Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

79th Independence Day | ದೇಶದ ಶೇ.10ರಷ್ಟು ಶ್ರೀಮಂತರ ಬಳಿ 80 ರಷ್ಟು ಸಂಪತ್ತು ಸಂಗ್ರಹ: ಸಿಎಂ ಸಿದ್ದರಾಮಯ್ಯ ಕಳವಳ

ಅಸಮಾನತೆ ತೊಡೆದುಹಾಕಲು ಗ್ಯಾರಂಟಿ ಯೋಜನೆಗಳು-ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕ ಮುಂಚೂಣಿ

by Bengaluru Wire Desk
August 15, 2025
in Bengaluru Focus, News Wire
Reading Time: 2 mins read
0

ಬೆಂಗಳೂರು, ಆ.15 www.bengaluruwire.com : ದೇಶದ ಸಂಪತ್ತಿನ ಅಸಮಾನ ಹಂಚಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಶೇ 10ರಷ್ಟು ಶ್ರೀಮಂತರ ಬಳಿ ಶೇ 80ರಷ್ಟು ಸಂಪತ್ತು ಸಂಗ್ರಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷಾದಿಸಿದರು. ಈ ಅಸಮಾನತೆಯನ್ನು ಹೋಗಲಾಡಿಸಲು ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ ಎಂದು ಸಿಎಂ ಸಂತಸ ವ್ಯಕ್ತಪಡಿಸಿದರು.

79ನೇ ಸ್ವಾತಂತ್ರ್ಯೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು. 

ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಿರುವುದಕ್ಕೆ ಸಿಎಂ ಮೆಚ್ಚುಗೆ ಸೂಚಿಸಿದರು. ಶಕ್ತಿ ಯೋಜನೆ ಜಾರಿಯಿಂದ ಮಹಿಳೆಯರು ಉಚಿತವಾಗಿ 500 ಕೋಟಿ ಟ್ರಿಪ್ಪುಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು. ಇದು ಮಹಿಳೆಯರ ಕಾರ್ಮಿಕ ಶಕ್ತಿ ಭಾಗವಹಿಸುವಿಕೆಯನ್ನು ಶೇ 23ರಷ್ಟು ಹೆಚ್ಚಿಸಿದೆ ಎಂದು ಅಧ್ಯಯನಗಳು ಹೇಳುತ್ತಿವೆ.

ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ₹1,35,000 ಕೋಟಿಗೂ ಅಧಿಕ ವೆಚ್ಚದಲ್ಲಿ ಡಬಲ್ ಡೆಕ್ಕರ್ ರಸ್ತೆಗಳು, ಸುರಂಗ ರಸ್ತೆಗಳು, ಮೆಟ್ರೋ ಮಾರ್ಗಗಳು ಸೇರಿದಂತೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು. ಬೆಂಗಳೂರು ಮತ್ತು ಇತರೆ ಪ್ರದೇಶಗಳಲ್ಲಿನ ಬಿ-ಖಾತಾ ಗೊಂದಲಗಳನ್ನು ಬಗೆಹರಿಸಿ ಎ-ಖಾತಾ ನೀಡುವ ಕ್ರಾಂತಿಕಾರಿ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

ಕರ್ನಾಟಕವು ತಲಾದಾಯದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಸಿಎಂ ಹೇಳಿದರು. ಕಳೆದ ಹತ್ತು ವರ್ಷಗಳಲ್ಲಿ ತಲಾದಾಯದಲ್ಲಿ ಶೇ 101ರಷ್ಟು ಪ್ರಗತಿ ಸಾಧಿಸಲಾಗಿದೆ. ರಾಜ್ಯವು ಐಟಿ ರಾಜಧಾನಿಯಾಗಿರುವುದಲ್ಲದೆ, ಜಗತ್ತಿನ ‘ನಾವೀನ್ಯತಾ ರಾಜಧಾನಿ’ಯಾಗುವತ್ತ ಹೆಜ್ಜೆ ಇಟ್ಟಿದೆ. ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್ ಕರ್ನಾಟಕದಲ್ಲಿದೆ ಎಂದರು.

ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರತಿ ವರ್ಷ ₹5,000 ಕೋಟಿ ಮೀಸಲಿಡಲಾಗಿದೆ. ‘ನಕ್ಸಲ್ ಮುಕ್ತ ರಾಜ್ಯ’ವಾಗಿ ಕರ್ನಾಟಕವನ್ನು ಘೋಷಿಸಿದ್ದು, ಇದೀಗ ‘ಡ್ರಗ್ಸ್ ಮುಕ್ತ ರಾಜ್ಯ’ವನ್ನಾಗಿ ಮಾಡಲು ಹೋರಾಡಬೇಕಿದೆ ಎಂದು ಸಿಎಂ ಹೇಳಿದರು. 

ರಾಜ್ಯದ ಆರ್ಥಿಕತೆಗೆ ಸೇವಾ ವಲಯದ ಕೊಡುಗೆ ಶೇ 66.7ರಷ್ಟಿದೆ. ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ₹4 ಲಕ್ಷ ವಿಮಾ ಯೋಜನೆಯನ್ನು ಜಾರಿಗೆ ತರುತ್ತಿರುವುದಾಗಿ ಅವರು ತಿಳಿಸಿದರು.

ಈ ಅದ್ಧೂರಿ ಕಾರ್ಯಕ್ರಮದಲ್ಲಿ 8 ಸಾವಿರ ಜನರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿತ್ತು. ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಮೆರಗು ಪಡೆದುಕೊಂಡವು. ಕೆಎಸ್‌ಆರ್‌ಪಿ, ಸಿಆರ್‌ಪಿಎಫ್, ಬಿಎಸ್ ಎಫ್, ಗೋವಾ ಪೊಲೀಸ್ ತಂಡ ಸೇರಿ ವಿವಿಧ ಇಲಾಖೆಯ 35 ತುಕಡಿಗಳಲ್ಲಿ 1,150 ಮಂದಿಯಿಂದ ಪಥ ಸಂಚಲನ ಹಾಗೂ ಸರ್ಕಾರಿ ಮತ್ತು ಬಿಬಿಎಂಪಿಯ 1,150 ವಿದ್ಯಾರ್ಥಿಗಳು ಹಾಗೂ ಕರ್ನಾಟಕ ಪೊಲೀಸ್ ಸಮೂಹ ವಾದ್ಯಮೇಳದ 253 ಅಧಿಕಾರಿ, ಸಿಬ್ಬಂದಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಈ ಸಮಾರಂಭದಲ್ಲಿ ರಾಜ್ಯ ಸಂಪುಟ ಸಚಿವರು, ರಾಜ್ಯದ ಶಾಸಕರು, ಅಧಿಕಾರಿಗಳು ಹಾಗೂ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದ ಪ್ರಮುಖಾಂಶಗಳು ಹೀಗಿದೆ :

ರಾಜ್ಯದ ಆರ್ಥಿಕ ಪ್ರಗತಿ ಮತ್ತು ಕಲ್ಯಾಣ ಯೋಜನೆಗಳು

 * ತಲಾದಾಯ: ಕರ್ನಾಟಕದ ತಲಾದಾಯವು ಕಳೆದ ಹತ್ತು ವರ್ಷಗಳಲ್ಲಿ 101% ಹೆಚ್ಚಳ ಕಂಡಿದೆ. 2013-14ರಲ್ಲಿ ₹1,01,858 ಇದ್ದ ತಲಾದಾಯವು 2024-25ರ ವೇಳೆಗೆ ₹2,04,605ಕ್ಕೆ ತಲುಪಿದೆ.

 * ಗ್ಯಾರಂಟಿ ಯೋಜನೆಗಳು: ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಮತ್ತು ಯುವನಿಧಿ ಯೋಜನೆಗಳಿಗಾಗಿ ಇದುವರೆಗೆ ₹96,000 ಕೋಟಿಗೂ ಅಧಿಕ ಹಣ ವಿನಿಯೋಗಿಸಲಾಗಿದೆ.

 * ಮಹಿಳಾ ಪಾಲ್ಗೊಳ್ಳುವಿಕೆ: ಶಕ್ತಿ ಯೋಜನೆಯಿಂದಾಗಿ ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ 23% ರಷ್ಟು ಹೆಚ್ಚಾಗಿದೆ. ಮಹಿಳೆಯರು 500 ಕೋಟಿಗೂ ಹೆಚ್ಚು ಟ್ರಿಪ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ.

ಕೃಷಿ ಮತ್ತು ಕೈಗಾರಿಕಾ ವಲಯ

 * ಕೃಷಿ ಅನುದಾನ: 2025-26ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ ₹51,339 ಕೋಟಿ ಒದಗಿಸಲಾಗಿದೆ. ಇದು 2022-23ಕ್ಕೆ ಹೋಲಿಸಿದರೆ 52.34% ಹೆಚ್ಚಳವಾಗಿದೆ.

 * ಎಪಿಎಂಸಿ ಸುಧಾರಣೆ: 2024-25ರಲ್ಲಿ 164 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕೃಷಿ ಉತ್ಪನ್ನಗಳು ಎಪಿಎಂಸಿಗಳಿಗೆ ಆವಕವಾಗಿದ್ದು, ಇದು 447% ಹೆಚ್ಚಳವಾಗಿದೆ.

 * ಹೈನುಗಾರಿಕೆ: ಹೈನುಗಾರರಿಗೆ ₹3,283 ಕೋಟಿ ಪ್ರೋತ್ಸಾಹಧನ ಪಾವತಿಸಲಾಗಿದೆ. ಹಿಂದಿನ ಸರ್ಕಾರದಿಂದ ಬಾಕಿ ಇದ್ದ ₹609 ಕೋಟಿ ಸಹ ಸೇರಿದೆ.

 * ಕೈಗಾರಿಕೆಗಳು: ₹10 ಲಕ್ಷ ಕೋಟಿಗೂ ಅಧಿಕ ಹೂಡಿಕೆ ಮಾಡಲು ಉದ್ಯಮಿಗಳು ಆಸಕ್ತಿ ತೋರಿಸಿದ್ದಾರೆ. ರಾಜ್ಯವು ವಿದೇಶಿ ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದ ಜಿಎಸ್‌ಡಿಪಿಗೆ ಕೈಗಾರಿಕಾ ವಲಯದ ಕೊಡುಗೆ 23.6% ಆಗಿದೆ.

ಮೂಲಸೌಕರ್ಯ ಮತ್ತು ಇತರ ಯೋಜನೆಗಳು

 * ಬಂಡವಾಳ ವೆಚ್ಚ: ಮೂಲಸೌಕರ್ಯ ಅಭಿವೃದ್ಧಿಗಾಗಿ ಈ ವರ್ಷ ₹83,200 ಕೋಟಿ ವಿನಿಯೋಗಿಸಲಾಗುತ್ತಿದೆ. ಬಜೆಟ್‌ನ 20.1% ರಷ್ಟು ಹಣವನ್ನು ಈ ಉದ್ದೇಶಕ್ಕಾಗಿ ಮೀಸಲಿಟ್ಟ ಪ್ರಮುಖ ರಾಜ್ಯ ಕರ್ನಾಟಕವಾಗಿದೆ.

 * ವಸತಿ: ವಿವಿಧ ಯೋಜನೆಗಳಡಿ 3,87,756 ಮನೆಗಳನ್ನು ಪೂರ್ಣಗೊಳಿಸಲಾಗಿದೆ.

 * ಕಲ್ಯಾಣ ಕರ್ನಾಟಕ: ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಕಲ್ಯಾಣ ಕರ್ನಾಟಕಕ್ಕೆ ವಾರ್ಷಿಕ ₹5,000 ಕೋಟಿ ಒದಗಿಸಲಾಗಿದೆ. 1,150 ಕಿ.ಮೀ. ರಸ್ತೆಗಳನ್ನು ಅಭಿವೃದ್ಧಿಪಡಿಸಲು ₹1,000 ಕೋಟಿ ಮೀಸಲಿಡಲಾಗಿದೆ.

 * ರಸ್ತೆ ಅಭಿವೃದ್ಧಿ: ಕಳೆದ ಎರಡು ವರ್ಷಗಳಲ್ಲಿ 12,000 ಕಿ.ಮೀ.ಗಿಂತ ಹೆಚ್ಚು ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ವರ್ಷ ರಸ್ತೆ ಮತ್ತು ಸೇತುವೆಗಳಿಗಾಗಿ ₹8,000 ಕೋಟಿ ವಿನಿಯೋಗಿಸಲಾಗುತ್ತಿದೆ.

 * ಶಿಕ್ಷಣ ಮತ್ತು ಆರೋಗ್ಯ: ಶಿಕ್ಷಣ ಕ್ಷೇತ್ರಕ್ಕೆ ₹65,000 ಕೋಟಿ, ಆರೋಗ್ಯ ವಲಯದಲ್ಲಿ ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ಸೇರಿದಂತೆ ಹಲವು ಹೊಸ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ತಾಯಂದಿರ ಮರಣ ಪ್ರಮಾಣ 26% ಕಡಿಮೆಯಾಗಿದೆ.

WhatsApp Join our WhatsApp Channel
Previous Post

ಬಿಬಿಎಂಪಿಯಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ

Next Post

ಸಫಾರಿ ಬಸ್ ಮೇಲರಗಿ ಕಿಟಕಿ ಬಳಿ ಕೂತಿದ್ದ ಬಾಲಕನ ಪರಚಿ ಗಾಯಗೊಳಿಸಿದ ಚಿರತೆ

Next Post

ಸಫಾರಿ ಬಸ್ ಮೇಲರಗಿ ಕಿಟಕಿ ಬಳಿ ಕೂತಿದ್ದ ಬಾಲಕನ ಪರಚಿ ಗಾಯಗೊಳಿಸಿದ ಚಿರತೆ

ಶ್ರೀಕೃಷ್ಣ ಜನ್ಮಾಷ್ಟಮಿ: ದೇಶದಾದ್ಯಂತ ಸಂಭ್ರಮದ ಸಡಗರ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group