Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ನಮ್ಮ ಮೆಟ್ರೋ ಪ್ರಯಾಣದ ನೂತನ ಪರಿಷ್ಕೃತ ದರದ ಗರಿಷ್ಠ ಮಿತಿ ಶೇ.70ಕ್ಕೆ ನಿಗದಿ : ಅತಿ ಹೆಚ್ಚು ದುಬಾರಿಯಾದ ಟಿಕೆಟ್ ದರಗಳಲ್ಲಿ ಇಳಿಕೆ : ನಾಳೆಯಿಂದ ಜಾರಿ

by Bengaluru Wire Desk
February 13, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.13 www.bengaluruwire.com : ನಮ್ಮ ಮೆಟ್ರೋ ಪರಿಷ್ಕ್ರತ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಲವೊಂದು ನಿಗದಿತ ಸ್ಟೇಜ್ ಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಪರಿಷ್ಕೃತ ದರ ಏರಿಕೆಯಲ್ಲಿ ಶೇ.90 ರಿಂದ ಶೇ.100ರಷ್ಟು ಅತಿ ಹೆಚ್ಚಳವಾಗಿರುವ ಕಡೆ ಗರಿಷ್ಠ ಶೇ.70 ತನಕ ಬೆಲೆ ಏರಿಕೆಗೆ ಮಿತಿ ಹಾಕಲಾಗಿದೆ. ಇದರಿಂದ ಪ್ರಯಾಣ ದರ ಶೇ.30ರಷ್ಟು ಕಡಿಮೆಯಾಗಲಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

ಗುರುವಾರ ಈ ಸಂಬಂಧ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಮೆಟ್ರೋ ರೈಲು ನಿಗಮ(BMRCL) ದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಎಲ್ಲೆಲ್ಲಿ ಶೇ.100ರ ತನಕ ಹೆಚ್ಚಿನ ದರ ಏರಿಕೆ ಆಗಿದೆಯೋ ಅಂತಹ ಕಡೆಗಳಲ್ಲಿ ಶೇ.30ರಷ್ಟರ ತನಕ ದರ ಇಳಿಕೆಯಾಗಲಿದೆ. ಗರಿಷ್ಠ ದರ ಏರಿಕೆಗೆ ಶೇ.70ರಷ್ಟು ಮಿತಿ ಹಾಕಲಾಗಿದೆ. ನೂತನ ದರ ಪಟ್ಟಿಯು ನಾಳೆಯಿಂದಲೇ ಜಾರಿಯಾಗಲಿದೆ. ಆ ಮೂಲಕ ಕನಿಷ್ಠ ದಿನಂಪ್ರತಿ ಓಡಾಡುವ 2.5 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದರು.

ನಾವು ಫೇರ್ ಮ್ಯಾಟ್ರಿಕ್ಸ್ ಮೇಲೆಯೇ ರೈಲ್ವೆ ಟಿಕೆಟ್ ದರ ನಿರ್ಧಾರ ಮಾಡಿದ್ದೇವೆ. ಮುಖ್ಯಮಂತ್ರಿಗಳು, ಪ್ರಯಾಣಿಕರು, ಶಾಸಕರು ಎಲ್ಲರೂ ದರ ಏರಿಕೆ ಜಾಸ್ತಿಯಾಗಿದೆ ಕಡಿಮೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ಸಂಜೆ ಮತ್ತು ಇಂದು ಬೆಳಗ್ಗೆ ಮೆಟ್ರೋ ಮಂಡಳಿ ಸಭೆ ನಡೆಸಿದೆ. ಆ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. 4,600 ಪ್ರಕರಣಗಳ ಮ್ಯಾಟ್ರಿಕ್ಸ್ ಪೈಕಿ 600ಕ್ಕೂ ಹೆಚ್ಚಿನ ಪ್ರಕರಣಗಳಲ್ಲಿ ಶೇ.70 ರಿಂದ 100ರಷ್ಟು ದರ ಹೆಚ್ಚಳವಾಗಿತ್ತು. ಈಗ ಅದರ ಗರಿಷ್ಠ ವಯುಕ್ತಿಕ ಪ್ರಯಾಣ ದರದ ಮಿತಿಯನ್ನು ಶೇ.70ಕ್ಕೆ ಮಿತಿ ಹಾಕಲಾಗಿದೆ. 

ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್ ದರದಲ್ಲಿ ಸ್ವಲ್ಪ ಮಟ್ಟಿಗೆ ಅನುಕೂಲ ಮಾಡುವ ಉದ್ದೇಶವಿದೆ. ಮೆಟ್ರೋ ರೈಲ್ವೆ ಕಾಯ್ದೆ ಸೆಕ್ಷನ್ 37 ಪ್ರಕಾರ ದರ ನಿಗದಿ ಮಾಡಿದ್ದೇವೆ. ಬಿಎಂಆರ್ ಸಿಎಲ್ ಜನರ ಹಿತಾಸಕ್ತಿಯಿಟ್ಟುಕೊಂಡೇ ಕಾರ್ಯ ನಿರ್ವಹಿಸುತ್ತಿದೆ. ಮೆಟ್ರೋ ಕಾಮಗಾರಿಗಳಿಗೆ, ನಿರ್ವಹಣೆಗೆ ನೂರಾರು ಕೋಟಿ ಹೂಡಿಕೆ ಮಾಡಿದ್ದೇವೆ. ಜನರಿಗೆ ಗುಣಮಟ್ಟದ ಸೇವೆ ನೀಡಲು ನಾವು ಬದ್ಧರಾಗಿದ್ದೇವೆ. ಮೆಟ್ರೋ ವಿಸ್ತರಣೆಗಾಗಿ ಈಗಾಗಲೇ ಸಾವಿರಾರು ಕೋಟಿ ರೂ. ಹೂಡಿಕೆ ಮಾಡಿದ್ದೇವೆ. ಕಾಲಕಾಲಕ್ಕೆ ಪಡೆದ ಸಾಲಕ್ಕೆ ಬಡ್ಡಿ, ಸಿಬ್ಬಂದಿ ವೇತನ, ದೈನಂದಿನ ಆಡಳಿತ ನಿರ್ವಹಣೆಯ ವೆಚ್ಚ ಎಲ್ಲವೂ ಹೆಚ್ಚಾಗಿದೆ. 2017ರಿಂದಲೂ ನಮ್ಮ ಮೆಟ್ರೋ ಪ್ರಯಾಣ‌ ದರದಲ್ಲಿ ಏರಿಕೆ ಮಾಡಿಲ್ಲ. ಈಗ ದರ ಏರಿಕೆ ಮಾಡುವ ಅನಿವಾರ್ಯತೆಯಿತ್ತು ಎಂದು ಸಮರ್ಥಿಸಿಕೊಂಡರು.

ಟಿಕೆಟ್ ದರವನ್ನು ಶೇ.40-55ರಷ್ಟು ಸರಾಸರಿಯಾಗಿ ನಮ್ಮ ಮೆಟ್ರೋ ಹೆಚ್ಚಳ ಮಾಡಿದೆ. ಕೆಲವೊಂದು ಕಡೆ ಪ್ರಯಾಣ ದರ ತುಂಬಾ ಜಾಸ್ತಿ ಆಗಿರುವ ಕಡೆ ಸ್ವಲ್ಪ ಕಡಿಮೆ ಮಾಡುತ್ತೇವೆ. ಕೆಲವೊಂದು ಕಡೆ ಎರಡು ಸ್ಲಾಬ್ ಗಳನ್ನು ಒಟ್ಟಿಗೆ ಸೇರಿಸುತ್ತೇವೆ. ಉದಾಹರಣೆಗೆ ಪ್ರಯಾಣ ದರ 60 ರೂ. ಹೆಚ್ಚಾಗಿದ್ದರೆ 50ರೂ. ಗೆ ಇಳಿಸುತ್ತೇವೆ ಎಂದು ಅವರು ಹೇಳಿದರು.

ಈಗ ಪೀಕ್ ಅವಧಿಯಲ್ಲಿ ಶೇ.100ರಷ್ಟು ಸಾಮರ್ಥ್ಯದಲ್ಲಿ 55 ರೈಲುಗಳು ಓಡಾಡುತ್ತಿವೆ. ನಮ್ಮ ಮೆಟ್ರೋ ನಷ್ಠದಲ್ಲಿ‌ ನಡೆಯುತ್ತಿದೆ. ಮುಂದಿನ ಮೂರು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ದರ ನಿಗದಿ ಮಾಡಿದ್ದೇವೆ. ಕಳೆದ ಎರಡು ದಿನಗಳಿಂದ ಮೆಟ್ರೋ ದರ ಏರಿಕೆಯಿಂದ ಪ್ರಯಾಣಿಕರ ಸಂಖ್ಯೆ ಶೇ.10ರಷ್ಟು ಕಡಿಮೆಯಾಗಿದೆ ಎಂದು ಮಹೇಶ್ವರ ರಾವ್ ಹೇಳಿದರು.

ದರ ಹೆಚ್ಚಳ ಹಾಗೂ ಇಳಿಕೆಯ ಕುರಿತಂತೆ ಮೆಟ್ರೋ ಅಧಿಕಾರಿಗಳಲ್ಲಿ ಸ್ಪಷ್ಟತೆ ಇರದೆ ಗೊಂದಲಕ್ಕೆ ಒಳಗಾಗಿದ ಬಗ್ಗೆ ಮಾಧ್ಯಮದವರು ಆಕ್ಷೇಪ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಮೆಟ್ರೋ ಎಂಡಿ ಮಹೇಶ್ವರ ರಾವ್ ಸೂಕ್ತ‌ರೀತಿಯಲ್ಲಿ ಸಮಜಾಯುಷಿ ನೀಡಿದರು.

ದರ ನಿಗದಿ ಸಮಿತಿ ಕೂಡ ನಮ್ಮ ಮೆಟ್ರೋ ಸ್ವತ್ತುಗಳಿಂದ ಜಾಹೀರಾತು ಮತ್ತಿತರ ಆದಾಯ ಮೂಲಗಳನ್ನು ಬಳಸಿಕೊಂಡು ಆರ್ಥಿಕ ಸಂಪನ್ಮೂಲ ಹೆಚ್ಚಳಕ್ಕೆ ಬಳಸಿಕೊಳ್ಳಲು ಸಲಹೆ ನೀಡಿದೆ. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ‌ ಎಂದು ಅವರು ಹೇಳಿದರು.

ಫೆ.09ರಿಂದ ಜಾರಿಗೆ ಬರುವಂತೆ ಪ್ರಯಾಣ ದರ ಏರಿಕೆಯಿಂದ ವ್ಯಾಪಕ ಟೀಕೆಗೆ ಒಳಗಾಗಿದ್ದ ಬಿಎಂಆರ್ ಸಿಎಲ್ ನಡೆಯಿಂದಾಗಿ ಪ್ರಯಾಣಿಕರು ಮೆಟ್ರೋ ರೈಲು ಬಿಟ್ಟು ಬಿಎಂಟಿಸಿ ಬಸ್ ಹಾಗೂ ಸ್ವಂತ ವಾಹನಗಳತ್ತ ಮುಖ ಮಾಡಿದ್ದರಿಂದ ಮೆಟ್ರೋನಲ್ಲಿ  ದಿನಂಪ್ರತಿ ಓಡಾಡುವ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿತ್ತು. 

ಫೆ.09ರಿಂದ ಜಾರಿಗೆ ಬರುವಂತೆ ಮೆಟ್ರೋ ರೈಲಿನ ಪ್ರಯಾಣ ದರವನ್ನು ಶೇ.46ರಿಂದ 47ರಷ್ಟು ಏರಿಕೆ ಮಾಡಲಾಗಿತ್ತು ಎಂದು ಮೆಟ್ರೋ ನಿಗಮ ತಿಳಿಸಿತ್ತು.‌ಆದರೆ ಕೆಲವು ಮಾರ್ಗಗಳಲ್ಲಿ ಪ್ರಯಾಣ ದರ ಶೇ.100ಕ್ಕಿಂತ ಹೆಚ್ಚಳವಾಗಿತ್ತು. ಇದರಿಂದಾಗಿ ಮೆಟ್ರೋ ಪ್ರಯಾಣಿಕರು, ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ವ್ಯಾಪಕ ಟೀಕೆ ಹಾಗೂ ವಿರೋಧ ವ್ಯಕ್ತವಾಗಿತ್ತು. ದರ ಹೆಚ್ಚಳ ವಿಷಯ ಬಿಜೆಪಿ- ಕಾಂಗ್ರೆಸ್ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ, ವಿಪರೀತವಾಗಿ ದರ ಹೆಚ್ಚಳವಾದ ಕಡೆ ತುರ್ತಾಗಿ ದರ ಇಳಿಸುವಂತೆ ಬಿಎಂಆರ್ ಸಿಎಲ್ ಗೆ ಕೋರಿದ್ದಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ನಗರದ ಜಲಮೂಲಗಳ ಬಫರ್ ವಲಯ ಉಲ್ಲಂಘನೆಗೆ ಅವಕಾಶ : ಬಿಬಿಎಂಪಿ- ಬಿಡಿಎ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

Next Post

ಬೆಂಗಳೂರು : ಸಾರಕ್ಕಿ ಕೆರೆಯ 20 ಕೋಟಿ ರೂ. ಮೌಲ್ಯದ ಒತ್ತುವರಿ ಭೂಮಿ ವಶಪಡಿಸಿಕೊಂಡ ಬಿಬಿಎಂಪಿ

Next Post

ಬೆಂಗಳೂರು : ಸಾರಕ್ಕಿ ಕೆರೆಯ 20 ಕೋಟಿ ರೂ. ಮೌಲ್ಯದ ಒತ್ತುವರಿ ಭೂಮಿ ವಶಪಡಿಸಿಕೊಂಡ ಬಿಬಿಎಂಪಿ

ಸಂಕೀರ್ಣದಿಂದ ಸರಳತೆಯತ್ತ ಹೊರಳುತ್ತಿದೆ ದೇಶದ ಆದಾಯ ತೆರಿಗೆ ಕಾನೂನು : ನೂತನ ಮಸೂದೆ ತೆರಿಗೆದಾರರಿಗೆ ಹೇಗೆ ಅನುಕೂಲ?

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d