Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಆಯುಷ್ಮಾನ್ ಭಾರತ್ ಯೋಜನೆಯ ಚಿಕಿತ್ಸಾ ವೆಚ್ಚಗಳ ಪರಿಷ್ಕರಣೆಯಾದರೆ ಶೇ.90 ರಷ್ಟು ಹಣ ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿಯಿದೆ – ಸಚಿವ ದಿನೇಶ್ ಗುಂಡೂರಾವ್

by Bengaluru Wire Desk
March 6, 2025
in Bengaluru Focus, News Wire
Reading Time: 1 min read
0
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸದನದಲ್ಲಿ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆ ಬಗ್ಗೆ ಮಾತನಾಡುತ್ತಿರುವ ಚಿತ್ರ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸದನದಲ್ಲಿ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆ ಬಗ್ಗೆ ಮಾತನಾಡುತ್ತಿರುವ ಚಿತ್ರ.

ಬೆಂಗಳೂರು, ಮಾ.06 www.bengaluruwire.com : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ.90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನ ಸಭೆಯಲ್ಲಿ ಗುರುವಾರ ಶಾಸಕ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಮಾತನಾಡಿದ ಸಚಿವರು, ಕೇಂದ್ರದ ನೀತಿಗಳ ಪ್ರಕಾರ ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರ ಸರ್ಕಾರ ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನವನ್ನು ಒದಗಿಸಬೇಕು. ಆದರೆ ಕರ್ನಾಟಕದಲ್ಲಿ ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆಗೆ ರಾಜ್ಯ ಸರ್ಕಾರವೇ ಶೇ.75 ರಷ್ಟು ಹಣಕಾಸಿನ ನೆರವನ್ನ ಒದಗಿಸುತ್ತಿದೆ ಎಂದರು.

ಕೇಂದ್ರ ಸರ್ಕಾರ ಕೇವಲ ಶೇ 25 ರಷ್ಟು ಅನುದಾನ ನೀಡುತ್ತಿದೆ. ಇನ್ನು ಯೋಜನೆಯಡಿ ಚಿಕಿತ್ಸಾ ವೆಚ್ಚಗಳು 2018 ರಿಂದ ಪರಿಷ್ಕರಣೆ ಆಗಿಲ್ಲ.‌ ಪರಿಷ್ಕರಣೆಗೆ ಮುಂದಾದರೆ ಯೋಜನೆಗೆ ರಾಜ್ಯ ಸರ್ಕಾರವೇ ಶೇ.90 ರಷ್ಟು ಅನುದಾನ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಕೇಂದ್ರ ಸರ್ಕಾರದ ಅನುದಾನದ ಪಾಲು ಶೇ 10 ಕ್ಕೆ ಬಂದು ನಿಲ್ಲಲಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ವಯೋ ವಂದನ ಯೋಜನೆ ಬಗ್ಗೆ ಕೇಂದ್ರ ಮೌನ :

70 ವರ್ಷ ಮೇಲ್ಪಟ್ಟವರಿಗೆ ವಯೋ ವಂದನ ಯೋಜನೆ ಅನುಷ್ಠಾನ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯೋಜನೆ ಅನುಷ್ಠಾನಕ್ಕೆ 68 ಕೋಟಿ ಅಗತ್ಯತೆ ಇದ್ದು, ಶೇ 60 ರಷ್ಟು ಹಣಕಾಸನ್ನ ಕೇಂದ್ರ ಸರ್ಕಾರ ಭರಿಸಬೇಕಾಗುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಅನುದಾನ ಹಂಚಿಕೆ ಬಗ್ಗೆ ರಾಜ್ಯ ಸ್ಪಷ್ಟನೆ ಕೇಳಿದೆ. ಆದರೆ ಇಲ್ಲಿಯ ತನಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನದ ಪಾಲುದಾರಿಕೆ ಬಗ್ಗೆ ಉತ್ತರಿಸಿಲ್ಲ. ಆದರೆ ಈಗಾಗಲೇ ರಾಜ್ಯ ಸರ್ಕಾರ 1 ಕೋಟಿ 12 ಲಕ್ಷ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನ ಒದಗಿಸಿಕೊಟ್ಟಿದೆ. ಆದರೆ ಇದರಲ್ಲಿ ಕೇಂದ್ರ ಸರ್ಕಾರ 68 ಲಕ್ಷ ಜನರನ್ನು ಮಾತ್ರ ಆಯುಷ್ಮಾನ್ ಭಾರತ್ ಯೋಜನೆಯಡಿ ಪರಿಗಣಿಸುತ್ತಿದೆ.

ರಾಜ್ಯ ಸರ್ಕಾರ 1 ಕೋಟಿ 12 ಲಕ್ಷ ಜನರನ್ನ ಯೋಜನೆಯ ವ್ಯಾಪ್ತಿಗೆ ಒಳಪಡಿಸಿರುವುದರಿಂದ ಬಹುತೇಕ 70 ವರ್ಷ ಮೇಲ್ಪಟ್ಟವರು ಯೋಜನೆಯ ಅಡಿ ಫಲಾನುಭವಿಗಳಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ಸ್ಪಷ್ಟಪಡಿಸಿದರು. ಅಲ್ಲದೇ ಎಪಿಎಲ್ (APL) ಕಾರ್ಡ್ ಹೊಂದಿದವರಿಗೂ ರಾಜ್ಯ ಸರ್ಕಾರ ಯೋಜನೆಯಡಿ ಶೇ.30 ರಷ್ಟು ಚಿಕಿತ್ಸಾ ವೆಚ್ಚಗಳನ್ನು ಭರಿಸುತ್ತಿದೆ. ಪ್ರತ್ಯೇಕವಾಗಿ 70 ವರ್ಷ ಮೇಲ್ಪಟ್ಟವರಿಗೆ ವಯೋ ವಂದನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಅನುದಾನದ ಕುರಿತು ಸ್ಪಷ್ಟನೆ ಬಂದ ಬಳಿಕ ಜಾರಿಗೆ ತರಲಾಗುವುದು ಎಂದು ಸದನಕ್ಕೆ ತಿಳಿಸಿದರು. ಆಯುಷ್ಮಾನ್ ಭಾರತ್ ಯೋಜನೆ ವಿಚಾರದಲ್ಲಿ ನೈಜವಾಗಿ ಹೆಚ್ಚಿನ ಅನುದಾನ ರಾಜ್ಯ ಸರ್ಕಾರ ಒದಗಿಸುತ್ತಿದೆ. ಈ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ತಂದು ಚಿಕಿತ್ಸಾ ವೆಚ್ಚಗಳ ಪರಿಷ್ಕರಣೆಗೆ ಒತ್ತಾಯಿಸಬೇಕು. ರಾಜ್ಯ ಸರ್ಕಾರದಿಂದ ಈ ಪ್ರಯತ್ನ ನಡೆಯುತ್ತಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

WhatsApp Join our WhatsApp Channel
Previous Post

KSRTC News | ಕೆ ಎಸ್ ಆರ್ ಟಿ ಸಿ ಪ್ರಯಾಣಿಕ ಸ್ನೇಹಿ ಉಪಕ್ರಮಗಳ ಬಗ್ಗೆ ಫಿದಾ ಆದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ…!!

Next Post

‘ಆಧುನಿಕ ಯುಗದ ಯುವ ಜನರಲ್ಲಿ ಜನಪದ ಕಲೆ ಜೀವಂತ’ : ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ

Next Post
ಬೆಂಗಳೂರಿನ ವಿಜಯನಗರ ಪ್ರಥಮ ದರ್ಜೆ ಕಾಲೇಜಿನಿಲ್ಲಿ ಗುರುವಾರ ಆಯೋಜಿಸಿದ್ದ ಜಾನಪದ ಉತ್ಸವ 2025 ‘ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ’ ಕಾರ್ಯಕ್ರಮವನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಮಂಜುಶ್ರೀ ಉದ್ಘಾಟಿಸಿದರು.  ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

'ಆಧುನಿಕ ಯುಗದ ಯುವ ಜನರಲ್ಲಿ ಜನಪದ ಕಲೆ ಜೀವಂತ' : ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ

ಹಕ್ಕಿಜ್ವರದ ಸಾಂದರ್ಭಿಕ ಚಿತ್ರ.

Bangalore News | Bird Flu | ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಪ್ರಕರಣಗಳ ನಿಯಂತ್ರಣ, ರೋಗ ಪತ್ತೆ ಹಚ್ಚುವ ಸಮೀಕ್ಷಾ ಕಾರ್ಯ ಕೈಗೊಳ್ಳಲು ಆರೋಗ್ಯ ಸಿಬ್ಬಂದಿಗೆ ಸೂಚನೆ

Please login to join discussion

Like Us on Facebook

Follow Us on Twitter

Recent News

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group