Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಜಾತಿ ಗಣತಿ: ಸಮೀಕ್ಷೆ ನಿರಾಕರಿಸಿದವರಿಗೆ ‘ದೃಢೀಕರಣ ಪತ್ರ’ ಕಡ್ಡಾಯವೇ?

ಸರ್ಕಾರದ ಮಹತ್ವದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

by Bengaluru Wire Desk
October 14, 2025
in News Wire, Public interest
Reading Time: 2 mins read
0

ಬೆಂಗಳೂರು, .14 www.bengaluruwire.com: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ)ಯ ಪ್ರಕ್ರಿಯೆಯು ವಿವಿಧ ಕಾರಣಗಳಿಂದಾಗಿ ಆಗಾಗ ಚರ್ಚೆಗೆ ಗ್ರಾಸವಾಗುತ್ತಲೇ ಇದೆ. ಸಮೀಕ್ಷೆಗೆ ಮಾಹಿತಿ ನೀಡಲು ಹಿಂದೇಟು ಹಾಕುವವರ ಸಂಖ್ಯೆ ಹೆಚ್ಚುತ್ತಿರುವುದರ ಹಿನ್ನೆಲೆಯಲ್ಲಿ, ಗಣತಿಯಿಂದ ದೂರ ಉಳಿಯುವವರಿಗೆ ‘ದೃಢೀಕರಣ ಪತ್ರ’ ಕಡ್ಡಾಯಗೊಳಿಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗವು (Karnataka Backward Classes Commission) ಗಂಭೀರ ಚಿಂತನೆ ನಡೆಸಿದೆ.

ದೃಢೀಕರಣ ಪತ್ರ ಕಡ್ಡಾಯದ ಹಿಂದಿನ ಉದ್ದೇಶವೇನು? :

ದಿನೇ ದಿನೇ ಜಾತಿ ಗಣತಿಯಿಂದ ದೂರ ಉಳಿಯುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ, ಪ್ರತಿ ಮನೆಗೆ ಭೇಟಿ ನೀಡಿದ್ದರೂ ಸಮೀಕ್ಷೆ ಅಪೂರ್ಣ ಎಂಬ ಸಾಧ್ಯತೆಗಳನ್ನು ಇದು ನಿವಾರಿಸಲಿದೆ. ಈ ಹಿನ್ನೆಲೆಯಲ್ಲಿ, ಸಮೀಕ್ಷೆಗೆ ನಿರಾಕರಿಸಿದವರ ಮನೆಗೆ ಗಣತಿದಾರರು ಮತ್ತೊಂದು ಸುತ್ತು ಭೇಟಿ ನೀಡಿ, ಸಹಿಯೊಂದಿಗಿನ ದೃಢೀಕರಣ ಪತ್ರ (Confirmation Letter) ಪಡೆಯಲು ಆಯೋಗ ಮುಂದಾಗಿದೆ.

ಜಿಬಿಎ ಹೊರತುಪಡಿಸಿ ರಾಜ್ಯದಾದ್ಯಂತ ಸೆ.22 ರಿಂದ ಜಾತಿ ಗಣತಿ ಆರಂಭವಾಗಿದ್ದು ಈತನಕ ಒಟ್ಟು ಮನೆಗಳ ಗುರಿ 1,47,88,831 ಆಗಿದ್ದು, ಅ.13ರ ಮಾಹಿತಿ ಪ್ರಕಾರ ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ 1,33,70,651 ಆಗಿದ್ದು, ಶೇಕಡಾವಾರು ಪ್ರಗತಿಯು ಶೇ.90.26 ರಷ್ಟಾಗಿದೆ.

ಈ ಮೊದಲೇ, ಮಾಹಿತಿ ನೀಡಲು ನಿರಾಕರಿಸಿದಲ್ಲಿ ಅಂತಹವರಿಂದ ಲಿಖಿತವಾಗಿ ಸ್ಪಷ್ಟೀಕರಣ ಪಡೆಯಲು ಸೂಚಿಸಲಾಗಿತ್ತಾದರೂ, ಅದು ಕಡ್ಡಾಯ ಮಾಡಿರರಲಿಲ್ಲ. ಹಾಗಾಗಿ ಹಲವು ಕಡೆಗಳಲ್ಲಿ ನಿರಾಕರಿಸುವುದರ ಜತೆಗೆ, ಬರೆದುಕೊಡಲಿಕ್ಕೂ ಆಗುವುದಿಲ್ಲ ಎಂದು ಹೇಳಿದ್ದಾರೆ.

ಸಮೀಕ್ಷೆ ಪ್ರಕ್ರಿಯೆ ಮುಗಿದ ಬಳಿಕ ಗಣತಿದಾರರಿಗೆ ನೀಡಿದ್ದ ಯುಎಚ್‌ಐಡಿ (UHID) ಪಟ್ಟಿಯೊಂದಿಗೆ ಗಣತಿಯನ್ನು ತಾಳೆ ಹಾಕಲಾಗುತ್ತದೆ. ಆಗ ಕೈಬಿಟ್ಟ ಮನೆಗಳಿಗೆ ಪುನಃ ಭೇಟಿ ನೀಡಿ ಮುಚ್ಚಳಿಕೆ ಅಥವಾ ದೃಢೀಕರಣ ಪತ್ರ ಪಡೆಯುವುದರಿಂದ ಸಮೀಕ್ಷೆ ನೂರಕ್ಕೆ ನೂರರಷ್ಟು ಪೂರ್ಣಗೊಂಡಂತಾಗಲಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ಕರ್ನಾಟಕ ರಾಜ್ಯದಲ್ಲಿ (ಗ್ರೇಟರ್ ಬೆಂಗಳೂರು ಹೊರತುಪಡಿಸಿ – GBA) ಸಮೀಕ್ಷೆಯ ಪ್ರಗತಿಯು ಗಮನಾರ್ಹ ಮಟ್ಟಕ್ಕೆ ತಲುಪಿದೆ. ಜಿಬಿಎ ವ್ಯಾಪ್ತಿಯಲ್ಲಿ ಗಣತಿಯ ಪ್ರಗತಿಯು ರಾಜ್ಯದ ಉಳಿದ ಭಾಗಗಳಿಗೆ ಹೋಲಿಸಿದರೆ ಬಹಳ ಕಡಿಮೆಯಿದೆ.

ಅನಧಿಕೃತ ಗೈರು ಹಾಜರಾತಿಗೆ ಅಮಾನತಿನ‌ ಶಿಕ್ಷೆ :

ಬೆಂಗಳೂರು ನಗರದಲ್ಲಿ ಸುಮಾರು 46 ಲಕ್ಷ ಮನೆಗಳಿಗೆ ಸಮೀಕ್ಷೆ ನಡೆಸಬೇಕಿದ್ದು, ಇದಕ್ಕಾಗಿ ಸುಮಾರು 21,000 ಸಮೀಕ್ಷಾದಾರ(Enumerators)ರನ್ನು ನಿಯೋಜಿಸಲಾಗಿದೆ. ಈ ಸಮೀಕ್ಷಾದಾರರಲ್ಲಿ 18,000 ಕ್ಕೂ ಹೆಚ್ಚು ಮಂದಿ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ.

ಆದರೆ, ಪ್ರತಿದಿನ ಪದೇ ಪದೇ ನೋಟೀಸ್ ಗಳು ಹಾಗೂ ಎಸ್ ಎಂಎಸ್ ಮೂಲಕ ಸಂದೇಶಗಳನ್ನು ನೀಡುತ್ತಿದ್ದರೂ ಕೂಡಾ ಸುಮಾರು 2,300 ಸಮೀಕ್ಷದಾರರು ಯಾವುದೇ ಕಾರಣವಿಲ್ಲದೆ ಹಾಗೂ ಅನಧಿಕೃತವಾಗಿ ಗೈರುಹಾಜರಿದ್ದಾರೆ. ಇಂತಹವರ ನಡೆ ಗಂಭೀರ ಶಿಸ್ತುಉಲ್ಲಂಘನೆಯಾಗಿದೆ. ಆದ್ದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಅವರ ಅನಧಿಕೃತ ಗೈರುಹಾಜರಿ ಅವಧಿಯ ವೇತನವನ್ನು “ಕೆಲಸ ಮಾಡದಿದ್ದರೆ – ವೇತನವಿಲ್ಲ”(No Work – No Pay) ತತ್ವದ ಪ್ರಕಾರ ನಿರಾಕರಿಸುವಂತೆ ಆದೇಶ ಹೊರಡಿಸಿದ್ದಾರೆ.

ಅವರು ತಕ್ಷಣ ಕರ್ತವ್ಯಕ್ಕೆ ಹಾಜರಾಗಿ, ತಮಗೆ ಹಂಚಿಕೆಯಾಗಿರುವ ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕು. ಇಲ್ಲವಾದರೆ, ಅನಧಿಕೃತವಾಗಿ ಗೈರಾಗಿರುವ ಸಮೀಕ್ಷಾದಾರರ ವಿರುದ್ಧ ಹಾಗೂ ಅನಧಿಕೃತವಾಗಿ ಗೈರುಹಾಜರಾಗುವುದನ್ನು ಮುಂದುವರಿಸಿದರೆ ಅಮಾನತು ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಜಾತಿ ಗಣತಿ: ಪ್ರಗತಿ ವಿವರ (ಅ. 13, 2025 ರವರೆಗೆ)

ರಾಜ್ಯದ ಪ್ರಗತಿ (GBA ಹೊರತುಪಡಿಸಿ) 

ಒಟ್ಟು ಮನೆಗಳ ಗುರಿ : 1,47,88,831 

ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ : 1,33,70,651  

ಶೇಕಡಾವಾರು ಪ್ರಗತಿ : 90.26% 

ಒಟ್ಟು ಜನಸಂಖ್ಯೆ (ಸಮೀಕ್ಷೆ) : 4,93,49,806  

GBA (ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಗತಿ)

ಒಟ್ಟು ಮನೆಗಳ ಗುರಿ : 39,82,335 

ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ : 13,17,176 

ಶೇಕಡಾವಾರು ಪ್ರಗತಿ : 29.35% 

ಒಟ್ಟು ಜನಸಂಖ್ಯೆ (ಸಮೀಕ್ಷೆ) : 41,31,585

ಸಮೀಕ್ಷೆಯ ಪ್ರಮುಖ ಪ್ರಶ್ನೆಗಳು ಮತ್ತು ಅಗತ್ಯ ದಾಖಲೆಗಳು :

ಜಾತಿ ಗಣತಿ ಸಮೀಕ್ಷೆಯು ಮುಖ್ಯವಾಗಿ ಈ ಮೂರು ವರ್ಗದ ಪ್ರಶ್ನೆಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ:

 * ಸಾಮಾಜಿಕ ಮತ್ತು ಜಾತಿ ವಿವರ:

   * ಕುಟುಂಬದ ಸದಸ್ಯರ ಹೆಸರು, ಲಿಂಗ, ವಯಸ್ಸು, ಕೌಟುಂಬಿಕ ಸಂಬಂಧ, ಮಾತೃಭಾಷೆ.

   * ಜಾತಿ ಮತ್ತು ಉಪಜಾತಿ, ಧರ್ಮ, ಇತ್ಯಾದಿ.

 * ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ:

   * ಕುಟುಂಬದ ಸದಸ್ಯರ ಶೈಕ್ಷಣಿಕ ಮಟ್ಟ (ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಇತ್ಯಾದಿ).

   * ಪ್ರಸ್ತುತ ಉದ್ಯೋಗದ ಸ್ವರೂಪ (ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ, ಕೂಲಿ, ಇತ್ಯಾದಿ).

 * ಆರ್ಥಿಕ ಮತ್ತು ಜೀವನ ಮಟ್ಟದ ಮಾಹಿತಿ:

   * ಮಾಸಿಕ ಆದಾಯ, ಕೃಷಿ ಭೂಮಿಯ ವಿವರ.

   * ಕುಟುಂಬದ ಆಸ್ತಿ, ಮನೆ ಮಾಲೀಕತ್ವ, ಕುಡಿಯುವ ನೀರಿನ ಮೂಲ, ಇತ್ಯಾದಿ.

ಸಮೀಕ್ಷೆಗೆ ತೋರಿಸಬೇಕಿರುವ ದಾಖಲೆಗಳು:

 * ಆಧಾರ್ ಕಾರ್ಡ್/ಸಂಖ್ಯೆ

 * ಪಡಿತರ ಚೀಟಿ (Ration Card)

 * ವಿಕಲಚೇತನ ಯುಐಡಿ/ಪ್ರಮಾಣಪತ್ರ

 * ಜಾತಿ ಮತ್ತು ಆದಾಯ ಪ್ರಮಾಣಪತ್ರಗಳು (ಲಭ್ಯವಿದ್ದರೆ)

 * ಮತದಾರರ ಗುರುತಿನ ಚೀಟಿ

ಆನ್‌ಲೈನ್ ಸ್ವಯಂ ಸಮೀಕ್ಷೆಯ ಅವಕಾಶ:

ಸರ್ಕಾರವು ಗಣತಿ ಪ್ರಕ್ರಿಯೆಗೆ ಪಾರದರ್ಶಕತೆ ನೀಡುವ ಸಲುವಾಗಿ, ನಿವಾಸಿಗಳಿಗೆ ನಿರ್ದಿಷ್ಟ ಅವಧಿಗೆ ಆನ್‌ಲೈನ್ ಮೂಲಕವೂ ತಮ್ಮ ಮಾಹಿತಿಯನ್ನು ನಮೂದಿಸಲು ಸ್ವಯಂ-ಸಮೀಕ್ಷೆಯ (Online Self-Survey) ಅವಕಾಶವನ್ನು ನೀಡಿತ್ತು. ಇದು ಗಣತಿದಾರರ ಭೇಟಿ ಕಷ್ಟಕರವಾದವರಿಗೆ ಅನುಕೂಲ ಒದಗಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Silver Record Price | ದಾಖಲೆಯ ಏರಿಕೆ: ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ ₹1,85,100ಕ್ಕೆ ಜಿಗಿದು ಹೊಸ ಇತಿಹಾಸ ಸೃಷ್ಟಿ

Next Post

BW Special | ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ನಗರ ಯೋಜನೆ ಜವಾಬ್ದಾರಿ ಹಸ್ತಾಂತರ: ಬಿಡಿಎಗೆ ಮುಕ್ತಿ

Next Post

BW Special | ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ನಗರ ಯೋಜನೆ ಜವಾಬ್ದಾರಿ ಹಸ್ತಾಂತರ: ಬಿಡಿಎಗೆ ಮುಕ್ತಿ

GBA News | ನ.1 ರಿಂದ 100 ದಿನಗಳ ಕಾಲ ‘ಎ’ ಖಾತಾ ಅಭಿಯಾನ: ಬಿ ಖಾತೆಗಳು ಎ ಖಾತೆಗೆ ಪರಿವರ್ತನೆ - ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d