Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | Bangalore Lakes | ಬತ್ತಿ ಹೋಗುತ್ತಿವೆ ಬೆಂಗಳೂರಿನ ಕೆರೆಗಳು : ಪ್ರಸ್ತುತ ಶೇ.34 ರಷ್ಟು ಮಾತ್ರ ನೀರು ಸಂಗ್ರಹ ; ಎಲ್ಲೆಲ್ಲಿ ಕೆರೆಗಳು ಬರಿದಾಗಿವೆ?

ಕೆರೆಗಳ ಜೀವ ಜಲಕ್ಕೆ ತಾತ್ವಾರ : ಜಲಚರ, ಬಾನಾಡಿಗಳಿಗೆ ನೀರಿನ ಕೊರತೆ | ನಗರದ ಹಲವು ಪ್ರದೇಶಗಳಲ್ಲಿ ಪಾತಾಳಕ್ಕಿಳಿದ ಅಂತರ್ಜಲ ಮಟ್ಟ | ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

by Bengaluru Wire Desk
April 7, 2025
in Bengaluru Focus, BW Special, Public interest
Reading Time: 2 mins read
0

ಬೆಂಗಳೂರು, ಏ.07 www.bengaluruwire.com : ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿ (Summer Heat)ನ ತಾಪಕ್ಕೆ ಈಗಾಗಲೇ ಬಿಬಿಎಂಪಿ (BBMP) ಸುಪರ್ದಿಯಲ್ಲಿರುವ 183 ಕೆರೆಗಳ (Lakes) ಪೈಕಿ 53 ಕೆರೆಗಳಲ್ಲಿ ನೀರಿನ ಪಸೆ (53 Lakes Dried)ಯೇ ಇಲ್ಲದೆ ಸಂಪೂರ್ಣವಾಗಿ ಬರಿದಾಗಿದೆ.

ಪಾಲಿಕೆಯ ಅಧಿಕೃತ ಮೂಲಗಳ ಪ್ರಕಾರ ಏ.05ರ ಮಾಹಿತಿಯಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ 183 ಕೆರೆಗಳ ನೀರು ಹಿಡಿದಿಡುವ ಒಟ್ಟಾರೆ ಸಾಮರ್ಥ್ಯದ ಪ್ರಮಾಣ 31,505.48 ದಶಲಕ್ಷ ಲೀಟರ್ ಗಳಾಗಿದ್ದರೆ ಪ್ರಸ್ತುತ ಆ ಕೆರೆಗಳಲ್ಲಿ 10,980.01 ದ.ಲ.ಲೀಟರ್ ನೀರು ಮಾತ್ರ ಸಂಗ್ರಹವಿದೆ. ಅಂದರೆ ಕೆರೆಗಳ ನೀರಿನ ಸಂಗ್ರಹ ಸಾಮರ್ಥ್ಯದ ಶೇ.34.85ರಷ್ಟು ಮಾತ್ರ ಜೀವ ಜಲವಿದೆ. 

ಬಹುತೇಕ ಬತ್ತಿ ಹೋಗಿರುವ ಉಲ್ಲಾಳ ಕೆರೆಯಲ್ಲಿ ನವಿಲುಗಳು ಆಹಾರಕ್ಕಾಗಿ ಹುಡುಕಾಟ ನಡೆಸುತ್ತಿರುವುದು.

148 ಎಕರೆ ವಿಸ್ತೀರ್ಣದ ಹುಳಿಮಾವು ಕೆರೆ, 66 ಎಕರೆ ವಿಸ್ತೀರ್ಣದ ಸಿಂಗಪುರ ಕೆರೆ, 59 ಎಕರೆಯಷ್ಟು ವಿಶಾಲವಾದ ಹೊಸಕೆರೆಹಳ್ಳಿ ಕೆರೆ, ಉಲ್ಲಾಳ ಕೆರೆ ಸೇರಿದಂತೆ ಹಲವು ಕೆರೆಗಳು ಒಣಗಿವೆ. ಏಪ್ರಿಲ್ ಮೊದಲ ವಾರದಲ್ಲೇ ಈ ಪರಿ ಕೆರೆಯು ಬರಿದಾಗಿದ್ದರೆ, ಮೇ ತಿಂಗಳ ಅಂತ್ಯದ ವೇಳೆಗೆ ಕೆರೆಯಲ್ಲಿ ನೀರಿನ ಪ್ರಮಾಣ ಮತ್ತಷ್ಟು ಕುಸಿತವಾಗಲಿದೆ. ನೀರಿನ ಸಂಗ್ರಹ ಕಡಿಮೆಯಾದ ಪರಿಣಾಮ ಜಲಮೂಲಗಳ ಅಸುಪಾಸಿನಲ್ಲಿರುವ ಪ್ರದೇಶಗಳ ನಗರದ ಅಂತರ್ಜಲ ಪ್ರಮಾಣ ಈಗಾಗಲೇ ಕಡಿಮೆಯಾಗಿದ್ದು ಮತ್ತಷ್ಟು ಇಳಿಕೆಯಾಗಲಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿನ 183 ಕೆರೆಗಳ ಪೈಕಿ ಬಿಡಬ್ಲ್ಯುಎಸ್ ಎಸ್ ಬಿ ಹಾಗೂ ಪಾಲಿಕೆಯು ವಿವಿಧ ಸಾಮರ್ಥ್ಯದ 28 ತ್ಯಾಜ್ಯ ನೀರು ಸಂಸ್ಕರಣಾ ಘಟಕ (Sewage treatment plant – STP) ಅಳವಡಿಸಿದ್ದರೆ, 12 ಕೆರೆಗಳಲ್ಲಿ ಎಸ್ ಟಿಪಿ ಅಳವಡಿಸಿರುವ ಹಾಗೂ ಅಳವಡಿಕೆ ಕಾರ್ಯ ನಡೆಯುತ್ತಿದೆ. ಉಳಿದಂತೆ ನೂರಾರು ಕೆರೆಗಳಲ್ಲಿ ಕೊಳಚೆ ನೀರು ಸಂಗ್ರಹವಾಗಿ ಸುತ್ತಮುತ್ತಲ ಸ್ಥಳಗಳ ನೈಮರ್ಲ್ಯತೆಯನ್ನು ಹದಗೆಡಿಸಿದೆ. ಬೆಂಗಳೂರಿನ ಐತಿಹಾಸಿಕ ಕೆರೆ ಕೆಂಪಾಂಬುದಿಯಲ್ಲಿ ಅಳವಡಿಸಿರುವ ಎಸ್ ಟಿಪಿ ಕಾರ್ಯನಿರ್ವಹಿಸದೆ ಆ ಕೆರೆಯಲ್ಲಿ ಶುದ್ಧ ನೀರು ಸಂಗ್ರಹ ಎಂಬುದು ಮರೀಚಿಕೆಯಾಗಿದೆ.

ಬೆಂಗಳೂರಿನ ಕೆರೆಯೊಂದು ನೀರಿಲ್ಲದೆ ಬರಿದಾಗಿರುವ ಸಾಂದರ್ಭಿಕ ಚಿತ್ರ.

ಬೆಂಗಳೂರಿನಲ್ಲಿ ವಲಯವಾರು ಕೆರೆಗಳ ಪರಿಸ್ಥಿತಿ ಹೇಗಿದೆ? ಇಲ್ಲಿದೆ ವಿವರ :

ಮಹದೇವಪುರ ವಲಯ :

ಮಹದೇವಪುರ ವಲಯದಲ್ಲಿ ಒಟ್ಟು 50 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 9493.35 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 2110.43 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 19 ಕೆರೆಗಳು ಸಂಪೂರ್ಣ ಬರಿದಾಗಿದೆ.

ಯಲಹಂಕ ವಲಯ :

ಯಲಹಂಕ ವಲಯದಲ್ಲಿ ಒಟ್ಟು 27 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 9214.08 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 4276.61 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 12 ಕೆರೆಗಳು ಸಂಪೂರ್ಣ ಬರಿದಾಗಿದೆ.

ಬೊಮ್ಮನಹಳ್ಳಿ ವಲಯ :

ಬೊಮ್ಮನಹಳ್ಳಿ ವಲಯದಲ್ಲಿ ಒಟ್ಟು 44 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 4882 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 2725.10 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 2 ಕೆರೆಗಳು ಸಂಪೂರ್ಣ ಬರಿದಾಗಿದೆ.

ರಾಜರಾಜೇಶ್ವರಿ ನಗರ ವಲಯ :

ರಾಜರಾಜೇಶ್ವರಿ ನಗರ ವಲಯದಲ್ಲಿ ಒಟ್ಟು 33 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 3032.31 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 393.59 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 12 ಕೆರೆಗಳು ಸಂಪೂರ್ಣ ಬರಿದಾಗಿದೆ.

ದಾಸರಹಳ್ಳಿ ವಲಯ :

ದಾಸರಹಳ್ಳಿ ವಲಯದಲ್ಲಿ ಒಟ್ಟು 12 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 1740.31 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 140.62 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 6 ಕೆರೆಗಳು ಸಂಪೂರ್ಣ ಬರಿದಾಗಿದೆ.

ದಕ್ಷಿಣ ವಲಯ :

ದಕ್ಷಿಣ ವಲಯದಲ್ಲಿ ಒಟ್ಟು 7 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 1339.26 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 911.56 ದ.ಲ.ಲೀ ನೀರಷ್ಟೇ ಇದೆ.

ಪೂರ್ವ ವಲಯ :

ಪೂರ್ವ ವಲಯದಲ್ಲಿ ಒಟ್ಟು 44 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 4882 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 2725.10 ದ.ಲ.ಲೀ ನೀರಷ್ಟೇ ಇದೆ. ಇವುಗಳ ಪೈಕಿ 2 ಕೆರೆಗಳು ಸಂಪೂರ್ಣ ಬರಿದಾಗಿದೆ.

ಪಶ್ಚಿಮ ವಲಯ :

ಪಶ್ಚಿಮ ವಲಯದಲ್ಲಿ ಒಟ್ಟು 2 ಕೆರೆಗಳಿದ್ದು ಅಲ್ಲಿನ ಕೆರೆಗಳ ನೀರು ಹಿಡಿದಿಡುವ ಸಾಮರ್ಥ್ಯ 453.12 ದಶಲಕ್ಷ ಲೀಟರ್ ಆಗಿದ್ದು ಆ ಪೈಕಿ 351.07 ದ.ಲ.ಲೀ ನೀರಿನ ಸಂಗ್ರಹವಿದೆ.

ನೀರಿಲ್ಲದೆ ಬೇಸಿಗೆಯ ಬಿಸಿ ತಟ್ಟಿರುವ ನಡುವೆಯೂ ಗರಿ ಬಿಚ್ಚಿ ತನ್ನ ಸೌಂದರ್ಯ ಪ್ರದರ್ಶಿಸುತ್ತಿರುವ ಮಯೂರ.

ನಗರದಲ್ಲಿನ ಕೆರೆಗಳ ನೀರಿನ ಮಟ್ಟ ಅರ್ಧಕ್ಕಿಂತ ಕಡಿಮೆ :

ಒಟ್ಟಾರೆ ಈ ಮೇಲಿನ ಅಂಕಿಸಂಖ್ಯೆಗಳನ್ನು ಗಮನಿಸಿದಾಗ 50 ಕೆರೆಗಳಿರುವ ಮಹದೇವಪುರ ವಲಯದಲ್ಲಿ 19 ಕೆರೆಗಳು ಸಂಪೂರ್ಣವಾಗಿ ಬತ್ತಿರುವುದಲ್ಲದೆ ಕೆರೆಗಳಲ್ಲಿ ನೀರಿನ ಸಂಗ್ರಹ ಶೇ.22ರಷ್ಟು ಮಾತ್ರವಿದೆ. ಇನ್ನು 44 ಕೆರೆಗಳಿರುವ ಬೊಮ್ಮನಹಳ್ಳಿ ಅರ್ಧಕ್ಕರ್ಧ ನೀರಿನ ಸಂಗ್ರಹವಿದೆ. 33 ಕೆರೆಗಳಿರುವ ರಾಜರಾಜೇಶ್ವರಿ ನಗರದಲ್ಲಿ ಒಟ್ಟಾರೆ ಕೆರೆಗಳಲ್ಲಿ ಶೇ.13 ರಷ್ಟು ಮಾತ್ರ ನೀರಿನ ಸಂಗ್ರಹವಿದೆ. ಆ ಪೈಕಿ 12 ಕೆರೆಗಳಲ್ಲಿ ನೀರು ಸಂಪೂರ್ಣವಾಗಿ ಬತ್ತಿ ಹೋಗಿದೆ. ಉಳಿದ ವಲಯಗಳಲ್ಲಿ ಪರಿಸ್ಥಿತಿ ಭಿನ್ನವಾಗಿಲ್ಲ.

ಇದನ್ನೂ ಓದಿ : BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

ಟ್ಯಾಂಕರ್ ನೀರಿಗೆ ದುಪ್ಪಟ್ಟು ಹಣ ನೀಡಿ ಖರೀದಿ :

ಸಾಂದರ್ಭಿಕ ಚಿತ್ರ

ಇಡೀ ಬೆಂಗಳೂರಿನಲ್ಲಿನ ಅಂತರ್ಜಲ ಪ್ರಮಾಣ ಕುಸಿತದಿಂದ ನಗರದ ಹಲವು ಬೋರ್ ವೆಲ್ ಗಳು ಕೈಕೊಟ್ಟರೆ, ಕಾವೇರಿ ನೀರು ಪೂರೈಕೆ ಇರದ ಕಡೆ ಗುಣಮಟ್ಟವಿಲ್ಲದ ನೀರಿನ ಟ್ಯಾಂಕರ್ ಗೆ ಹಲವು ಪಟ್ಟು ಹೆಚ್ಚು ಹಣ ನೀಡಿ ಜನರು ನೀರು ಖರೀದಿಸುವಂತಾಗಿದೆ.

ಕೆರೆಯಲ್ಲಿ ಮಳೆ ನೀರು ಸಂಗ್ರಹ ಹೆಚ್ಚಳಕ್ಕೆ ಯೋಜನೆ ರೂಪಿಸುವ ಅಗತ್ಯವಿದೆ :

ಇನ್ನು ಕೆರೆಗಳ ನೀರಿನ ಸಂಗ್ರಹ ಚಿತ್ರಣ ಗಮನಿಸಿದರೆ, ಕೆರೆಗಳನ್ನು ಆಶ್ರಯಿಸಿರುವ ನವಿಲು, ಕೊಕ್ಕರೆ, ಗಿಳಿ, ಹದ್ದು ಸೇರಿದಂತೆ ನಾನಾ ರೀತಿಯ ಬಾನಾಡಿಗಳು, ಅಳಿಲು, ಆಮೆ, ಮೊಲ ಮತ್ತಿತರ ವನ್ಯಪ್ರಾಣಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ನಗರದಲ್ಲಿ ಸುರಿಯುವ ಮಳೆಯು ಸೂಕ್ತ ರೀತಿ ರಾಜಕಾಲುವೆಗಳ ಮೂಲಕ ಈ ಕೆರೆಗಳಲ್ಲಿ ಸಂಗ್ರಹಿಸಲು ಸೂಕ್ತ ಯೋಜನೆ ರೂಪಿಸಿದರೆ ನಗರದ ಕೆರೆಗಳಲ್ಲಿ ನೀರಿನ ಸಂಗ್ರಹ ಹೆಚ್ಚಳವಾದರೆ ಅಷ್ಟರ ಮಟ್ಟಿಗೆ ಅಂತರ್ಜಲ ಮಟ್ಟವೂ ಏರಿಕೆಯಾಗಲಿದೆ ಎಂದು ಭೂರ್ಗಭ ಶಾಸ್ತ್ರಜ್ಞರು, ಪರಿಸರ ತಜ್ಞರ ಅಭಿಪ್ರಾಯವಾಗಿದೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
Previous Post

Ram Navami Surya Tilak | ರಾಮ ನವಮಿ : ರಾಮಲಲ್ಲಾನ ಹಣೆಯ ಮೇಲೆ ಸೂರ್ಯ ತಿಲಕ – ಅಯೋಧ್ಯೆಯಿಂದ Live

Next Post

BBMP News | ಬಿಬಿಎಂಪಿ ಕೇಂದ್ರ ಕಛೇರಿ ಆದಿಶಕ್ತಿ ದೇವಾಲಯದ ನವೀಕರಣಕ್ಕೆ 50 ಲಕ್ಷ ರೂ. ದೇಣಿಗೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Next Post

BBMP News | ಬಿಬಿಎಂಪಿ ಕೇಂದ್ರ ಕಛೇರಿ ಆದಿಶಕ್ತಿ ದೇವಾಲಯದ ನವೀಕರಣಕ್ಕೆ 50 ಲಕ್ಷ ರೂ. ದೇಣಿಗೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ತಲಾ 2 ರೂ. ಏರಿಕೆ ಮಾಡಿದ ಕೇಂದ್ರ ಸರ್ಕಾರ : ನಾಳೆಯಿಂದ ನೂತನ ಸುಂಕ ಜಾರಿ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d