Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂದಾಯ ನಿವೇಶಗಳಿಗೂ ಕಟ್ಟಡ ನಕ್ಷೆ ಅವಕಾಶ ಪ್ರಸ್ತಾವನೆ : 4 ತಿಂಗಳಾದರೂ ಸರ್ಕಾರದಿಂದ ನಿರುತ್ತರ

ಬಿ ಖಾತಾ ನಿವೇಶನದಲ್ಲಿ ವಲಯ ನಿಯಮಾವಳಿ ಉಲ್ಲಂಘಿಸಿ ಕಟ್ಟಡ ನಿರ್ಮಾಣ ನಿಯಂತ್ರಣ, ಅನಧಿಕೃತ ಕಟ್ಟಡ ನಿರ್ಮಾಣದಿಂದ ಜೀವಹಾನಿ, ಆಸ್ತಿ-ಪಾಸ್ತಿ ಹಾನಿ ನಿಯಂತ್ರಿಸುವುದು ಬಿಬಿಎಂಪಿ ಉದ್ದೇಶ.

by Bengaluru Wire Desk
April 10, 2025
in Bengaluru Focus, BW Special, Public interest
Reading Time: 1 min read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.10, www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾ ನಿವೇಶನ (B Khata Property)ದಲ್ಲಿ ಕಟ್ಟಡ ಕಟ್ಟುವ ಮಾಲೀಕರಿಗೆ, ಪಾಲಿಕೆ ನಗರ ಯೋಜನೆ ವಿಭಾಗದಲ್ಲಿ ವಲಯ ನಿಯಮಾವಳಿ (Zoning regulations) ಹಾಗೂ ಕಟ್ಟಡ ಉಪವಿಧಿ (Building By-law) ಅನ್ವಯ ತಯಾರಿಸಿದ ನಕ್ಷೆಯನ್ನು ದಾಖಲು ಮಾಡಿಕೊಂಡು ಸ್ವೀಕೃತಿ ಪತ್ರ ಪಡೆಯುವ ಬಗ್ಗೆ  ರಾಜ್ಯ ಸರ್ಕಾರಕ್ಕೆ ಪಾಲಿಕೆಯು ಪ್ರಸ್ತಾವನೆ ಸಲ್ಲಿಸಿ ನಾಲ್ಕು ತಿಂಗಳಾದರೂ ಇನ್ನೂ ಸೂಕ್ತ ಅನುಮೋದನೆ ದೊರೆತಿಲ್ಲ.

ನಗರದಲ್ಲಿ ಬಿ ಖಾತಾ ನಿವೇಶನದಲ್ಲಿ ವಲಯ ನಿಯಮಾವಳಿ ಉಲ್ಲಂಘಿಸಿ, ಅನಧಿಕೃತವಾಗಿ ಕಟ್ಟಡ ಕಟ್ಟಿ ಅವುಗಳಿಂದ ಆಗುತ್ತಿರುವ ದುರಂತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಎ ಮತ್ತು ಬಿ ಖಾತೆ‌ ಸೇರಿದಂತೆ ಒಟ್ಟು 6 ಪ್ರಸ್ತಾವನೆಗೆ ಅನುಮೋದನೆಗಾಗಿ ಬಿಬಿಎಂಪಿಯು ಕಳೆದ ಜನವರಿ 10 ರಂದು ನಗರಾಭಿವೃದ್ಧಿ ಇಲಾಖೆ (Urban Development Department)ಗೆ ಪತ್ರ ಬರೆದಿತ್ತು. ಆ ಪ್ರಸ್ತಾವನೆಗಳ ಪೈಕಿ ಬಿ-ಖಾತಾ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾನೂನು ರೀತ್ಯ ಅನುಗುಣವಾದ ನಕ್ಷೆಯನ್ನು ಪಾಲಿಕೆಯಲ್ಲಿ ದಾಖಲು ಮಾಡಿಕೊಳ್ಳಲು ಅನುವಾಗುವಂತೆ ಸೂಕ್ತ ನಿಯಮಾವಳಿ ರೂಪಿಸಲು ಒಪ್ಪಿಗೆ ಸೂಚಿಸುವಂತೆ ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು. ಆದರೆ ಈ ಯಾವ ಪ್ರಸ್ತಾವನೆಗಳಿಗೂ ಇನ್ನು ಸರ್ಕಾರದ ಅನುಮೋದನೆ ದೊರೆತಿಲ್ಲ ಎಂದು ವಿಶ್ವಸನೀಯ ಮೂಲಗಳು ಬೆಂಗಳೂರು ವೈರ್ ಗೆ ತಿಳಿಸಿದೆ.

“ವಾಸ್ತವವಾಗಿ ‘ಬಿ’ ಖಾತಾ ಸ್ವತ್ತುಗಳಿಗೆ ಪಾಲಿಕೆಯಿಂದ ನಕ್ಷೆ ಮಂಜೂರಾತಿಯನ್ನು ನೀಡಲಾಗುತ್ತಿಲ್ಲ. ಆದ ಕಾರಣ ‘ಬಿ’ ಖಾತಾ ಸ್ವತ್ತಿನ ಮಾಲೀಕರು ಯಾವುದೇ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಹಲವಾರು ಕಡೆಗಳಲ್ಲಿ ಕಂಡು ಬಂದಿರುವ ಹಿನ್ನಲೆಯಲ್ಲಿ ‘ಬಿ’ ಖಾತಾ ಸ್ವತ್ತಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಕಟ್ಟಡದ ವಿವರಗಳನ್ನು ದಾಖಲಿಸಿಕೊಳ್ಳಲು ಅನ್‌ಲೈನ್ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸುವುದು ಸೂಕ್ತವಾಗಿದೆ.”

“ರೆವೆನ್ಯು ನಿವೇಶನದಾರರು ಬಿಬಿಎಂಪಿ ನಗರ ಯೋಜನೆ ವಿಭಾಗಕ್ಕೆ ತಮ್ಮ ಕಂದಾಯ ನಿವೇಶನದಲ್ಲಿ ವಲಯ ನಿಯಮಗಳ ಅನ್ವಯ ಕಟ್ಟಡ ಕಟ್ಟುವ ಬಗ್ಗೆ ಕಂದಾಯ ದಾಖಲಾತಿಗಳು, ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ನೊಂದಾಯಿತ ವಾಸ್ತುಶಿಲ್ಪಿಯಿಂದ ನಿಯಾಮವಳಿ ಮತ್ತು ಕಟ್ಟಡ ಉಪವಿಧಿಯನ್ವಯ ತಯಾರಿಸಲಾಗುವ ನಕ್ಷೆ ಹಾಗೂ ಇನ್ನಿತರೆ ಸುರಕ್ಷತೆಯ ಅಂಶಗಳಿಗೆ ಬದ್ಧರಿರುವುದರ ಬಗ್ಗೆ ಮಾಲೀಕರು ಅಥವಾ ಕಟ್ಟಡ ನಿರ್ಮಾಣದಾರರಿಂದ ಮುಚ್ಚಳಿಕೆ ಪ್ರಮಾಣ ಪತ್ರ ಪಡೆಯುವುದು. ಹಾಗೆಯೇ ಇಂಜಿನಿಯರ್/ವಾಸ್ತುಶಿಲ್ಪಿಗಳು ಮತ್ತು ಸ್ಪಕ್ಟರಲ್ ಇಂಜಿನಿಯರ್ ರವರಿಂದ ಸೂಕ್ತ ಪ್ರಮಾಣ ಪತ್ರ /ದೃಢೀಕರಣ ಪತ್ರವನ್ನು ಪಡೆದು ದಾಖಲಿಸಿಕೊಂಡು ಕಟ್ಟಡ ನಿರ್ಮಾಣಕ್ಕೆ ಕಟ್ಟಡ ನಿರ್ಮಾಣ ಸಂಬಂಧ ವಲಯ ನಿಯಮಾವಳಿಯನುಸಾರ ಅವಕಾಶ ಮಾಡಿಕೊಡುವುದು.”

“ಈ ರೀತಿ ಅರ್ಜಿದಾರರು ನೀಡುವ ನಕ್ಷೆಗಳು, ಮನವಿ ಇವುಗಳನ್ನು ಪಾಲಿಕೆಯಲ್ಲಿ ದಾಖಲಿಸಿಕೊಳ್ಳುವುದು ಹಾಗೂ ತದನಂತರ ನಕ್ಷೆ ಉಲ್ಲಂಘನೆ ಕಂಡುಬಂದಲ್ಲಿ ಬಿಬಿಎಂಪಿ ಕಾಯ್ದೆ-2020 ಮತ್ತು ಕೆಟಿಸಿಪಿ ಕಾಯ್ದೆ-1961ರ ಅವಕಾಶಗಳಂತೆ ಕ್ರಮ ಜರುಗಿಸುವುದು ಸೂಕ್ತವಾಗಿರುತ್ತದೆ” ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು.

“ಈ ಸಂಬಂಧ ಪಡೆಯಬೇಕಾದ ಪ್ರಮಾಣ ಪತ್ರ ಮತ್ತು ಪಾಲಿಸಬೇಕಾಗಿರುವ ನೀತಿ ನಿಯಮಗಳ ಬಗ್ಗೆ 2024ರ ನ.20 ರ ಸಭೆಯಲ್ಲಿ ವಿವರಿಸಲಾಗಿದ್ದು, ಈ ನಡಾವಳಿಯನ್ನು ಸರ್ಕಾರದ ಅವಗಾಹನೆಗೆ ಸಲ್ಲಿಸುತ್ತಾ, ಈ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಾರ್ಯವಿಧಾನವನ್ನು ಪಾಲಿಕೆಯಲ್ಲಿ ಅಳವಡಿಸಿಕೊಂಡು ಕ್ರಮ ವಹಿಸಲು ಸರ್ಕಾರದ ಮಂಜೂರಾತಿ ಕೋರಿದೆ” ಎಂದು ಜ.10 ರಂದು ಮುಖ್ಯ ಆಯುಕ್ತರು ರಾಜ್ಯ ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಪರೋಕ್ಷವಾಗಿ ನಕ್ಷೆ ಮಂಜೂರಾತಿ ನೀಡಿ- ಅಕ್ರಮ ತಡಿಯುವ ಆಲೋಚನೆ :

ಬಿಬಿಎಂಪಿಯ ಈ ಪ್ರಸ್ತಾವನೆ ಬಗ್ಗೆ ಸರ್ಕಾರದಿಂದ ಅನುಮೋದನೆ ದೊರೆತರೆ, ಈ ತನಕ ಬಿ-ಖಾತಾ ಸ್ವತ್ತಿನಲ್ಲಿ ಕಟ್ಟುವ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ದೊರೆಯುತ್ತಿರಲಿಲ್ಲ. ಆದರೆ ಹೊಸ ಪ್ರಸ್ತಾವನೆಯಂತೆ ನಿಯಮಾನುಸಾರ ತಯಾರಿಸಿದ ನಕ್ಷೆಯಂತೆ ಕಟ್ಟಡ ಕಟ್ಟಿ ಅದನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಅಲ್ಲದೆ ಕಾನೂನು ಕ್ರಮಕ್ಕೆ ಹೆದರಿ ಸ್ವತ್ತಿನ ಮಾಲೀಕರು ನಿಯಮಾನುಸಾರ ಕಟ್ಟಡ ಕಟ್ಟುತ್ತಾರೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಇದರಿಂದ ನಾಳೆ ಅಕ್ರಮ ಸಕ್ರಮ ಯೋಜನೆ ಜಾರಿಯಾದರೆ, ನಗರ ವ್ಯಾಪ್ತಿಯಲ್ಲಿನ ಕಂದಾಯ ನಿವೇಶನಗಳಲ್ಲಿ ಕಟ್ಟಿದ ಕಟ್ಟಡಗಳು ಸಕ್ರಮಗೊಳಿಸಲು ಅನುಕೂಲವಾಗಲಿದೆ. ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ವಿಚಾರ ಹಲವು ವರ್ಷಗಳಿಂದ ಕೋರ್ಟ್ ನಲ್ಲಿದೆ. ಇನ್ನೂ ಪ್ರಕರಣ ಬಗೆಹರಿದಿಲ್ಲ. ಹೀಗಾಗಿ ಕಂದಾಯ ನಿವೇಶನಗಳಿಗೆ ಸದ್ಯಕ್ಕೆ ಎ ಖಾತಾ ಸ್ವತ್ತಿಗೆ ನೀಡುವಂತೆ ಅಧಿಕೃತವಾಗಿ ಕಟ್ಟಡ ನಕ್ಷೆ ಮಂಜೂರಾತಿ ಕೊಡುವ ಪ್ರಶ್ನೆ ಬರಲ್ಲ ಎಂದು ಅವರು ಹೇಳಿದ್ದಾರೆ.

ಆದರೆ ಕಾನೂನು ನಿಯಮಾವಳಿ ಅನ್ವಯದ ನಕ್ಷೆ ದಾಖಲು ಮಾಡಿಕೊಂಡು ಕಟ್ಟಡ ಕಟ್ಟಲು ಅವಕಾಶ ಕಲ್ಪಿಸುವ ಈ ಪ್ರಸ್ತಾವನೆ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಆದರೆ ಅಂತಿಮ ನಿರ್ಧಾರ ಆಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ನಿರ್ಮಾಣದಿಂದ ಸಾರ್ವಜನಿಕರ ಪ್ರಾಣಕ್ಕೆ, ಆಸ್ತಿ-ಪಾಸ್ತಿಗಳಿಗೆ ಹಾನಿಯಾಗದಂತೆ ಅನಧಿಕೃತ ಕಟ್ಟಡಗಳ ನಿರ್ಮಾಣವನ್ನು ನಿಯಂತ್ರಿಸುವುದು ತುರ್ತು ಆವಶ್ಯಕವಿರುವುದಾಗಿ ಕಂದಾಯ ಇಲಾಖೆ ವಿಶೇಷ ಆಯುಕ್ತರ ಅಧ್ಯಕ್ಷತೆಯಲ್ಲಿ 2024ರ ನ.20 ಹಾಗೂ ಡಿ.13ರಂದು ನಡೆದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿತ್ತು. ಅಲ್ಲದೆ ಹೊಸ ಖಾತೆ, ನಿಯಮಬದ್ಧ ಹಾಗೂ ಸುರಕ್ಷಿತ ಕಟ್ಟಡಗಳ ನಿರ್ಮಾಣಗಳ ಬಗ್ಗೆ ಸಮಗ್ರ ನೀತಿ ರೂಪಿಸಲು ನಿರ್ಧರಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪಾಲಿಕೆಯ ಏಳು ಹಿರಿಯ ಅಧಿಕಾರಿಗಳ ಸಮಿತಿಯು ಕಾನೂನಿನಲ್ಲಿನ ಅವಕಾಶಗಳು ಹಾಗೂ ಪ್ರಸ್ತಾಪಿಸಬಹುದಾದ ಅವಕಾಶಗಳ ಬಗ್ಗೆ ಚರ್ಚಿಸಿ 6 ಪ್ರಸ್ತಾವನೆಗಳನ್ನು ಸಲ್ಲಿಸಲಾಗಿತ್ತು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BWSSB News | ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಏರಿಕೆ : ಪರಿಷ್ಕೃತ ದರ ಮೇ ತಿಂಗಳ ಬಿಲ್ಲಿಗೆ ಅನ್ವಯ

Next Post

TTD News | ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ : ವಾಟ್ಸಾಪ್‌ನಲ್ಲಿ 15 ಸೇವೆಗಳು ಲಭ್ಯ!

Next Post

TTD News | ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ : ವಾಟ್ಸಾಪ್‌ನಲ್ಲಿ 15 ಸೇವೆಗಳು ಲಭ್ಯ!

ಎಲೆಕ್ಟ್ರಾನಿಕ್ಸ್ ಸಿಟಿ ಕೈಗಾರಿಕಾ ಪ್ರದೇಶದ ಉದ್ಯೋಗಿಗಳಿಗೆ ನಾಳೆಯಿಂದ ಹೊಸದೊಂದು ಸವಾಲು : ಏನದು? ಈ ಸುದ್ದಿ ಓದಿ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group