Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | ಬಿಡಿಎ ಮಾಸ್ಟರ್‌ಪ್ಲಾನ್: PRR-2 ಭೂಸ್ವಾಧೀನಕ್ಕೆ 40: 60 ಸೂತ್ರ, ರೈತರಿಗೆ ಬಂಪರ್ ಆಫರ್?

ಮೇಜರ್ ಆರ್ಟಿಯಲ್ ರಸ್ತೆ ಮಾದರಿಯಲ್ಲಿ 800 ಎಕರೆ ಭೂಸ್ವಾಧೀನಕ್ಕೆ ನಿರ್ಧಾರ; PRR-1 ವ್ಯಾಪ್ತಿಯ 60 ಗ್ರಾಮಗಳಲ್ಲಿ NOC, ಸ್ಥಗಿತ: ಸಾರ್ವಜನಿಕರ ಆಕ್ರೋಶ

by Bengaluru Wire Desk
July 25, 2025
in Bengaluru Focus, BW Special, Public interest
Reading Time: 2 mins read
0

ಬೆಂಗಳೂರು, ಜು.25 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಮಹತ್ವಾಕಾಂಕ್ಷೆಯ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (PRR) ಯೋಜನೆಯ ಎರಡನೇ ಹಂತದ (PRR-2) ಭೂಸ್ವಾಧೀನಕ್ಕೆ ಹೊಸ, ವಿನೂತನ ಮಾದರಿಯನ್ನು ಅನುಸರಿಸಲು ನಿರ್ಧರಿಸಿದೆ. 

ಬಿಡಿಎಗೆ ಆರ್ಥಿಕ ಹೊರೆಯಾಗದಂತೆ, ಮಾಗಡಿ- ಮೈಸೂರು ರಸ್ತೆ ಮಧ್ಯದಲ್ಲಿ 10.35 ಕಿ.ಮೀ ಉದ್ದದ ಮೇಜರ್ ಆರ್ಟಿಯಲ್ ರಸ್ತೆ (MAR) ನಿರ್ಮಿಸಲು ಭೂಸ್ವಾಧೀನ ಮಾಡಿಕೊಂಡ ಮಾದರಿಯಲ್ಲಿ 40 :60 ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ನೀಡುವ ಮೂಲಕ 800 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಿಡಿಎ ಸಜ್ಜಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೆಲವೇ ದಿನಗಳಲ್ಲಿ ಅನುಮೋದನೆ ದೊರೆಯುವ ಸಾಧ್ಯತೆಯಿದೆ.

PRR-2: 800 ಎಕರೆಗೆ 40 : 60 ಸೂತ್ರ :

ಹೊಸೂರು ರಸ್ತೆಯಿಂದ ನೆಲಮಂಗಲ ರಸ್ತೆವರೆಗೆ 35 ಕಿ.ಮೀ. ಉದ್ದವಿರುವ PRR-2 ಹಂತಕ್ಕೆ ಒಟ್ಟು 800 ಎಕರೆ ಜಮೀನಿನ ಅವಶ್ಯಕತೆಯಿದೆ. ಪ್ರಸ್ತುತ ಈ ಭಾಗದಲ್ಲಿ ನೈಸ್ ರಸ್ತೆ ಪರ್ಯಾಯವಾಗಿ ಲಭ್ಯವಿರುವುದರಿಂದ, PRR-1ಕ್ಕೆ ಹೋಲಿಸಿದರೆ ಇಲ್ಲಿ ರಸ್ತೆ ಅಭಿವೃದ್ಧಿಯ ಒತ್ತಡ ತುಸು ಕಡಿಮೆಯಿದೆ. ಅಲ್ಲದೆ, ರೈತರಿಗೆ ಮಾರ್ಗಸೂಚಿ ದರದ ಅನ್ವಯ ಭೂ ಪರಿಹಾರ ನೀಡಿದರೆ ಬಿಡಿಎಗೆ ಆರ್ಥಿಕ ಹೊರೆಯನ್ನು ಹೊರಲು ಸಾಧ್ಯವಿಲ್ಲ.

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಕ್ಷೆ (Bangalore business Corridor Map).

ಈ ಹಿನ್ನೆಲೆಯಲ್ಲಿ, ಮಾಗಡಿ-ಮೈಸೂರು ರಸ್ತೆ ಮಧ್ಯೆ 10.35 ಕಿ.ಮೀ. ಉದ್ದದ ಮೇಜರ್ ಆರ್ಟಿರಿಯಲ್ ರೋಡ್ (MAR) ನಿರ್ಮಾಣಕ್ಕೆ 330 ಎಕರೆ ಭೂಸ್ವಾಧೀನಪಡಿಸಿಕೊಳ್ಳಲು ಅನುಸರಿಸಿದ ಯಶಸ್ವಿ ಮಾದರಿಯನ್ನೇ PRR-2 ಗೂ ಅಳವಡಿಸಲು ನಿರ್ಧರಿಸಲಾಗಿದೆ. ಆ ಸಂದರ್ಭದಲ್ಲಿ, ರೈತರಿಗೆ 40 : 60 ಅನುಪಾತದಲ್ಲಿ (ರೈತರಿಗೆ ಅಭಿವೃದ್ಧಿಪಡಿಸಿದ ಭೂಮಿ : ಬಿಡಿಎ ) ಕೆಂಪೇಗೌಡ ಲೇಔಟ್‌ನಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ನೀಡಲಾಗಿತ್ತು. 

ಇದರಿಂದ ಯಾವುದೇ ಭೂ ವಿವಾದವಿಲ್ಲದೆ, ಬಿಡಿಎ ಯಶಸ್ವಿಯಾಗಿ ಭೂಸ್ವಾಧೀನ ಪೂರ್ಣಗೊಳಿಸಿತ್ತು. ಇದೇ ಮಾದರಿಯಲ್ಲಿ, PRR-2 ರಸ್ತೆಗೆ ಹೊಂದಿಕೊಂಡಂತೆ ಆರು ಹೊಸ ಬಡಾವಣೆಗಳನ್ನು ನಿರ್ಮಿಸಿ, ಭೂಮಿ ನೀಡಿದ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ನೀಡಲು ಬಿಡಿಎ ಯೋಜನೆ ರೂಪಿಸಿದೆ. ಇದರಿಂದ ಬಿಡಿಎಗೆ ಆರ್ಥಿಕ ಹೊರೆಯೂ ಕಡಿಮೆಯಾಗಲಿದೆ.

PRR-1: 27,000 ಕೋಟಿ ಸಾಲ, ಟೋಲ್ ಮತ್ತು ಲೇಔಟ್ ಪ್ಲಾನ್ :

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್-1 (PRR-1) ಯೋಜನೆಗಾಗಿ ಬಿಡಿಎ ಹುಡ್ಕೋದಿಂದ 27,000 ಕೋಟಿ ರೂ. ಸಾಲ ಪಡೆದಿದೆ. ಇದರಲ್ಲಿ 21,000 ಕೋಟಿ ರೂ.ಗಳನ್ನು 2560 ಎಕರೆ ಭೂಸ್ವಾಧೀನಕ್ಕೆ ಬಳಸಿದರೆ, ಉಳಿದ 6000 ಕೋಟಿ ರೂ.ಗಳನ್ನು ರಸ್ತೆ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು. 73 ಕಿ.ಮೀ. ಉದ್ದದ ಈ ರಸ್ತೆಯನ್ನು 3-4 ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಬಿಡಿಎ ಹೊಂದಿದೆ. ನೆಲಮಂಗಲದಿಂದ ಹೊಸೂರು ನಡುವೆ ಹೆಸರಘಟ್ಟ, ದೊಡ್ಡಬಳ್ಳಾಪುರ, ಬಳ್ಳಾರಿ ರಸ್ತೆ, ಹೊಸಕೋಟೆ ಮತ್ತು ಸರ್ಜಾಪುರ ರಸ್ತೆಗಳನ್ನು PRR-1 ಸಂಧಿಸುತ್ತದೆ.

ಹುಡ್ಕೋದಿಂದ ಪಡೆದ 27,000 ಕೋಟಿ ರೂ. ಸಾಲಕ್ಕೆ ಮೊದಲ ಮೂರು ವರ್ಷ ಯಾವುದೇ ಬಡ್ಡಿಯನ್ನು (ಶೇ.8.35 ದರದಲ್ಲಿ) ಬಿಡಿಎ ಪಾವತಿಸುವುದಿಲ್ಲ. ಆದರೆ ನಂತರ, ವಾರ್ಷಿಕ ಸುಮಾರು 3,000 ಕೋಟಿ ರೂ.ಗಳಷ್ಟು ಅಸಲು-ಬಡ್ಡಿಯನ್ನು ಬಿಡಿಎ ಹುಡ್ಕೋಗೆ ಪಾವತಿಸಬೇಕಿದೆ. ಅಷ್ಟರೊಳಗೆ PRR-1 ರಸ್ತೆ ಅಭಿವೃದ್ಧಿಪಡಿಸಿ, ವಾರ್ಷಿಕ ತಲಾ 1,000 ಕೋಟಿ ರೂ.ಗಳನ್ನು ಟೋಲ್ ಮೂಲಕ ಸಂಗ್ರಹಿಸಿ, ಅದನ್ನು ಸಾಲ ಮರುಪಾವತಿಗೆ ಬಳಸಿಕೊಳ್ಳಲು ಬಿಡಿಎ ಯೋಜಿಸಿದೆ.

ಇದರ ಜೊತೆಗೆ, PRR-1 ರಸ್ತೆಗೆ ಹೊಂದಿಕೊಂಡಿರುವ ಗ್ರಾಮಗಳನ್ನು ಗುರುತಿಸಿ, ಒಟ್ಟು ಐದು ಹೊಸ ಲೇಔಟ್‌ಗಳನ್ನು ನಿರ್ಮಿಸಲು ಬಿಡಿಎ ನಿರ್ಧರಿಸಿದೆ. ಈ ಬಡಾವಣೆಗಳಿಗೆ PRRನಿಂದ ಸಂಪರ್ಕ ರಸ್ತೆ, ವಿದ್ಯುತ್, ನೀರು, ಒಳಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ, ಅದರಲ್ಲಿನ ನಿವೇಶನಗಳನ್ನು ಅರ್ಜಿದಾರರಿಗೆ, ಸಿಎ ನಿವೇಶನಗಳನ್ನು ಭೋಗ್ಯಕ್ಕೆ ಹಾಗೂ ಮೂಲೆ ನಿವೇಶನಗಳನ್ನು ಹರಾಜಿನ ಮೂಲಕ ಹೆಚ್ಚಿನ ದರಗಳಲ್ಲಿ ಮಾರಾಟ ಮಾಡಿ, ಅದರಿಂದ ಬಂದ ಹಣವನ್ನು ಹುಡ್ಕೋ ಸಾಲ ತೀರಿಸಲು ಬಳಸಿಕೊಳ್ಳುವ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಹೊಸ ಐದು ಲೇಔಟ್‌ಗಳ ನಿರ್ಮಾಣಕ್ಕಾಗಿ ಭೂಸ್ವಾಧೀನಕ್ಕೆ ಪ್ರಾಥಮಿಕವಾಗಿ ಗ್ರಾಮಗಳನ್ನು ಪಟ್ಟಿ ಮಾಡಲಾಗಿದೆ.

ಬಿಡಿಎ ಬಡಾವಣೆ ಅಭಿವೃದ್ಧಿಪಡಿಸುತ್ತಿರುವ ಸಾಂದರ್ಭಿಕ ಚಿತ್ರ.

NOC ಸ್ಥಗಿತ: ಸಾರ್ವಜನಿಕರ ಪರದಾಟ :

PRR-1 ಯೋಜನೆ ಹಾದುಹೋಗುವ ಸ್ಥಳದ ಸುತ್ತಮುತ್ತಲ ಗ್ರಾಮಗಳಲ್ಲಿ ಬಡಾವಣೆ ನಿರ್ಮಿಸಲು ನಿರ್ಧರಿಸಿರುವ ಬಿಡಿಎ, ಭೂಸ್ವಾಧೀನಕ್ಕೆ ನಿರ್ದಿಷ್ಟ ಸರ್ವೆ ನಂಬರ್‌ಗಳನ್ನು ಗುರುತಿಸುವ ಬದಲು ಇಡೀ ಗ್ರಾಮಗಳನ್ನೇ ಪಟ್ಟಿ ಮಾಡಿದೆ. ಹೀಗೆ ಪಟ್ಟಿ ಮಾಡಿದ ಗ್ರಾಮಗಳಲ್ಲಿನ ಯಾವುದೇ ಭೂಮಿಗೆ ಬಿಡಿಎ ಭೂ ಪರಿವರ್ತನೆಗೆ ನಿರಾಕ್ಷೇಪಣಾ ಪ್ರಮಾಣಪತ್ರ (NOC) ನೀಡುವುದನ್ನು ನಿಲ್ಲಿಸಿದೆ. ಭೂ ಬಳಕೆ ಉಪಯೋಗ ಬದಲಾವಣೆ (CLU), ಹೊಸ ಖಾಸಗಿ ಲೇಔಟ್ ನಿರ್ಮಾಣಕ್ಕೆ ಬೇಕಾದ ಅಭಿವೃದ್ಧಿ ಯೋಜನಾ ನಕ್ಷೆ, ಕಟ್ಟಡ ನಕ್ಷೆಗಳ ಮಂಜೂರಾತಿ, ಸೂಕ್ಷ್ಮ ವಲಯದಿಂದ  ತೆರವು ಮಾಡುವುದನ್ನೂ ಸ್ಥಗಿತಗೊಳಿಸಿದೆ.

ಬಿಡಿಎನ ಈ ಕ್ರಮದಿಂದಾಗಿ, PRR-1 ವ್ಯಾಪ್ತಿಯ ಬೆಂಗಳೂರು ಉತ್ತರ, ಪೂರ್ವ ಮತ್ತು ಹೊಸಕೋಟೆ ತಾಲೂಕಿನ ಸುಮಾರು 60 ಗ್ರಾಮಗಳ ನಾಗರಿಕರು ತಮ್ಮ ದೈನಂದಿನ ಕೆಲಸಗಳಿಗೆ ತೊಂದರೆ ಅನುಭವಿಸುತ್ತಿದ್ದಾರೆ. ಬಿಡಿಎ ಹಿಂದಿನ ಆಯುಕ್ತರ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಸ್ತುತ ಬಿಡಿಎ ಆಯುಕ್ತ ಮಣಿವಣ್ಣನ್ ಅವರು ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದ್ದಾರೆ.

ಬಿಡಿಎ ಆಯುಕ್ತರ ಖಡಕ್ ಸೂಚನೆ :

ಕ್ಯಾಪ್ಟನ್ ಮಣಿವಣ್ಣನ್.

ಆಯುಕ್ತ ಕ್ಯಾಪ್ಟನ್ ಮಣಿವಣ್ಣನ್ ಅವರು, PRR-1 ಅಡಿಯಲ್ಲಿ ಪಟ್ಟಿ ಮಾಡಿರುವ 60 ಗ್ರಾಮಗಳಲ್ಲಿ ಬಡಾವಣೆ ನಿರ್ಮಾಣಕ್ಕೆ ಅಗತ್ಯವಾದ ಭೂಸ್ವಾಧೀನಪಡಿಸಿಕೊಳ್ಳುವ ಸರ್ವೆ ನಂಬರ್‌ಗಳನ್ನು ಆದಷ್ಟು ಶೀಘ್ರದಲ್ಲಿ ಪಟ್ಟಿ ಮಾಡಿ, ಬಿಡಿಎ ಮಂಡಳಿ ಸಭೆಯಲ್ಲಿ ಒಪ್ಪಿಗೆ ಪಡೆಯಲು ಮೌಖಿಕ ಸೂಚನೆ ನೀಡಿದ್ದಾರೆ. 

ಅಲ್ಲದೆ, ಪಟ್ಟಿ ಮಾಡಿದ ಗ್ರಾಮದಲ್ಲಿ ಭೂಸ್ವಾಧೀನಕ್ಕಾಗಿ ಗುರುತಿಸಿರುವುದನ್ನು ಹೊರತುಪಡಿಸಿದ ಉಳಿದ ಪ್ರದೇಶಗಳಲ್ಲಿ ಭೂಪರಿವರ್ತನೆಗೆ ಬಿಡಿಎ ಎನ್‌ಒಸಿ, ನಕ್ಷೆ ಮಂಜೂರಾತಿ, ಭೂ ಉಪಯೋಗ ಬದಲಾವಣೆ ಸೇರಿದಂತೆ ಮತ್ತಿತರ ಸೇವೆಗಳನ್ನು ನೀಡುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ತಿಳಿಸಿವೆ.

ಬಿಡಿಎನ ಈ ಬೃಹತ್ ಯೋಜನೆ ಸ್ವಾಗತಾರ್ಹವಾಗಿದ್ದರೂ, ಭೂಸ್ವಾಧೀನ ಪ್ರಕ್ರಿಯೆ ಅಂತಿಮಗೊಳ್ಳುವ ಮೊದಲೇ ಗ್ರಾಮಗಳಲ್ಲಿನ ಭೂಮಿಗಳಿಗೆ ಭೂ ಪರಿವರ್ತನೆ ಸೇರಿದಂತೆ ಇನ್ನಿತರ ಸೇವೆಗಳನ್ನು ಸ್ಥಗಿತಗೊಳಿಸಿರುವುದು ಭೂಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಬಿಡಿಎ ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿರೀಕ್ಷೆಯಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ದಿನವೂ 7,000 ಹೆಜ್ಜೆ ನಡೆದರೆ, ನಿಮ್ಮ ಆರೋಗ್ಯಕ್ಕೆ ಬಂಪರ್ ಆಫರ್: ಸಾವಿನ, ಬುದ್ಧಿಮಾಂದ್ಯತೆ, ಖಿನ್ನತೆ ಅಪಾಯಕ್ಕೆ ಬ್ರೇಕ್

Next Post

Kundapra Kannada Habba | ಕುಂದಾಪ್ರ ಕನ್ನಡ ಹಬ್ಬಕ್ಕೆ ಸಿದ್ಧವಾಗಿದೆ ಬೆಂಗಳೂರು: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗಣ್ಯರಿಗೆ ಸನ್ಮಾನ

Next Post

Kundapra Kannada Habba | ಕುಂದಾಪ್ರ ಕನ್ನಡ ಹಬ್ಬಕ್ಕೆ ಸಿದ್ಧವಾಗಿದೆ ಬೆಂಗಳೂರು: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗಣ್ಯರಿಗೆ ಸನ್ಮಾನ

ಬೆಂಗಳೂರು: ಶ್ರಾವಣ ಮಾಸದ ಹೊಸ್ತಿಲಲ್ಲಿ ಕತ್ತಲಲ್ಲಿ ಮುಳುಗಿದ ಚಿಕ್ಕಪೇಟೆ : ಬಿಬಿಎಂಪಿ- ಬೆಸ್ಕಾಂ ನಿರ್ಲಕ್ಷ್ಯಕ್ಕೆ ವ್ಯಾಪಾರಿಗಳ ಹಿಡಿಶಾಪ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d