Wednesday, June 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

GST News | 21.64 ಕೋಟಿ ರೂ. ಜಿಎಸ್‌ಟಿ ವಂಚನೆ ಪ್ರಕರಣ ಪತ್ತೆ: ದಾವಣಗೆರೆಯಲ್ಲಿ ‘ನಕಲಿ ಇನ್‌ವಾಯ್ಸ್‌’ ಜಾಲ ಭೇದಿಸಿದ ಡಿಜಿಜಿಐ

ಜಿಎಸ್‌ಟಿ ಗುಪ್ತಚರ ವಿಭಾಗದ ಕಾರ್ಯಾಚರಣೆ | ಪ್ರಮುಖ ಆರೋಪಿ ಮೊಹಮ್ಮದ್ ಸಕ್ಲೈನ್ ಬಂಧನ: ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

by Bengaluru Wire Desk
October 18, 2025
in News Wire
Reading Time: 1 min read
0
ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ಬೆಳಗಾವಿ, ಅ.18 www.bengaluruwire.com : ವಾಣಿಜ್ಯ ತೆರಿಗೆ ಗುಪ್ತಚರ ನಿರ್ದೇಶನಾಲಯದ (DGGI) ಬೆಳಗಾವಿ ಪ್ರಾದೇಶಿಕ ಘಟಕವು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದ ಜಿಎಸ್‌ಟಿ ವಂಚನೆಯನ್ನು ಪತ್ತೆಹಚ್ಚಿದ್ದು, ಲೋಹದ ಸ್ಕ್ರ್ಯಾಪ್ (Metal Scrap) ವ್ಯಾಪಾರದಲ್ಲಿ ನಡೆದಿರುವ ₹21.64 ಕೋಟಿ ಮೊತ್ತದ ತೆರಿಗೆ ವಂಚನೆಯನ್ನು ಬಯಲಿಗೆ ಎಳೆದಿದೆ.

ಈ ಕುರಿತು ಡಿಜಿಜಿಐ ಬೆಳಗಾವಿ ಘಟಕದ ಅಧಿಕಾರಿಗಳು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಹರಿಹರದ ಮೆ. ಮರಿಯಮ್ ಸ್ಕ್ರ್ಯಾಪ್ ಡೀಲರ್ಸ್ (M/s Mariyam Scrap Dealers) ಅವರ ಆವರಣದಲ್ಲಿ ನಡೆದ ಪರಿಶೀಲನೆ ಕಾರ್ಯಾಚರಣೆಯಲ್ಲಿ ಈ ಬೃಹತ್ ವಂಚನೆ ಬೆಳಕಿಗೆ ಬಂದಿದೆ.

ನಕಲಿ ಇನ್‌ವಾಯ್ಸ್‌ಗಳ ಮೂಲಕ ₹17.14 ಕೋಟಿ ಐಟಿಸಿ ವಂಚನೆ :

ತನಿಖೆಯ ಪ್ರಕಾರ, ಸಂಸ್ಥೆಯು ಸುಮಾರು ₹112 ಕೋಟಿ ಮೌಲ್ಯದ ನಕಲಿ ಇನ್‌ವಾಯ್ಸ್‌ಗಳನ್ನು (Fake Invoices) ವಿತರಿಸಿದೆ. ಈ ಇನ್‌ವಾಯ್ಸ್‌ಗಳ ಆಧಾರದ ಮೇಲೆ ಅಕ್ರಮವಾಗಿ ಸುಮಾರು ₹17.14 ಕೋಟಿ ಮೊತ್ತದ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಸಂಸ್ಥೆಯ ಮುಖ್ಯಸ್ಥ ಮತ್ತು ಕಾರ್ಯಾಚರಣೆಗಳ ಪ್ರಮುಖ ಜವಾಬ್ದಾರಿ ಹೊತ್ತಿದ್ದ ಶ್ರೀ ಮೊಹಮ್ಮದ್ ಸಕ್ಲೈನ್ ಅವರು, ಇಲಾಖೆಯು ಸಂಗ್ರಹಿಸಿದ ಪುರಾವೆಗಳ ಮುಂದೆ ಜಿಎಸ್‌ಟಿ ವಂಚನೆಯನ್ನು ಒಪ್ಪಿಕೊಂಡಿದ್ದಾರೆ. ನಕಲಿ ಬಿಲ್‌ಗಳ ಆಧಾರದ ಮೇಲೆ ಐಟಿಸಿ ದುರುಪಯೋಗಪಡಿಸಿಕೊಂಡಿರುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಇದರ ಜೊತೆಗೆ, ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ಪಾವತಿಸಬೇಕಿದ್ದ ₹4.50 ಕೋಟಿ ಜಿಎಸ್‌ಟಿಯನ್ನು ಕಡಿಮೆ ಪಾವತಿ ಮಾಡಿರುವುದನ್ನೂ ಒಪ್ಪಿಕೊಂಡಿದ್ದು, ಈ ಎರಡೂ ವಂಚನೆಯ ಮೊತ್ತ ಸೇರಿ ಒಟ್ಟು ₹21.64 ಕೋಟಿ ಜಿಎಸ್‌ಟಿ ವಂಚನೆ ನಡೆದಿರುವುದು ದೃಢಪಟ್ಟಿದೆ.

ಕಾರ್ಯವಿಧಾನ ಮತ್ತು ವಂಚನೆಯ ಸ್ವರೂಪ ಹೇಗಿತ್ತು? :

ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿರುವ ಪ್ರಕಾರ, ತೆರಿಗೆದಾರರು ಬಹುತೇಕ ಲೋಹದ ಸ್ಕ್ರ್ಯಾಪ್ ಅನ್ನು ನೊಂದಾಯಿಸದ ಪೂರೈಕೆದಾರರಿಂದ (Unregistered Suppliers) ಸಂಗ್ರಹಿಸಿದ್ದಾರೆ. ಈ ವಹಿವಾಟುಗಳಿಗೆ ಸಂಬಂಧಿಸಿದಂತೆ ಐಟಿಸಿ ಲಭ್ಯವಿರಲಿಲ್ಲ. ಆದರೆ, ನೋಂದಾಯಿತ ಸಂಸ್ಥೆಗಳಿಂದ ಮಾಡಿದ ಖರೀದಿಗಳಲ್ಲಿ ಬಹುಪಾಲು ಅಸ್ತಿತ್ವದಲ್ಲಿಲ್ಲದ (Non-existent) ಅಥವಾ ನಕಲಿ (Fictitious) ಘಟಕಗಳಿಂದ ಬಂದಿವೆ ಎಂದು ಕಂಡುಬಂದಿದೆ.

ಮೆ. ಮರಿಯಮ್ ಸ್ಕ್ರ್ಯಾಪ್ ಡೀಲರ್ಸ್ ಸಂಸ್ಥೆಯು ನೋಂದಾಯಿಸದ ವ್ಯಾಪಾರಿಗಳಿಂದ ಮಾಡಿದ ನಿಜವಾದ ಖರೀದಿಗಳನ್ನು ನಕಲಿ ಘಟಕಗಳಿಂದ ಬಂದಿರುವ ನಕಲಿ ಐಟಿಸಿ ರಸೀದಿಗಳೊಂದಿಗೆ ಜೋಡಿಸಿ, ಜಿಎಸ್‌ಟಿ ಪಾವತಿಗೆ ವಂಚನೆ ಮಾಡಿದೆ ಮತ್ತು ನಕಲಿ ಕ್ರೆಡಿಟ್ ಹರಿವಿಗೆ (Credit Flow) ಅನುಕೂಲ ಮಾಡಿಕೊಟ್ಟಿದೆ. ಈ ಸಂಸ್ಥೆಗಳು ಕಮಿಷನ್‌ಗಾಗಿ ನಕಲಿ ಇನ್‌ವಾಯ್ಸ್‌ಗಳನ್ನು ನೀಡುವ ಉದ್ದೇಶದಿಂದ ನಕಲಿ ದಾಖಲೆಗಳನ್ನು ಬಳಸಿ ಬೋಗಸ್ ಜಿಎಸ್‌ಟಿ ನೋಂದಣಿಗಳನ್ನು ಪಡೆದಿರುವುದು ಕೂಡ ತನಿಖೆಯಿಂದ ಬಯಲಾಗಿದೆ.

ಪ್ರಮುಖ ಆರೋಪಿ ಬಂಧನ, 14 ದಿನಗಳ ನ್ಯಾಯಾಂಗ ಬಂಧನಕ್ಕೆ :

ವಂಚನೆಯ ಗಂಭೀರತೆಯನ್ನು ಗಮನಿಸಿ, ಡಿಜಿಜಿಐ ಅಧಿಕಾರಿಗಳು ಶ್ರೀ ಮೊಹಮ್ಮದ್ ಸಕ್ಲೈನ್ ಅವರನ್ನು ದಿನಾಂಕ 17.10.2025 ರಂದು ಸಿಜಿಎಸ್‌ಟಿ ಕಾಯಿದೆ, 2017ರ ಸೆಕ್ಷನ್ 69ರ ಅಡಿಯಲ್ಲಿ ಬಂಧಿಸಿದ್ದಾರೆ. ಅವರನ್ನು ಬೆಳಗಾವಿಯ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಡಿಜಿಜಿಐ ಮೂಲಗಳು ತಿಳಿಸಿವೆ.

WhatsApp Join our WhatsApp Channel
Previous Post

KSRTC News | ಪ್ರಗತಿಗೆ ಸಿಕ್ಕ ಮಾನ್ಯತೆ: ಕೆಎಸ್‌ಆರ್‌ಟಿಸಿ ಪ್ರಶಸ್ತಿ ವಿವಾದಕ್ಕೆ ಸಾರಿಗೆ ಸಚಿವರ ಸ್ಪಷ್ಟನೆ

Next Post

ಕ್ಷಣಾರ್ಧದಲ್ಲಿ ಭಾರತೀಯ ಟೆಕಿಯ H-1B ವೀಸಾ ಕ್ಲಿಯರ್: ವೈರಲ್ ಆಯ್ತು ಯುಎಸ್ ವೀಸಾ ಸುದ್ದಿ

Next Post

ಕ್ಷಣಾರ್ಧದಲ್ಲಿ ಭಾರತೀಯ ಟೆಕಿಯ H-1B ವೀಸಾ ಕ್ಲಿಯರ್: ವೈರಲ್ ಆಯ್ತು ಯುಎಸ್ ವೀಸಾ ಸುದ್ದಿ

ಮಂಡ್ಯ: ಕೆಎಸ್‌ಆರ್‌ಟಿಸಿ- ಎರಡು ಬಿಎಂಟಿಸಿ ಬಸ್‌ಗಳ ಸರಣಿ ಅಪಘಾತ; ಓರ್ವ ಮಹಿಳೆ ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

Please login to join discussion

Like Us on Facebook

Follow Us on Twitter

Recent News

ಮೊದಲ ಬಾರಿಗೆ 12 ಅಣ್ವಸ್ತ್ರಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ ಭಾರತ: ನೆರೆ ರಾಷ್ಟ್ರಗಳ ಎದೆಯಲ್ಲಿ ನಡುಕ ಹುಟ್ಟಿಸಿದ ‘ಸಿಪ್ರಿ’ ವರದಿ

June 10, 2026

ಬೆಲೆ ಏರಿಕೆ ಬಿಸಿ: ಕೇಂದ್ರದ ಹೊಸ ‘ಗ್ರಾಮ್ ಜಿ’ (GRAMG) ಯೋಜನೆಯಡಿ ಕನಿಷ್ಠ ವೇತನ ಹೆಚ್ಚಳಕ್ಕೆ ಸಚಿವ ಈಶ್ವರ ಖಂಡ್ರೆ ಆಗ್ರಹ

June 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊದಲ ಬಾರಿಗೆ 12 ಅಣ್ವಸ್ತ್ರಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ ಭಾರತ: ನೆರೆ ರಾಷ್ಟ್ರಗಳ ಎದೆಯಲ್ಲಿ ನಡುಕ ಹುಟ್ಟಿಸಿದ ‘ಸಿಪ್ರಿ’ ವರದಿ

June 10, 2026

ಬೆಲೆ ಏರಿಕೆ ಬಿಸಿ: ಕೇಂದ್ರದ ಹೊಸ ‘ಗ್ರಾಮ್ ಜಿ’ (GRAMG) ಯೋಜನೆಯಡಿ ಕನಿಷ್ಠ ವೇತನ ಹೆಚ್ಚಳಕ್ಕೆ ಸಚಿವ ಈಶ್ವರ ಖಂಡ್ರೆ ಆಗ್ರಹ

June 10, 2026

ರಕ್ಷಣಾ ಇಲಾಖೆ ಭೂಮಿಯಲ್ಲಿ ದೇಶದ ಮೊದಲ ಬೃಹತ್ ಸೌರ ವಿದ್ಯುತ್ ಯೋಜನೆಗೆ ರಾಜನಾಥ್ ಸಿಂಗ್ ಅಸ್ತು

June 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group