Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಡಿಸಿಎಂ ಡಿಕೆ ಶಿವಕುಮಾರ್ ಒಂದು ದಿನದ ವೈಟ್ ಟಾಪಿಂಗ್ ಕಾಮಗಾರಿಗಳ ಪರಿಶೀಲನೆ ಶಾಸ್ತ್ರ = ಮೌಲ್ಯ 1700 ಕೋಟಿ ರೂ.!!

ಗುಂಡಿ ಬಿದ್ದ ರಸ್ತೆ, ಕಳಪೆ ಗುಣಮಟ್ಟದ ತೇಪೆ ಹಾಕಿದ ರೋಡ್, ಟ್ರಾಫಿಕ್ ಜಾಮ್ ಗೆ ಕಾರಣವಾಗುವ ಅರ್ಧಕ್ಕೇ ನಿಂತ ಮೇಲ್ಸೇತುವೆ, ಗ್ರೇಡ್ ಸಪರೇಟರ್ ಕಾಮಗಾರಿಗಳಿನ್ನೂ ಡಿಸಿಎಂ ಕಣ್ಣಿಗೆ ಬಿದ್ದಿಲ್ವಾ? | ಸ್ಯಾಂಪಲ್ ಗೆ 10 ಕಡೆ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಬಿಬಿಎಂಪಿ‌ ಅಧಿಕಾರಿಗಳ ಜೊತೆ ನಡೆದಿತ್ತು ಕಾಮಗಾರಿ ಪರಿಶೀಲನೆ

by Bengaluru Wire Desk
February 16, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.16 www.bengaluruwire.com : ನಗರದಲ್ಲಿ ಹೊಂಡ ಬಿದ್ದ ವಾರ್ಡ್ ರಸ್ತೆ, ಪ್ರಮುಖ ರಸ್ತೆ, ಹೊರವರ್ತುಲ ರಸ್ತೆಗಳಲ್ಲಿ ವಾಹನ ಸವಾರರು ವಾಹನ ಚಲಾಯಿಸುತ್ತಾ ಹೈರಾಣಾಗಿದ್ದಾರೆ. ನಗರದಲ್ಲಿ ಪ್ರಮುಖ ಹೊರವರ್ತುಲ ರಸ್ತೆಗಳಲ್ಲಿ ಗ್ರೇಡ್ ಸಪರೇಟರ್, ಮೇಲ್ಸೇತುವೆ ಕಾಮಗಾರಿ ಕೆಲಸ ಅರ್ಧಕ್ಕೆ ನಿಂತು ಒಂದೂವರೆ ಎರಡು ವರ್ಷಗಳಾಗಿವೆ. ಇದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.

ತೀರ ಹದಗೆಟ್ಟ ರಸ್ತೆಗಳಿಗೆ ಕಾಯಕಲ್ಪ ಕಲ್ಪಿಸುವ, ರಸ್ತೆ ಗುಂಡಿ ಮುಚ್ಚುವ ಕಾರ್ಯ ಬಹುತೇಕ ನಿಂತು ಹೋಗಿದೆ. ಈ ಮಧ್ಯೆ ನಗರಕ್ಕೆ ದುಬಾರಿಯಾಗಿರುವ ವೈಟ್ ಟಾಪಿಂಗ್ ಯೋಜನೆ (White topping project)ಯನ್ನು ನಗರದೆಲ್ಲೆಡೆ ವಿಸ್ತರಿಸುವ ಯೋಜನೆಗೆ ಬಿಬಿಎಂಪಿ ಈಗಾಗಲೇ ಕೈ ಹಾಕಿದೆ. 

ಇನ್ನೊಂದೆಡೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ (Deputy Chief Minister and bangalore Development minister DK Shivakumar) 1700 ಕೋಟಿ ರೂ. ವೆಚ್ಚದ ತೆರಿಗೆದಾರರ ಹಣದಲ್ಲಿ 97 ರಸ್ತೆಗಳಲ್ಲಿ 14 ಪ್ಯಾಕೇಜ್ ಗಳಲ್ಲಿ ನಡೆಯುತ್ತಿರುವ 150 ಕಿ.ಮೀ ಉದ್ದದಲ್ಲಿ ಕೈಗೊಂಡಿರುವ ಯೋಜನೆಯನ್ನು ಕೇವಲ ಇಂದು ಒಂದೇ ದಿನದಲ್ಲಿ ಕೆಲವು ಗಂಟೆಗಳಲ್ಲಿ ಪರಿವೀಕ್ಷಣೆ ಮಾಡುವ ಶಾಸ್ತ್ರ ಮಾಡಿ ಮುಗಿಸಿದ್ದಾರೆ.

ರಾಜಾಜಿನಗರ 10ನೇ ಕ್ರಾಸ್ ನಿಂದ ಆರಂಭವಾದ ಡಿಸಿಎಂ ಡಿಕೆಶಿ ಹಾಗೂ ಬಿಬಿಎಂಪಿ‌ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರಾದ ಮುನೀಷ್ ಮುದ್ಗಿಲ್, ಪಾಲಿಕೆ ಮುಖ್ಯ ಪ್ರಧಾನ ಎಂಜಿನಿಯರ್ ಹಾಗೂ ರಸ್ತೆ ಮೂಲ ಸೌಕರ್ಯ, ಬೃಹತ್ ನೀರುಗಾಲುವೆ ಎರಡೂ ವಿಭಾಗಗಳ ಚೀಫ್ ಎಂಜಿನಿಯರ್ ಕೂಡ ಆಗಿರುವ ಬಿ.ಎಸ್.ಪ್ರಹ್ಲಾದ್ ಅವರ ಟೀಮ್ ಜೊತೆಗೆ ಬಹುತೇಕ ಕಡೆ ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಕಾಂಗ್ರೆಸ್ ಕಾರ್ಪೊರೇಟರ್ ಗಳು, ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಜೊತೆಗೆ ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ ನಡೆಯಿತು.

150 ಉದ್ದದ ಸುದೀರ್ಘ ಮಾರ್ಗದ ವೈಟ್ ಟಾಪಿಂಗ್ ಕಾಮಗಾರಿಯ ಪೈಕಿ ಜನಜಂಗುಳಿಯ ನಡುವೆ ಕೇವಲ ಕೆಲವೇ ಗಂಟೆಗಳಲ್ಲಿ ವಿವಿಧ 10 ಕಡೆಗಳಲ್ಲಿ ಸಾಗಿದ ಡಿಸಿಎಂ, ಕಾಮಗಾರಿ ಗುಣಮಟ್ಟ, ಸ್ಥಳ ಪರೀಕ್ಷೆಯನ್ನು ಮಾಡಿ ಮುಗಿಸಿದ್ದಾರೆ. ಇದೊಂದು ಐವಾಷ್ ನಗರ ಪ್ರದಕ್ಷಿಣೆ ಎಂಬ ಟೀಕೆಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ. 

ಹತ್ತಿರದಲ್ಲೇ ರಾಜ್ಯ ಬಜೆಟ್ ಮಂಡನೆಯಾಗಲಿದೆ, ಯಾವಾಗ ಬೇಕಾದರೂ ಕೋರ್ಟ್ ನಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಸೂಚನೆ ಬರಬಹುದು, ಗ್ರೇಟರ್ ಬೆಂಗಳೂರು ವಿಚಾರವಾಗಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಸಮಿತಿ ಜನರಿಂದ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದಾರೆ.

ಇದೇ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಆದಷ್ಟು ಶೀಘ್ರದಲ್ಲಿ ಕಾಮಗಾರಿ ಮುಗಿಸಿದರೆ ರಾಜ್ಯ ಸರ್ಕಾರದ ಅನುದಾನವಾದ್ದರಿಂದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆದಷ್ಟು ಶೀಘ್ರದಲ್ಲಿ ಆಗಲಿದೆ. ಇದೆಲ್ಲದೆ ಹಲವು “ಲೆಕ್ಕಾಚಾರ”ಗಳನ್ನು ಗಮನದಲ್ಲಿಟ್ಟುಕೊಂಡು ಈ ನಗರ ಪ್ರದಕ್ಷಿಣೆ ಕಾರ್ಯ ನಡೆದಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬಂದಿದೆ.

ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಬಗ್ಗೆ ಭಾನುವಾರ ಪರಿಶೀಲನೆ ನಡೆಸಿದ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, “ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಇಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯ ಎರಡನೇ ಹಂತದಲ್ಲಿ 450 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮಾಡಲಾಗುವುದು. ಈ ಎಲ್ಲಾ ಹಂತಗಳ ಕಾಮಗಾರಿ ಮುಕ್ತಾಯವಾದರೆ ಬೆಂಗಳೂರಿನಲ್ಲಿ ಒಟ್ಟಾರೆ 1,700 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮುಕ್ತಾಯಗೊಳ್ಳಲಿದೆ” ಎಂದು ಅವರು ಹೇಳಿದರು.

“ರಸ್ತೆ ಗುಣಮಟ್ಟ ಪರೀಕ್ಷೆಗೆ ನಾನು ಇಂದು ಭೇಟಿ ನೀಡಿದ್ದೇನೆ. ಪಾದಚಾರಿ ಮಾರ್ಗಗಳನ್ನು ನೋಡಿದ್ದೇನೆ. ಭಾನುವಾರ ವಾಹನ ದಟ್ಟಣೆ ಕಡಿಮೆ ಇರುವ ಕಾರಣ ಇಂದು ಕಾಮಗಾರಿ ಪರಿಶೀಲನೆ ಮಾಡುತ್ತಿದ್ದು, ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದೇನೆ” ಎಂದು ತಿಳಿಸಿದರು. 

“ಇದರ ಜತೆಗೆ ಬೆಂಗಳೂರಿನಾದ್ಯಂತ ಸಂಪೂರ್ಣವಾಗಿ ಮಳೆನೀರುಗಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದೇವೆ. ನಾವು ಒಂದೇ ದಿನದಲ್ಲಿ ಎಲ್ಲಾ ಬದಲಾವಣೆ ಮಾಡುತ್ತೇವೆ ಎಂದು ಹೇಳುವುದಿಲ್ಲ. ಹಂತ ಹಂತವಾಗಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತಿದ್ದೇವೆ” ಎಂದರು.

ಸುದ್ದಿಗಾರರು, ಇಂದು ನೀವೇ ಗುಣಮಟ್ಟ ಪರಿಶೀಲನೆ ಮಾಡಿದ್ದೀರಿ ಎಂದು ಕೇಳಿದಾಗ, “ಈ ಯೋಜನೆಗೆ ಮೀಸಲಿಟ್ಟಿರುವ ₹1700 ಕೋಟಿ ಹಣ ರಸ್ತೆಗೆ ವೆಚ್ಚವಾಗಬೇಕಲ್ಲವೇ? ಈ ರಸ್ತೆ ನಿರ್ದಿಷ್ಟ ಪ್ರಮಾಣದಲ್ಲಿ ದಪ್ಪ ಇರಬೇಕು, ಈ ರಸ್ತೆಗಳಲ್ಲಿ ಬಿಡಬ್ಲೂ ಎಸ್ ಎಸ್ ಬಿ ಕೆಲಸಗಳು ಒಟ್ಟಿಗೆ ಮುಗಿಯಬೇಕು. ಹೀಗಾಗಿ ಪರಿಶೀಲನೆ ಮಾಡಿದ್ದೇನೆ. ಕಾಮಗಾರಿ ಮುಗಿದ ನಂತರವೂ ಗುಣಮಟ್ಟ ಪರಿಶೀಲನೆ ಮಾಡಲಾಗುವುದು. ಎಲ್ಲಾ ಕಡೆಗಳಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ಒಂದು ಕಡೆ ನನಗೆ ಸ್ವಲ್ಪ ವ್ಯತ್ಯಾಸ ಕಂಡುಬಂದಿದೆ. ತಾಂತ್ರಿಕ ತಂಡವನ್ನು ಅಲ್ಲಿಗೆ ಕಳುಹಿಸಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ” ಎಂದು ತಿಳಿಸಿದರು.

ಟನಲ್ ರಸ್ತೆ ಸರಿಯಿಲ್ಲ ಎಂಬ ಕೇಂದ್ರ ರೈಲ್ವೆ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, “ಹಾಗಿದ್ದರೆ ಅವರು ಮಹಾರಾಷ್ಟ್ರದಲ್ಲಿ ಯಾಕೆ ಟನಲ್ ರಸ್ತೆ ಮಾಡಿಸುತ್ತಿದ್ದಾರೆ? ಅವರಿಗೂ ಇದಕ್ಕೂ ಏನು ಸಂಬಂಧ? ಅವರ ಇಲಾಖೆ ಕೆಲಸ ಅವರು ಮಾಡಲಿ” ಎಂದು ತಿಳಿಸಿದರು.

ಬೇಸಿಗೆ ಆರಂಭವಾಗುತ್ತಿದ್ದು, ನೀರಿನ ಅಭಾವ ಎದುರಾಗದಂತೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದಾಗ, “ಬೆಂಗಳೂರಿನಲ್ಲಿ ನೀರಿನ ಅಭಾವ ಎದುರಾಗಬಾರದು ಎಂಬ ಕಾರಣಕ್ಕೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. ಜನರು ಮುಂದೆ ಬಂದು ನೀರಿನ ಸಂಪರ್ಕ ಪಡೆಯಬೇಕು” ಎಂದು ಪ್ರತಿಕ್ರಿಯಿಸಿದರು.

ಪಾಲಿಕೆಯ ಆರ್ ಓ ಘಟಕಗಳು ದುರಸ್ತಿಗೆ ಬಂದಿವೆ ಎಂದು ಮಾಧ್ಯಮದವರು ಪ್ರಶ್ನಿಸಿದಾಗ, “ಎಲ್ಲಾ ಘಟಕಗಳ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

WhatsApp Join our WhatsApp Channel
Previous Post

ನವದೆಹಲಿಯ ರೈಲು ದುರ್ಘಟನೆ ಸಂಭವಿಸಲು ಅಸಲಿಗೆ ಆಗಿದ್ದೇನು?  ತನಿಖಾ ವರದಿ ಏನು ಹೇಳುತ್ತೆ?

Next Post

ಡೈರಿ ವೃತ್ತದಿಂದ ನಾಗವಾರ ಫೇಸ್-2 ಸುರಂಗಮಾರ್ಗ ಸಿವಿಲ್ ಕಾಮಗಾರಿ ಬಹುತೇಕ ಪೂರ್ಣ : ಟನಲ್ ನಿರ್ಮಾಣಕ್ಕೆ 15000 ಸಲ ಬ್ಲಾಸ್ಟಿಂಗ್!!

Next Post

ಡೈರಿ ವೃತ್ತದಿಂದ ನಾಗವಾರ ಫೇಸ್-2 ಸುರಂಗಮಾರ್ಗ ಸಿವಿಲ್ ಕಾಮಗಾರಿ ಬಹುತೇಕ ಪೂರ್ಣ : ಟನಲ್ ನಿರ್ಮಾಣಕ್ಕೆ 15000 ಸಲ ಬ್ಲಾಸ್ಟಿಂಗ್!!

Linemen Recruitment | ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ ಪ್ರಕ್ರಿಯೆ ಪೂರ್ಣ : ಸಚಿವ ಕೆ.ಜೆ.ಜಾರ್ಜ್‌

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group