Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಲಿಂಗಾಯತರನ್ನು ಒಡೆದು ಆಳುವ ಅಜೆಂಡಾ ಇದೆ : ಎಂ ಬಿ ಪಾಟೀಲ ಕಳವಳ

ವಚನ ದರ್ಶನ: ಸತ್ಯ v/s ಮಿಥ್ಯ' ಕೃತಿ ಬಿಡುಗಡೆ ಸಮಾರಂಭದಲ್ಲಿ ಹೇಳಿಕೆ. | ಬೆಂಗಳೂರಿನ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ಟೀಕಗೆ ಚಾಟಿ ಬೀಸಿದ ಸಚಿವರು

by Bengaluru Wire Desk
February 27, 2025
in Bengaluru Focus
Reading Time: 1 min read
0

ಬೆಂಗಳೂರು, ಫೆ.27 www.bengaluruwire.com : ರಾಜ್ಯದಲ್ಲಿ ಲಿಂಗಾಯತರನ್ನು ಒಡೆದು ಆಳುವ ಒಂದು ಅಜೆಂಡಾ ಕೆಲಸ ಸಕ್ರಿಯವಾಗಿ ಮಾಡಲಾತ್ತಿದೆ. ‘ವಚನ ದರ್ಶನ’ ಪುಸ್ತಕವು ಇದರ ಭಾಗವಾಗಿದೆ. ಇದಕ್ಕೆ ಸಮುದಾಯವು ಸಂಘಟಿತವಾಗಿ ಮತ್ತು ಸತ್ಯಪಕ್ಷಪಾತಿಯಾಗಿ ಉತ್ತರಿಸಬೇಕಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯಾಧ್ಯಕ್ಷರೂ ಆದ ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಗುರುವಾರ ಹೇಳಿದ್ದಾರೆ.

ಜಾಗತಿಕ ಲಿಂಗಾಯತ ಮಹಾಸಭಾ, ಅಖಿಲ ಭಾರತ ವೀರಶೈವ ಮಹಾಸಭಾ, ಲಿಂಗಾಯತ ಮಠಾಧೀಶರ ಒಕ್ಕೂಟ ಜಂಟಿಯಾಗಿ ಇಲ್ಲಿನ ಬಸವ ಸಮಿತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ‘ವಚನ ದರ್ಶನ: ಸತ್ಯ v/s ಮಿಥ್ಯ’ ಕೃತಿ ಬಿಡುಗಡೆ ಮಾಡಿದ ನಂತರ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ವಚನಗಳು ಬರದೆ ಇದ್ದಿದ್ದರೆ ಇಂದು ನಾವ್ಯಾರೂ ಇರುತ್ತಿರಲಿಲ್ಲ. ವಚನಗಳ ಬಗೆಗಿನ ಚರ್ಚೆಯನ್ನು ನಾವು ವಿರೋಧಿಸುವುದಿಲ್ಲ. ಆದರೆ ಅದರ ಹಿಂದೆ ಇರುವ ಕೆಟ್ಟ ಅಜೆಂಡಾವನ್ನು ನಾವು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಲಿಂಗಾಯತ ಸ್ವಾಮೀಜಿಗಳು ಮತ್ತು ಮಠಗಳು ಮಾಡಬೇಕಾದ ಕೆಲಸ ಅಗಾಧವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ವಚನಗಳ ಸ್ವೋಪಜ್ಞತೆ (Self Awareness)ಯನ್ನು ವಿರೋಧಿಸುವ ವಚನ ದರ್ಶನ ಪುಸ್ತಕಕ್ಕೆ ಲೇಖನ ಬರೆದಿರುವವರೂ ಲಿಂಗಾಯತರೇ. ಅದರ ಬಿಡುಗಡೆ ಕಾರ್ಯಕ್ರಮಗಳು ನಡೆದಿರುವುದು ಕೂಡ ಲಿಂಗಾಯತರ ಮಠಗಳಲ್ಲೇ. ಆದರೆ ಅದನ್ನು ಬಿಡುಗಡೆ ಮಾಡಿದವರು ಮಾತ್ರ ಲಿಂಗಾಯತರಲ್ಲ. ಇದು ರಾಜ್ಯದಲ್ಲಿ ಸಮುದಾಯದ ಅವಸ್ಥೆಯಾಗಿದೆ ಎಂದು ಅವರು ವಿಷಾದಿಸಿದರು.

ಒಕ್ಕಲಿಗರಲ್ಲಿ 104 ಉಪಪಂಗಡಗಳಿದ್ದರೂ ಅವರಲ್ಲಿ ಒಡಕಿಲ್ಲ. ಆ ಸಮುದಾಯಕ್ಕೆ ಒಬ್ಬರೇ ಸ್ವಾಮೀಜಿ ಮತ್ತು ಒಂದೇ ಅಧಿಕಾರ ಕೇಂದ್ರವಿದೆ. ಆದರೆ ಲಿಂಗಾಯತರು ಉಪಪಂಗಡಗಳ ಕಿತ್ತಾಟದಲ್ಲಿ ಹರಿದು ಹಂಚಿಹೋಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲಿಂಗಾಯತರ ಜನಸಂಖ್ಯೆ 2 ಕೋಟಿಯಷ್ಟಿದೆ. ಆದರೆ ಉಪಪಂಗಡಗಳ ಕಚ್ಚಾಟದಿಂದ ಜಾತಿ ಗಣತಿಯಲ್ಲಿ ನಮ್ಮ‌ ಜನಸಂಖ್ಯೆ 65 ಲಕ್ಷವಷ್ಟೆ ಇದೆ ಎಂದು ಮಾಧ್ಯಮಗಳಲ್ಲಿ ಬರುತ್ತಿದೆ. ಇದಕ್ಕೆ ಮತ್ತೊಂದು ಜಾತಿಗಣತಿ ಉತ್ತರವಲ್ಲ. ಇಡೀ ವೀರಶೈವ ಲಿಂಗಾಯತರೆಲ್ಲ ಒಂದೇ ಶೀರ್ಷಿಕೆಯಡಿ ಬರಬೇಕು.‌ ಆಗ ಮಾತ್ರ ಸಮುದಾಯದ ಯುವಜನರಿಗೆ ಮೀಸಲಾತಿ ಸಿಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ‘ಲಿಂಗಾಯತ ಸಮುದಾಯದಲ್ಲಿ ಉಪಪಂಗಡಗಳ ಮೇಲಾಟ ಕೊನೆಯಾಗದೆ ಇದ್ದರೆ ಉಳಿಗಾಲವಿಲ್ಲ. ಅಂತಹ ಪ್ರಯತ್ನ ಇಂದು ಆರಂಭವಾಗಿದೆಯಷ್ಟೆ. ಸಮುದಾಯದ ಒಳಗೆ ಇರುವ ವ್ಯತ್ಯಾಸಗಳು ಇನ್ನು ಇರಬಾರದು’ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶಿವರುದ್ರ ಮಹಾಸ್ವಾಮೀಜಿ, ಗಂಗಾ ಮಾತಾಜಿ, ಪ್ರಭು ಚನ್ನಬಸವ ಸ್ವಾಮಿಗಳು, ಶಾಮನೂರು ಶಿವಶಂಕರಪ್ಪ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ,
ಸಾಹಿತಿ ಗೊ ರು ಚನ್ನಬಸಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ, ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶಿವಾನಂದ ಜಾಮದಾರ್, ಲೇಖಕ ಟಿ ಆರ್ ಚಂದ್ರಶೇಖರ್, ಪ್ರೊ.ವೀರಭದ್ರಯ್ಯ ಮುಂತಾದವರು ಭಾಗವಹಿಸಿದ್ದರು.

ಸಲಹೆ ಕೊಡಲಿ, ಟೀಕೆ ಬಿಡಲಿ : ಮೋಹನದಾಸ್ ಪೈಗೆ ಕುಟುಕಿದ ಸಚಿವರು

ಇದಕ್ಕೂ ಮುನ್ನ ಸಚಿವ ಎಂ ಬಿ ಪಾಟೀಲ್ ತಮ್ಮ ಸ್ವಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಬೆಂಗಳೂರಿನ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ಅವರ ಹೇಳಿಕೆ ಪ್ರತಿಕ್ರಿಯೆ ನೀಡಿದರು. ಉದ್ಯಮಿ ಮೋಹನದಾಸ್ ಪೈ ಅವರು ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ಕೊಡಲಿ, ಆದರೆ ವಿನಾ ಕಾರಣ ಟೀಕಿಸುವುದನ್ನು ಬಿಡಲಿ. ಪದೇ ಪದೇ ಹೀಗೆ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕುಟುಕಿದ್ದಾರೆ.

‘ಪೈ ಕೂಡ ಬೆಂಗಳೂರಿನಿಂದಲೇ ಲಾಭ ಮಾಡಿಕೊಂಡಿರುವವರು. ಇಲ್ಲಿಂದಲೇ ಎಲ್ಲವನ್ನೂ ಪಡೆದುಕೊಂಡಿರುವವರು. ಈಗ ಅವರು ಇಲ್ಲಿಂದ ಹುಬ್ಬಳ್ಳಿಗಾಗಲಿ, ಮೈಸೂರಿಗಾಗಲಿ ಹೋಗಲು ತಯಾರಿಲ್ಲ’ ಎಂದು ಹರಿಹಾಯ್ದಿದ್ದಾರೆ. ಸಂಚಾರ ದಟ್ಟಣೆ ಬರೀ ಬೆಂಗಳೂರಿನ ಸಮಸ್ಯೆಯಲ್ಲ. ಲಂಡನ್, ಸ್ಯಾನ್ ಫ್ರಾನ್ಸಿಸ್ಕೊ, ಚೆನ್ನೈ ಎಲ್ಲ ಕಡೆಗಳಲ್ಲೂ ಇದೆ. ಈ ಬಗ್ಗೆ ಪೈ ಯಾಕೆ ಮಾತನಾಡುವುದಿಲ್ಲ? ಲಂಡನ್ನಿನಲ್ಲಿ ನಾನೇ ಒಂದೂವರೆ ಮೈಲುದ್ದದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಹದಿನೈದಿಪ್ಪತ್ತು ಮೈಲಿ ಸಂಚಾರ ದಟ್ಟಣೆ ಸೃಷ್ಟಿಯಾಗಿದ್ದಿದೆ ಎಂದು ಅವರು ಉತ್ತರಿಸಿದ್ದಾರೆ.

ಬೆಂಗಳೂರು ‘ಗ್ರೋಯಿಂಗ್ ಸಿಟಿ’ಯ ಜತೆಗೆ ‘ಗ್ಲೋಬಲ್ ಸಿಟಿ’ ಕೂಡ ಆಗಿದೆ. ಹೀಗಾಗಿಯೇ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ. ಮೋದಿ ಸರಕಾರ ಏನು ಮಾಡಿದರೂ ಸರಿ, ಸಿದ್ದರಾಮಯ್ಯ ಸರಕಾರ ಮಾಡಿದ್ದೆಲ್ಲವೂ ತಪ್ಪು ಎನ್ನುವುದಲ್ಲ. ಇಂತಹ ಟೀಕೆಗಳಿಂದ ಪೈ ದೊಡ್ಡ ಮನುಷ್ಯರಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಯಾರೇ ಆಗಲಿ, ಸರಕಾರಕ್ಕೆ ರಚನಾತ್ಮಕ ಸಲಹೆ ಕೊಡಬಹುದು. ಪೈ ಅವರು ನನ್ನನ್ನಗಾಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಗಳನ್ನಾಗಲಿ ಅಥವಾ ಐಟಿ ಸಚಿವರನ್ನೇ ಆಗಲಿ ಕಾಣಬಹುದು. ಇದೇ ಪೈ ಮಳೆಗಾಲದಲ್ಲಿ ಬೆಂಗಳೂರಿನ ಒಂದು ಕಡೆ ಪ್ರವಾಹ ಉಂಟಾದಾಗ ವಾಗ್ದಾಳಿ ಮಾಡಿದ್ದರು. ಆದರೆ ಆಗ ಇಡೀ ಚೆನ್ನೈ ನಗರವೇ ಜಲಾವೃತವಾದರೂ ಜಾಣಮೌನ ವಹಿಸಿದ್ದರು. ಬಿಜೆಪಿ ನಮ್ಮ‌ ಕಾರ್ಯಕ್ರಮಗಳನ್ನೇ ನಕಲು ಮಾಡುತ್ತಿದೆ. ಇದನ್ನು ಕಂಡರೂ ಇವರೇಕೆ ಸುಮ್ಮನಿದ್ದಾರೆ ಎಂದು ಪಾಟೀಲ ನೆನಪಿಸಿದ್ದಾರೆ.

ತೆಲಂಗಾಣಕ್ಕೆ ಕೃಷ್ಣಾ ನೀರು, ತಪ್ಪೇನಿಲ್ಲ ಎಂದು ಸಮರ್ಥನೆ :

ಕುಡಿಯುವ ನೀರಿನ ಉದ್ದೇಶಕ್ಕಾಗಿ ಆಲಮಟ್ಟಿ ಆಣೆಕಟ್ಟೆಯಿಂದ ತೆಲಂಗಾಣಕ್ಕೆ 1.24 ಟಿಎಂಸಿ ಅಡಿ ನೀರನ್ನು ಬಿಟ್ಟಿರುವುದರಲ್ಲಿ ತಪ್ಪೇನೂ‌ ಇಲ್ಲ. ಕೆಲವೊಂದು ವಿಚಾರಗಳನ್ನು ನಾವು ಮಾನವೀಯವಾಗಿ ನೋಡಬೇಕಾಗುತ್ತದೆ ಎಂದು ಸಚಿವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Nature News | ಹೆಸರಘಟ್ಟ ಹುಲ್ಲುಗಾವಲಿನ 5679 ಎಕರೆ ಈಗ ಮೀಸಲು ಪ್ರದೇಶವೆಂದು ಘೋಷಣೆ : ಬೆಂಗಳೂರಿಗರಿಗೆ ಲಾಭ ಅನೇಕ!!

Next Post

ಬಿಎಲ್ ಡಿಸಿ ಸೀಲಿಂಗ್ ಫ್ಯಾನ್ ಬಳಸಿದ್ರೆ ಕರೆಂಟ್ ಬಿಲ್ ಫುಲ್ ಕಡಿಮೆ : ಇಂಧನ ದಕ್ಷತೆಯ ಫ್ಯಾನ್ ಬಿಡುಗಡೆ ಮಾಡಿದ ಬೆಸ್ಕಾಂ

Next Post
ಬಿಎಲ್ ಡಿಸಿ ಸೀಲಿಂಗ್ ಫ್ಯಾನ್ ಬಳಕೆಯಿಂದ ಮಾಸಿಕ ವಿದ್ಯುತ್ ಬಿಲ್ ಕಡಿಮೆಯಾಗಲಿದೆ ಎಂಬುದನ್ನು ತೋರ್ಪಡಿಸುವ ಸಾಂದರ್ಭಿಕ ಚಿತ್ರ.

ಬಿಎಲ್ ಡಿಸಿ ಸೀಲಿಂಗ್ ಫ್ಯಾನ್ ಬಳಸಿದ್ರೆ ಕರೆಂಟ್ ಬಿಲ್ ಫುಲ್ ಕಡಿಮೆ : ಇಂಧನ ದಕ್ಷತೆಯ ಫ್ಯಾನ್ ಬಿಡುಗಡೆ ಮಾಡಿದ ಬೆಸ್ಕಾಂ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ದಾಸರಹಳ್ಳಿ ವಲಯದ IKEA ಟ್ರೇಡ್ ಲೈಸೆನ್ಸ್ : ದಂಡ ಸಮೇತ 65 ಲಕ್ಷ ರೂ. ಶುಲ್ಕ ವಸೂಲಿ ಮಾಡಿದ ಬಿಬಿಎಂಪಿ

Please login to join discussion

Like Us on Facebook

Follow Us on Twitter

Recent News

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group