Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mysore Dasara-2025 | ಮೈಸೂರು ದಸರಾ: ಶ್ವಾನ ಪ್ರದರ್ಶನದಲ್ಲಿ ವಿಶ್ವಾಸದ ನಡಿಗೆ : ಸ್ಪರ್ಧೆಯಲ್ಲಿ 600ಕ್ಕೂ ಹೆಚ್ಚು ನಾಯಿಗಳು ಭಾಗಿ

ಅಪರೂಪದ ತಳಿಗಳ ಸಾಹಸ, ಪೊಲೀಸ್ ಇಲಾಖೆಯ ಶ್ವಾನದಳದ ಯೋಧ ಸೇರಿ ಐದು 'ಶ್ವಾನ'ಗಳು ಪಾಲ್ಗೊಂಡಿದ್ದವು.

by Bengaluru Wire Desk
September 28, 2025
in News Wire, Public interest
Reading Time: 2 mins read
0

ಮೈಸೂರು, ಸೆ. 27 www.bengaluruwire.com: ಮೈಸೂರು ರೈತ ದಸರಾ ಮಹೋತ್ಸವ-2025ರ ಅಂಗವಾಗಿ ನಡೆದ ಶ್ವಾನ ಮತ್ತು ಮುದ್ದು ಪ್ರಾಣಿಗಳ ಪ್ರದರ್ಶನ ಹಾಗೂ ಸ್ಪರ್ಧೆ ನೋಡುಗರ ಮನಸೂರೆಗೊಂಡಿತು. ಸ್ಪರ್ಧೆಯಲ್ಲಿ ಜರ್ಮನ್ ಶಫರ್ಡ್ ತಳಿಯ ಮೈಸೂರು ಶ್ವಾನಕ್ಕೆ ಮೊದಲ ಸ್ಥಾನ ದೊರೆಯಿತು.

ರಾಜ್ಯ ಪಶುಸಂಗೋಪನೆ ಇಲಾಖೆಯ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ ಈ ಸ್ಪರ್ಧೆಯಲ್ಲಿ ಮೈಸೂರು, ಮಂಡ್ಯ, ಬೆಂಗಳೂರು, ಹೊರ ರಾಜ್ಯ ಕೇರಳ ಹಾಗೂ ಊಟಿ ಸೇರಿದಂತೆ ವಿವಿಧ ಭಾಗಗಳಿಂದ ಒಟ್ಟು 640 ಶ್ವಾನಗಳು ನೋಂದಣಿಯಾಗಿದ್ದವು. ಸೈಬಿರಿಯಾ ಹಷ್ಕಿ, ಜರ್ಮನ್ ಶಫರ್ಡ್ , ಮುಧೋಳ ಹಾಗೂ ಪಾರಿನ್ ನ ಒಟ್ಟು 51 ತಳಿಯ ಶ್ವಾನಗಳು ಸ್ಪರ್ಧೆಯಲ್ಲಿ ಪಾಲ್ಲೊಂಡಿದ್ದವು ಅಂತಿಮವಾಗಿ 7 ತಳಿಗಳು ಜಯಶೀಲ ಆದವು ಅವುಗಳ ಮಾಲೀಕರಿಗೆ ಪ್ರಮಾಣ ಪತ್ರ ಹಾಗೂ ಆಕರ್ಷಕ ಟ್ರೋಪಿಯನ್ನು ನೀಡಲಾಯಿತು.

ತಳಿಗಳ ಮಹಾಪೂರ: ಅಪರೂಪದ ನಾಯಿಗಳ ದರ್ಶನ :

ಸೈಬೀರಿಯನ್ ಹಸ್ಕಿ ತಳಿಯೊಂದಿಗೆ ಪುಟ್ಟ ಬಾಲಕಿ.

ಸ್ಪರ್ಧೆಯಲ್ಲಿ ಪ್ರತಿ ತಳಿಯಲ್ಲಿ ಪಪ್ಪಿ (ಮರಿ ನಾಯಿ), ವಯಸ್ಕ ಗಂಡು ಮತ್ತು ಹೆಣ್ಣು ನಾಯಿ ಎಂಬ ಮೂರು ವಿಭಾಗಗಳಿದ್ದು, ಪ್ರತಿ ವಿಭಾಗದಲ್ಲೂ ತಲಾ ಎರಡು ಬಹುಮಾನ ನೀಡಲಾಯಿತು. ಶ್ವಾನಗಳ ತಳಿ ಗುಣಲಕ್ಷಣ, ಬಣ್ಣ, ನಡಿಗೆ, ಆರೋಗ್ಯ ಮತ್ತು ಮಾಲೀಕರಿಗೆ ತೋರುವ ವಿಧೇಯತೆಯನ್ನು ಮಾನದಂಡವಾಗಿರಿಸಿ ಪ್ರಶಸ್ತಿಗಳನ್ನು ಘೋಷಿಸಲಾಯಿತು.

ಸ್ಪರ್ಧೆಯಲ್ಲಿ ವಿಜೇತರಾದ ಶ್ವಾನ ಮಾಲೀಕರಿಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಆರ್.ಮಹದೇವ್ ಬಹುಮಾನ ವಿತರಿಸಿದರು.

ಜರ್ಮನ್ ಶಫರ್ಡ್ ತಳಿಗೆ ಮೊದಲ, ಬಾಕ್ಸರ್ ತಳಿಗೆ  ದ್ವೀತೀಯ,  ರಾಟ್ ವಲರ್ ತಳಿಗೆ ಮೂರನೇ, ಡಾಬರ್ ವೆಲಸ್ ನಾಲ್ಕನೆ, ಮಾಲ್ವಿಸ್ ತಳಿಗೆ ಐದನೇ, ಮುಧೋಳ್ ತಳಿಗೆ ಆರನೇ ಹಾಗೂ ಸೈಬೇರಿಯನ್ ಹಸ್ಕಿ ತಳಿಗೆ ಏಳನೇ ಸ್ಥಾನ ದೊರೆಯಿತು.

ವಿದೇಶಿ ತಳಿಯ ಶ್ವಾನದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದವರು.

ವಿಶೇಷ ತಳಿಗಳ ಶ್ವಾನಗಳು ಸ್ಪರ್ಧೆಯಲ್ಲಿ ಭಾಗಿ :

ಬೆಲ್ಜಿಯಮ್ ಶಫರ್ಡ್ ನಾಯಿಗಳ ಪ್ರದರ್ಶನ.

ಈ ಬಾರಿಯ ಪ್ರದರ್ಶನದಲ್ಲಿ ಡಚ್ ಶಫರ್ಡ್, ಸೌತ್ ಆಫ್ರಿಕಾ ಮಾಸ್ಟಿಫ್, ಚೌಚೌ, ಬಾರ್ಡರ್ ಕೂಲಿ, ಓಲ್ಡ್ ಶೀಪ್ ಡಾಗ್, ಬೆಲ್ಜಿಯಂ ಮೆಲೊನಿಸ್, ಬೆಲ್ಜಿಯಂ ಶಫರ್ಡ್ ಮತ್ತು ಕೋಕಾಪೂನಂತಹ ಅಪರೂಪದ ತಳಿಗಳು ಗಮನ ಸೆಳೆದವು. ಈ ಕುರಿತು ಮಾಹಿತಿ ನೀಡಿದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರಾಮು, “ವಿವಿಧ ತಳಿಗಳ ಪ್ರದರ್ಶನ ಶ್ವಾನ ಪ್ರೇಮಿಗಳಿಗೆ ಹಬ್ಬದಂತಿತ್ತು” ಎಂದು ಹರ್ಷ ವ್ಯಕ್ತಪಡಿಸಿದರು.

ಯೋಧ ಶ್ವಾನಗಳ ವೇಗದ ಗುಟ್ಟು :

ಭಾಗವಹಿಸಿದ ತಳಿಗಳ ಪೈಕಿ ಬೆಲ್ಜಿಯಂ ಮೆಲೊನಿಸ್ ಮತ್ತು ಬೆಲ್ಜಿಯಂ ಶಫರ್ಡ್ ತಳಿಗಳು ಪ್ರಮುಖ ಆಕರ್ಷಣೆಯಾಗಿದ್ದವು. “ಬೆಲ್ಜಿಯಂ ಮೆಲೊನಿಸ್ ತಳಿಯ ನಾಯಿಯ ವೇಗವು ವಿಶ್ವದಲ್ಲೇ ಅತಿ ಹೆಚ್ಚು. ಇವು ಗಾತ್ರದಲ್ಲಿ ಚಿಕ್ಕದಾಗಿದ್ದರೂ, ಉಗ್ರಗಾಮಿಗಳ ಪತ್ತೆ ಮತ್ತು ಮಿಲಿಟರಿ ಆಪರೇಷನ್‌ಗಳಲ್ಲಿ ಬಳಕೆಯಾಗುತ್ತವೆ” ಎಂದು ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಬಸವರಾಜು ವಿವರಿಸಿದರು. ಬೆಲ್ಜಿಯಂ ಶಫರ್ಡ್ ತಳಿಯು ಕೂಡ ಉತ್ತಮ ವಾಸನೆ ಗ್ರಹಿಕೆ ಮತ್ತು ವೇಗದ ಓಟದಿಂದಾಗಿ ಅಪರಾಧ ತನಿಖೆ ಹಾಗೂ ಮಿಲಿಟರಿ ಕಾರ್ಯಾಚರಣೆಗಳಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು.

ಪೊಲೀಸ್ ಇಲಾಖೆ ಶ್ವಾನದಳದ ನಾಯಿಗಳ ಪ್ರದರ್ಶನ.

ದೇಶಿ ಹೆಮ್ಮೆ: ಮುಧೋಳ ತಳಿಯ ನಡಿಗೆ :

ಭಾರತೀಯ ತಳಿಯಾದ ಮುಧೋಳ ನಾಯಿಯೂ ಸ್ಪರ್ಧೆಯಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆಯಿತು. ಈ ತಳಿಯನ್ನು ರಾಜ್ಯದಲ್ಲಿ ಮಹಾರಾಜರು ಬೇಟೆಗಾಗಿ ಬಳಸುತ್ತಿದ್ದರು. ಇದೀಗ ಇದನ್ನು ರಕ್ಷಣಾ ಇಲಾಖೆಯಲ್ಲಿ ತರಬೇತಿ ನೀಡಿ ಬಳಸುತ್ತಿರುವುದು ಹೆಮ್ಮೆಯ ವಿಷಯ ಎಂದು ಡಾ. ಬಸವರಾಜು ಹೇಳಿದರು.

ವಿಶೇಷ ಪ್ರದರ್ಶನದಲ್ಲಿ ಮೈಸೂರು ಪೊಲೀಸ್ ಇಲಾಖೆಯ ಶ್ವಾನ ವಿಭಾಗದ ಐದು ತರಬೇತಿಗೊಂಡ ನಾಯಿಗಳು ತಮ್ಮ ಚಾಣಾಕ್ಷತನ ಹಾಗೂ ಪೊಲೀಸರ ಸೂಚನೆಗೆ ತಕ್ಕಂತೆ ಭಂಗಿಗಳನ್ನು ಪ್ರದರ್ಶಿಸಿ ನೆರೆದಿದ್ದವರ ಚಪ್ಪಾಳೆಗೆ ಪಾತ್ರವಾದವು.

ಯೋಧ ಶ್ವಾನದೊಂದಿಗೆ ಹೆಡ್ ಕಾನ್ಸ್‌ಟೇಬಲ್ ಮಂಜುನಾಥ್.

ಇದೇ ವೇಳೆ, ಪೊಲೀಸ್ ಇಲಾಖೆಯ ಶ್ವಾನ ವಿಭಾಗದ ಹೆಡ್ ಕಾನ್ಸ್‌ಟೇಬಲ್ ಮಂಜುನಾಥ ಅವರು ತರಬೇತಿಗೊಳಿಸಿದ ವಿಶೇಷ ಶ್ವಾನ ‘ಯೋಧ’ನ ಬಗ್ಗೆ ಮಾಹಿತಿ ನೀಡಿದರು. ಬೆಲ್ಜಿಯಂ ಷಪರ್ಡ್ ತಳಿಯ ಈ ಐದು ವರ್ಷದ ನಾಯಿಯು ಕೇವಲ ಆರು ತಿಂಗಳ ತರಬೇತಿಯಲ್ಲಿ ನುರಿತಿದೆ. “ಈ ನಾಯಿಯ ಕಣ್ಣಿಗೆ ಬಟ್ಟೆ ಕಟ್ಟಿದರೂ ಬಾಂಬ್ ಪತ್ತೆ ಮಾಡುವ ಚಾಣಾಕ್ಷತೆ ಹೊಂದಿದೆ. ಕಳೆದ ವರ್ಷ ದಕ್ಷಿಣ ಭಾರತದಲ್ಲಿ ನಡೆದ ಪೊಲೀಸ್ ಮೀಟ್‌ನ ಸದರನ್ ರೇಂಜ್‌ನಲ್ಲಿ ಚಿನ್ನದ ಪದಕ ಪಡೆದಿದ್ದಾನೆ” ಎಂದರು. 

ಒಟ್ಟಾರೆಯಾಗಿ, ಈ ಬಾರಿಯ ಶ್ವಾನ ಪ್ರದರ್ಶನವು ಕೇವಲ ಸ್ಪರ್ಧೆಗಿಂತ ಹೆಚ್ಚಾಗಿ, ಶ್ವಾನ ತಳಿಗಳ ವೈವಿಧ್ಯತೆ ಮತ್ತು ಅವುಗಳ ಸಾಮರ್ಥ್ಯದ ಬಗ್ಗೆ ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು.

WhatsApp Join our WhatsApp Channel
Previous Post

Viral Video News | ಕರೂರ್ ನಲ್ಲಿ ಕಾಲ್ತುಳಿತ ದುರಂತ ಕುರಿತ ವಿಡಿಯೋ ವೈರಲ್ : ವಿಜಯ್ ಟಿವಿಕೆ ಸಮಾವೇಶದಲ್ಲಿ 39 ಸಾವು, ತನಿಖೆಗೆ ಸಿಎಂ ಸ್ಟಾಲಿನ್ ಆದೇಶ

Next Post

Mysore Dasara-2025 | ವಿಜಯ್ ಪ್ರಕಾಶ್ ಮ್ಯೂಸಿಕ್ ಫೆಸ್ಟ್: ಮೈಸೂರು ದಸರಾ ಸಂಭ್ರಮದಲ್ಲಿ ರಸಸಂಜೆ

Next Post

Mysore Dasara-2025 | ವಿಜಯ್ ಪ್ರಕಾಶ್ ಮ್ಯೂಸಿಕ್ ಫೆಸ್ಟ್: ಮೈಸೂರು ದಸರಾ ಸಂಭ್ರಮದಲ್ಲಿ ರಸಸಂಜೆ

ಡಾ.ರಾಜ್ ಕುಮಾರ್ ಪ್ರತಿಮೆ ತೆರವಿಗೆ ಸಂಚು: ಬಿಡಿಎ ವಿರುದ್ಧ ಅಭಿಮಾನಿಗಳ ಗರ್ಜನೆ

Please login to join discussion

Like Us on Facebook

Follow Us on Twitter

Recent News

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group