Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂದಾಯ ನಿವೇಶಗಳಿಗೂ ಕಟ್ಟಡ ನಕ್ಷೆ ಅವಕಾಶ ಪ್ರಸ್ತಾವನೆ : 4 ತಿಂಗಳಾದರೂ ಸರ್ಕಾರದಿಂದ ನಿರುತ್ತರ

ಬಿ ಖಾತಾ ನಿವೇಶನದಲ್ಲಿ ವಲಯ ನಿಯಮಾವಳಿ ಉಲ್ಲಂಘಿಸಿ ಕಟ್ಟಡ ನಿರ್ಮಾಣ ನಿಯಂತ್ರಣ, ಅನಧಿಕೃತ ಕಟ್ಟಡ ನಿರ್ಮಾಣದಿಂದ ಜೀವಹಾನಿ, ಆಸ್ತಿ-ಪಾಸ್ತಿ ಹಾನಿ ನಿಯಂತ್ರಿಸುವುದು ಬಿಬಿಎಂಪಿ ಉದ್ದೇಶ.

by Bengaluru Wire Desk
April 10, 2025
in Bengaluru Focus, BW Special, Public interest
Reading Time: 1 min read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.10, www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾ ನಿವೇಶನ (B Khata Property)ದಲ್ಲಿ ಕಟ್ಟಡ ಕಟ್ಟುವ ಮಾಲೀಕರಿಗೆ, ಪಾಲಿಕೆ ನಗರ ಯೋಜನೆ ವಿಭಾಗದಲ್ಲಿ ವಲಯ ನಿಯಮಾವಳಿ (Zoning regulations) ಹಾಗೂ ಕಟ್ಟಡ ಉಪವಿಧಿ (Building By-law) ಅನ್ವಯ ತಯಾರಿಸಿದ ನಕ್ಷೆಯನ್ನು ದಾಖಲು ಮಾಡಿಕೊಂಡು ಸ್ವೀಕೃತಿ ಪತ್ರ ಪಡೆಯುವ ಬಗ್ಗೆ  ರಾಜ್ಯ ಸರ್ಕಾರಕ್ಕೆ ಪಾಲಿಕೆಯು ಪ್ರಸ್ತಾವನೆ ಸಲ್ಲಿಸಿ ನಾಲ್ಕು ತಿಂಗಳಾದರೂ ಇನ್ನೂ ಸೂಕ್ತ ಅನುಮೋದನೆ ದೊರೆತಿಲ್ಲ.

ನಗರದಲ್ಲಿ ಬಿ ಖಾತಾ ನಿವೇಶನದಲ್ಲಿ ವಲಯ ನಿಯಮಾವಳಿ ಉಲ್ಲಂಘಿಸಿ, ಅನಧಿಕೃತವಾಗಿ ಕಟ್ಟಡ ಕಟ್ಟಿ ಅವುಗಳಿಂದ ಆಗುತ್ತಿರುವ ದುರಂತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಎ ಮತ್ತು ಬಿ ಖಾತೆ‌ ಸೇರಿದಂತೆ ಒಟ್ಟು 6 ಪ್ರಸ್ತಾವನೆಗೆ ಅನುಮೋದನೆಗಾಗಿ ಬಿಬಿಎಂಪಿಯು ಕಳೆದ ಜನವರಿ 10 ರಂದು ನಗರಾಭಿವೃದ್ಧಿ ಇಲಾಖೆ (Urban Development Department)ಗೆ ಪತ್ರ ಬರೆದಿತ್ತು. ಆ ಪ್ರಸ್ತಾವನೆಗಳ ಪೈಕಿ ಬಿ-ಖಾತಾ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾನೂನು ರೀತ್ಯ ಅನುಗುಣವಾದ ನಕ್ಷೆಯನ್ನು ಪಾಲಿಕೆಯಲ್ಲಿ ದಾಖಲು ಮಾಡಿಕೊಳ್ಳಲು ಅನುವಾಗುವಂತೆ ಸೂಕ್ತ ನಿಯಮಾವಳಿ ರೂಪಿಸಲು ಒಪ್ಪಿಗೆ ಸೂಚಿಸುವಂತೆ ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು. ಆದರೆ ಈ ಯಾವ ಪ್ರಸ್ತಾವನೆಗಳಿಗೂ ಇನ್ನು ಸರ್ಕಾರದ ಅನುಮೋದನೆ ದೊರೆತಿಲ್ಲ ಎಂದು ವಿಶ್ವಸನೀಯ ಮೂಲಗಳು ಬೆಂಗಳೂರು ವೈರ್ ಗೆ ತಿಳಿಸಿದೆ.

“ವಾಸ್ತವವಾಗಿ ‘ಬಿ’ ಖಾತಾ ಸ್ವತ್ತುಗಳಿಗೆ ಪಾಲಿಕೆಯಿಂದ ನಕ್ಷೆ ಮಂಜೂರಾತಿಯನ್ನು ನೀಡಲಾಗುತ್ತಿಲ್ಲ. ಆದ ಕಾರಣ ‘ಬಿ’ ಖಾತಾ ಸ್ವತ್ತಿನ ಮಾಲೀಕರು ಯಾವುದೇ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಹಲವಾರು ಕಡೆಗಳಲ್ಲಿ ಕಂಡು ಬಂದಿರುವ ಹಿನ್ನಲೆಯಲ್ಲಿ ‘ಬಿ’ ಖಾತಾ ಸ್ವತ್ತಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಕಟ್ಟಡದ ವಿವರಗಳನ್ನು ದಾಖಲಿಸಿಕೊಳ್ಳಲು ಅನ್‌ಲೈನ್ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸುವುದು ಸೂಕ್ತವಾಗಿದೆ.”

“ರೆವೆನ್ಯು ನಿವೇಶನದಾರರು ಬಿಬಿಎಂಪಿ ನಗರ ಯೋಜನೆ ವಿಭಾಗಕ್ಕೆ ತಮ್ಮ ಕಂದಾಯ ನಿವೇಶನದಲ್ಲಿ ವಲಯ ನಿಯಮಗಳ ಅನ್ವಯ ಕಟ್ಟಡ ಕಟ್ಟುವ ಬಗ್ಗೆ ಕಂದಾಯ ದಾಖಲಾತಿಗಳು, ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ನೊಂದಾಯಿತ ವಾಸ್ತುಶಿಲ್ಪಿಯಿಂದ ನಿಯಾಮವಳಿ ಮತ್ತು ಕಟ್ಟಡ ಉಪವಿಧಿಯನ್ವಯ ತಯಾರಿಸಲಾಗುವ ನಕ್ಷೆ ಹಾಗೂ ಇನ್ನಿತರೆ ಸುರಕ್ಷತೆಯ ಅಂಶಗಳಿಗೆ ಬದ್ಧರಿರುವುದರ ಬಗ್ಗೆ ಮಾಲೀಕರು ಅಥವಾ ಕಟ್ಟಡ ನಿರ್ಮಾಣದಾರರಿಂದ ಮುಚ್ಚಳಿಕೆ ಪ್ರಮಾಣ ಪತ್ರ ಪಡೆಯುವುದು. ಹಾಗೆಯೇ ಇಂಜಿನಿಯರ್/ವಾಸ್ತುಶಿಲ್ಪಿಗಳು ಮತ್ತು ಸ್ಪಕ್ಟರಲ್ ಇಂಜಿನಿಯರ್ ರವರಿಂದ ಸೂಕ್ತ ಪ್ರಮಾಣ ಪತ್ರ /ದೃಢೀಕರಣ ಪತ್ರವನ್ನು ಪಡೆದು ದಾಖಲಿಸಿಕೊಂಡು ಕಟ್ಟಡ ನಿರ್ಮಾಣಕ್ಕೆ ಕಟ್ಟಡ ನಿರ್ಮಾಣ ಸಂಬಂಧ ವಲಯ ನಿಯಮಾವಳಿಯನುಸಾರ ಅವಕಾಶ ಮಾಡಿಕೊಡುವುದು.”

“ಈ ರೀತಿ ಅರ್ಜಿದಾರರು ನೀಡುವ ನಕ್ಷೆಗಳು, ಮನವಿ ಇವುಗಳನ್ನು ಪಾಲಿಕೆಯಲ್ಲಿ ದಾಖಲಿಸಿಕೊಳ್ಳುವುದು ಹಾಗೂ ತದನಂತರ ನಕ್ಷೆ ಉಲ್ಲಂಘನೆ ಕಂಡುಬಂದಲ್ಲಿ ಬಿಬಿಎಂಪಿ ಕಾಯ್ದೆ-2020 ಮತ್ತು ಕೆಟಿಸಿಪಿ ಕಾಯ್ದೆ-1961ರ ಅವಕಾಶಗಳಂತೆ ಕ್ರಮ ಜರುಗಿಸುವುದು ಸೂಕ್ತವಾಗಿರುತ್ತದೆ” ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು.

“ಈ ಸಂಬಂಧ ಪಡೆಯಬೇಕಾದ ಪ್ರಮಾಣ ಪತ್ರ ಮತ್ತು ಪಾಲಿಸಬೇಕಾಗಿರುವ ನೀತಿ ನಿಯಮಗಳ ಬಗ್ಗೆ 2024ರ ನ.20 ರ ಸಭೆಯಲ್ಲಿ ವಿವರಿಸಲಾಗಿದ್ದು, ಈ ನಡಾವಳಿಯನ್ನು ಸರ್ಕಾರದ ಅವಗಾಹನೆಗೆ ಸಲ್ಲಿಸುತ್ತಾ, ಈ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಾರ್ಯವಿಧಾನವನ್ನು ಪಾಲಿಕೆಯಲ್ಲಿ ಅಳವಡಿಸಿಕೊಂಡು ಕ್ರಮ ವಹಿಸಲು ಸರ್ಕಾರದ ಮಂಜೂರಾತಿ ಕೋರಿದೆ” ಎಂದು ಜ.10 ರಂದು ಮುಖ್ಯ ಆಯುಕ್ತರು ರಾಜ್ಯ ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಪರೋಕ್ಷವಾಗಿ ನಕ್ಷೆ ಮಂಜೂರಾತಿ ನೀಡಿ- ಅಕ್ರಮ ತಡಿಯುವ ಆಲೋಚನೆ :

ಬಿಬಿಎಂಪಿಯ ಈ ಪ್ರಸ್ತಾವನೆ ಬಗ್ಗೆ ಸರ್ಕಾರದಿಂದ ಅನುಮೋದನೆ ದೊರೆತರೆ, ಈ ತನಕ ಬಿ-ಖಾತಾ ಸ್ವತ್ತಿನಲ್ಲಿ ಕಟ್ಟುವ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ದೊರೆಯುತ್ತಿರಲಿಲ್ಲ. ಆದರೆ ಹೊಸ ಪ್ರಸ್ತಾವನೆಯಂತೆ ನಿಯಮಾನುಸಾರ ತಯಾರಿಸಿದ ನಕ್ಷೆಯಂತೆ ಕಟ್ಟಡ ಕಟ್ಟಿ ಅದನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಅಲ್ಲದೆ ಕಾನೂನು ಕ್ರಮಕ್ಕೆ ಹೆದರಿ ಸ್ವತ್ತಿನ ಮಾಲೀಕರು ನಿಯಮಾನುಸಾರ ಕಟ್ಟಡ ಕಟ್ಟುತ್ತಾರೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಇದರಿಂದ ನಾಳೆ ಅಕ್ರಮ ಸಕ್ರಮ ಯೋಜನೆ ಜಾರಿಯಾದರೆ, ನಗರ ವ್ಯಾಪ್ತಿಯಲ್ಲಿನ ಕಂದಾಯ ನಿವೇಶನಗಳಲ್ಲಿ ಕಟ್ಟಿದ ಕಟ್ಟಡಗಳು ಸಕ್ರಮಗೊಳಿಸಲು ಅನುಕೂಲವಾಗಲಿದೆ. ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ವಿಚಾರ ಹಲವು ವರ್ಷಗಳಿಂದ ಕೋರ್ಟ್ ನಲ್ಲಿದೆ. ಇನ್ನೂ ಪ್ರಕರಣ ಬಗೆಹರಿದಿಲ್ಲ. ಹೀಗಾಗಿ ಕಂದಾಯ ನಿವೇಶನಗಳಿಗೆ ಸದ್ಯಕ್ಕೆ ಎ ಖಾತಾ ಸ್ವತ್ತಿಗೆ ನೀಡುವಂತೆ ಅಧಿಕೃತವಾಗಿ ಕಟ್ಟಡ ನಕ್ಷೆ ಮಂಜೂರಾತಿ ಕೊಡುವ ಪ್ರಶ್ನೆ ಬರಲ್ಲ ಎಂದು ಅವರು ಹೇಳಿದ್ದಾರೆ.

ಆದರೆ ಕಾನೂನು ನಿಯಮಾವಳಿ ಅನ್ವಯದ ನಕ್ಷೆ ದಾಖಲು ಮಾಡಿಕೊಂಡು ಕಟ್ಟಡ ಕಟ್ಟಲು ಅವಕಾಶ ಕಲ್ಪಿಸುವ ಈ ಪ್ರಸ್ತಾವನೆ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಆದರೆ ಅಂತಿಮ ನಿರ್ಧಾರ ಆಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ನಿರ್ಮಾಣದಿಂದ ಸಾರ್ವಜನಿಕರ ಪ್ರಾಣಕ್ಕೆ, ಆಸ್ತಿ-ಪಾಸ್ತಿಗಳಿಗೆ ಹಾನಿಯಾಗದಂತೆ ಅನಧಿಕೃತ ಕಟ್ಟಡಗಳ ನಿರ್ಮಾಣವನ್ನು ನಿಯಂತ್ರಿಸುವುದು ತುರ್ತು ಆವಶ್ಯಕವಿರುವುದಾಗಿ ಕಂದಾಯ ಇಲಾಖೆ ವಿಶೇಷ ಆಯುಕ್ತರ ಅಧ್ಯಕ್ಷತೆಯಲ್ಲಿ 2024ರ ನ.20 ಹಾಗೂ ಡಿ.13ರಂದು ನಡೆದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿತ್ತು. ಅಲ್ಲದೆ ಹೊಸ ಖಾತೆ, ನಿಯಮಬದ್ಧ ಹಾಗೂ ಸುರಕ್ಷಿತ ಕಟ್ಟಡಗಳ ನಿರ್ಮಾಣಗಳ ಬಗ್ಗೆ ಸಮಗ್ರ ನೀತಿ ರೂಪಿಸಲು ನಿರ್ಧರಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪಾಲಿಕೆಯ ಏಳು ಹಿರಿಯ ಅಧಿಕಾರಿಗಳ ಸಮಿತಿಯು ಕಾನೂನಿನಲ್ಲಿನ ಅವಕಾಶಗಳು ಹಾಗೂ ಪ್ರಸ್ತಾಪಿಸಬಹುದಾದ ಅವಕಾಶಗಳ ಬಗ್ಗೆ ಚರ್ಚಿಸಿ 6 ಪ್ರಸ್ತಾವನೆಗಳನ್ನು ಸಲ್ಲಿಸಲಾಗಿತ್ತು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BWSSB News | ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಏರಿಕೆ : ಪರಿಷ್ಕೃತ ದರ ಮೇ ತಿಂಗಳ ಬಿಲ್ಲಿಗೆ ಅನ್ವಯ

Next Post

TTD News | ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ : ವಾಟ್ಸಾಪ್‌ನಲ್ಲಿ 15 ಸೇವೆಗಳು ಲಭ್ಯ!

Next Post

TTD News | ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ : ವಾಟ್ಸಾಪ್‌ನಲ್ಲಿ 15 ಸೇವೆಗಳು ಲಭ್ಯ!

ಎಲೆಕ್ಟ್ರಾನಿಕ್ಸ್ ಸಿಟಿ ಕೈಗಾರಿಕಾ ಪ್ರದೇಶದ ಉದ್ಯೋಗಿಗಳಿಗೆ ನಾಳೆಯಿಂದ ಹೊಸದೊಂದು ಸವಾಲು : ಏನದು? ಈ ಸುದ್ದಿ ಓದಿ

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group