Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಶರಾವತಿ ಹಿನ್ನೀರಿನ ಮೇಲೆ ಬೃಹತ್ ಸೇತುವೆ ಲೋಕಾರ್ಪಣೆ: ಸಿಗಂದೂರು-ಸಾಗರ ಸಂಪರ್ಕ ಇನ್ನಷ್ಟು ಸುಗಮ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ಐತಿಹಾಸಿಕ ಸೇತುವೆಗೆ ಚಾಲನೆ; ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಮುಂದೂಡುವಂತೆ ಮಾಡಿದ ಆಗ್ರಹಕ್ಕೆ ಸ್ಪಂದಿಸದ ಕೇಂದ್ರ ಸಚಿವ

by Bengaluru Wire Desk
July 14, 2025
in News Wire, Public interest
Reading Time: 2 mins read
0

ಶಿವಮೊಗ್ಗ, ಜು.14 www.bengaluruwire.com : ಶರಾವತಿ ನದಿಯ ಹಿನ್ನೀರಿನಿಂದ ದಶಕಗಳಿಂದಲೂ ಸಂಪರ್ಕ ಕಳೆದುಕೊಂಡಿದ್ದ ಸಾಗರ ತಾಲೂಕಿನ ಹಲವು ಗ್ರಾಮಗಳಿಗೆ ಇದೀಗ ಹೊಸ ಸೇತುವೆ ಮೂಲಕ ಮುಕ್ತಿ ದೊರಕಿದೆ. 

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ನದಿಯ ಹಿನ್ನೀರಿನ ಮೇಲೆ ನಿರ್ಮಿಸಲಾದ ಭವ್ಯ ಸಿಗಂದೂರು ಸೇತುವೆ (ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ) ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಅಧಿಕೃತವಾಗಿ ಲೋಕಾರ್ಪಣೆಗೊಂಡಿತು. ಈ ಐತಿಹಾಸಿಕ ಸೇತುವೆಯು ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿಮೆ ಮಾಡಲಿದ್ದು, ಪ್ರಾದೇಶಿಕ ಪ್ರವಾಸೋದ್ಯಮ ಮತ್ತು ವಾಣಿಜ್ಯಕ್ಕೆ ಹೊಸ ಚೈತನ್ಯ ನೀಡಲಿದೆ.

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಎರಡು ಸಾವಿರದ ನಲವತ್ತೆರೆಡು ಕೋಟಿ ರೂಪಾಯಿ ವೆಚ್ಚದ ಒಂಬತ್ತು ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿಸಿದರು.   

ಕರ್ನಾಟಕದ ಅತಿದೊಡ್ಡ ಒಳನಾಡು ಸೇತುವೆ :

ಈ ತೂಗು ಸೇತುವೆಯು 2.1 ಕಿ.ಮೀ. ಉದ್ದವನ್ನು ಹೊಂದಿದ್ದು 472.08 – ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಭಾರತದ ಎರಡನೇ ಅತಿ ಉದ್ದದ ತೂಗು ಸೇತುವೆಯಾಗಿದೆ. ಜೊತೆಗೆ, ಇದು ಕರ್ನಾಟಕದ ಅತಿದೊಡ್ಡ ಒಳನಾಡು ಸೇತುವೆಯಾಗಿದ್ದು, ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮೈಲಿಗಲ್ಲು ಸ್ಥಾಪಿಸಿದೆ. ಈ ಸೇತುವೆಯು ಆಧುನಿಕ ಇಂಜಿನಿಯರಿಂಗ್ ತಂತ್ರಜ್ಞಾನಕ್ಕೆ ಉತ್ತಮ ನಿದರ್ಶನವಾಗಿದೆ. ಸೇತುವೆಯ ನಿರ್ಮಾಣಕ್ಕೆ ಮಾತ್ರ ₹378.3 ಕೋಟಿ ಬಳಸಲಾಗಿದೆ.

ಅಂಬಾರಗೋಡ್ಲು – ಕಳಸವಳ್ಳಿ ನಡುವೆ ನಿರ್ಮಿಸಲಾಗಿರುವ ತೂಗು ಸೇತುವೆ ಮೇಲೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಷಿ, ಬಿಜೆಪಿ ಹಿರಿಯ ಮುಖಂಡರಾದ ಬಿ.ಎಸ್.ಯಡಿಯೂರಪ್ಪ, ರಾಘವೇಂದ್ರ ಮತ್ತಿತರರಿದ್ದರು.

ಸಿಎಂ ಸಿದ್ದರಾಮಯ್ಯ ಅವರಿಂದ ಆಕ್ಷೇಪ :

ಆದಾಗ್ಯೂ, ಸೇತುವೆ ಉದ್ಘಾಟನೆ ಕಾರ್ಯಕ್ರಮದ ಕುರಿತು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿತ್ತು. ಕಾರ್ಯಕ್ರಮ ಮುಂದೂಡುವಂತೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆಯುವ ಮುಖೇನ ಮನವಿ ಮಾಡಿಕೊಂಡಿದ್ದರು. 

ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ, ಕಾರ್ಯಕ್ರಮವನ್ನು ಮುಂದೂಡುವಂತೆ ಹಾಗೂ ಸೂಕ್ತ ಪ್ರೋಟೋಕಾಲ್ ಅನುಸರಿಸಿ ರಾಜ್ಯದ ಪ್ರತಿನಿಧಿಗಳಿಗೂ ಸಮಾನ ಆಹ್ವಾನ ನೀಡುವಂತೆ ಮುಖ್ಯಮಂತ್ರಿಗಳು ಕೋರಿದ್ದರು ಎನ್ನಲಾಗಿದೆ. ಈ ಕುರಿತು ಪತ್ರ ವ್ಯವಹಾರವೂ ನಡೆದಿತ್ತು. ಆದರೆ, ಕೇಂದ್ರ ಸರ್ಕಾರ ಪೂರ್ವ ನಿಗದಿತ ದಿನಾಂಕದಂದೇ ಕಾರ್ಯಕ್ರಮ ನಡೆಸಲು ನಿರ್ಧರಿಸಿತು.

ಸಿಗಂದೂರು ಸೇತುವೆಯ ವಿಶೇಷತೆಗಳು ಹೀಗಿವೆ :

ನೂತನ ಕೇಬಲ್ ಸೇತುವೆ ಪಕ್ಷಿನೋಟ.

 * ಉದ್ದ ಮತ್ತು ವಿನ್ಯಾಸ: 2.1 ಕಿ.ಮೀ. ಉದ್ದ ಮತ್ತು 16 ಮೀಟರ್ ಅಗಲವಿರುವ ಈ ಸೇತುವೆಯು 740 ಮೀಟರ್ ಕೇಬಲ್ ಆಧಾರಿತ ಭಾಗವನ್ನು ಹೊಂದಿದೆ. ಇದು ‘ಎಕ್ಸ್‌ಟ್ರಾಡೋಸ್ಡ್ ಬ್ಯಾಲೆನ್ಸ್ಡ್ ಕ್ಯಾಂಟಿಲಿವರ್’ ವಿನ್ಯಾಸವನ್ನು ಬಳಸಿಕೊಂಡಿದ್ದು, ಸಾಂಪ್ರದಾಯಿಕ ಸೇತುವೆಗಳಿಗಿಂತ ಹೆಚ್ಚಿನ ಸ್ಥಿರತೆ ಮತ್ತು ದೀರ್ಘಾಯುಷ್ಯವನ್ನು ಖಾತರಿಪಡಿಸುತ್ತದೆ. 11 ಮೀಟರ್ ರಸ್ತೆಮಾರ್ಗ ಮತ್ತು 1.5 ಮೀಟರ್ ಫುಟ್‌ಪಾತ್‌ಗಳು ಪ್ರಯಾಣಿಕರಿಗೆ ಅನುಕೂಲವಾಗಲಿವೆ.

 * ತಾಂತ್ರಿಕ ವಿಶೇಷತೆ: 17 ಪಿಯರ್‌ಗಳು ಮತ್ತು ಎರಡು ಅಬಟ್‌ಮೆಂಟ್‌ಗಳನ್ನು ಬಳಸಿ ನಿರ್ಮಿಸಲಾಗಿದೆ. ಸಾಮಾನ್ಯ ಸೇತುವೆಗೆ 100 ಪಿಯರ್‌ಗಳು ಬೇಕಾಗುವ ಜಾಗದಲ್ಲಿ, ಇದು ಕೇವಲ 17 ಪಿಯರ್‌ಗಳಿಂದ ಸಿದ್ಧಗೊಂಡಿರುವುದು ತಾಂತ್ರಿಕ ಪ್ರಗತಿಗೆ ಸಾಕ್ಷಿ. ಕೇಬಲ್‌ಗಳು ಡೆಕ್‌ನ ಲಂಬ ಭಾರವನ್ನು ನೇರವಾಗಿ ಗೋಪುರಗಳಿಗೆ ವರ್ಗಾಯಿಸಿ ಸೇತುವೆಯ ಭದ್ರತೆಯನ್ನು ಹೆಚ್ಚಿಸುತ್ತವೆ.

 * ಗಟ್ಟಿತನದ ಗುಣಮಟ್ಟ: ಶರಾವತಿ ನದಿಯ ಭೋರ್ಗರೆವ ಪ್ರವಾಹವನ್ನು ಸಮರ್ಥವಾಗಿ ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ. 100 ವರ್ಷಗಳ ಸುದೀರ್ಘ ಆಯುಷ್ಯವನ್ನು ಖಚಿತಪಡಿಸಿಕೊಳ್ಳಲು ನಡೆಸಿದ ಲೋಡ್ ಟೆಸ್ಟಿಂಗ್‌ನಲ್ಲಿ, ಸೇತುವೆಯು 22 ಮಿಮೀ ವಿಚಲನದೊಂದಿಗೆ 100 ಟನ್ ಭಾರವನ್ನು ಯಶಸ್ವಿಯಾಗಿ ತಡೆದುಕೊಂಡಿದೆ.

ಸೇತುವೆಯ ಪ್ರಯೋಜನಗಳು:

 * ಪ್ರಯಾಣದ ಸಮಯ ಕಡಿತ: ಸಾಗರದಿಂದ ಸಿಗಂದೂರಿಗೆ ಸುಮಾರು 80 ಕಿ.ಮೀ. ಇದ್ದ ರಸ್ತೆ ಪ್ರಯಾಣವು ಈಗ ಸುಮಾರು 16 ಕಿ.ಮೀ.ಗೆ ಇಳಿಯಲಿದ್ದು, ಇದರಿಂದ 2 ಗಂಟೆಗಳಷ್ಟು ಪ್ರಯಾಣದ ಸಮಯ ಉಳಿತಾಯವಾಗಲಿದೆ.

 * ಧಾರ್ಮಿಕ ಮತ್ತು ಪ್ರವಾಸೋದ್ಯಮ ಉತ್ತೇಜನ: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ಸುಗಮಗೊಳಿಸುತ್ತದೆ. ಕೊಲ್ಲೂರು ಮತ್ತು ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸುವ ಮೂಲಕ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡುತ್ತದೆ.

 * ಪ್ರಾದೇಶಿಕ ಸಂಪರ್ಕ: ಲಿಂಗನಮಕ್ಕಿ ಜಲಾಶಯದ ನಿರ್ಮಾಣದಿಂದಾಗಿ 1960ರ ದಶಕದಲ್ಲಿ ಶರಾವತಿ ಹಿನ್ನೀರಿನಿಂದ ಬೇರ್ಪಟ್ಟ 40ಕ್ಕೂ ಹೆಚ್ಚು ಗ್ರಾಮಗಳಿಗೆ ಸಾಗರ ಮತ್ತು ಇತರ ಮುಖ್ಯ ಊರುಗಳೊಂದಿಗೆ ಸಂಪರ್ಕ ಕಲ್ಪಿಸುವ 60 ವರ್ಷಗಳ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದೆ.

* ಬದಲಿ ಸಾರಿಗೆ: ದೀರ್ಘಕಾಲದಿಂದ ಬಳಸಲಾಗುತ್ತಿದ್ದ ದೋಣಿ ಸಾರಿಗೆ ವ್ಯವಸ್ಥೆಗೆ ಇದು ಪೂರ್ಣ ವಿರಾಮ ಹಾಕಲಿದೆ. ತುರ್ತು ಸಂದರ್ಭಗಳಿಗಾಗಿ ಉಳಿದ ದೋಣಿಗಳನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.

ಐತಿಹಾಸಿಕ ಹಿನ್ನೆಲೆ:

ಲಿಂಗನಮಕ್ಕಿ ಜಲಾಶಯದ ನಿರ್ಮಾಣದ ನಂತರ ಸಾಗರ ತಾಲೂಕಿನ ಹಲವು ಗ್ರಾಮಗಳು ಶರಾವತಿ ಹಿನ್ನೀರಿನಿಂದ ಸಂಪರ್ಕ ಕಳೆದುಕೊಂಡು ದೋಣಿ ಸಾರಿಗೆಯನ್ನೇ ಅವಲಂಬಿಸಿದ್ದವು. ಸೇತುವೆ ನಿರ್ಮಾಣದ ಬೇಡಿಕೆ ಹಲವು ದಶಕಗಳ ಹಿಂದಿನದಾಗಿತ್ತು. 2018ರಲ್ಲಿ ಅಂದಿನ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರ ನಿರಂತರ ಪ್ರಯತ್ನಗಳು ಈ ಬೃಹತ್ ಯೋಜನೆ ಸಾಕಾರಗೊಳ್ಳಲು ಪ್ರಮುಖ ಕಾರಣವೆಂದು ಹೇಳಲಾಗುತ್ತದೆ.

ಅಂಬಾರಗೋಡ್ಲು-ಕಳಸವಳ್ಳಿ-ಸಿಗಂದೂರು, NH-369E ಮೂಲಕ ಈ ಸೇತುವೆ ಸಂಪರ್ಕ ಕಲ್ಪಿಸಲಿದೆ. ಈ ಸೇತುವೆ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ, ಇಡೀ ರಾಜ್ಯದ ಅಭಿವೃದ್ಧಿಗೆ ಹೊಸ ಸೇತುವೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

WhatsApp Join our WhatsApp Channel
Previous Post

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಇನ್ನಿಲ್ಲ: ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ

Next Post

ಸಮೋಸಾ, ಜಿಲೇಬಿ, ವಡಾ ಪಾವ್, ಚಹಾ ಬಿಸ್ಕತ್‌ಗಳಿಗೂ ಸಿಗರೇಟ್‌ ಪ್ಯಾಕ್ ಮೇಲಿರುವಂತೆ ಎಚ್ಚರಿಕೆ ಸಂದೇಶ

Next Post

ಸಮೋಸಾ, ಜಿಲೇಬಿ, ವಡಾ ಪಾವ್, ಚಹಾ ಬಿಸ್ಕತ್‌ಗಳಿಗೂ ಸಿಗರೇಟ್‌ ಪ್ಯಾಕ್ ಮೇಲಿರುವಂತೆ ಎಚ್ಚರಿಕೆ ಸಂದೇಶ

ಬೆಂಗಳೂರಿಗರಿಗೆ ಆಟೋ ದರ ಏರಿಕೆ ಶಾಕ್: ಆಗಸ್ಟ್ 1 ರಿಂದ ನೂತನ ದರ ಜಾರಿ : ಪ್ರತಿ ಕಿ.ಮೀಗೆ ₹3ರೂ ಹೆಚ್ಚಳ

Please login to join discussion

Like Us on Facebook

Follow Us on Twitter

Recent News

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

May 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group