Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಗಾಳಿ ಆಂಜನೇಯ ದೇವಸ್ಥಾನ ಸರ್ಕಾರಕ್ಕೆ: ಹುಂಡಿ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಕ್ರಮ

ಪಾರದರ್ಶಕತೆ ಇಲ್ಲದ ಆಡಳಿತಕ್ಕೆ ಕೊನೆ, ಮುಜರಾಯಿ ಇಲಾಖೆಯ ವ್ಯಾಪ್ತಿಗೆ ದೇವಾಲಯ

by Bengaluru Wire Desk
July 11, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.11 www.bengaluruwire.com : ಬೆಂಗಳೂರು-ಮೈಸೂರು ರಸ್ತೆಯಲ್ಲಿನ ಬ್ಯಾಟರಾಯನಪುರದಲ್ಲಿರುವ ಪ್ರಸಿದ್ಧ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾಯಿಸುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವು ಸದಸ್ಯರು ಹುಂಡಿ ಹಣ ಎಣಿಸುವಾಗ ಹಣವನ್ನು ಎಗರಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ.

ಸಿಸಿಟಿವಿಯಲ್ಲಿ ಸೆರೆಯಾದ ದುರುಪಯೋಗ :

ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ದುರುಪಯೋಗಪಡಿಸಿಕೊಂಡಿದ್ದು, ಈ ಕುರಿತು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ಸರ್ಕಾರ ಸೂಚನೆ ನೀಡಿತ್ತು.

ಇತ್ತೀಚೆಗಷ್ಟೇ ಮುಜರಾಯಿ ಇಲಾಖೆ ಸರ್ಕಾರಕ್ಕೆ ವರದಿ ಸಲ್ಲಿಸಿ, ದೇವಾಲಯದ ಆಡಳಿತದಲ್ಲಿನ ಲೋಪಗಳನ್ನು ಎತ್ತಿ ತೋರಿಸಿತ್ತು. ಧಾರ್ಮಿಕ ದತ್ತಿ ಆಯುಕ್ತರು 2024ರ ಅಕ್ಟೋಬರ್‌ನಲ್ಲಿಯೇ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್‌ 42 ಮತ್ತು 43ರ ಅನ್ವಯ ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆಯಲು ಸ್ಪಷ್ಟ ಅಭಿಪ್ರಾಯದ ವರದಿ ನೀಡಲಾಗಿತ್ತು.

ದಾಖಲೆ ಇಲ್ಲದ ವಹಿವಾಟು, ಭಕ್ತರ ಭಾವನೆಗೆ ಧಕ್ಕೆ :

“ಆದಾಯ ಮತ್ತು ವೆಚ್ಚಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಯಾವುದೇ ದಾಖಲೆಗಳನ್ನು ನಿರ್ವಹಿಸಿರಲಿಲ್ಲ. ಮುಜರಾಯಿ ಇಲಾಖೆ ನೋಟಿಸ್‌ ನೀಡಿದ ಬಳಿಕವಷ್ಟೇ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ದೇವಾಲಯದ ಸಿಬ್ಬಂದಿ ಹುಂಡಿ ಹಣ ಕದ್ದಿರುವ ವಿಡಿಯೋ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿ ಭಕ್ತರ ಧಾರ್ಮಿಕ ಭಾವನೆಗೆ ಕುಂದುಂಟುಮಾಡಿದೆ” ಎಂದು ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬ್ಯಾಟರಾಯನಪುರದ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುತ್ತಿರುವುದು, ಹಣ ದುರುಪಯೋಗಪಡಿಸಿಕೊಂಡಿರುವುದು, ಮತ್ತು ಟ್ರಸ್ಟ್‌ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಸ್ಪಷ್ಟವಾಗಿ ಕಂಡುಬಂದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತಾಪಿತ ದೇವಾಲಯವನ್ನು ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ’ದ ಅಡಿಯಲ್ಲಿ ‘ಘೋಷಿತ ಸಂಸ್ಥೆ’ ಎಂದು ಘೋಷಿಸಿ ಜು.8 ರಂದು ಆದೇಶ ಹೊರಡಿಸಲಾಗಿದೆ.

ಕಾಯ್ದೆಯ ಉದ್ದೇಶ ಸ್ಪಷ್ಟಪಡಿಸಿದ ಇಲಾಖೆ :

ದೇವಸ್ಥಾನದ ಆಡಳಿತದಲ್ಲಿ ಲೋಪಗಳು ಕಂಡುಬಂದಲ್ಲಿ ಅಥವಾ ಹಣದ ದುರ್ಬಳಕೆಯ ಆರೋಪಗಳು ದೃಢಪಟ್ಟರೆ, ಅಂತಹ ದೇವಸ್ಥಾನವನ್ನು ಘೋಷಿತ ಸಂಸ್ಥೆಯನ್ನಾಗಿ ಘೋಷಿಸಿ, ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತೆಗೆದುಕೊಳ್ಳಲು ಈ ಕಾಯ್ದೆಯಲ್ಲಿ ಅವಕಾಶವಿದೆ ಎಂದು ಇಲಾಖೆ ತಿಳಿಸಿದೆ. 

ಈ ಕಾಯ್ದೆಯು ದೇವಾಲಯದ ಆಸ್ತಿಯ ರಕ್ಷಣೆ, ಹಣದ ಸಮರ್ಪಕ ನಿರ್ವಹಣೆ, ಮತ್ತು ಭಕ್ತರ ಹಿತಾಸಕ್ತಿಯನ್ನು ಕಾಪಾಡುವ ಗುರಿಯನ್ನು ಹೊಂದಿದೆ ಎಂದು ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಕ್ರಮವು ರಾಜ್ಯದ ಇತರ ದೇವಾಲಯಗಳ ಆಡಳಿತ ಮಂಡಳಿಗಳಿಗೂ ಒಂದು ಎಚ್ಚರಿಕೆಯ ಗಂಟೆಯಾಗಿದ್ದು, ಪಾರದರ್ಶಕ ಮತ್ತು ಪ್ರಾಮಾಣಿಕ ಆಡಳಿತದ ಅವಶ್ಯಕತೆಯನ್ನು ಒತ್ತಿಹೇಳುತ್ತದೆ.

ಮುಜರಾಯಿ ಇಲಾಖೆ ಆಯುಕ್ತರು ಏನಂತಾರೆ?:

“ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಆರ್ಥಿ ಅವ್ಯವಸ್ಥೆ, ಆಡಳಿತ ಮಂಡಳಿಯಲ್ಲಿನ ಅಕ್ರಮದ ಬಗ್ಗೆ ಸಾಕಷ್ಟು ದೂರುಗಳು, ಸಿಸಿಟಿವಿ ದಾಖಲೆಗಳು, ಮಾಧ್ಯಮಗಳಲ್ಲೂ ವರದಿಯಾದ ಹಿನ್ನಲೆಯಲ್ಲಿ ಮುಜರಾಯಿ ಇಲಾಖೆ ಸೂಕ್ತ ತನಿಖೆ ನಡೆಸಿ, ಸಾರ್ವಜನಿಕರು, ಭಕ್ತರ ಹಿತದೃಷ್ಟಿಯಿಂದ ದೇವಸ್ಥಾನದ ಸುಗಮ ಕಾರ್ಯನಿರ್ವಹಣೆಗಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್‌ 42 ಮತ್ತು 43ರ ಅನ್ವಯ ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ”

  • ಡಾ.ಎಂ.ವಿ.ವೆಂಕಟೇಶ್, ಮುಜರಾಯಿ ಇಲಾಖೆ ಆಯುಕ್ತರು

WhatsApp Join our WhatsApp Channel
Previous Post

Nursing Fees | ನರ್ಸಿಂಗ್ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟನೆ

Next Post

ಬೆಂಗಳೂರಿನ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಶಾಕ್‌: ಆತಂಕದಲ್ಲಿ ಉದ್ದಿಮೆದಾರರು

Next Post

ಬೆಂಗಳೂರಿನ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಶಾಕ್‌: ಆತಂಕದಲ್ಲಿ ಉದ್ದಿಮೆದಾರರು

Advisory special article | ಸಣ್ಣ ವ್ಯಾಪಾರಿಗಳೇ ಎಚ್ಚರ! ಡಿಜಿಟಲ್ ಪಾವತಿಗಳೇ ಈಗ ಜಿಎಸ್‌ಟಿ ಬ್ರಹ್ಮಾಸ್ತ್ರ

Please login to join discussion

Like Us on Facebook

Follow Us on Twitter

Recent News

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group