Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಉಲ್ಲಾಳ ವಾರ್ಡಿನ 100 ಅಡಿ ರಸ್ತೆಯಲ್ಲಿದೆ ಸ್ಪಾಟ್ ಔಟ್ ಪಾಯಿಂಟ್!! : ಕಣ್ಣೂರು ಡಾಂಬರ್ ಮಿಕ್ಸ್ ಪ್ಲಾಂಟ್ ಕಣ್ಮುಚ್ಚಿ 1 ವಾರ : ನಗರದಲ್ಲಿ ಸಾವಿಗೆ ಕಾದು ಕುಳಿತಿವೆ ಸಾವಿರಾರು ರಸ್ತೆಗುಂಡಿಗಳು

ಬೆಂಗಳೂರಲ್ಲಿ ಗುಂಡಿ ಗಂಡಾಂತರ | ಹಿಂದೆ ಇದೇ ಉಲ್ಲಾಳ 100 ಅಡಿ ಮುಖ್ಯರಸ್ತೆಯ ಉಲ್ಲಾಳ ಕೆರೆ ಪೊಲೀಸ್ ಔಟ್ ಪೋಸ್ಟ್ ಬಳಿಯಲ್ಲಿ ರಸ್ತೆ ಗುಂಡಿಗೆ ಯುವತಿಯೋರ್ವಳು ಬಲಿಯಾಗಿದ್ದರೂ ಬಿಬಿಎಂಪಿ ಪಾಠ ಕಲೆತಿಲ್ಲ.

by Bengaluru Wire Desk
July 29, 2025
in Bengaluru Focus, BW Special, Public interest
Reading Time: 2 mins read
0

ಬೆಂಗಳೂರು, ಜು.29 www.bengaluruwire.com : ರಾಜಧಾನಿಯಲ್ಲಿ ಈ ಬಾರಿಯ ಮಳೆಗಾಲದಲ್ಲಿ ಸಾಕಷ್ಟು ರಸ್ತೆಗುಂಡಿಗಳು ಸೃಷ್ಟಿಯಾಗುತ್ತಿದ್ದು, ಬಿಬಿಎಂಪಿಯಿಂದ ರಸ್ತಡ ಗುಂಡಿ ಮುಚ್ಚುವ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ರಸ್ತೆಗುಂಡಿ ಆಧಾರಿತ ಅಪಘಾತಗಳು ಸಂಭವಿಸುತ್ತಲೇ ಇದೆ. ಉಲ್ಲಾಳ ವಾರ್ಡಿನ ಉಲ್ಲಾಳ ಕೆರೆ ಮುಖ್ಯ ಪ್ರವೇಶದ್ವಾರದ ಬಳಿಯ 100 ಅಡಿ ರಸ್ತೆಯಲ್ಲಿನ ಗುಂಡಿಯು ವಾಹನ ಸವಾರರನ್ನು ಸಾವಿನ ಮನೆಗೆ ಕರೆದೊಯ್ಯಲು ಬಾಯ್ತೆರೆದು ಕೂತಿದೆ. 

ಇದೇ 100 ಅಡಿ ರಸ್ತೆಯಲ್ಲಿ ಕಾವೇರಿ 5ನೇ ಹಂತದ ಬೃಹದಾಕಾರದ ಪೈಪ್ ರಸ್ತೆ ಮಧ್ಯದಲ್ಲಿಯೇ ಹಾದು ಹೋಗಿದ್ದು, ಪೈಪ್ ನಿರ್ವಹಣೆಗೆಂದು ಈ ಭಾಗದಲ್ಲಿ ಬೆಂಗಳೂರು ನೀರು ಸರಬರಾಜ ಮತ್ತು ಒಳಚರಂಡಿ ಮಂಡಳಿಯು ಸಿಮೆಂಟ್ ಸ್ಲಾಬ್ ಅಳವಡಿಸಿದ್ದು, ಆ ಸ್ಲಾಬ್ ಎರಡೂ ಅಂಚಿನಲ್ಲಿ ಮಳೆಯಿಂದಾಗಿ ದೊಡ್ಡ ಗುಂಡಿ ಸೃಷ್ಟಿಯಾಗಿದೆ. ಇದು ಬಿಡಿಎ ವಿಶ್ವೇಶ್ವರಯ್ಯ ಬಡಾವಣೆ ವ್ಯಾಪ್ತಿಗೆ ಬರುತ್ತದೆ. ಆದರೆ ಇಂತಹ ಸಾವಿರಾರು ರಸ್ತೆಗುಂಡಿಗಳಿದ್ದರೂ ಬಿಡಿಎ ಆಗಲಿ, ಬಿಬಿಎಂಪಿ ಆಗಲಿ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ನಾಗರೀಕರು ದೂರುತ್ತಿದ್ದಾರೆ.

ಈಗಾಗಲೇ ಇದೇ ಸ್ಥಳದಲ್ಲಿ ಯುವತಿ ಸೇರಿದಂತೆ 3 ಮಂದಿ ಬಲಿಯಾಗಿದ್ದಾರೆ :

ಉಲ್ಲಾಳ 100 ಅಡಿ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಯ ಚಿತ್ರ.

ಈ ಹಿಂದೆ ಇದೇ ಜಾಗದಲ್ಲಿ ರಸ್ತೆಗುಂಡಿಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಬಿದ್ದು ಯುವತಿಯೋರ್ವಳ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಳು. ಈಗ ಮತ್ತದೇ ಜಾಗದಲ್ಲಿ ಬೃಹತ್ ಗುಂಡಿ ಸೃಷ್ಟಿಯಾಗಿದೆ. ಕೂಡಲೇ ಜಲ್ಲಿ, ಡಾಂಬರ್ ಹಾಕಿ ಅದನ್ನು ಮುಚ್ಚದಿದ್ದಲ್ಲಿ ರಸ್ತೆ ಅಪಘಾತ, ಸಾವುನೋವುಗಳಾಗುವ ಸಾಧ್ಯತೆಯಿದೆ. ಕಾವೇರಿ ನೀರಿಗಾಗಿ, ಜಲಮಂಡಳಿ 6 ಅಡಿ ವ್ಯಾಸದ ನೀರಿನ ಪೈಪ್ ಅಳವಡಿಕೆ ಸಂದರ್ಭದಲ್ಲಿ ಇದೇ ಸ್ಥಳದಲ್ಲಿ ಇಬ್ಬರು ಕೂಲಿ ಕಾರ್ಮಿಕರು ಮಳೆನೀರು ಗುಂಡಿಯಲ್ಲಿ ತುಂಬಿ ಇದೇ ಸ್ಥಳದಲ್ಲಿ ಮೃತಪಟ್ಟಿದ್ದರು.

ಗುಂಡಿಗಮನವಿಲ್ಲದ ಆಪ್ !! :

ಕೇವಲ ಇದೊಂದು ಸ್ಯಾಂಪಲ್ ಅಷ್ಟೆ. ನಗರದಲ್ಲಿ ಸರ್ವ ಋತುವಿನಲ್ಲೂ ರಸ್ತೆ ಗುಂಡಿ ಸಮಸ್ಯೆ ಸವಾರರನ್ನು ಬೆಂಬಿಡದೆ ಕಾಡುತ್ತಲೇ ಇವೆ. ನಗರದ ಹಲವೆಡೆ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದು, ಬೈಕ್‌ ಸವಾರರು ಹಾಗೂ ಪಾದಚಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗುತ್ತಿದ್ದಾರೆ. ಪಾಲಿಕೆ ಗುಂಡಿಗಮನ ಆಪ್ ಬಿಡುಗಡೆ ಮಾಡಿದ್ದರೂ, ಆ ಆಪ್ ನಲ್ಲಿ ಸಾರ್ವಜನಿಕರು ಸ್ಥಳದಲ್ಲೇ ಫೊಟೋ ಹೊಡೆಯಬಹುದು. ಆದರೆ ಮ್ಯಾಪ್ ನಲ್ಲಿ ಜಿಪಿಎಸ್ ನಕ್ಷೆ ದಾಖಲಿಸಲು ಸೂಕ್ತ ರೀತಿ ವ್ಯವಸ್ಥೆ ಕಲ್ಪಿಸಿಲ್ಲ. ಇಲ್ಲೂ ಅವ್ಯವಸ್ಥೆ ಮನೆ ಮಾಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 13,873 ಕಿ.ಮೀ ಉದ್ದದ ರಸ್ತೆ ಜಾಲವಿದೆ. ಈ ಪೈಕಿ ಆರ್ಟೀರಿಯಲ್‌ ಹಾಗೂ ಸಬ್ ಆರ್ಟಿಯಲ್ ರಸ್ತೆಗಳು 1,344 ಕಿ.ಮೀ. ಹಾಗೂ ವಾರ್ಡ್‌ ರಸ್ತೆಗಳು 12,529 ಕಿ.ಮೀ. ಉದ್ದ ಇವೆ. ಈ ರಸ್ತೆಗಳ ನಿರ್ವಹಣೆ, ದುರಸ್ತಿಗಾಗಿಯೇ ಬಿಬಿಎಂಪಿಯು ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಹಣವನ್ನು ವೆಚ್ಚ ಮಾಡುತ್ತದೆ ಹೀಗಿದ್ದರೂ, ನಗರದ ಬಹುತೇಕ ರಸ್ತೆಗಳು ಹೊಂಡ-ಗುಂಡಿಗಳಿಂದ ಅಧ್ವಾನವಾಗಿವೆ. 

ನಗರದಲ್ಲಿ ಜು.29ರ ತನಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 27,248 ರಸ್ತೆ ಹಾಗೂ ರಸ್ತೆ ಗುಂಡಿ ಸಂಬಂಧಿತ ದೂರುಗಳು ದಾಖಲಾಗಿದ್ದು, ಆ ಪೈಕಿ 13,714 ಪ್ರಕರಣಗಳು ಇತ್ಯರ್ಥಗೊಂಡಿವೆ. ಅಲ್ಲದೆ ಹೊಸದಾಗಿ 3,646 ಪ್ರಕರಣಗಳು ದಾಖಲಿವೆ. 1,450 ಕಡೆ ರಸ್ತೆ ಗುಂಡಿ ಮುಚ್ಚುವ, ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. 27 ಪ್ರಕರಣಗಳಲ್ಲಿ ಆ ರಸ್ತೆಗಳು ಗುತ್ತಿಗೆದಾರರ ದೋಷ ಹೊಣೆಗಾರಿಕೆ ಅವಧಿಯೊಳಗೆ ಬರುತ್ತಿದೆ. ಅಲ್ಲದೆ ದುರುದಾರರ 8,069 ಪ್ರಕರಣಗಳನ್ನು ತಿರಸ್ಕರಿಸಿರುವುದಕ್ಕೆ ಕಾರಣ ತಿಳಿದುಬಂದಿಲ್ಲ.

ಕಣ್ಣೂರು ಡಾಂಬರು ಮಿಶ್ರಣ ಘಟಕ ಕಣ್ಮುಚ್ಚಿ 1 ವಾರ :

ಮಹದೇವಪುರ ವಲಯದಲ್ಲಿನ ಕಣ್ಣೂರು ಡಾಂಬರು ಮಿಶ್ರಣ ಘಟಕ (Kannur Dambar Mix Plant)ದ ಚಿತ್ರ.

ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಅವರು ಅಧಿಕಾರಿಗಳಿಗೆ ಆಗಾಗ ಕಟ್ಟುನಿಟ್ಟಿನ ಸೂಚನೆ ನೀಡುತ್ತಲೇ ಇದ್ದಾರೆ. ಆದರೆ ರಸ್ತೆಗುಂಡಿಗಳಿಗೆ ಮುಕ್ತಿಯೇ ಸಿಕ್ಕಿಲ್ಲ. ಪಾಲಿಕೆಯು ಮಹದೇವಪುರ ವಲಯದ ಕಣ್ಣೂರಿನಲ್ಲಿ 4.5 ಎಕರೆ ಜಾಗದಲ್ಲಿ ಸುಮಾರು 7.5 ಕೋಟಿ ರೂ. ವೆಚ್ಚದಲ್ಲಿ 2020ರಲ್ಲಿ ಡಾಂಬರು ಮಿಶ್ರಣ ಘಟಕನ್ನು ಸ್ಥಾಪಿಸಿದ್ದು, ಈ ಘಟಕವು ಕಳೆದ ಒಂದು ವಾರದಿಂದ ಕಾರಣಾಂತರದಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ಘಟಕವು ಒಂದು ಗಂಟೆಗೆ 100/120 ಟಿಪಿಹೆಚ್ ಸಾಮರ್ಥ್ಯವುಳ್ಳ ಡಾಂಬರ್ ಅನ್ನು ತಯಾರಿಸಬಹುದಾಗಿದ್ದು, ದಿನಕ್ಕೆ 50 ರಿಂದ 60 ಟ್ರಕ್ ಡಾಂಬರ್ ತಯಾರಿಸಬಹುದಾಗಿದೆ. ಇದರಿಂದ ನಗರದಾದ್ಯಂತ ತ್ವರಿತ ಗತಿಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಬಹುದಾಗಿದೆ. ಪಾಲಿಕೆಯಿಂದಲೇ ಡಾಂಬರ್ ತಯಾರಿಸುತ್ತಿರುವುದರಿಂದ ವೆಚ್ಚ ಕಡಿಮೆಯಾಗಲಿದ್ದು, ಗುಣಮಟ್ಟ ಕಾಪಾಡಿಕೊಳ್ಳಬಹುದಾಗಿದೆ. ಯಾವುದೇ ಗುತ್ತಿಗೆದಾರರ ಮೇಲೆ ಅವಲಂಬಿತವಾಗುವ ಅಗತ್ಯವಿರುವುದಿಲ್ಲ ಎಂದು ಪಾಲಿಕೆಯ ಹಿಂದಿನ ಆಯುಕ್ತರು ಹೇಳಿದ್ದರು.

ಟನ್ ಗೆ 4,600₹ ಮೊತ್ತ  ಸಾಲದೆ ಸಾಗಣೆ, ಡಾಂಬರ್ ಹಾಕೋದು ನಿಂತಿದೆ :

ವರ್ತೂರು ಹಾಳಾದ ರಸ್ತೆಯಲ್ಲಿ ಶಾಲಾ ಬಸ್ಸೊಂದು ಸಂಚರಿಸುವಾಗ ಚಕ್ರವು ಹಳ್ಳದಲ್ಲಿ ಹೂತು ಅಪಘಾತವಾಗಿ ಶಾಲಾ ಮಕ್ಕಳನ್ನು ರಕ್ಷಿಸಲಾಗಿತ್ತು. (ಸಾಂದರ್ಭಿಕ ಚಿತ್ರ)

ಈ ಡಾಂಬರು ಮಿಶ್ರಣ ಘಟಕದಲ್ಲಿ ಬಿಬಿಎಂಪಿ ಹಾಟ್ ಮಿಕ್ಸ್ ಹಾಗೂ ಕೋಲ್ಡ್ ಮಿಕ್ಸ್ ಪೂರೈಕೆ ಮಾಡುತ್ತದೆ. ಹಾಟ್ ಮಿಕ್ಸ್ ಅನ್ನು ಗುತ್ತಿಗೆ ಪಡೆದ ಸಂಸ್ಥೆಯು ತಮ್ಮ ಟ್ರಕ್ ನಲ್ಲಿ ಕೊಂಡೊಯ್ದು, ಬಿಬಿಎಂಪಿ ವ್ಯಾಪ್ತಿಯ ಆರ್ಟಿಯಲ್ ಹಾಗೂ ಸಬ್ ಆರ್ಟಿಯಲ್ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತದೆ. ಆದರೆ ಇದೀಗ ಗುತ್ತಿಗೆ ಪಡೆದ ವೆಂಕಟಾಚಲಪತಿ ಸಂಸ್ಥೆಯು ಪಾಲಿಕೆ ಡಾಂಬರ್ ಕೊಂಡೊಯ್ದು ರಸ್ತೆಗೆ ಹಾಕಲು ಟನ್ ಗೆ ನೀಡುವ 4,600₹ ಹಣ ಯಾವುದಕ್ಕೂ ಸಾಲದೆಂದು ಸಾಗಣೆ ಹಾಗೂ ಡಾಂಬರ್ ಹಾಕುತ್ತಿಲ್ಲ ಎಂದು ಪಾಲಿಕೆ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಬಿಬಿಎಂಪಿಯಿಂದ ನಿರ್ಮಿಸಿರುವ ಡಾಂಬರು ಮಿಶ್ರಣ ಘಟಕವು ಸಂಪೂರ್ಣ ಸ್ವಯಂ ಚಾಲಿತವಾಗಿದ್ದು, ಘಟಕದಲ್ಲಿ ತಯಾರಾಗುವ ಡಾಂಬರಿನ ಉಷ್ಣಾಂಶವು 150 ರಿಂದ 160 ಇರಲಿದ್ದು, ಗುಂಡಿಗಳು ಮುಚ್ಚುವ ಸ್ಥಳಕ್ಕೆ ಹೋಗುವ ವೇಳೆಗೆ 120 ಉಷ್ಣಾಂಶವಿದ್ದರೆ ಉತ್ತಮ ಗುಣಮಟ್ಟದಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವ ಜೊತೆಗೆ ಹೆಚ್ಚುದಿನಗಳ‌ ಕಾಲ ಬಾಳಿಕೆ ಬರುತ್ತದೆ ಎಂದು ಹೇಳಲಾಗಿತ್ತು. ಆದರೆ ಈ ಘಟಕವಿಟ್ಟುಕೊಂಡೂ ನಗರದಲ್ಲಿನ ರಸ್ತೆಗುಂಡಿಗಳಿಗೆ ಪರಿಹಾರ ಇನ್ನೂ ದೊರೆತಿಲ್ಲ.

ಒಂದೆಡೆ ರಸ್ತೆ ಗುಂಡಿ : ಮತ್ತೊಂದೆಡೆ ರಸ್ತೆ ಅಪಘಾತ ನಿಲ್ಲುತ್ತಿಲ್ಲ :

ನಗರದ ಹಲವೆಡೆ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದು, ಬೈಕ್‌ ಸವಾರರು ಹಾಗೂ ಪಾದಚಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗುತ್ತಿದ್ದಾರೆ. ಸಂಚಾರ ಪೊಲೀಸರು ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಬೆಂಗಳೂರಿನಲ್ಲಿ (ಬೆಂಗಳೂರು) 2024 ರ ರಸ್ತೆ ಅಪಘಾತಗಳ ಇತ್ತೀಚಿನ ಲಭ್ಯವಿರುವ ಅಂಕಿಅಂಶಗಳು ಈ ಕೆಳಗಿನವುಗಳನ್ನು ತೋರಿಸುತ್ತವೆ:

ಒಟ್ಟು ಅಪಘಾತಗಳು: 4,784 (2023 ಕ್ಕೆ ಹೋಲಿಸಿದರೆ 4% ಇಳಿಕೆ)

ಮಾರಣಾಂತಿಕ ಅಪಘಾತಗಳು: 871

ಒಟ್ಟು ಸಾವುಗಳು: 893

ಮಾರಣಾಂತಿಕವಲ್ಲದ ಅಪಘಾತಗಳು: 3,913

ಒಟ್ಟು ಗಾಯಗೊಂಡವರು: 4,052

ಆದರೆ ಗಮನಾರ್ಹ ಸಂಖ್ಯೆಯ ಅಪಘಾತಗಳು ಸ್ವಯಂ (ಒಂಟಿ ವಾಹನ) ಅಪಘಾತಗಳಿಗೆ ಕಾರಣವಾಗಿವೆ. ಇದು 2024 ರಲ್ಲಿ ಶೇ.3.34 ರಷ್ಟು ಹೆಚ್ಚಾಗಿದೆ ಎಂದು ಈ ಹಿಂದೆ ಸಂಚಾರಿ ಪೊಲೀಸರು ಬಿಡುಗಡೆ ಮಾಡಿದ ಅಂಕಿಅಂಶದಲ್ಲಿ ವರದಿಯಾಗಿದೆ. ಒಟ್ಟಾರೆ ಮಳೆಗಾಲದಲ್ಲಿ ಬೆಂಗಳೂರಿನಲ್ಲಿ ಆರ್ಟಿಯಲ್ ಹಾಗೂ ಸಬ್ ಆರ್ಟಿಯಲ್ ರಸ್ತೆಗಳಿಗೆ ಹೋಲಿಸಿದರೆ ವಾರ್ಡ್ ರಸ್ತೆಗಳು ಗುಂಡಿಮಯವಾಗಿದೆ. ಇದು ಸಾವುನೋವುಗಳಿಗೆ ಕಾರಣವಾಗದಂತೆ ಪಾಲಿಕೆ ಕೂಡಲೇ ಗಮನಹರಿಸಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

WhatsApp Join our WhatsApp Channel
Previous Post

BUWJ News | ಬೆಂಗಳೂರು ನಗರ ಪತ್ರಕರ್ತರಿಗೆ ಬಸ್ ಪಾಸ್: ಸಿಎಂ ಜೊತೆ ಚರ್ಚಿಸಿ ಕ್ರಮ – ಸಚಿವ ರಾಮಲಿಂಗ ರೆಡ್ಡಿ ಭರವಸೆ

Next Post

KSRTC News | ಕೆಎಸ್‌ಆರ್‌ಟಿಸಿಯಲ್ಲಿ ಹೊಸ ಲಗೇಜ್ ನಿಯಮ ಜಾರಿ ವದಂತಿ: ಸ್ಪಷ್ಟನೆ ನೀಡಿದ ನಿಗಮ

Next Post
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

KSRTC News | ಕೆಎಸ್‌ಆರ್‌ಟಿಸಿಯಲ್ಲಿ ಹೊಸ ಲಗೇಜ್ ನಿಯಮ ಜಾರಿ ವದಂತಿ: ಸ್ಪಷ್ಟನೆ ನೀಡಿದ ನಿಗಮ

ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

Lokayukta Raid | 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ: 5 ಭ್ರಷ್ಟ ಅಧಿಕಾರಿಗಳಿಂದ 24.44 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group