Saturday, May 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

    ಮಾಲಿನ್ಯಕ್ಕೆ ಬ್ರೇಕ್: ದೆಹಲಿಯಲ್ಲಿ ಇನ್ನು ಮುಂದೆ ಇ-ಆಟೋಗಳದ್ದೇ ಪಾರುಪತ್ಯ

    ​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

    ಮಾಲಿನ್ಯಕ್ಕೆ ಬ್ರೇಕ್: ದೆಹಲಿಯಲ್ಲಿ ಇನ್ನು ಮುಂದೆ ಇ-ಆಟೋಗಳದ್ದೇ ಪಾರುಪತ್ಯ

    ​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Kidwai Hospital | ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಸರ್ಕಾರ ಕ್ರಮ

ಪ್ರಸ್ತುತ ಕಿದ್ವಾಯಿಯಲ್ಲಿ 720 ಹಾಸಿಗೆಗಳು ಲಭ್ಯ | ಹೆಚ್ಚುವರಿ ಕ್ಯಾನ್ಸರ್ ಕೇಂದ್ರಗಳು: ಜಿಲ್ಲೆಗಳಿಗೂ ವಿಸ್ತರಿಸಿದ ಉಚಿತ ಚಿಕಿತ್ಸೆ; ದಾದಿಯರಿಗೆ ಪೂರ್ಣ ವೇತನಕ್ಕೆ ಸಚಿವ ಡಾ.ಶರಣಪ್ರಕಾಶ್ ಸೂಚನೆ

by Bengaluru Wire Desk
October 10, 2025
in Bengaluru Focus
Reading Time: 1 min read
0

ಬೆಂಗಳೂರು, ಅ.10 www.bengaluruwire.com : ದೇಶದ ಪ್ರತಿಷ್ಠಿತ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳಲ್ಲಿ ಒಂದಾದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology) ಯಲ್ಲಿ ಹೆಚ್ಚುತ್ತಿರುವ ರೋಗಿಗಳ ಒತ್ತಡ ನಿವಾರಣೆ ಮತ್ತು ಉತ್ತಮ ಸೇವೆ ಒದಗಿಸುವ ದೃಷ್ಟಿಯಿಂದ, ಶೀಘ್ರದಲ್ಲೇ 450 ಹಾಸಿಗೆಗಳ ಹೊಸ ಬ್ಲಾಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಪ್ರಕಟಿಸಿದ್ದಾರೆ.

ವಿಕಾಸ ಸೌಧದಲ್ಲಿ ಮಂಗಳವಾರ ನಡೆದ ಕಿದ್ವಾಯಿ ಆಸ್ಪತ್ರೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಪಾಟೀಲ್ ಅವರು, ಹೊಸ ಯೋಜನೆಯ ನೀಲನಕ್ಷೆಯನ್ನು ಕೂಡಲೇ ಸಿದ್ಧಪಡಿಸಿ ಸಲ್ಲಿಸುವಂತೆ ಸಂಸ್ಥೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಡವರಿಗೆ ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಚಿಕಿತ್ಸೆ :

ಪ್ರಸ್ತುತ ಕಿದ್ವಾಯಿಯಲ್ಲಿ 720 ಹಾಸಿಗೆಗಳು ಲಭ್ಯವಿದ್ದರೂ, ರೋಗಿಗಳ ಒಳಹರಿವು ಹೆಚ್ಚಿರುವುದರಿಂದ ಚಿಕಿತ್ಸೆಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸ 450 ಹಾಸಿಗೆಯ ಬ್ಲಾಕ್ ನಿರ್ಮಾಣವಾದರೆ, ಒಟ್ಟು ಹಾಸಿಗೆಗಳ ಸಂಖ್ಯೆ 1170ಕ್ಕೆ ಏರಿಕೆಯಾಗಲಿದೆ. ಇದರಿಂದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಸಾರ್ವಜನಿಕ ಆರೋಗ್ಯ ಚಿಕಿತ್ಸೆ ಲಭ್ಯವಾಗಲಿದ್ದು, ಖಾಸಗಿ ಆಸ್ಪತ್ರೆಗಳಿಗೆ ಹೋಗುವುದು ತಪ್ಪುತ್ತದೆ ಎಂದು ಸಚಿವರು ವಿವರಿಸಿದರು.

ಕಿದ್ವಾಯಿ ಆಸ್ಪತ್ರೆಯ ಪರಿಶೀಲನಾ ಸಭೆಯು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆಯಿತು.

“ಆರ್ಥಿಕವಾಗಿ ಹಿಂದುಳಿದ ರೋಗಿಗಳು ಕಿದ್ವಾಯಿಗೆ ದೂರದೂರುಗಳಿಂದ ಆಗಮಿಸುತ್ತಾರೆ. ಕೆಲವರು ಚಿಕಿತ್ಸೆಗಾಗಿ ತಮ್ಮ ಭೂಮಿ ಅಥವಾ ಮನೆಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಎದುರಿಸುತ್ತಾರೆ. ಎಲ್ಲರಿಗೂ ಉತ್ತಮ ಆರೋಗ್ಯ ಒದಗಿಸಬೇಕೆಂಬ ನಮ್ಮ ಸರ್ಕಾರದ ಆಶಯದಂತೆ ಹೆಚ್ಚುವರಿ ಸೌಲಭ್ಯ ಒದಗಿಸಲಾಗುತ್ತಿದೆ” ಎಂದು ಡಾ. ಪಾಟೀಲ್ ಹೇಳಿದರು.

ಸಚಿವರು ಇನ್ನೊಂದು ಮಹತ್ವದ ಸೂಚನೆ ನೀಡಿದ್ದು, ರೋಗನಿರ್ಣಯಕ್ಕಾಗಿ ಬರುವವರು ಅಂತಿಮ ವರದಿಗಳು ದೊರೆಯುವವರೆಗೆ ಆಸ್ಪತ್ರೆಯ ವಾರ್ಡ್‌ಗಳಲ್ಲಿಯೇ ಒಳರೋಗಿಗಳಾಗಿ ಇರುವಂತೆ ವ್ಯವಸ್ಥೆ ಕಲ್ಪಿಸಬೇಕು. ವಿಶೇಷವಾಗಿ ಉತ್ತರ ಕರ್ನಾಟಕದಂತಹ ದೂರದ ಜಿಲ್ಲೆಗಳಿಂದ ಬರುವ ರೋಗಿಗಳಿಗೆ ಇದು ಅತ್ಯಗತ್ಯ ಎಂದು ತಿಳಿಸಿದರು.

ಜಿಲ್ಲೆಗಳಲ್ಲಿ ಬಾಹ್ಯ ಕ್ಯಾನ್ಸರ್ ಕೇಂದ್ರ ವಿಸ್ತರಣೆ :

ರಾಜ್ಯದಾದ್ಯಂತ ಕ್ಯಾನ್ಸರ್ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಂಬರುವ ತಿಂಗಳುಗಳಲ್ಲಿ ತುಮಕೂರು, ಮೈಸೂರು, ಮಂಡ್ಯ ಮತ್ತು ಕಾರವಾರದಲ್ಲಿ ಬಾಹ್ಯ ಕ್ಯಾನ್ಸರ್ ಕೇಂದ್ರಗಳನ್ನು (Peripheral Cancer Centers – PCCs) ಆರಂಭಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಈಗಾಗಲೇ 80 ಹಾಸಿಗೆಗಳನ್ನು ಹೊಂದಿರುವ ಕಲಬುರಗಿಯ ಪಿಸಿಸಿಯಲ್ಲಿ ಹೆಚ್ಚುವರಿಯಾಗಿ 210 ಹಾಸಿಗೆಗಳನ್ನು ಅಳವಡಿಸಲು ಹೊಸ ಕಟ್ಟಡ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದರ ಜೊತೆಗೆ, ಬಳ್ಳಾರಿ, ಶಿವಮೊಗ್ಗ, ರಾಯಚೂರು, ಬೀದರ್ ಮತ್ತು ಬೆಳಗಾವಿಯಲ್ಲಿಯೂ ಹೆಚ್ಚುವರಿ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಡಾ. ಪಾಟೀಲ್ ಮಾಹಿತಿ ನೀಡಿದರು.

ದಾದಿಯರ ವೇತನ ಬಿಡುಗಡೆಗೆ ಸೂಚನೆ :

ಇದೇ ಸಂದರ್ಭದಲ್ಲಿ, 2021ರಿಂದಲೂ ಗುತ್ತಿಗೆ ಮತ್ತು ಹೊರ ಗುತ್ತಿಗೆ ದಾದಿಯರಿಗೆ ಪೂರ್ಣ ವೇತನವನ್ನು ನಿರಾಕರಿಸಲಾಗಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಸಚಿವರು ತಕ್ಷಣವೇ ಪ್ರತಿಕ್ರಿಯಿಸಿದರು. ಹೆರಿಗೆ ರಜೆಯಲ್ಲಿದ್ದ ದಾದಿಯರನ್ನೂ ಒಳಗೊಂಡಂತೆ ಬಾಕಿ ಇರುವ ಪೂರ್ಣ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸಂಸ್ಥೆಯ ನಿರ್ದೇಶಕ ಡಾ. ಟಿ. ನವೀನ್ ಅವರಿಗೆ ಡಾ. ಪಾಟೀಲ್ ಸೂಚನೆ ನೀಡಿದರು.

WhatsApp Join our WhatsApp Channel
Previous Post

ಮಹಿಳೆಯರಿಗೆ ಬಂಪರ್‌ ಗಿಫ್ಟ್: ಇನ್ನು ಮುಂದೆ ಮಹಿಳೆಯರಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆ

Next Post

ರಾಷ್ಟೋತ್ಥಾನ ಸಾಹಿತ್ಯದಿಂದ ಕನ್ನಡ ಪುಸ್ತಕ ಹಬ್ಬ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

Next Post

ರಾಷ್ಟೋತ್ಥಾನ ಸಾಹಿತ್ಯದಿಂದ ಕನ್ನಡ ಪುಸ್ತಕ ಹಬ್ಬ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ ವಿಫಲ : 75 ಸಮಿತಿ ಸದಸ್ಯರ ಪೈಕಿ ಅರ್ಧಕ್ಕಿಂತ ಕಡಿಮೆ ಹಾಜರಾತಿ ; ಶಾಸಕರು, ಸಂಸದರ ಅಸಡ್ಡೆ

Please login to join discussion

Like Us on Facebook

Follow Us on Twitter

Recent News

ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

May 16, 2026

ಮಾಲಿನ್ಯಕ್ಕೆ ಬ್ರೇಕ್: ದೆಹಲಿಯಲ್ಲಿ ಇನ್ನು ಮುಂದೆ ಇ-ಆಟೋಗಳದ್ದೇ ಪಾರುಪತ್ಯ

May 16, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

May 16, 2026

ಮಾಲಿನ್ಯಕ್ಕೆ ಬ್ರೇಕ್: ದೆಹಲಿಯಲ್ಲಿ ಇನ್ನು ಮುಂದೆ ಇ-ಆಟೋಗಳದ್ದೇ ಪಾರುಪತ್ಯ

May 16, 2026

​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

May 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group