Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Lokayukta Raid | 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ: 5 ಭ್ರಷ್ಟ ಅಧಿಕಾರಿಗಳಿಂದ 24.44 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಬಿಡಿಎ, ಬಿಬಿಎಂಪಿ ಅಧಿಕಾರಿ ಸೇರಿ ಐವರು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸ ಹಾಗೂ ಇತರ ಸ್ಥಳಗಳಲ್ಲಿ ಏಕ ಕಾಲದಲ್ಲಿ ಶೋಧನೆ.

by Bengaluru Wire Desk
July 29, 2025
in Bengaluru Focus, News Wire
Reading Time: 2 mins read
0
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.29 www.bengaluruwire.com : ಒಂದು ವಾರದ ಒಳಗಾಗಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಸಮರ ಸಾರಿ, ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿ ಐವರು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳು ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. 

ಮಂಗಳವಾರ (ಜುಲೈ 29, 2025) ರಾಜ್ಯದ 25ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆದ ಈ ಶೋಧ ಕಾರ್ಯಾಚರಣೆಯಲ್ಲಿ ಒಟ್ಟು 24.44 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರಾಸ್ತಿ, ನಗದು, ಚಿನ್ನಾಭರಣ ಹಾಗೂ ವಾಹನಗಳನ್ನು ಪತ್ತೆ ಹಚ್ಚುವ ಮೂಲಕ ಭ್ರಷ್ಟರ ಹೆಡೆಮುರಿ ಕಟ್ಟುವಲ್ಲಿ ಲೋಕಾಯುಕ್ತ ಯಶಸ್ವಿಯಾಗಿದೆ.

ಬೆಂಗಳೂರು ನಗರ, ಚಿತ್ರದುರ್ಗ, ಹಾಸನ ಮತ್ತು ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಈ ಐವರು ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಪ್ರಕರಣಗಳು ದಾಖಲಾಗಿದ್ದವು.

ದಾಳಿಯಲ್ಲಿ ಪತ್ತೆಯಾದ ಆಸ್ತಿ ವಿವರಗಳು:

 * ಕೆ. ಓಂಪ್ರಕಾಶ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಬಿಡಿಎ, ಬೆಂಗಳೂರು: ಇವರ 5 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, 4.78 ಕೋಟಿ ರೂ. ಮೌಲ್ಯದ 2 ನಿವೇಶನಗಳು ಮತ್ತು 2 ಮನೆಗಳು ಪತ್ತೆಯಾಗಿವೆ. ಜೊತೆಗೆ, 5 ಲಕ್ಷ ರೂ. ನಗದು, 60.96 ಲಕ್ಷ ರೂ. ಮೌಲ್ಯದ ಆಭರಣಗಳು, 34 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು 48 ಲಕ್ಷ ರೂ. ಮೌಲ್ಯದ ಇತರ ಎಫ್‌ಡಿ ಸೇರಿದಂತೆ ಒಟ್ಟು 1.47 ಕೋಟಿ ರೂ. ಚರಾಸ್ತಿ ಪತ್ತೆಯಾಗಿದೆ. ಒಟ್ಟಾರೆ, ಓಂಪ್ರಕಾಶ್ ಅವರ ಬಳಿ 6.26 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಕೆ. ಓಂ ಪ್ರಕಾಶ್ ಅವರ ಮನೆ.

 * ಎನ್. ವೆಂಕಟೇಶ್, ತೆರಿಗೆ ನಿರ್ಧಾರಕ, ಶೆಟ್ಟಿಹಳ್ಳಿ ಉಪವಿಭಾಗ, ಬಿಬಿಎಂಪಿ, ಬೆಂಗಳೂರು: ಇವರ 4 ಸ್ಥಳಗಳಲ್ಲಿ ನಡೆದ ಶೋಧದಲ್ಲಿ 2.25 ಕೋಟಿ ರೂ. ಮೌಲ್ಯದ 2 ನಿವೇಶನಗಳು, 3 ಮನೆಗಳು, 1 ಫಾರ್ಮ್ ಹೌಸ್ ಮತ್ತು 6 ಎಕರೆ 17 ಗುಂಟೆ ಕೃಷಿ ಭೂಮಿ ಪತ್ತೆಯಾಗಿದೆ. ಅಲ್ಲದೆ, 2.80 ಲಕ್ಷ ರೂ. ನಗದು, 10.85 ಲಕ್ಷ ರೂ. ಮೌಲ್ಯದ ಆಭರಣಗಳು, 3.85 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು 15 ಲಕ್ಷ ರೂ. ಮೌಲ್ಯದ ಇತರ ವಸ್ತುಗಳು ಸೇರಿ ಒಟ್ಟು 32.50 ಲಕ್ಷ ರೂ. ಚರಾಸ್ತಿ ಪತ್ತೆಯಾಗಿದೆ. ಇವರ ಒಟ್ಟು ಅಕ್ರಮ ಆಸ್ತಿ ಮೌಲ್ಯ 2.57 ಕೋಟಿ ರೂ. ಆಗಿದೆ.

ಬಿಬಿಎಂಪಿ ಕಂದಾಯ ನಿರ್ಧಾರಕ ಎನ್.ವೆಂಕಟೇಶ್ ಬಂಗಲೆ.
ಎನ್.ವೆಂಕಟೇಶ್ ಮನೆಯಲ್ಲಿ ಪತ್ತೆಯಾದ ಬೆಲೆ ಬಾಳುವ ವಾಚ್, ಚಿನ್ನಾಭರಣ ಹಾಗೂ ಬೆಳ್ಳಿ ಪೂಜಾ ಸಾಮಾನುಗಳು.

 * ಡಾ. ವೆಂಕಟೇಶ್ ಜಿ, ತಾಲೂಕು ಆರೋಗ್ಯ ಅಧಿಕಾರಿ, ಹಿರಿಯೂರು ತಾಲೂಕು, ಚಿತ್ರದುರ್ಗ ಜಿಲ್ಲೆ: ಇವರ 3 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, 2.87 ಕೋಟಿ ರೂ. ಮೌಲ್ಯದ 5 ನಿವೇಶನಗಳು, 2 ಮನೆಗಳು ಮತ್ತು 3 ಎಕರೆ 5 ಗುಂಟೆ ಕೃಷಿ ಭೂಮಿ ಪತ್ತೆಯಾಗಿದೆ. ಇದರೊಂದಿಗೆ 54,200 ರೂ. ನಗದು, 17.25 ಲಕ್ಷ ರೂ. ಮೌಲ್ಯದ ಆಭರಣಗಳು, 21.40 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು 28.30 ಲಕ್ಷ ರೂ. ಮೌಲ್ಯದ ಇತರ ಗೃಹೋಪಯೋಗಿ ವಸ್ತುಗಳು ಸೇರಿದಂತೆ 67.49 ಲಕ್ಷ ರೂ. ಚರಾಸ್ತಿ ಪತ್ತೆಯಾಗಿದೆ. ಇವರ ಒಟ್ಟು ಅಕ್ರಮ ಆಸ್ತಿ ಮೌಲ್ಯ 3.54 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಡಾ.ವೆಂಕಟೇಶ್ ಜಿ ಅವರ ಐಷಾರಾಮಿ ನಿವಾಸ.

 * ಜಯಣ್ಣ ಆರ್, ಕಾರ್ಯಪಾಲಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಹಾಸನ ವಿಭಾಗ, ಹಾಸನ: ಇವರ 5 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ 5.59 ಕೋಟಿ ರೂ. ಮೌಲ್ಯದ 17 ನಿವೇಶನಗಳು, 8 ಮನೆಗಳು ಮತ್ತು 1 ಎಕರೆ 36 ಗುಂಟೆ ಕೃಷಿ ಭೂಮಿ ಪತ್ತೆಯಾಗಿದೆ. ಜೊತೆಗೆ, 1.36 ಲಕ್ಷ ರೂ. ನಗದು, 18.99 ಲಕ್ಷ ರೂ. ಮೌಲ್ಯದ ಆಭರಣಗಳು, 26 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು 23 ಲಕ್ಷ ರೂ. ಮೌಲ್ಯದ ಇತರ ಠೇವಣಿಗಳು ಮತ್ತು ಲಾಕರ್‌ಗಳು ಸೇರಿ 69.35 ಲಕ್ಷ ರೂ. ಚರಾಸ್ತಿ ಪತ್ತೆಯಾಗಿದೆ. ಇವರ ಒಟ್ಟು ಅಕ್ರಮ ಆಸ್ತಿ ಮೌಲ್ಯ 6.28 ಕೋಟಿ ರೂ. ಆಗಿದೆ. ಇದನ್ನೂ ಓದಿ : BW SPECIAL | ಉಲ್ಲಾಳ ವಾರ್ಡಿನ 100 ಅಡಿ ರಸ್ತೆಯಲ್ಲಿದೆ ಸ್ಪಾಟ್ ಔಟ್ ಪಾಯಿಂಟ್!! : ಕಣ್ಣೂರು ಡಾಂಬರ್ ಮಿಕ್ಸ್ ಪ್ಲಾಂಟ್ ಕಣ್ಮುಚ್ಚಿ 1 ವಾರ : ನಗರದಲ್ಲಿ ಸಾವಿಗೆ ಕಾದು ಕುಳಿತಿವೆ ಸಾವಿರಾರು ರಸ್ತೆಗುಂಡಿಗಳು

ಆರ್.ಜಯಣ್ಣ ಅವರ ನಿವಾಸ.

 * ಅಂಜನೇಯ ಮೂರ್ತಿ ಎಂ, ಕಿರಿಯ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗೌರಿಬಿದನೂರು ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ: ಇವರ 8 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, 4.83 ಕೋಟಿ ರೂ. ಮೌಲ್ಯದ 5 ನಿವೇಶನಗಳು, 1 ಮನೆ ಮತ್ತು 1 ವಾಣಿಜ್ಯ ಸಂಕೀರ್ಣ ಪತ್ತೆಯಾಗಿದೆ. ಇವರ ಬಳಿ 50 ಲಕ್ಷ ರೂ. ಮೌಲ್ಯದ ಆಭರಣಗಳು, 15.65 ಲಕ್ಷ ರೂ. ಮೌಲ್ಯದ ವಾಹನಗಳು ಮತ್ತು 28 ಲಕ್ಷ ರೂ. ಮೌಲ್ಯದ ಇತರ ವಸ್ತುಗಳು ಸೇರಿ 93.65 ಲಕ್ಷ ರೂ. ಚರಾಸ್ತಿ ಪತ್ತೆಯಾಗಿದೆ. ಅಂಜನೇಯ ಮೂರ್ತಿ ಅವರ ಒಟ್ಟು ಅಕ್ರಮ ಆಸ್ತಿ ಮೌಲ್ಯ 5.77 ಕೋಟಿ ರೂ. ಆಗಿದೆ.

ಎಂ.ಆಂಜನೇಯಮೂರ್ತಿ ಬೃಹತ್ ಬಂಗಲೆ.
ಸಂಗ್ರಹ ಚಿತ್ರ.

ಒಟ್ಟಿನಲ್ಲಿ ಲೋಕಾಯುಕ್ತ ಪೊಲೀಸರ ಈ ದಿಟ್ಟ ಕ್ರಮವು ಭ್ರಷ್ಟಾಚಾರ ನಿರ್ಮೂಲನೆಯ ಬದ್ಧತೆಯನ್ನು ಎತ್ತಿ ಹಿಡಿದಿದೆ. ಮುಂದಿನ ದಿನಗಳಲ್ಲಿ ಇಂತಹ ಮತ್ತಷ್ಟು ಕಾರ್ಯಾಚರಣೆಗಳು ನಡೆಯುವ ಸಾಧ್ಯತೆ ಇದೆ.

WhatsApp Join our WhatsApp Channel
Previous Post

KSRTC News | ಕೆಎಸ್‌ಆರ್‌ಟಿಸಿಯಲ್ಲಿ ಹೊಸ ಲಗೇಜ್ ನಿಯಮ ಜಾರಿ ವದಂತಿ: ಸ್ಪಷ್ಟನೆ ನೀಡಿದ ನಿಗಮ

Next Post

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳ 100 ಅಡಿ ರಸ್ತೆಯ ಗುಂಡಿ ತಾತ್ಕಾಲಿಕ ದುರಸ್ತಿ; 2 ವಾರದಲ್ಲಿ ಕಣ್ಣೂರು ಡಾಂಬರು ಮಿಶ್ರಣ ಘಟಕ ಪುನರಾರಂಭ

Next Post

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳ 100 ಅಡಿ ರಸ್ತೆಯ ಗುಂಡಿ ತಾತ್ಕಾಲಿಕ ದುರಸ್ತಿ; 2 ವಾರದಲ್ಲಿ ಕಣ್ಣೂರು ಡಾಂಬರು ಮಿಶ್ರಣ ಘಟಕ ಪುನರಾರಂಭ

ನಿಮ್ಮ ಹೆಸರಲ್ಲಿ ಬೇರೆಯವರು, ನಿಮಗೆ ತಿಳಿಯದಂತೆ ಮೊಬೈಲ್ ನಂಬರ್ ಬಳಸ್ತಿದ್ರೆ ಕ್ಷಣಮಾತ್ರದಲ್ಲಿ ಪತ್ತೆ ಹಚ್ಚೋದು ಹೇಗೆ?

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group