Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಡದಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಸ್ಥಾವರದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ: ಕೆಪಿಸಿಎಲ್ ಸ್ಪಷ್ಟನೆ

ಮಾಲಿನ್ಯ ನಿಯಂತ್ರಣ ಮಂಡಳಿ ಕಣ್ಗಾವಲಿನಲ್ಲಿ ಘಟಕದ ಮೇಲ್ವಿಚಾರಣೆ; ಕಲ್ಮಶಯುಕ್ತ ನೀರನ್ನು ಸಂಸ್ಕರಿಸಿ ಮರುಬಳಕೆ

by Bengaluru Wire Desk
November 7, 2025
in Bengaluru Focus
Reading Time: 1 min read
0

ಬೆಂಗಳೂರು,ನ.07 www.bengaluruwire.com : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಬೆಂಗಳೂರಿನ ಬಿಡದಿಯಲ್ಲಿ ಸ್ಥಾಪಿಸಿರುವ ಮಹತ್ವಾಕಾಂಕ್ಷೆಯ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕವು ಪರಿಸರಕ್ಕೆ ಯಾವುದೇ ಹಾನಿ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಎಲ್ಲಾ ನಿಯಮಗಳನ್ನು ಘಟಕವು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು, ನಿರಂತರ ಕಣ್ಗಾವಲಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಕೆಪಿಸಿಎಲ್ ತಿಳಿಸಿದೆ.

‘ದಿ ಫ್ರೈಡೇಸ್‌ಫಾರ್‌ಫ್ಯೂಚರ್-ಕರ್ನಾಟಕ’ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿರುವ ಕೆಪಿಸಿಎಲ್, ಪರಿಸರ ನಿಯಮಗಳನ್ನು ಪಾಲಿಸುವುದರ ಜೊತೆಗೆ ಸಮರ್ಪಕ ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದೆ.

ಮುಖ್ಯಾಂಶಗಳು:

ಮಾಲಿನ್ಯ ಮಂಡಳಿ ಅನುಮತಿ: ಕೆಪಿಸಿಎಲ್ ಘಟಕದ ಕಾರ್ಯಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು 2024ರ ಜುಲೈ 20ರಂದು ಅನುಮತಿ ನೀಡಿದ್ದು, ಅದರ ಬಳಿಕವೇ ಕಾರ್ಯಾಚರಣೆ ಆರಂಭಿಸಲಾಗಿದೆ.

 ಆನ್‌ಲೈನ್ ಮೇಲ್ವಿಚಾರಣೆ: ಸ್ಥಾವರವು 2025ರ ಆಗಸ್ಟ್ 25ರಂದು ರಾಜ್ಯ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಸರ್ವರ್‌ಗಳೊಂದಿಗೆ ಸಂಪರ್ಕ ಸಾಧಿಸಿದೆ. ಪ್ರತಿ ಕ್ಷಣದ ಪರಿಸರ ಸಂಬಂಧಿತ ಮಾಹಿತಿಯು ಮಂಡಳಿಗೆ ಆನ್‌ಲೈನ್ ಮೂಲಕ ಲಭ್ಯವಿದೆ.

 ಕಲ್ಮಶಯುಕ್ತ ನೀರು (Leachate) ಮರುಬಳಕೆ: ಸ್ಥಾವರದಲ್ಲಿ ಉತ್ಪತ್ತಿಯಾಗುವ ಕಲ್ಮಶಯುಕ್ತ ನೀರನ್ನು (ಲೀಚೇಟ್) ಪಕ್ಕದಲ್ಲೇ ಸಂಸ್ಕರಿಸಿ, ಪರೀಕ್ಷಿಸಿ ಶುದ್ಧೀಕರಿಸಲಾಗುತ್ತದೆ. ಈ ಶುದ್ಧೀಕರಿಸಿದ ನೀರನ್ನು ಸ್ಥಾವರದಲ್ಲಿಯೇ ಮರುಬಳಕೆ ಮಾಡಲಾಗುತ್ತಿದೆಯೇ ಹೊರತು, ಪರಿಸರಕ್ಕೆ ಬಿಡುಗಡೆ ಮಾಡುತ್ತಿಲ್ಲ.

ಕಲ್ಮಶಯುಕ್ತ ನೀರನ್ನು ಸರಿಯಾದ ಮೇಲ್ವಿಚಾರಣೆಯಿಲ್ಲದೆ ಬಿಡುಗಡೆ ಮಾಡಲಾಗಿದೆ ಎಂಬ ಆರೋಪಗಳು ಸುಳ್ಳು ಎಂದು ಕೆಪಿಸಿಎಲ್ ನಿರಾಕರಿಸಿದೆ.

 ಬೂದಿಯ ವೈಜ್ಞಾನಿಕ ವಿಲೇವಾರಿ: ವಿದ್ಯುತ್ ಉತ್ಪಾದನೆಯಾದ ನಂತರ ಉಳಿಯುವ ತಳ ಬೂದಿ ಮತ್ತು ಹಾರು ಬೂದಿಯನ್ನು (Bottom Ash and Fly Ash) ಪ್ರಸ್ತುತ ಬಿಬಿಎಂಪಿ ಮೂಲಕ ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ.

ರಸ್ತೆ ನಿರ್ಮಾಣಕ್ಕೆ ಬೂದಿ ಬಳಕೆ: 

ಬೂದಿಯ ವಿಲೇವಾರಿ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸಲು, ರಸ್ತೆ ನಿರ್ಮಾಣಕ್ಕೆ ಅದನ್ನು ಬಳಸುವ ಬಗ್ಗೆ ಕೆಪಿಸಿಎಲ್, ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆಗೆ (CRRI) 2025 ಜುಲೈ 1ರಂದು ಪ್ರಸ್ತಾವನೆ ಸಲ್ಲಿಸಿದೆ. ಸಂಶೋಧನೆಗಾಗಿ 44.84 ಲಕ್ಷ ರೂ. ಹಣವನ್ನು ಸಿಆರ್‌ಆರ್‌ಐಗೆ ನೀಡಲಾಗಿದೆ. ಬೂದಿಯನ್ನು ರಸ್ತೆ ನಿರ್ಮಾಣಕ್ಕೆ ಬಳಸಿಕೊಂಡರೆ ವಿಲೇವಾರಿ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯಲಿದೆ ಎಂದು ನಿಗಮ ಭರವಸೆ ವ್ಯಕ್ತಪಡಿಸಿದೆ.

ಘಟಕದ ಸಾಮರ್ಥ್ಯ ಮತ್ತು ಪ್ರಸ್ತುತ ಸ್ಥಿತಿ:

ಪ್ರತಿನಿತ್ಯ 600 ಟನ್ ತ್ಯಾಜ್ಯ ಸಂಸ್ಕರಿಸಿ 11.50 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯದ ಈ ಸ್ಥಾವರಕ್ಕೆ ಪ್ರಸ್ತುತ 200 ಟನ್ ಸಂಸ್ಕರಿಸಿದ ಒಣ ತ್ಯಾಜ್ಯ ಬರುತ್ತಿದೆ. ಈ ತಿಂಗಳ ಅಂತ್ಯದೊಳಗೆ ಈ ಪ್ರಮಾಣ 500 ಟನ್ ತಲುಪುವ ನಿರೀಕ್ಷೆ ಇದೆ ಎಂದು ಕೆಪಿಸಿಎಲ್ ತಿಳಿಸಿದೆ. ಪ್ರಸ್ತುತ ಬರುವ ತ್ಯಾಜ್ಯದಲ್ಲಿ ಸ್ವಲ್ಪ ತೇವಾಂಶವಿದ್ದರೂ, ಅದರಿಂದ ಪರಿಸರಕ್ಕೆ ಹಾನಿಯಾಗದಂತೆ ಸೂಕ್ತ ನಿರ್ವಹಣೆ ಮಾಡಲಾಗುತ್ತಿದೆ.

ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಬಿಡದಿಯ ಘಟಕವು ಪರಿಸರಕ್ಕೆ ಸಂಬಂಧಿಸಿದ ಎಲ್ಲಾ ಮಾನದಂಡಗಳನ್ನು ಪೂರೈಸುತ್ತಿದ್ದು, ವಿಷಕಾರಿ ಮಾಲಿನ್ಯಕಾರಕಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ವಿಫಲವಾಗಿದೆ ಎಂಬ ಯಾವುದೇ ಆರೋಪಗಳು ಸತ್ಯಕ್ಕೆ ದೂರವಾದುದು ಎಂದು ಕೆಪಿಸಿಎಲ್ ಪುನರುಚ್ಚರಿಸಿದೆ.

WhatsApp Join our WhatsApp Channel
Previous Post

BW Special | ಬೆಂಗಳೂರಿನಲ್ಲಿ ಜನರ ಗಮನ ಸೆಳೆಯುತ್ತಿದೆ “ಹಂಪೆಯ ಕಲ್ಲಿನ ರಥ”ದ ಟ್ಯಾಬ್ಲೊ ಹೊತ್ತ ಆಟೋ : ಏನಿದರ ವಿಶೇಷತೆ?

Next Post

KUWJ News | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : 20 ಜಿಲ್ಲೆಗಳಲ್ಲಿ ನ.9ರಂದು ಮತದಾನ

Next Post

KUWJ News | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : 20 ಜಿಲ್ಲೆಗಳಲ್ಲಿ ನ.9ರಂದು ಮತದಾನ

ಬೆಂಗಳೂರಿನ 6 ಆರ್.ಟಿ.ಒ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಏಜೆಂಟರ ಜಾಲ, ಅಧಿಕಾರಿಗಳ ಭ್ರಷ್ಟಾಚಾರ ಬಯಲು

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group