ಬೆಂಗಳೂರು, ಏ.24 www.bengaluruwire.com : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಿದ್ದು, ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ 178 ಕನ್ನಡಿಗರು ತಾಯ್ನಾಡಿಗೆ ಮರಳುವರು.
ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಅತ್ಯಂತ ಸುರಕ್ಷಿತವಾಗಿ ತಾಯ್ನಾಡು ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಕಲ ವ್ಯವಸ್ಥೆಗಳನ್ನು ಕೈಗೊಂಡಿರುವ ಟ್ರಬಲ್ ಶೂಟರ್ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು 178 ಕನ್ನಡಿಗರನ್ನು ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ (ಇಂಡಿಗೋ-6E 9198) ಮೂಲಕ ಇಂದು ಕರೆತರುತ್ತಿದ್ದಾರೆ.
ಇಂದು ಬೆಳಗ್ಗೆ 8:45ಕ್ಕೆ ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಹೊರಟಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Bangalore International Airport) ಕ್ಕೆ ಮಧ್ಯಾಹ್ನ 12ಕ್ಕೆ ಬಂದಿಳಿಯಲಿದೆ.