Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಮುಂಬೈ ಉಗ್ರರ ದಾಳಿಗೆ 17 ವರ್ಷ: ‘ಮತ್ತೆಂದು ಸಂಭವಿಸಬಾರದು’ ಸಂಕಲ್ಪದೊಂದಿಗೆ ಹುತಾತ್ಮರಿಗೆ ರಾಷ್ಟ್ರದ ನಮನ

26/11ರ ಕರಾಳ ನೆನಪು: ಗೇಟ್‌ವೇ ಆಫ್ ಇಂಡಿಯಾದಲ್ಲಿ ಎನ್‌ಎಸ್‌ಜಿ ವಿಶೇಷ ಕಾರ್ಯಕ್ರಮ, ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆ ಎಂದು ಸಾರಿದ ಭಾರತ.

by Bengaluru Wire Desk
November 26, 2025
in News Wire, Public interest
Reading Time: 1 min read
0

ನವದೆಹಲಿ/ಮುಂಬೈ ನ.26 www.bengaluruwire.com : ವಾಣಿಜ್ಯ ನಗರಿ ಮುಂಬೈ ಮೇಲೆ ಪಾಕಿಸ್ತಾನ ಪ್ರೇರಿತ ಉಗ್ರರು ನಡೆಸಿದ ಭೀಕರ ದಾಳಿಗೆ ಇಂದಿಗೆ 17 ವರ್ಷ ತುಂಬಿದ್ದು, ದೇಶಾದ್ಯಂತ ‘ನೆವರ್‌ ಎವರ್’ (NeverEver) ಎಂಬ ದೃಢ ಸಂಕಲ್ಪದೊಂದಿಗೆ ಹುತಾತ್ಮರಿಗೆ ಭಾವಪೂರ್ಣ ಗೌರವ ಸಲ್ಲಿಸಲಾಗುತ್ತಿದೆ.

2008ರ ನವೆಂಬರ್ 26ರಂದು ನಡೆದ ಈ ದುರಂತವನ್ನು ಸ್ಮರಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶದ ರಕ್ಷಣೆಗಾಗಿ ಪ್ರಾಣತೆತ್ತ ವೀರ ಯೋಧರು ಹಾಗೂ ಅಮಾಯಕ ನಾಗರಿಕರ ತ್ಯಾಗವನ್ನು ಸ್ಮರಿಸಿದ್ದಾರೆ.

ಮುಂಬೈನ ತಾಜ್ ಹೋಟೆಲ್ ದಾಳಿಯಾದಗಿನ ಚಿತ್ರ.

“ಮತ್ತೆಂದು ಸಂಭವಿಸಬಾರದು” (Never Ever) ಘೋಷವಾಕ್ಯದಡಿ ವಿಶೇಷ ಶ್ರದ್ಧಾಂಜಲಿ :

ಈ ಕರಾಳ ಘಟನೆಯ ವಾರ್ಷಿಕೋತ್ಸವದ ಅಂಗವಾಗಿ, ರಾಷ್ಟ್ರೀಯ ಭದ್ರತಾ ಪಡೆ (NSG) ಮುಂಬಯಿಯ ಗೇಟ್‌ವೇ ಆಫ್ ಇಂಡಿಯಾದಲ್ಲಿ ‘ನೆವರ್‌ ಎವರ್’ (ಮತ್ತೆಂದು ಸಂಭವಿಸಬಾರದು) ಎಂಬ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ. ಇದು ಕೇವಲ ಶ್ರದ್ಧಾಂಜಲಿಯಾಗಿರದೆ, ಇಂತಹ ದಾಳಿ ಮರುಕಳಿಸದಂತೆ ತಡೆಯುವ ಸಾರ್ವಜನಿಕ ಪ್ರತಿಜ್ಞೆಯಾಗಿದೆ. ಹುತಾತ್ಮರಿಗೆ ಬೆಳಗಿಸಿದ ಮೇಣದಬತ್ತಿಗಳ ಮೇಣವನ್ನು ಸಂಗ್ರಹಿಸಿ ‘ಜೀವಂತ ಸ್ಮಾರಕ’ (Living Memorial) ನಿರ್ಮಿಸಲು ನಿರ್ಧರಿಸಲಾಗಿದ್ದು, ಇದು ಭಾರತದ ಒಗ್ಗಟ್ಟು ಮತ್ತು ಸ್ಥೈರ್ಯವನ್ನು ಸಂಕೇತಿಸಲಿದೆ.

ಯುವಜನತೆಯಿಂದ ಶಾಂತಿ ಪ್ರತಿಜ್ಞೆ :

ಮುಂಬೈನ 26 ಶಾಲೆಗಳು ಮತ್ತು 11 ಕಾಲೇಜುಗಳ ವಿದ್ಯಾರ್ಥಿಗಳು ಗೇಟ್‌ವೇ ಆಫ್ ಇಂಡಿಯಾದಲ್ಲಿ ಸೇರಿ, ರಾಷ್ಟ್ರೀಯ ಭದ್ರತೆ ಮತ್ತು ಶಾಂತಿಯ ಕುರಿತು ಪ್ರತಿಜ್ಞೆ ಸ್ವೀಕರಿಸಿದರು. ರಾತ್ರಿ ಗೇಟ್‌ವೇ ಆಫ್ ಇಂಡಿಯಾವನ್ನು ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಬೆಳಗಿಸಲಾಗಿದ್ದು, ‘NeverEver’ ಎಂಬ ಸಂದೇಶವನ್ನು ಸ್ಮಾರಕದ ಮೇಲೆ ಪ್ರದರ್ಶಿಸುವ ಮೂಲಕ ಉಗ್ರವಾದದ ವಿರುದ್ಧ ಭಾರತದ ಒಗ್ಗಟ್ಟನ್ನು ಪ್ರದರ್ಶಿಸಲಾಯಿತು.

ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ :

ಸೋಷಿಯಲ್ ಮೀಡಿಯಾ ಮೂಲಕ ಸಂದೇಶ ರವಾನಿಸಿರುವ ಗೃಹ ಸಚಿವ ಅಮಿತ್ ಶಾ, “ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಕಂಟಕವಾಗಿದೆ. ಭಾರತವು ಭಯೋತ್ಪಾದಕ ಜಾಲಗಳು ಮತ್ತು ಅವುಗಳ ಪೋಷಕರ ವಿರುದ್ಧ ಕಠಿಣ ಮತ್ತು ರಾಜಿರಹಿತ ನಿಲುವಿಗೆ ಬದ್ಧವಾಗಿದೆ,” ಎಂದು ಪುನರುಚ್ಚರಿಸಿದ್ದಾರೆ. 

26/11ರ ದಾಳಿ ಭಾರತದ ಭದ್ರತಾ ನೀತಿಯಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಿದ್ದು, ಪ್ರಸ್ತುತ ಭಾರತವು ‘ಜೀರೋ ಟಾಲರೆನ್ಸ್’ (Zero Tolerance) ನೀತಿಯನ್ನು ಅನುಸರಿಸುತ್ತಿದೆ. ಕರಾವಳಿ ಭದ್ರತೆ, ಗುಪ್ತಚರ ಇಲಾಖೆಗಳ ಸಮನ್ವಯ ಮತ್ತು ನಗರಗಳಲ್ಲಿ ಎನ್‌ಎಸ್‌ಜಿ ಹಬ್‌ಗಳ ಸ್ಥಾಪನೆಯ ಮೂಲಕ ಭದ್ರತೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತಿಹಾಸದ ಕರಾಳ ಪುಟದ ಇಣುಕು ನೋಟ :

2008ರ ನವೆಂಬರ್ 26 ರಿಂದ 29ರವರೆಗೆ ಲಷ್ಕರ್-ಎ-ತೈಬಾ ಸಂಘಟನೆಯ 10 ಉಗ್ರರು ಮುಂಬೈನ ತಾಜ್ ಹೋಟೆಲ್, ಒಬೆರಾಯ್ ಟ್ರೈಡೆಂಟ್ ಸೇರಿದಂತೆ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ ಒಟ್ಟು 166 ಜನರು ಸಾವನ್ನಪ್ಪಿದ್ದರು.

40 ಬುಲೆಟ್ ಗುಂಡೇಟು ತಿಂದು ಉಗ್ರ ಕಸಬ್ ಹಿಡಿದು ಹುತಾತ್ಮರಾದ ಪೊಲೀಸ್ :

ಆತನ ಹೆಸರೇ ತುಕಾರಾಮ್ ಓಂಬ್ಲೆ. ಭಾರತೀಯ ಪೊಲೀಸ್ ಅಧಿಕಾರಿ ಮತ್ತು ಭಾರತೀಯ ಸೇನೆಯ ಮಾಜಿ ಯೋಧ. ಇವರು ಮುಂಬೈ ಪೊಲೀಸರ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಆಗಿ ಸೇವೆ ಸಲ್ಲಿಸಿದ್ದರು. ಮುಂಬೈನ ಗಿರ್ಗಾಮ್ ಚೌಪಟ್ಟಿಯಲ್ಲಿ ನಡೆದ 26/11 ದಾಳಿಯ ಸಮಯದಲ್ಲಿ ಉಗ್ರಗಾಮಿ ಅಜ್ಮಲ್ ಕಸಬ್ ನಿಂದ 40 ಸುತ್ತು AK47 ಗುಂಡು ಹಾರಿಸಿದರೂ, ಆ ಗುಂಡೇಟು ತಿಂದು, ಆ ಉಗ್ರನನ್ನು ಜೀವಂತವಾಗಿ ಸೆರೆಹಿಡಿದು ಹುತಾತ್ಮರಾದರು. ಇವರ ಧೈರ್ಯ ಮತ್ತು ಶೌರ್ಯ ಸಾಹಸಕ್ಕೆ ಇಡೀ ಭಾರತವೇ ಅಂದು ತಲೆಬಾಗಿ ನಮಸ್ಕರಿಸಿತ್ತು.

ಮುಂಬೈ ದಾಳಿಯಲ್ಲಿ ಹುತಾತ್ಮರಾದ ತುಕಾರಾಮ್ ಓಂಬ್ಲೆ.

ಭಾರತ ಸರ್ಕಾರವು 2009 ರ ಜನವರಿ 26ರಂದು ದೇಶದ ಅತ್ಯುನ್ನತ ಶಾಂತಿಕಾಲದ ಮಿಲಿಟರಿ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಮರಣೋತ್ತರವಾಗಿ ಓಂಬ್ಳೆ ಅವರ ಹೆಸರಲ್ಲಿ ಅವರ ಕುಟುಂಬಕ್ಕೆ ನೀಡಿ ಗೌರವಿಸಿತು.

View this post on Instagram
WhatsApp Join our WhatsApp Channel
Previous Post

ಕಲ್ಬುರ್ಗಿ ಸಮೀಪ ಭೀಕರ ಕಾರು ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿ ಮೂವರು ದುರ್ಮರಣ

Next Post

ಇಂಗ್ಲೆಂಡ್ ಕಂಪನಿಗಳಿಗೆ ರಾಜ್ಯದಲ್ಲಿ ಹೂಡಿಕೆಗೆ ಆಹ್ವಾನ : ಗ್ರೀನ್ ಜೆಟ್ಸ್ ಕಂಪನಿ ಬೆಂಗಳೂರು ಸಮೀಪ‌ ಉತ್ಪದನಾ ಘಟಕ ತೆರೆಯಲು ಉತ್ಸುಕ

Next Post

ಇಂಗ್ಲೆಂಡ್ ಕಂಪನಿಗಳಿಗೆ ರಾಜ್ಯದಲ್ಲಿ ಹೂಡಿಕೆಗೆ ಆಹ್ವಾನ : ಗ್ರೀನ್ ಜೆಟ್ಸ್ ಕಂಪನಿ ಬೆಂಗಳೂರು ಸಮೀಪ‌ ಉತ್ಪದನಾ ಘಟಕ ತೆರೆಯಲು ಉತ್ಸುಕ

ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ  ಕರಡು ಮತದಾರರ ಪಟ್ಟಿ ಪ್ರಕಟ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group