕುಗ್ಗುತ್ತದೆ ಆದರೆ ತನ್ನದೇ ಆದ ನಾಗರಿಕರ ವಿರುದ್ಧ ಅಧಿಕಾರದಿಂದ ಹಿಗ್ಗುತ್ತದೆ ಎಂದು ಸದನದಲ್ಲಿ ಪರಿಣಾಮಕಾರಿಯಾಗಿ ತಮ್ಮ ನಿಲುವನ್ನು ವ್ಯಕ್ತಪಡಿಸಿದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Aero India 2025 | BW -1 | ಯಲಹಂಕ ವಾಯುನೆಲೆಯ ಆಗಸದಲ್ಲಿ ಯುದ್ಧ ವಿಮಾನಗಳ Complete Airshow ನಿಮಗಾಗಿ

Next Post

Viral Video | #monalisa | ವೈರಲ್ ಸೆನ್ಸೇಷನ್: “ಮೊನಾಲಿಸಾ ಬಾಲಿವುಡ್ ಹಾಡು” ಇಂಟರ್ನೆಟ್‌ ನಲ್ಲಿ ಭರ್ಜರಿಯಾಗಿ ಧೂಳೆಬ್ಬಿಸುತ್ತಿದೆ

Next Post

Viral Video | #monalisa | ವೈರಲ್ ಸೆನ್ಸೇಷನ್: "ಮೊನಾಲಿಸಾ ಬಾಲಿವುಡ್ ಹಾಡು" ಇಂಟರ್ನೆಟ್‌ ನಲ್ಲಿ ಭರ್ಜರಿಯಾಗಿ ಧೂಳೆಬ್ಬಿಸುತ್ತಿದೆ

ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

BW SPECIAL | ಲೋಕಾಯುಕ್ತದಲ್ಲಿ ದಿನಂಪ್ರತಿ ಸರಾಸರಿ 32 ಹೊಸ ಪ್ರಕರಣ ದಾಖಲು : ಪೂರ್ಣಾಧಿಕಾರವಿಲ್ಲದೆ- ಸಿಬ್ಬಂದಿ ಕೊರತೆಯಿಂದ ನರಳುತ್ತಿದೆ ಭ್ರಷ್ಟ ವಿರೋಧಿ ಕಾವಲು ಸಂಸ್ಥೆ

Please login to join discussion

Like Us on Facebook

Follow Us on Twitter

Recent News

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group