Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus
    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus
    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

ಬಿಬಿಎಂಪಿ ಮುಖ್ಯ ಆಯುಕ್ತರು ಬೆಸ್ಕಾಂ ಕೇಂದ್ರ ಕಚೇರಿಗೆ ಬರೆದ ಪತ್ರದಲ್ಲಿ ಬಹಿರಂಗ | ಅನಧಿಕೃತ ಒಎಫ್ ಸಿ ಅಳವಡಿಕೆಯಿಂದ ಒಂದೆಡೆ ನಷ್ಟ, ಮತ್ತೊಂದೆಡೆ ಬೆಸ್ಕಾಂ ಒಎಫ್ ಸಿ ಡಕ್ಟ್ ಭೋಗ್ಯಕ್ಕೆ ನೀಡುವ ನಿರ್ಧಾರ ವಿವಾದಕ್ಕೆ ಕಾರಣವಾಗಿದೆ.

by Bengaluru Wire Desk
May 6, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಮೇ.06 www.bengaluruwire.com : ರಾಜಧಾನಿಯ ರಸ್ತೆ ರಸ್ತೆಗಳಲ್ಲಿ ಅನಧಿಕೃತ ಒಎಫ್ ಸಿ ಅಳವಡಿಕೆಯಿಂದ ನೂರಾರು ಕೋಟಿ ರೂ. ನಷ್ಟ ಅನುಭವಿಸುತ್ತಿರುವ ಬಿಬಿಎಂಪಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ನಿರ್ಧಾರ ದೊಡ್ಡ ಶಾಕ್ ನೀಡಿದೆ.

ಬೆಸ್ಕಾಂ ಸಂಸ್ಥೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಭೂಮಿಯ ಮೇಲ್ಮಟ್ಟದ ವಿದ್ಯುತ್ ತಂತಿ ಮತ್ತು ಕೇಬಲ್‌ಗಳನ್ನು ಭೂಗತವಾಗಿ ಸ್ಥಳಾಂತರಿಸುವ ಯೋಜನೆಯಲ್ಲಿ ಈಗಾಗಲೇ   ವಿದ್ಯುತ್ ಸರಬರಾಜು ಕಂಪನಿಯು ಬಿಎಂಎಜೆಡ್ ವ್ಯಾಪ್ತಿಯಲ್ಲಿ ಪ್ರತ್ಯೇಕ ಒಎಫ್ ಸಿ ಡಕ್ಟ್ ಅಳವಡಿಸಿದೆ. 

ಈ ಡಕ್ಟ್ ನಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ (Optical fibre cable – OFC) ಅಳವಡಿಕೆ ಮಾಡಲು ಟೆಲಿಕಾಮ್ ಕಂಪನಿ ಹಾಗೂ ಸಂವಹನ ಸಂಸ್ಥೆಗಳಿಗೆ ಆ ಮಾರ್ಗಗಳನ್ನು ಭೋಗ್ಯಕ್ಕೆ ನೀಡಲು ನಿರ್ಧರಿಸಿದೆ. ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ 2025ರ ಏ.3 ರಂದು ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬಂದಿದೆ. ಇದರಿಂದಾಗಿ ಬಿಬಿಎಂಪಿ ಒಎಫ್ ಸಿ ಆದಾಯಕ್ಕೆ ಬೆಸ್ಕಾಂ ದೊಡ್ಡ ಪೆಟ್ಟು ಕೊಟ್ಟಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆಗಳ ಒಡೆತನ ಮತ್ತು ನಿರ್ವಹಣೆಯ ಸಂಪೂರ್ಣ ಹಕ್ಕು ಬಿಬಿಎಂಪಿಗೆ ಇದೆ. ಯಾವುದೇ ಸಂಸ್ಥೆಯು ಭೂಗತ ಅಥವಾ ಮೇಲ್ಮಟ್ಟದ ಮೂಲಸೌಕರ್ಯ ಅಳವಡಿಸಲು ಬಿಬಿಎಂಪಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಉಲ್ಲಂಘಿಸಿ ಬೆಸ್ಕಾಂ ಒಎಫ್‌ಸಿ ಅಳವಡಿಕೆಗೆ ಮುಂದಾಗಿರುವುದು ಬಿಬಿಎಂಪಿಯ ಕೆಂಗಣ್ಣಿಗೆ ಗುರಿಯಾಗಿದೆ.

ಬಿಬಿಎಂಪಿಯ ವಾದವೇನು? :

ಬಿಬಿಎಂಪಿ ಮುಖ್ಯ ಆಯುಕ್ತರು ಇದೇ ಏ.28ರಂದು ಬೆಸ್ಕಾಂ ಕೇಂದ್ರ ಕಚೇರಿಗೆ ಬರೆದಿರುವ ಪತ್ರದಲ್ಲಿ, ಬೆಸ್ಕಾಂ ಒಎಫ್‌ಸಿ ಅಳವಡಿಸುವ ಮೊದಲು ಬಿಬಿಎಂಪಿಗೆ ನಿರ್ದಿಷ್ಟ ಶುಲ್ಕವನ್ನು ಪಾವತಿಸಬೇಕು. ಈ ಶುಲ್ಕವು ಬಿಬಿಎಂಪಿಯ ಆದಾಯದ ಪ್ರಮುಖ ಭಾಗವಾಗಿದ್ದು, ವಾರ್ಷಿಕವಾಗಿ ರೂ.125 ರಿಂದ ರೂ.250 ಕೋಟಿಗಳವರೆಗೆ ಸಂಗ್ರಹವಾಗುತ್ತದೆ. ಬೆಸ್ಕಾಂ ಶುಲ್ಕ ಪಾವತಿಸದೆ ಒಎಫ್‌ಸಿ ಅಳವಡಿಸಿದರೆ, 2018ರ ಡಿಸೆಂಬರ್ 10ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಅನ್ವಯ, ಲೆಕ್ಕಪರಿಶೋಧನೆಯಲ್ಲಿ ಆಕ್ಷೇಪಣೆ ಬರುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

ಬೆಸ್ಕಾಂ ನಡೆಯಿಂದ ಬಿಬಿಎಂಪಿಗೆ ನಷ್ಟ :

ಬೆಸ್ಕಾಂನ ಈ ನಡೆಯಿಂದ ಬಿಬಿಎಂಪಿಗೆ ಬರಬೇಕಾದ ಆದಾಯಕ್ಕೆ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಸಾರ್ವಜನಿಕ ರಸ್ತೆಗಳಲ್ಲಿ ಕೇಬಲ್ ಅಳವಡಿಕೆಯಿಂದ ನಗರದ ಸೌಂದರ್ಯ ಹಾಳಾಗಿದ್ದು, ಇದೀಗ ಬೆಸ್ಕಾಂನ ಈ ನಡೆ ವಿವಾದಕ್ಕೆ ಕಾರಣವಾಗಿದೆ.

2019-20 ಮತ್ತು 2021-22 ರ ನಡುವೆ ಪಾಲಿಕೆಗೆ ₹87 ಕೋಟಿ ನಷ್ಟ :

ಬಿಬಿಎಂಪಿಯ ಲೆಕ್ಕಪರಿಶೋಧಕರು ಇತ್ತೀಚೆಗೆ, ಟೆಲಿಕಾಂ ಸೇವಾ ಕಂಪನಿಗಳಿಂದ ಆಪ್ಟಿಕಲ್ ಫೈಬರ್ ಕೇಬಲ್‌ಗಳ (OFC) ಅಳವಡಿಕೆಗೆ ಶುಲ್ಕ ಸಂಗ್ರಹಿಸುವಲ್ಲಿ ಅಕ್ರಮಗಳನ್ನು ಬಹಿರಂಗಪಡಿಸಿದ್ದರು. ಇದರಿಂದಾಗಿ 2019-20 ಮತ್ತು 2021-22 ರ ನಡುವೆ ಪಾಲಿಕೆಗೆ ಸುಮಾರು 87 ಕೋಟಿ ರೂ.ಗಳಷ್ಟು ಗಣನೀಯ ನಷ್ಟವಾಗಿದೆ ಎಂಬುದನ್ನು ಎತ್ತಿ ತೋರಿಸಿದ್ದರು.

OFC ಕೇಬಲ್ ಗಳನ್ನು ಹಾಕುವಾಗ ಸಾರ್ವಜನಿಕ ಭೂಮಿಯನ್ನು ವ್ಯಾಪಕವಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಎತ್ತಿ ತೋರಿಸಿದ್ದಾರೆ. ಮೀಟರ್‌ಗೆ 1,500 ರೂ.ಗಳ ನಿಗದಿತ ಶುಲ್ಕಕ್ಕಿಂತ ಕಡಿಮೆ ಬೆಲೆಗೆ ಒಎಫ್ ಸಿ ಗಳನ್ನು ಹಾಕಲಾಗಿದೆ. ಬಿಬಿಎಂಪಿ ಅಧಿಕಾರಿಗಳು ಟೆಲಿಕಾಂ ಸೇವಾ ಕಂಪನಿಗಳೊಂದಿಗೆ ಶಾಮೀಲಾಗಿ ಅನಧಿಕೃತ ಸಂಸ್ಥೆಗಳು ತಮ್ಮ ನೆಟ್‌ವರ್ಕ್‌ಗಳನ್ನು ಹಾಕಲು ಅವಕಾಶ ಮಾಡಿಕೊಟ್ಟಿದ್ದಾರೆ. ಇದರಿಂದಾಗಿ ಗಮನಾರ್ಹ ಆರ್ಥಿಕ ನಷ್ಟವಾಗಿದೆ. “ಒಎಫ್ ಸಿ ಮಾಫಿಯಾ ಜಾಲದಿಂದ ಈ ಕಾನೂನುಬಾಹಿರ ಚಟುವಟಿಕೆಯು ಸಾವಿರಾರು ಕೋಟಿ ಆದಾಯ ನಷ್ಟಕ್ಕೆ ಕಾರಣವಾಗಿದೆ” ಎಂದು ವರದಿಯಲ್ಲಿ ತಿಳಿಸಲಾಗಿತ್ತು. 

ಟೆಂಡರ್‌ಶ್ಯೂರ್ ರಸ್ತೆಗಳಲ್ಲಿ ಯುಟಿಲಿಟಿ ಡಕ್ಟ್‌ಗಳಿಗೆ ಬೈಪಾಸ್ :

ಬಿಬಿಎಂಪಿ ಅಭಿವೃದ್ಧಿಪಡಿಸಿದ ಟೆಂಡರ್‌ಶ್ಯೂರ್ ರಸ್ತೆಗಳಲ್ಲಿ ಕೇಬಲ್ ಅಳವಡಿಕೆಗಾಗಿ ಯುಟಿಲಿಟಿ ಡಕ್ಟ್‌ಗಳು ಅಸ್ತಿತ್ವದಲ್ಲಿದ್ದರೂ, ಪಾಲಿಕೆಗೆ ಶುಲ್ಕವನ್ನು ಪಾವತಿಸುವುದನ್ನು ತಪ್ಪಿಸಲು ಟೆಲಿಕಾಂ ಕಂಪನಿಗಳು ಆಗಾಗ್ಗೆ ಅವುಗಳನ್ನು ಬೈಪಾಸ್ ಮಾಡುತ್ತವೆ. ಸಿಕ್ಕ ಸಿಕ್ಕ  ಮರಗಳು, ವಿದ್ಯುತ್ ಕಂಬಗಳು, ಕಟ್ಟಡಗಳು ಮತ್ತು ಟ್ರಾಫಿಕ್ ಸಿಗ್ನಲ್ ಕಂಬಗಳ ಮೇಲೆ ಕೇಬಲ್‌ಗಳನ್ನು ಪಾದಚಾರಿ ಮಾರ್ಗಕ್ಕೆ ತೊಡಕಾಗುವಂತೆ ಕಟ್ಟಲಾಗುತ್ತದೆ.

ಇದು ನಗರದ ಸೌಂದರ್ಯವನ್ನು ಹಾನಿಗೊಳಿಸುತ್ತದೆ ಮತ್ತು ವಾಹನ ಚಾಲಕರು ಮತ್ತು ಪಾದಚಾರಿಗಳಿಗೆ ಅಪಾಯವನ್ನು ಉಂಟು ಮಾಡುತ್ತಿದೆ. ಒಎಫ್ ಸಿ ಅಳವಡಿಸುವ ಅನುಮತಿಗಳಿಗೆ ಸಂಬಂಧಿಸಿದ ಫೈಲ್‌ಗಳ ಇತ್ತೀಚಿನ ಪರಿಶೀಲನೆಯ ಸಮಯದಲ್ಲಿ ಈ ಅಕ್ರಮಗಳು ಬೆಳಕಿಗೆ ಬಂದಿವೆ.

ನಿಗದಿಪಡಿಸಿದಕ್ಕಿಂತ ಕಡಿಮೆ ಶುಲ್ಕ ವಿಧಿಸಿ ಭ್ರಷ್ಟಾಚಾರ :

“2019ರಲ್ಲಿ ಆಗಿನ ಪಾಲಿಕೆ ಕಮಿಷನರ್ ನವೆಂಬರ್ 29, ರಂದು ಆದೇಶ ಹೊರಡಿಸಿದ್ದರೂ, ಟೆಲಿಕಾಂ ಕಂಪನಿಗಳಿಗೆ ಮೀಟರ್‌ಗೆ 850 ರೂ. ಶುಲ್ಕವನ್ನು ನಿಗದಿಪಡಿಸಿದಕ್ಕಿಂತ ಕಡಿಮೆ ಶುಲ್ಕ ವಿಧಿಸಲಾಗಿದೆ. ಇದು ಕಂಪನಿಗಳು ಮತ್ತು ಭ್ರಷ್ಟ ಅಧಿಕಾರಿಗಳಿಗೆ ಲಾಭ ತಂದಿತು. ಇದರಿಂದಾಗಿ ಮೂರು ವರ್ಷಗಳಲ್ಲಿ 86.6 ಕೋಟಿ ರೂ. ನಷ್ಟ ಉಂಟಾಗಿದೆ” ಎಂದು ಲೆಕ್ಕ ಪರಿಶೋಧನಾ ವರದಿ ಹೇಳುತ್ತದೆ. “ಕಮಿಷನರ್ ಆದೇಶಗಳನ್ನು ಪಾಲಿಸದಿದ್ದಕ್ಕಾಗಿ OFC ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಯಾವುದೇ ವಿವರಣೆಯನ್ನು ನೀಡಲು ವಿಫಲರಾಗಿದ್ದಾರೆ” ಎಂದು ಹೇಳಲಾಗಿದೆ.

ತಾಂತ್ರಿಕ ಸಿಬ್ಬಂದಿ ಕೊರತೆಯಿಂದಾಗಿ, ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಅಕ್ರಮಗಳನ್ನು ತಡೆಯಲು ಸಾಧ್ಯವಾಗಿಲ್ಲ ಎಂದು ವರದಿ ಹೇಳುತ್ತದೆ. ಅನಧಿಕೃತ OFC ಗಳನ್ನು ತೆರವುಗೊಳಿಸುವ ಪ್ರಯತ್ನಗಳಿಗೆ ದೂರಸಂಪರ್ಕ ಸೇವಾ ಪೂರೈಕೆದಾರರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಲೇ ಇರುತ್ತದೆ. ಇದೆಲ್ಲ ಸಂಘಟಿತ ಮಾಫಿಯಾ ಜಾಲ ಎಂಬ ಬಗ್ಗೆ ಸಾಕಷ್ಟು ಆರೋಪಗಳಿವೆ.

ಒಟ್ಟಾರೆಯಾಗಿ, ಒಂದೆಡೆ ಅನಧಿಕೃತ ಒಎಫ್ ಸಿ ಅಳವಡಿಕೆ ಲಂಗು ಲಗಾಮಿಲ್ಲದೆ ಮುಂದುವರೆಯುತ್ತಿದೆ. ಮತ್ತೊಂದೆಡೆ ಬೆಸ್ಕಾಂನ ಒಎಫ್‌ಸಿ ಅಳವಡಿಕೆ ಯೋಜನೆಯು ಬಿಬಿಎಂಪಿ ಮತ್ತು ಬೆಸ್ಕಾಂ ನಡುವಿನ ಭಿನ್ನಾಭಿಪ್ರಾಯಕ್ಕೆ ಹಾಗೂ ಪಾಲಿಕೆ ಆದಾಯ ನಷ್ಟಕ್ಕೆ ಕಾರಣವಾಗಲಿದ್ದು, ಈ ವಿವಾದವನ್ನು ಬಿಬಿಎಂಪಿ ಹೇಗೆ ಬಗೆಹರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

Next Post

ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

Next Post

ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

ಬಿಡಿಎ ಕಾರ್ಯಾಚರಣೆ - ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

Please login to join discussion

Like Us on Facebook

Follow Us on Twitter

Recent News

CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d