Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mysore Dasara- 2025 | ಮಾನವೀಯ ಮೌಲ್ಯಗಳ ಹೊಸ ಸಮಾಜ ಕಟ್ಟೋಣ: ಮೈಸೂರು ದಸರಾ ಉದ್ಘಾಟಿಸಿ ಬಾನು ಮುಷ್ತಾಕ್ ನಾಡಿನ ಜನತೆಗೆ ಕರೆ

ನಮ್ಮ ಸಂಸ್ಕೃತಿ ನಮ್ಮ ಬೇರು, ಸೌಹಾರ್ಧ ನಮ್ಮ ಶಕ್ತಿ; ಸಿಎಂ ಸಿದ್ದರಾಮಯ್ಯ ಅವರಿಂದ ಅಭಿನಂದನೆ

by Bengaluru Wire Desk
September 22, 2025
in News Wire, Public interest
Reading Time: 1 min read
0

ಮೈಸೂರು, ಸೆ.22 www.bengaluruwire.com : ವಿಶ್ವವಿಖ್ಯಾತ ಮೈಸೂರು ದಸರಾ 2025ಕ್ಕೆ, ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ಚಾಲನೆ ನೀಡಿದರು. 

ಸೋಮವಾರ ಚಾಮುಂಡಿ ಬೆಟ್ಟದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, “ನಮ್ಮ ಸಂಸ್ಕೃತಿ ನಮ್ಮ ಬೇರು, ಸೌಹಾರ್ಧ ನಮ್ಮ ಶಕ್ತಿ. ನಮ್ಮ ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಹೊಸ ಸಮಾಜವನ್ನು ಕಟ್ಟೋಣ. ಅದರಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಇರಲಿ” ಎಂದು ಕರೆ ನೀಡಿದರು.

ಬಾನು ಮುಷ್ತಾಕ್ ಅವರು, “ಚಾಮುಂಡೇಶ್ವರಿ ಎಂದರೆ ಹೆಣ್ಣಿನಲ್ಲಿರುವ ಅಪಾರ ಶಕ್ತಿ. ಸ್ತ್ರೀತ್ವ ಕೇವಲ ಮೃದುತ್ವವಲ್ಲ, ಅದು ಗಟ್ಟಿ ಬದುಕಿನ ಹೋರಾಟ” ಎಂದು ಹೇಳಿದರು. 

ಮೈಸೂರು ರಾಜಮನೆತನವು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಔದಾರ್ಯಕ್ಕೆ ಮಾದರಿಯಾಗಿತ್ತು. ಸಂಪತ್ತನ್ನು ಹಂಚಿಕೊಂಡಾಗ ವೃದ್ಧಿಸುತ್ತದೆ, ಶಕ್ತಿ ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬಾಳುತ್ತದೆ ಎಂಬುದನ್ನು ಅವರು ನೆನಪಿಸಿದರು. ತಮ್ಮ ಕವನದ ಮೂಲಕ ಹಿಂದೂ-ಮುಸ್ಲಿಂ ಬಾಂಧವ್ಯದ ಸೌಂದರ್ಯವನ್ನು ಅನಾವರಣಗೊಳಿಸಿದರು. “ನನ್ನ ಬದುಕು-ಬರಹ” ಪುಸ್ತಕದಲ್ಲಿ ಹಿಂದೂ ಧರ್ಮದೊಂದಿಗಿನ ತಮ್ಮ ಸಂಬಂಧದ ಬಗ್ಗೆ ಬರೆದಿರುವುದಾಗಿ ತಿಳಿಸಿದರು. 

ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಬಾನು ಮುಷ್ತಾಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಶ್ರೀ ಚಾಮುಂಡೇಶ್ವರಿ ದೇವರ ದರ್ಶನ ಮಾಡಿ ಮಂಗಳಾರತಿ ಸ್ವೀಕರಿಸಿದರು.

ತಮ್ಮ ಕವನ ‘ಬಾಗಿನ’ ವಾಚಿಸುವಾಗ, ಒಬ್ಬ ಮುಸ್ಲಿಂ ಹೆಣ್ಣುಮಗಳು ಬಾಗಿನ ಪಡೆದಾಗ ಮನಸ್ಸಿನಲ್ಲಿ ಉತ್ಪನ್ನವಾಗುವ ಭಾವನೆಗಳನ್ನು ತೆರೆದಿಟ್ಟರು. ದ್ವೇಷದ ಭಾಷೆಗಳನ್ನು ಮೀರಿ ಪ್ರೀತಿಯ ಅಲೆಗಳು ಸದಾ ಹರಿಯುತ್ತವೆ ಎಂದು ಕವನದ ಮೂಲಕ ಸಾರಿದರು.

ತಮ್ಮ ಜೀವನದ ಅತ್ಯಂತ ಗೌರವದ ಕ್ಷಣ ಇದಾಗಿದೆ ಎಂದ ಬಾನು ಮುಷ್ತಾಕ್, ಇದು ತಾಯಿ ಚಾಮುಂಡಿಯೇ ತಮ್ಮನ್ನು ಕರೆಸಿಕೊಂಡಿರುವುದಾಗಿ ಭಾವಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮನ್ನು ಆಹ್ವಾನಿಸಿ, ನೈತಿಕ ಬೆಂಬಲ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ದಸರಾ ಶಾಂತಿ ಮತ್ತು ಸರ್ವಜನಾಂಗದ ಸಾಮರಸ್ಯದ ಹಬ್ಬ. 

ಮೈಸೂರು ಅರಸರು ಮುಸ್ಲಿಮರ ಬಗ್ಗೆ ಇಟ್ಟಿದ್ದ ನಂಬಿಕೆ ಹಾಗೂ ವಿಶ್ವಾಸಕ್ಕೆ ತಮ್ಮ ಸಂಬಂಧಿಯೊಬ್ಬರು ಮೈಸೂರು ಮಹಾರಾಜರ ಅಂಗರಕ್ಷಕ ಪಡೆಯಲ್ಲಿದ್ದ ಉದಾಹರಣೆಯನ್ನು ನೀಡಿದರು. ದ್ವೇಷ ಮತ್ತು ಅಸಹಿಷ್ಣುತೆಯನ್ನು ನಾಶ ಮಾಡುವ ಶಕ್ತಿ ತಾಯಿ ಚಾಮುಂಡಿಗೆ ಇದೆ ಎಂದರು.

ದಸರಾ ಆರ್ಥಿಕ ಮತ್ತು ಶೈಕ್ಷಣಿಕತೆಯ ಹಬ್ಬವಾಗಲಿ: ಸಿಎಂ ಸಿದ್ದರಾಮಯ್ಯ

ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಬಾನು ಮುಷ್ತಾಕ್ ಅವರು ಬೂಕರ್ ಪ್ರಶಸ್ತಿಯನ್ನು ಪಡೆದ ಮೊದಲ ಕನ್ನಡ ಸಾಹಿತಿ ಎಂಬುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಅವರ ನೇತೃತ್ವದಲ್ಲಿ ದಸರಾ ಉದ್ಘಾಟಿಸಿರುವುದು ಸಮಾನತೆಯ ಸಂದೇಶ ಸಾರುತ್ತದೆ” ಎಂದು ಹೇಳಿದರು.

ದಸರಾ ಕೇವಲ ಸಾಂಸ್ಕೃತಿಕ ಹಬ್ಬವಲ್ಲ, ಅದು ಆರ್ಥಿಕ ಮತ್ತು ಶೈಕ್ಷಣಿಕ ಬೆಳವಣಿಗೆಯ ಹಬ್ಬವಾಗಬೇಕು. ಈ ವರ್ಷದ ದಸರಾ ಸಮೃದ್ಧಿ, ಸೌಹಾರ್ದತೆ ಮತ್ತು ಪ್ರಗತಿಯ ಸಂಕೇತವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಆಶಿಸಿದರು. ಕರ್ನಾಟಕದ ಸರ್ಕಾರವು ಸರ್ವ ಜನಾಂಗದ ಶಾಂತಿಯ ತೋಟವನ್ನು ಬಲಪಡಿಸಲು ಶ್ರಮಿಸುತ್ತದೆ. ಎಲ್ಲ ವರ್ಗದ ಜನರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಅಭಿವೃದ್ಧಿಯ ಪಥದಲ್ಲಿ ಸಾಗುವುದೇ ಸರ್ಕಾರದ ಮುಖ್ಯ ಉದ್ದೇಶ ಎಂದು ಪ್ರತಿಪಾದಿಸಿದರು.

ದಸರಾ ಹಬ್ಬದ ಮೂಲಕ ಮೈಸೂರಿನ ಸಾಂಸ್ಕೃತಿಕ ವೈಭವ ಮತ್ತು ಪ್ರವಾಸೋದ್ಯಮ ಹೆಚ್ಚಳಕ್ಕೆ ಮತ್ತಷ್ಟು ಉತ್ತೇಜನ ನೀಡಲಾಗುವುದು. ಈ ಬಾರಿಯ ದಸರಾ, ಕೋವಿಡ್ ನಂತರ ರಾಜ್ಯಕ್ಕೆ ಹೊಸ ಚೈತನ್ಯ ತುಂಬುವಂತಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸೋದ್ಯಮ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು, ರಾಜ್ಯದ ಯುವಜನರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿಕೊಳ್ಳಲು ಪ್ರೇರೇಪಿಸಬೇಕು. ಈ ವರ್ಷದ ದಸರಾ ಹಬ್ಬವು ಕರ್ನಾಟಕದ ಇತಿಹಾಸದಲ್ಲಿ ಒಂದು ಹೊಸ ಅಧ್ಯಾಯವನ್ನು ತೆರೆಯಲಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಇದೇ ವೇಳೆ, ದಸರಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಇತರ ಸಚಿವರುಗಳು ಭಾಗವಹಿಸಿದ್ದರು. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರ ಪರಿಷ್ಕರಣೆ: ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ : ಇಲ್ಲಿದೆ ಅವುಗಳ ಪಟ್ಟಿ

Next Post

E-Governance | ಬಿಬಿಎಂಪಿಯ ಇ-ಖಾತಾ ಯೋಜನೆಗೆ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ 2025’ ಗರಿ

Next Post

E-Governance | ಬಿಬಿಎಂಪಿಯ ಇ-ಖಾತಾ ಯೋಜನೆಗೆ 'ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ 2025' ಗರಿ

ಬೆಂಗಳೂರು ನಗರ ಜಿಲ್ಲೆಯಲ್ಲಿ 12.43 ಲಕ್ಷ ಕುಟುಂಬಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d