Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಳದ ಸಮಗ್ರ ಅಭಿವೃದ್ಧಿಗೆ ಹಸಿರು ನಿಶಾನೆ

ಮಾಸ್ಟರ್ ಪ್ಲಾನ್‌ಗೆ ಅನುಮೋದನೆ, ಭಕ್ತರಿಗೆ ಉತ್ತಮ ಸೌಲಭ್ಯಗಳ ಭರವಸೆ

by Bengaluru Wire Desk
July 1, 2025
in News Wire
Reading Time: 1 min read
0

ಸುಬ್ರಹ್ಮಣ್ಯ, ಜು.1 www.bengaluruwire.com : ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ, ದೇವಳದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಮಾಸ್ಟರ್ ಪ್ಲಾನ್‌ಗೆ ಅಧಿಕೃತ ಮುದ್ರೆ ಒತ್ತಿದ್ದಾರೆ. 

ಈ ಭೇಟಿಯ ಸಂದರ್ಭದಲ್ಲಿ, ಸಚಿವರು ದೇವಸ್ಥಾನದ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ, ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಗುತ್ತಿಗೆದಾರರಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಕುಕ್ಕೆಯಲ್ಲಿನ ಪ್ರಮುಖ ಅಭಿವೃದ್ಧಿ ಯೋಜನೆಗಳು:

 * ಆಶ್ಲೇಷ ಬಲಿ ಪೂಜಾ ಮಂದಿರ ನಿರ್ಮಾಣ: ದೇವಳದ ತುಳಸಿ ತೋಟದಲ್ಲಿ 4.62 ಕೋಟಿ ರೂ. ವೆಚ್ಚದಲ್ಲಿ ಆಶ್ಲೇಷ ಬಲಿ ಪೂಜಾ ಮಂದಿರ ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಮಾಜಿ ಮುಜರಾಯಿ ಸಚಿವ ಶ್ರೀ ಕೃಷ್ಣಯ್ಯ ಸೆಟ್ಟಿ ಅವರ ಅಳಿಯ ಶ್ರೀ ಜೈ ಪುನೀತ್ ಅವರು ಸೇವಾ ರೂಪದಲ್ಲಿ ಇದನ್ನು ನಿರ್ಮಿಸಲಿದ್ದಾರೆ.

 * ಸುತ್ತು ಪೌಳಿ ನಿರ್ಮಾಣ: ಶಾಸ್ತ್ರೋಕ್ತವಾಗಿ ಮತ್ತು ಸುದೃಢವಾಗಿ ಸುತ್ತು ಪೌಳಿ ನಿರ್ಮಿಸಲು ಸೂಚನೆ ನೀಡಲಾಗಿದೆ.

 * ಅನ್ನದಾಸೋಹ ಭವನ: ರಥ ಬೀದಿಯ ಬಲಭಾಗದಲ್ಲಿ 5000 ಭಕ್ತರಿಗೆ ನಿರಂತರ ಅನ್ನದಾಸೋಹ ನೀಡುವ ಸುಸಜ್ಜಿತ ಭವನ ನಿರ್ಮಿಸಲು ಸಮ್ಮತಿ ನೀಡಲಾಗಿದೆ.

 * ಸರ್ಪ ಸಂಸ್ಕಾರ ಯಾಗ ಶಾಲೆಗಳು: ಪ್ರತ್ಯೇಕ ಸರ್ಪ ಸಂಸ್ಕಾರ ಸೇವೆಗಾಗಿ ಹಾಲಿ ಇರುವ ಆದಿ ಸುಬ್ರಹ್ಮಣ್ಯದ ಸಾಮೂಹಿಕ ಯಾಗ ಶಾಲೆಯ ಬಳಿ 20 ಪ್ರತ್ಯೇಕ ಯಾಗ ಶಾಲೆಗಳನ್ನು ನಿರ್ಮಿಸಲು ಹಾಗೂ ಹೆಚ್ಚುವರಿ ಸರ್ಪ ಸಂಸ್ಕಾರಗಳಿಗಾಗಿ ಯೋಜನೆ ರೂಪಿಸಲು ಸೂಚಿಸಲಾಗಿದೆ.

 * ವಸತಿ ಗೃಹಗಳ ನಿರ್ಮಾಣ: ಭಕ್ತಾದಿಗಳ ಅನುಕೂಲಕ್ಕಾಗಿ ಇಂಜಾಡಿ ತೋಟದಲ್ಲಿ 896 ಕೊಠಡಿಗಳ ನಾಲ್ಕು ಬ್ಲಾಕ್ ಕಟ್ಟಡ ಸಮುಚ್ಚಯ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದರ ಅಂದಾಜು ವೆಚ್ಚ 230.50 ಕೋಟಿ ರೂ.. ಸಮೂಹ ಯಾತ್ರೆ ಕೈಗೊಳ್ಳುವ ಭಕ್ತಾದಿಗಳಿಗೆ ಮತ್ತು ಶಾಲಾ ಮಕ್ಕಳಿಗೆ 20 ರಿಂದ 50 ಜನ ಉಳಿದುಕೊಳ್ಳುವ ಹಾಲ್ ಮಾದರಿಯ ಡಾರ್ಮಿಟರಿ ವಸತಿಗೃಹ ನಿರ್ಮಾಣಕ್ಕೂ ಒಪ್ಪಿಗೆ ನೀಡಲಾಗಿದೆ.

 * ಶೌಚಾಲಯ ಸಂಕೀರ್ಣಗಳು: ದೇವಳದ ವ್ಯಾಪ್ತಿಯಲ್ಲಿ ನಾಲ್ಕು ಕಡೆ 24 ಶೌಚಾಲಯ, 12 ಸ್ನಾನಗೃಹ ಮತ್ತು 4 ಬಟ್ಟೆ ಬದಲಾಯಿಸುವ ಕೊಠಡಿಗಳನ್ನು ಒಳಗೊಂಡ ಸಂಕೀರ್ಣಗಳನ್ನು ನಿರ್ಮಿಸಲಾಗುವುದು.

 * ತ್ಯಾಜ್ಯ ವಿಲೇವಾರಿ ಘಟಕ: ಪರಿಸರ ಮಾಲಿನ್ಯ ತಡೆಗಟ್ಟಲು ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಸಮ್ಮತಿ ನೀಡಲಾಗಿದೆ.

 * ವಾಣಿಜ್ಯ ಸಂಕೀರ್ಣ ಮತ್ತು ವಸತಿಗೃಹ: ರಥ ಬೀದಿಯ ಎಡಭಾಗದಲ್ಲಿ ವಾಣಿಜ್ಯ ಸಂಕೀರ್ಣ, ಪಾರ್ಕಿಂಗ್ ವ್ಯವಸ್ಥೆ ಮತ್ತು ಎಕ್ಸಿಕ್ಯೂಟಿವ್ ಸೂಟ್ ರೂಮ್‌ಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ.

 * ಪಾರಂಪರಿಕ ರಥ ಬೀದಿ: ದೇವಳದ ಮುಂಭಾಗದಲ್ಲಿ ಪಾರಂಪರಿಕ ರಥ ಬೀದಿ, ಗ್ಯಾಲರಿ, ರಂಗಮಂದಿರ, ವೈದ್ಯಕೀಯ ಸೌಲಭ್ಯ, ಪೊಲೀಸ್ ಭದ್ರತಾ ಕೊಠಡಿ, ಅಂಗಡಿ ಮಳಿಗೆಗಳು, ಮ್ಯೂಸಿಯಂ, ಆಡಿಯೋ-ವಿಡಿಯೋ ಕೊಠಡಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಅಳವಡಿಸಲಾಗುವುದು.

 * ಸೇತುವೆ ಮತ್ತು ಬೈಪಾಸ್ ರಸ್ತೆ: ಪೂರ್ವ ದ್ವಾರದಲ್ಲಿ ಸೇತುವೆ ನಿರ್ಮಾಣ, ಸಂಚಾರ ದಟ್ಟಣೆ ಕಡಿಮೆ ಮಾಡಲು ಎಡೋಳಿ ಆರಂಪಾಡಿ ಬೈಪಾಸ್ ರಸ್ತೆ ನಿರ್ಮಾಣ, ಹಾಲಿ ಇರುವ ವಸತಿಗೃಹಗಳ ನವೀಕರಣ ಮತ್ತು ಕೊಳಚೆ ನೀರು ಶುದ್ಧೀಕರಣ ಘಟಕ ಮೇಲ್ದರ್ಜೆಗೇರಿಸಲು ಸೂಚನೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಆಯುಕ್ತರಾದ ವೆಂಕಟೇಶ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾರ್ಯನಿರ್ವಾಹಣಾಧಿಕಾರಿ  ಅರವಿಂದ ಅಯ್ಯಪ್ಪ ಸುತಗುಂಡಿ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

‘ಮಾಧ್ಯಮ ಕ್ಷೇತ್ರದಲ್ಲಿ ಏಕಸ್ವಾಮ್ಯತೆ ಅಳಿಯಬೇಕಿದೆ’ : ಮ್ಯಾಗ್ಸೆಸೆ ಪುರಸ್ಕೃತ ಪಿ.ಸಾಯಿನಾಥ್ ಅಭಿಮತ

Next Post

ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಅಪೂರ್ವ ಬಿದರಿ ವಿರುದ್ಧ ಎಫ್‌ಐಆರ್‌ಗೆ ಆದೇಶ

Next Post

ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಅಪೂರ್ವ ಬಿದರಿ ವಿರುದ್ಧ ಎಫ್‌ಐಆರ್‌ಗೆ ಆದೇಶ

Science News | ಯಕೃತ್‌ ಕ್ಯಾನ್ಸರ್ ಪತ್ತೆಗೆ ಐಐಎಸ್‌ಸಿ ವಿಶಿಷ್ಟ ಸಂವೇದಕ: ಅಪರೂಪದ ಲೋಹ ಬಳಸಿ ನೂತನ ತಂತ್ರಜ್ಞಾನ ಆವಿಷ್ಕಾರ

Please login to join discussion

Like Us on Facebook

Follow Us on Twitter

Recent News

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group