Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | ಬೆಂಗಳೂರಲ್ಲಿ ಕಟ್ಟಡದ ಒಳಗಿನ ಪಾರ್ಕಿಂಗ್ ಟ್ಯಾಕ್ಸ್ ಲೆಕ್ಕಾಚಾರ : ರಿಯಲ್ ಎಸ್ಟೇಟ್ ಕುಳಗಳಿಗೆ ಭಾರೀ ಅನುಕೂಲ – ಸಾಮಾನ್ಯರಿಗೆ ಬರೆ ; ಅಸಲಿಯತ್ತೇನು?

ನಗರಾಭಿವೃದ್ಧಿ ಇಲಾಖೆ 21-10-2024 ಆದೇಶ ಹಾಗೂ ಬಿಬಿಎಂಪಿಯ ಕರಡು ಅಧಿಸೂಚನೆಯಲ್ಲಿದೆ ದೊಡ್ಡ ಮಟ್ಟದ ಲೆಕ್ಕಾಚಾರ | ಒಟ್ಟಾರೆ ಬಿಬಿಎಂಪಿಯಲ್ಲಿ ಸಂಗ್ರಹವಾಗುವ ಆಸ್ತಿ ತೆರಿಗೆ ಮೊತ್ತದಲ್ಲಿ ಪಾರ್ಕಿಂಗ್ ತೆರಿಗೆ ಮೊತ್ತ ಕಡಿಮೆಯಾಗಿ ಪಾಲಿಕೆಗೆ ನಷ್ಟವಾಗುವ ಸಾಧ್ಯತೆ.

by Bengaluru Wire Desk
April 2, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಏ.02 www.bengaluruwire.com : ನಗರದ ಪಾಲಿಕೆ ವ್ಯಾಪ್ತಿಯಲ್ಲಿ ವಸತಿ ಕಟ್ಟಡ ಅಥವಾ ವಾಣಿಜ್ಯ ಕಟ್ಟಡದ ವಾಹನ ನಿಲ್ದಾಣ (Parking)ಕ್ಕೆ ಅನ್ವಯಿಸುವ ತೆರಿಗೆಯನ್ನು ಪ್ರದೇಶವಾರು ಯೂನಿಟ್ ದರದಲ್ಲಿ ನಿರ್ಧರಿಸಲು ಬಿಬಿಎಂಪಿ ಮಾ.29ರಂದು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಇದರಿಂದ ಪಾರ್ಕಿಂಗ್ ಇರುವ ಮನೆಗಳಿಗೆ ತೆರಿಗೆ ಬರೆ ಹಾಗೂ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದೆ.

ಟೆಕ್ ಪಾರ್ಕ್, ಮಾಲ್, ಆಸ್ಪತ್ರೆ, ಬಹುಮಹಡಿ ಕಟ್ಟಡಗಳಿಗೆ ಹಾಗೂ ಬಹುಮಹಡಿ ವಾಹನ ನಿಲ್ದಾಣದ ಕಟ್ಟಡಗಳಿಗೆ 21-10-2024 ರ ನಗರಾಭಿವೃದ್ಧಿ ಇಲಾಖೆಯ ಆದೇಶ ಹಾಗೂ 29-03-2025 ಬಿಬಿಎಂಪಿ ಕರಡು ಅಧಿಸೂಚನೆಯ (ದಿನಾಂಕ ಹಾಕುವ ಕಡೆ 2025ರ ಇಸವಿಯ ಬದಲಿಗೆ ಕಣ್ತಪ್ಪಿನಿಂದ 2024ನೇ ಇಸವಿ ಎಂದು ಪ್ರಕಟಿಸಿದೆ) ಪ್ರಕಾರ ಅನುಕೂಲ ಕಲ್ಪಿಸಲಿದೆ.  ಹಾಲಿ ಆಸ್ತಿ ತೆರಿಗೆಯೊಂದಿಗೆ ಕಟ್ಟುವ ವಾಹನ ನಿಲ್ದಾಣ ತೆರಿಗೆ ನಿಯಮಾವಳಿ ಪ್ರಕಾರ ಸ್ವತ್ತಿನ ಪಾರ್ಕಿಂಗ್ ಮೀಸಲಿಟ್ಟ ಒಟ್ಟಾರೆ ಸ್ಥಳಕ್ಕೆ ಲೆಕ್ಕಾಚಾರ ಮಾಡಲಾಗುತ್ತಿತ್ತು. 

ನಗರಾಭಿವೃದ್ಧಿ ಇಲಾಖೆಯ ಆದೇಶ.

ಆದರೆ ಈಗಿನ ಹೊಸ ಕರಡು ಅಧಿಸೂಚನೆ ಪ್ರಕಾರ ಪಾರ್ಕಿಂಗ್ ಸ್ಲಾಟ್ ಗೆ ಮಾತ್ರ ಪಾರ್ಕಿಂಗ್ ತೆರಿಗೆ ಅನ್ವಯವಾಗುತ್ತದೆ. ಇದರಿಂದ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡ, ಮಾಲ್, ಟೆಕ್ ಪಾರ್ಕ್ ಗಳಿಗೆ ಮಾತ್ರ ಬೃಹತ್ ಪ್ರಮಾಣದಲ್ಲಿ ಅನುಕೂಲವಾಗಲಿದೆ. ಇದರಿಂದ ಪಾಲಿಕೆಗೆ ಒಟ್ಟಾರೆ ಆಸ್ತಿ ತೆರಿಗೆಯಲ್ಲಿ ವಾಹನ ನಿಲ್ದಾಣಕ್ಕೆ ಅನ್ವಯಿಸುವ ಸ್ಥಳದ ಆದಾಯ ಕನಿಷ್ಠ 50 ರಿಂದ 100 ಕೋಟಿ ರೂ. ಕಡಿಮೆಯಾಗಲಿದೆ ಎನ್ನಲಾಗಿದೆ.

ವಸತಿ ಮತ್ತು ವಸತಿಯೇತರ ವಾಹನ ಪಾರ್ಕಿಂಗ್ ಬಗ್ಗೆ ನಗರಾಭಿವೃದ್ಧಿ ಇಲಾಖೆಯು 21-10-2024 ರಲ್ಲಿ ಮುಖ್ಯ ಆಯುಕ್ತರಿಗೆ ನೀಡಿದ ಆದೇಶದ ಪ್ರಕಾರ ಈ ನಿರ್ಧಾರದಿಂದ ಹೆಚ್ಚಿನ ಉಪಯೋಗ ಬೃಹತ್‌ ವಸತಿ/ವಸತಿಯೇತರ ಸಮುಚ್ಛಯಗಳಿಗೆ ಅನ್ವಯಿಸುವ ಆಸ್ತಿತೆರಿಗೆಯಲ್ಲಿ ಅಂದರೆ ದೊಡ್ಡ ದೊಡ್ಡ ಬಿಲ್ಡರ್ ಗಳಿಗೆ, ದೊಡ್ಡ ಮಾಲ್ ಗಳಿಗೆ ಭಾರಿ ಉಳಿತಾಯವಾಗುತ್ತದೆ.

ಮುಂದುವರೆದು, ಆದೇಶದಲ್ಲಿರುವಂತೆ ಕೇವಲ ವಾಹನ ನಿಲ್ದಾಣಕ್ಕೆ ಬಳಸಲಾಗುವ ಅಳತೆಗಷ್ಟೇ ಆಸ್ತಿತೆರಿಗೆ ಅನ್ವಯಿಸುತ್ತದೆ. ಇನ್ನುಳಿದ ಪ್ರದೇಶಗಳಾದ ಇಳಿಜಾರು (Ramp), ವಾಹನಮಾರ್ಗ (Driveway) ಪ್ರದೇಶಗಳಿಗೆ ಆಸ್ತಿತೆರಿಗೆ ವಿಧಿಸುವಂತಿಲ್ಲ. ಇದರಿಂದಾಗಿ, ಪಾಲಿಕೆಗೆ ಬರಬೇಕಾದ ಆಸ್ತಿತೆರಿಗೆ ಮೊತ್ತದಲ್ಲಿ ಭಾರಿ ಇಳಿಕೆಯಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯಪತ್ರದಲ್ಲಿ ಬಿಬಿಎಂಪಿ ಕರಡು ಅಧಿಸೂಚನೆ ದಿನಾಂಕ ಪ್ರಕಟಣೆಯಲ್ಲಿ 2025ರ ಬದಲಿಗೆ 2024 ರ ಇಸವಿ ಎಂದು ಕಣ್ತಪ್ಪಿನಿಂದ ಪ್ರಕಟವಾಗಿದೆ.

ಉದಾಹರಣೆಗೆ, ಪಾಲಿಕೆ ವ್ಯಾಪ್ತಿಯಲ್ಲಿನ ಒಂದು ಬಹುಮಹಡಿ ವಾಹನ ನಿಲ್ದಾಣದ ಕಟ್ಟಡ (Multi Level Car Parking building)ದಲ್ಲಿ ಒಟ್ಟು 1614 ವಾಹನ ನಿಲ್ದಾಣಗಳಿಗೆ ಸ್ವಾಧೀನಾನುಭವ ಪತ್ರದಲ್ಲಿ ಅನುಮತಿ ನೀಡಲಾಗಿರುತ್ತದೆ. ಕಟ್ಟಡದ ಒಟ್ಟು ಅಳತೆ 9.5 ಲಕ್ಷ ಚದರ ಅಡಿಗಳಿದ್ದರೂ ವಾಹನ ನಿಲ್ದಾಣಕ್ಕೆ ಬಳಸುವ ಅಳತೆಯು ಕಟ್ಟಡ ನಿರ್ಮಾಣ ಉಪವಿಧಿಗಳನ್ವಯ ಅಂದಾಜು 150 ಅಡಿಗಳಷ್ಟು ಎಂದಾದರೆ ಈ ಆದೇಶದಂತೆ ಒಟ್ಟು ವಾಹನ ನಿಲ್ದಾಣಕ್ಕೆ ಆಸ್ತಿತೆರಿಗೆ ಒಳಪಡುವ ಅಳತೆಯು 2.42 ಲಕ್ಷ ಚದರ ಅಡಿಗಳಾಗುತ್ತದೆ. ಇದು ಕೇವಲ ಒಂದು ಕಟ್ಟಡದ ಅಂಕಿ ಸಂಖ್ಯೆಯಾದರೆ ಪಾಲಿಕೆ ವ್ಯಾಪ್ತಿಯ ಎಲ್ಲಾ ಕಟ್ಟಡಗಳಲ್ಲಿ ಪಾಲಿಕೆಗೆ ಪಾವತಿಸಬೇಕಾದ ಆಸ್ತಿತೆರಿಗೆಯಲ್ಲಿ ಭಾತಿ ವ್ಯತ್ಯಾಸವಾಗುತ್ತದೆ.

ವಸತಿ ಮತ್ತು ವಸತಿಯೇತರ ಪ್ರದೇಶಗಳ ಪಾರ್ಕಿಂಗ್ ಸ್ಥಳಗಳ ಆಸ್ತಿ ತೆರಿಗೆ ಪರಿಷ್ಕರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾ.29ರಂದು ಕರಡು ಅಧಿಸೂಚನೆ ಹೊರಡಿಸಿದೆ ಮತ್ತು ಈ ಅಧಿಸೂಚನೆ ಪ್ರಕಟವಾದ ಏಳು ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.

ಅಧಿಸೂಚನೆಯ ಪ್ರಕಾರ, ವಸತಿ ಉದ್ದೇಶದ ಕನಿಷ್ಠ 150 ಚದರ ಅಡಿ ಪಾರ್ಕಿಂಗ್ ಸ್ಥಳಕ್ಕೆ ವಾರ್ಷಿಕ 600 ರೂಪಾಯಿ ವಾಹನ ನಿಲ್ದಾಣ ತೆರಿಗೆ(ಆರಂಭಿಕ ದರ) ಚದರ ಅಡಿಗೆ 2 ರೂ. ವಿಧಿಸಲು ನಿರ್ಧರಿಸಲಾಗಿದೆ. ವಾಣಿಜ್ಯ ಅಥವಾ ವಸತಿಯೇತರ ಉದ್ದೇಶದ ಕನಿಷ್ಠ 150 ಚದರ ಅಡಿ ಪಾರ್ಕಿಂಗ್ ಸ್ಥಳಕ್ಕೆ ವಾರ್ಷಿಕ 1,125 ರೂ. ಪಾರ್ಕಿಂಗ್ ತೆರಿಗೆ(ಆರಂಭಿಕ ದರ) ಚದರ ಅಡಿಗೆ 3 ರೂ. ಸಂಗ್ರಹಿಸಲು ಬಿಬಿಎಂಪಿ ನಿರ್ಧರಿಸಿದೆ.

ಈ ಹಿಂದೆ ಪಾರ್ಕಿಂಗ್ ಪ್ರದೇಶಗಳ ತೆರಿಗೆ ದರಗಳು ವಲಯವಾರು ಲೆಕ್ಕಾಚಾರವನ್ನು ಆಧರಿಸಿದ್ದವು ಮತ್ತು ಇದು ಅಸಮಾನತೆಗೆ ಕಾರಣವಾಗಿ ಪಾರ್ಕಿಂಗ್ ಸ್ಥಳಗಳ ಮೇಲೆ ಸುಮಾರು ಶೇ. 50 ರಷ್ಟು ತೆರಿಗೆ ಪಾವತಿಸಬೇಕಾಗಿತ್ತು. ಈಗ ಏಕರೂಪ ಮತ್ತು ಪ್ರಮಾಣೀಕೃತ ವ್ಯವಸ್ಥೆಯನ್ನು ತರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಸ್ತುತ ನಿಯಮದ ಪ್ರಕಾರ, ವಲಯಗಳ ಆಧಾರದ ಮೇಲೆ ವಾಹನ ಪಾರ್ಕಿಂಗ್ ಸ್ಥಳಕ್ಕೆ ತೆರಿಗೆ ವಿಧಿಸಲಾಗುತ್ತಿದ್ದು, ವಲಯ ಎ ಯಲ್ಲಿ ವಾರ್ಷಿಕವಾಗಿ 1,875 ರೂಪಾಯಿ ತೆರಿಗೆ ಇದ್ದರೆ, ವಲಯ ಎಫ್‌ನಲ್ಲಿ 750 ರೂಪಾಯಿ ಇತ್ತು. ಆದರೆ, ಮಾಲ್‌ಗಳಿಗೆ ಇದು ತುಂಬಾ ಹೆಚ್ಚಿತ್ತು. ಮಾಲ್‌ಗಳು ಪ್ರತಿ ವಾಹನ ನಿಲುಗಡೆಗೆ 8 ರೂಪಾಯಿ ತೆರಿಗೆ ಕಟ್ಟುತ್ತಿದ್ದವು. ಈಗ ಅದು 3 ರೂಪಾಯಿಗೆ ಇಳಿಯುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಬಿಎಂಪಿಯ ಉನ್ನತ ಕಂದಾಯ ಅಧಿಕಾರಿಗಳ ಪ್ರಕಾರ, ಪಾರ್ಕಿಂಗ್ ಪ್ರದೇಶಗಳಿಗೆ ಏಕರೂಪ ಮತ್ತು ಪ್ರಮಾಣೀಕೃತ ತೆರಿಗೆ ವ್ಯವಸ್ಥೆ ತರಲಾಗುತ್ತಿದೆ ಎಂದು ಬಿಬಿಎಂಪಿ ಸಮರ್ಥಿಸಿಕೊಂಡಿದೆ. ವಸತಿ‌ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಥಳದ ಪ್ರತಿ ಚದರಡಿಗೆ 2ರೂ. ಹಾಗೂ ವಾಣಿಜ್ಯ ಕಟ್ಟಡದ ಪಾರ್ಕಿಂಗ್ ಸ್ಥಳದ ಪ್ರತಿ ಚದರಡಿಗೆ 3 ರೂ. ದರ ನಿಗದಿ ಹೇಗೆ ವೈಜ್ಞಾನಿಕವಾಗಿ ವಿಧಿಸಲಾಗಿದೆ ಎಂಬ ಬಗ್ಗೆ ಕರಡು ಅಧಿಸೂಚನೆಯಲ್ಲಾಗಲಿ, ನಗರಾಭಿವೃದ್ಧಿ ಇಲಾಖೆ ಈ ಹಿಂದೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೀಡಿದ ಆದೇಶದಲ್ಲಿ ಎಲ್ಲಿಯೂ ತಿಳಿಸಿರುವುದಿಲ್ಲ. ಇದರಿಂದಾಗಿ ನಗರಾಭಿವೃದ್ಧಿ ಇಲಾಖೆಯ ಆದೇಶ ಹಾಗೂ ಬಿಬಿಎಂಪಿಯ ಕರಡು ಅಧಿಸೂಚನೆ ಎರಡೂ ಗೊಂದಲಕಾರಿಯಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಯೂನಿಟ್ ದರ ಲೆಕ್ಕಾಚಾರಕ್ಕೆ ಸರ್ಕಾರದ ಮುದ್ರಾಂಕ ಹಾಗೂ ನೋಂದಣಿ ಇಲಾಖೆಯಿಂದ ಹೊರಡಿಸಲಾಗಿರುವ ಮಾರ್ಗಸೂಚಿ ದರ ಅನ್ವವಾಗುತ್ತದೆ. ಆದರೆ ಪಾಲಿಕೆ ಹೊರಡಿಸಿದ ಪಾರ್ಕಿಂಗ್ ಲೆಕ್ಕಾಚಾರಕ್ಕೆ 2 ಅಥವಾ 3 ರೂ.‌ ಯೂನಿಟ್ ದರ ವಿಧಿಸುವುದಕ್ಕೆ ಯಾವುದೇ ತಳಹದಿ ಎಂಬುದೇ ಇಲ್ಲ.

WhatsApp Join our WhatsApp Channel
Previous Post

ISRO | ಇಸ್ರೋ : ಸಿಡಿಲು ಹೊಡೆಯುವ 2.5 ಗಂಟೆ ಮುನ್ನವೇ ಮಿಂಚಿನ ಮುನ್ಸೂಚನೆ ನೀಡುವ ತಂತ್ರಜ್ಞಾನ ಅಭಿವೃದ್ಧಿ 

Next Post

ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ : ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ : ಡಿಸಿಎಂ ಡಿ.ಕೆ. ಶಿವಕುಮಾರ್

Karnataka Bhavan-1 Building New Delhi

Karnataka Bhavan-1 | ನವದೆಹಲಿಯಲ್ಲಿ ಕರ್ನಾಟಕ ಭವನ-1 ನೂತನ ಕಟ್ಟಡ ಲೋಕಾರ್ಪಣೆ : ಈ ಕಟ್ಟಡದ ವಿಶೇಷತೆಗಳೇನು?

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group