Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

ರಾಜ್ಯದಲ್ಲಿ ಕಳಪೆ ಗುಣಮಟ್ಟದ ಔಷಧಗಳು ಪತ್ತೆ ; 28 ಸಂಸ್ಥೆಗಳ ವಿರುದ್ಧ ಮೊಕದ್ದಮೆ ದಾಖಲು

ಔಷಧ ನಿಯಂತ್ರಣ ಮತ್ತು ಆಹಾರ ಸುರಕ್ಷತಾ ಇಲಾಖೆಯ ಕಾರ್ಯಾಚರಣೆ

by Bengaluru Wire Desk
April 9, 2025
in Life Style, Public interest
Reading Time: 2 mins read
0

ಬೆಂಗಳೂರು, ಏ.9 www.bengaluruwire.com : ರಾಜ್ಯದಲ್ಲಿ ತಯಾರಾಗುವ ಮತ್ತು ಮಾರಾಟವಾಗುವ ಔಷಧಗಳು ಹಾಗೂ ಕಾಂತಿವರ್ಧಕಗಳ ಗುಣಮಟ್ಟವನ್ನು ಕಾಪಾಡುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ತೀವ್ರ ನಿಗಾ ವಹಿಸಿದೆ. ಇಲಾಖೆಯ ಔಷಧ ಆಡಳಿತ ವಿಭಾಗವು ಮಾರ್ಚ್ 2025 ರಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 41 ಅನುತ್ತಮ ಗುಣಮಟ್ಟದ ಔಷಧಗಳನ್ನು ಪತ್ತೆ ಮಾಡಿದೆ.

ಔಷಧ ಮಾದರಿಗಳ ವಿಶ್ಲೇಷಣೆ :

ಇಲಾಖೆಯ ಅಮಲು ಜಾರಿ ಅಧಿಕಾರಿಗಳು ಮಾರ್ಚ್ ತಿಂಗಳಲ್ಲಿ ಒಟ್ಟು 1,891 ಔಷಧ ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದರು. ಈ ಮಾದರಿಗಳನ್ನು ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದ್ದು, ಅವುಗಳಲ್ಲಿ 1,298 ಮಾದರಿಗಳು ಉತ್ತಮ ಗುಣಮಟ್ಟದ್ದೆಂದು ದೃಢಪಟ್ಟಿವೆ. ಆದರೆ, 41 ಮಾದರಿಗಳು ಕಳಪೆ ಗುಣಮಟ್ಟದ್ದೆಂದು ವರದಿಯಾಗಿವೆ.

ನಿಯಮ ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ಕ್ರಮ :

2024-25ನೇ ಸಾಲಿನಲ್ಲಿ ಔಷಧ ಮತ್ತು ಕಾಂತಿವರ್ಧಕಗಳ ಕಾಯ್ದೆ ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಫೆಬ್ರವರಿ ತಿಂಗಳಲ್ಲಿ 10 ಮತ್ತು ಮಾರ್ಚ್ ತಿಂಗಳಲ್ಲಿ 18 ಸೇರಿದಂತೆ ಒಟ್ಟು 28 ಮೊಕದ್ದಮೆಗಳನ್ನು ವಿವಿಧ ನ್ಯಾಯಾಲಯಗಳಲ್ಲಿ ದಾಖಲಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ರಿಂಗರ್ ಲ್ಯಾಕ್ಟೇಟ್ ದ್ರಾವಣದಲ್ಲಿ ಕಳಪೆ ಗುಣಮಟ್ಟ :

ನಿರ್ದಿಷ್ಟವಾಗಿ ರಿಂಗರ್ ಲ್ಯಾಕ್ಟೇಟ್ ದ್ರಾವಣದ 196 ಬ್ಯಾಚ್‌ಗಳ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 113 ಮಾದರಿಗಳು ಕಳಪೆ ಗುಣಮಟ್ಟದ್ದೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ತಯಾರಿಕಾ ಸಂಸ್ಥೆಯಾದ ಪಶ್ಚಿಮ್ ಬಂಗಾ ಫಾರ್ಮಾಸ್ಯೂಟಿಕಲ್ಸ್ (Paschim Banga Pharmaceuticals) ವಿರುದ್ಧ ಮಾರ್ಚ್ ಅಂತ್ಯದವರೆಗೆ 78 ಮೊಕದ್ದಮೆಗಳನ್ನು ದಾಖಲಿಸಲಾಗಿದೆ.

ಇನ್ನಿತರ ಔಷಧ ತಯಾರಕರ ವಿರುದ್ಧ ಮೊಕದ್ದಮೆ :

ಕಳಪೆ ಗುಣಮಟ್ಟದ ಔಷಧಗಳನ್ನು ತಯಾರಿಸಿದ ಮತ್ತು ನಿಯಮ ಉಲ್ಲಂಘನೆ ಮಾಡಿದ ಇತರ ತಯಾರಿಕಾ ಸಂಸ್ಥೆಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಅಂತಹ 43 ಪ್ರಕರಣಗಳಲ್ಲಿ ಮೊಕದ್ದಮೆ ಹೂಡಲು ಇಲಾಖೆ ಅನುಮತಿ ನೀಡಿದೆ.

ಔಷಧ ಮಳಿಗೆಗಳ ಪರಿಶೀಲನೆ ಮತ್ತು ಲೈಸೆನ್ಸ್ ಅಮಾನತು :

ಫೆಬ್ರವರಿ 2025 ರಲ್ಲಿ ಔಷಧ ಆಡಳಿತದ ಅಧಿಕಾರಿಗಳು 1,872 ಔಷಧ ಮಾದರಿಗಳನ್ನು ವಿಶ್ಲೇಷಣೆಗಾಗಿ ಪಡೆದಿದ್ದು, 2,078 ಔಷಧ ಮಳಿಗೆಗಳನ್ನು ಪರಿಶೀಲಿಸಿದ್ದಾರೆ. ಈ ಪರಿಶೀಲನೆಯಲ್ಲಿ ನಿಯಮ ಉಲ್ಲಂಘನೆ ಕಂಡುಬಂದ 215 ಸಂಸ್ಥೆಗಳ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ.

ಮಾರುಕಟ್ಟೆಯಿಂದ ಕಳಪೆ ಔಷಧ ಹಿಂಪಡೆಯುವಿಕೆ :

ರಾಜ್ಯದಲ್ಲಿ ಕಳಪೆ ಗುಣಮಟ್ಟವೆಂದು ಪತ್ತೆಯಾದ ಔಷಧಗಳನ್ನು ಮಾರುಕಟ್ಟೆಯಿಂದ ಹಿಂಪಡೆಯುವ ವಿಶೇಷ ಅಭಿಯಾನವನ್ನು ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ನಡೆಸಲಾಗಿದೆ. ಈ ಅವಧಿಯಲ್ಲಿ ಸುಮಾರು 24,29,479/- ರೂಪಾಯಿ ಮೌಲ್ಯದ ಕಳಪೆ ಗುಣಮಟ್ಟದ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸುಧಾರಣಾ ಕ್ರಮಗಳು ಜಾರಿ :

ಕಳಪೆ ಗುಣಮಟ್ಟದ ಔಷಧಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ತಡೆಯುವ ನಿಟ್ಟಿನಲ್ಲಿ ಇಲಾಖೆ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಕಳಪೆ ದಾಸ್ತಾನುಗಳನ್ನು ಹಿಂಪಡೆಯಲು ಹಾಗೂ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಮತ್ತು ತಯಾರಿಕಾ ಸಂಸ್ಥೆಗಳ ವಿವರಗಳನ್ನು ಗಣಕೀಕರಣಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ತಂತ್ರಾಂಶವು ಶೀಘ್ರದಲ್ಲೇ ಜಾರಿಗೆ ಬರಲಿದೆ.

ಬಾಟಲಿ ಕುಡಿಯುವ ನೀರಿನ ಗುಣಮಟ್ಟ ಕಳಪೆ :

ವಿಶೇಷ ಅಭಿಯಾನದ ಮೂಲಕ ಕುಡಿಯುವ ನೀರಿನ ಬಾಟಲ್‌ಗಳ 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಲಾಗಿದ್ದು, 255 ಮಾದರಿಗಳ ವರದಿ ಬಂದಿದೆ. ಅದರಲ್ಲಿ 72 ಮಾದರಿಗಳು ಸುರಕ್ಷಿತವಾಗಿದ್ದರೆ, 95 ಅಸುರಕ್ಷಿತ ಮತ್ತು 88 ಕಳಪೆ ಗುಣಮಟ್ಟದ್ದೆಂದು ತಿಳಿದುಬಂದಿದೆ.

ಕರಿದ ಬಟಾಣಿಗಳಲ್ಲಿ ಕೃತಕ ಬಣ್ಣ ಪತ್ತೆ :

ಕರಿದ ಹಸಿರು ಬಟಾಣಿಗಳಲ್ಲಿ ಕೃತಕ ಬಣ್ಣಗಳ ಬಳಕೆಯ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, 115 ಮಾದರಿಗಳನ್ನು ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ. 46 ಮಾದರಿಗಳು ಸುರಕ್ಷಿತವಾಗಿದ್ದರೆ, 69 ಮಾದರಿಗಳು ಅಸುರಕ್ಷಿತವೆಂದು ವರದಿಯಾಗಿವೆ.

ಇತರ ಆಹಾರ ಪದಾರ್ಥಗಳ ತಪಾಸಣೆ :

ಮಾರ್ಚ್ ತಿಂಗಳಲ್ಲಿ ತುಪ್ಪ, ಖೋವಾ, ಪನ್ನೀರ್, ಸಿಹಿತಿಂಡಿ ಮತ್ತು ಖಾರ ಮಿಕ್ಚರ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಲಾಗಿದೆ. ಇದಲ್ಲದೆ, ಸ್ಥಳೀಯ ಜ್ಯೂಸ್, ಐಸ್ ಕ್ಯಾಂಡಿ ಮತ್ತು ಐಸ್ ಕ್ರೀಮ್‌ಗಳ ಮಾದರಿಗಳನ್ನು ಸಹ ಪರೀಕ್ಷಿಸಲಾಗಿದೆ. ಲೋಪ ಕಂಡುಬಂದ 92 ಘಟಕಗಳಿಗೆ ನೋಟಿಸ್ ನೀಡಲಾಗಿದ್ದು, 6 ಘಟಕಗಳಿಗೆ ದಂಡ ವಿಧಿಸಲಾಗಿದೆ.

ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ :

ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಕ್ರಿಮಿ ಕೀಟಗಳ ನಿಯಂತ್ರಣ ಕ್ರಮಗಳ ಕುರಿತು 590 ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಿಯಮ ಪಾಲಿಸದ 214 ಹೋಟೆಲ್‌ಗಳಿಗೆ ನೋಟಿಸ್ ನೀಡಲಾಗಿದ್ದು, 11 ಹೋಟೆಲ್‌ಗಳಿಗೆ ದಂಡ ವಿಧಿಸಲಾಗಿದೆ. ಆಹಾರ ಮಾದರಿಗಳ ವಿಶ್ಲೇಷಣಾ ವರದಿಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

WhatsApp Join our WhatsApp Channel
Previous Post

PUC Results | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ. 76.07 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ! ; ಈ ರೀತಿ ಫಲಿತಾಂಶ ನೋಡಿ

Next Post

ಮಲ್ಲೇಶ್ವರದ ಅನಧಿಕೃತ ವಾಣಿಜ್ಯ ಕಟ್ಟಡಕ್ಕೆ ಸ್ವಾಧೀನ ಪತ್ರ ನೀಡದಂತೆ ಹೈಕೋರ್ಟ್ ನಿರ್ದೇಶನ

Next Post
ಸಾಂದರ್ಭಿಕ ಚಿತ್ರ

ಮಲ್ಲೇಶ್ವರದ ಅನಧಿಕೃತ ವಾಣಿಜ್ಯ ಕಟ್ಟಡಕ್ಕೆ ಸ್ವಾಧೀನ ಪತ್ರ ನೀಡದಂತೆ ಹೈಕೋರ್ಟ್ ನಿರ್ದೇಶನ

BWSSB News | ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಏರಿಕೆ : ಪರಿಷ್ಕೃತ ದರ ಮೇ ತಿಂಗಳ ಬಿಲ್ಲಿಗೆ ಅನ್ವಯ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group