Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೃಹತ್ ನೋಂದಣಿ ಹಗರಣ ಬಯಲಿಗೆ: ಸರ್ಜಾಪುರ ಸೇರಿದಂತೆ 5 ಮಂದಿ ಉಪನೋಂದಣಾಧಿಕಾರಿಗಳ ಅಮಾನತು

ಕಾವೇರಿ-2 ತಂತ್ರಾಂಶದ ‘ಕೋರ್ಟ್ ಆದೇಶ’ ಆಯ್ಕೆ ದುರ್ಬಳಕೆ; ಇ-ಸ್ವತ್ತು ಇಲ್ಲದಿದ್ದರೂ ಅಕ್ರಮವಾಗಿ ದಸ್ತಾವೇಜು ನೋಂದಣಿ; ನೋಂದಣಿ ಮಹಾಪರಿವೀಕ್ಷಕ ಮುಲ್ಲೈ ಮುಹಿಲನ್ ಅವರಿಂದ ಕಠಿಣ ಕ್ರಮ.

by Bengaluru Wire Desk
January 6, 2026
in Bengaluru Focus, News Wire
Reading Time: 2 mins read
0

ಬೆಂಗಳೂರು, ಜ.06 www.bengaluruwire.com : ರಾಜಧಾನಿಯ ರಿಯಲ್ ಎಸ್ಟೇಟ್ ವಲಯದಲ್ಲಿ ತಲ್ಲಣ ಮೂಡಿಸುವಂತಹ ಬೃಹತ್ ಅಕ್ರಮ ನೋಂದಣಿ ಹಗರಣವೊಂದು ಬೆಳಕಿಗೆ ಬಂದಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ‘ಕಾವೇರಿ-2’ ತಂತ್ರಾಂಶದಲ್ಲಿನ ಲೋಪಗಳನ್ನು ಬಳಸಿಕೊಂಡು, ನ್ಯಾಯಾಲಯದ ಆದೇಶವಿದೆ ಎಂದು ಸುಳ್ಳು ಮಾಹಿತಿ ನೀಡಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿಗಳನ್ನು ಅಕ್ರಮವಾಗಿ ನೋಂದಣಿ ಮಾಡಲಾಗಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಜಾಪುರ, ಬಾಣಸವಾಡಿ, ವರ್ತೂರು ಮತ್ತು ಹಲಸೂರು ಉಪನೋಂದಣಿ ಕಚೇರಿಯ ಐವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಮುದ್ರಾಂಕಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇನ್ಫೋಸಿಸ್ ಭೂಮಿಗೆ ಕನ್ನ? ಸರ್ಜಾಪುರದಲ್ಲಿ ಮಹಾ ಮೋಸ:

ಸರ್ಜಾಪುರ ಉಪನೋಂದಣಿ ಕಚೇರಿಯಲ್ಲಿ ನಡೆದಿರುವ ಅವ್ಯವಹಾರ ಬೆಚ್ಚಿಬೀಳಿಸುವಂತಿದೆ. ಇನ್ಫೋಸಿಸ್ ಲಿಮಿಟೆಡ್ ಕಂಪನಿಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ನಿಯಮಬಾಹಿರವಾಗಿ ಖಾಸಗಿ ಕಂಪನಿಯೊಂದಕ್ಕೆ ಪರಭಾರೆ ಮಾಡಲಾಗಿದೆ. ಸರ್ಜಾಪುರ ಉಪನೋಂದಣಾಧಿಕಾರಿ ರವಿ ಸಂಕನಗೌಡ ಎಸ್. ಅವರು, ಯಾವುದೇ ನೈಜ ಸಿವಿಲ್ ನ್ಯಾಯಾಲಯದ ಆದೇಶವಿಲ್ಲದಿದ್ದರೂ, ತಂತ್ರಾಂಶದಲ್ಲಿ ‘Conveyance of decree or final order of any Civil Court’ (ಸಬ್-ಆರ್ಟಿಕಲ್ 20) ಎಂಬ ಆಯ್ಕೆಯನ್ನು ಬಳಸಿಕೊಂಡು ಇನ್ಫೋಸಿಸ್ ಆಸ್ತಿಯನ್ನು ನೋಂದಣಿ ಮಾಡಿದ್ದಾರೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

ಸರ್ಕಾರದ 2014ರ ಸುತ್ತೋಲೆಯಂತೆ ಗ್ರಾಮಾಂತರ ಪ್ರದೇಶದ ಆಸ್ತಿಗಳಿಗೆ ‘ಇ-ಸ್ವತ್ತು’ ಕಡ್ಡಾಯವಾಗಿದ್ದರೂ, ಇನ್ಫೋಸಿಸ್ ಕಂಪನಿಯ ಹೆಸರಿನಲ್ಲಿದ್ದ ಆಸ್ತಿಯ ಮಾಲೀಕತ್ವದ ವಿವರಗಳನ್ನು ಭೂಮಿ ತಂತ್ರಾಂಶದಿಂದ ಆಮದು ಮಾಡಿಕೊಳ್ಳುವಾಗ ಭೌತಿಕವಾಗಿ ತಿದ್ದಲಾಗಿದೆ. ಸುಮಾರು 24ಕ್ಕೂ ಹೆಚ್ಚು ಕ್ರಯಪತ್ರಗಳನ್ನು ಈ ರೀತಿ ಅಕ್ರಮವಾಗಿ ನೋಂದಣಿ ಮಾಡಲಾಗಿದ್ದು, ರವಿ ಸಂಕನಗೌಡ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ತಂತ್ರಾಂಶದ ಲೋಪ ದುರ್ಬಳಕೆ ಮಾಡಿಕೊಂಡ ಆರೋಪ ಹೊತ್ತ ಅಧಿಕಾರಿಗಳು:

ಕೇವಲ ಸರ್ಜಾಪುರ ಮಾತ್ರವಲ್ಲದೆ, ನಗರದ ಇತರ ಕಚೇರಿಗಳಲ್ಲೂ ಇದೇ ಮಾದರಿಯ ಅಕ್ರಮಗಳು ನಡೆದಿವೆ. ಕಾವೇರಿ-2 ತಂತ್ರಾಂಶದಲ್ಲಿ ನ್ಯಾಯಾಲಯದ ಆದೇಶವಿದ್ದರೆ ಇ-ಸ್ವತ್ತು ಅಥವಾ ಖಾತಾ ಇಲ್ಲದಿದ್ದರೂ ನೋಂದಣಿಗೆ ಅವಕಾಶವಿರುವುದನ್ನೇ ಬಂಡವಾಳ ಮಾಡಿಕೊಂಡ ಅಧಿಕಾರಿಗಳು, ಸುಳ್ಳು ಕಾರಣಗಳನ್ನು ನಮೂದಿಸಿ ದಸ್ತಾವೇಜುಗಳನ್ನು ನೋಂದಾಯಿಸಿದ್ದಾರೆ.

ಅಮಾನತಾದ ಅಧಿಕಾರಿಗಳ ವಿವರ:

ಜಿಲ್ಲಾ ನೋಂದಣಾಧಿಕಾರಿಗಳ ತನಿಖಾ ವರದಿಯ ಅನ್ವಯ, ಈ ಕೆಳಕಂಡ ಅಧಿಕಾರಿಗಳು ಸರ್ಕಾರದ ಸುತ್ತೋಲೆಗಳನ್ನು ಗಾಳಿಗೆ ತೂರಿ ಕರ್ತವ್ಯಲೋಪ ಎಸಗಿದ್ದಾರೆ:

 * ರವಿ ಸಂಕನಗೌಡ ಎಸ್. (ಉಪನೋಂದಣಾಧಿಕಾರಿ, ಸರ್ಜಾಪುರ): ಇನ್ಫೋಸಿಸ್ ಆಸ್ತಿ ಪ್ರಕರಣ ಮತ್ತು ನಕಲಿ ಕೋರ್ಟ್ ಆದೇಶ ಆಯ್ಕೆ ಬಳಕೆ.

 * ಪ್ರಭಾವತಿ (ಹಿರಿಯ ಉಪನೋಂದಣಾಧಿಕಾರಿ, ಹಲಸೂರು): ಇ-ಸ್ವತ್ತು ಮಾಹಿತಿ ಇಲ್ಲದೆ 12 ದಸ್ತಾವೇಜುಗಳ ಅಕ್ರಮ ನೋಂದಣಿ.

 * ಶ್ರೀಧರ್ (ಪ್ರಥಮ ದರ್ಜೆ ಸಹಾಯಕ/ ಪ್ರಭಾರ ಸಬ್-ರಿಜಿಸ್ಟ್ರಾರ್, ಬಾಣಸವಾಡಿ): 3 ದಸ್ತಾವೇಜುಗಳ ನಿಯಮಬಾಹಿರ ನೋಂದಣಿ.

 * ಗಿರೀಶ್ಚಂದ್ರ (ಉಪನೋಂದಣಾಧಿಕಾರಿ, ವರ್ತೂರು): ಬಾಣಸವಾಡಿಯಲ್ಲಿ 1 ಮತ್ತು ವರ್ತೂರಿನಲ್ಲಿ 14 ಸೇರಿ ಒಟ್ಟು 15 ದಸ್ತಾವೇಜುಗಳ ಅಕ್ರಮ ನೋಂದಣಿ.

 * ಸತೀಶ್ ಕುಮಾರ್ ಎನ್. (ಉಪನೋಂದಣಾಧಿಕಾರಿ, ಬಾಣಸವಾಡಿ): ಬರೋಬ್ಬರಿ 28 ದಸ್ತಾವೇಜುಗಳನ್ನು ಇ-ಸ್ವತ್ತು ಇಲ್ಲದೆ ನೋಂದಣಿ ಮಾಡಿದ ಆರೋಪ.

ಸಾಕ್ಷ್ಯ ನಾಶದ ಭೀತಿ: ಕೇಂದ್ರ ಕಚೇರಿಗೆ ಎತ್ತಂಗಡಿ:

ಈ ಅಧಿಕಾರಿಗಳನ್ನು ಅದೇ ಹುದ್ದೆಯಲ್ಲಿ ಮುಂದುವರೆಸಿದರೆ ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆಯಿದೆ ಎಂದು ಪರಿಗಣಿಸಿರುವ ನೋಂದಣಿ ಮಹಾಪರಿವೀಕ್ಷಕ ಮತ್ತು ಮುದ್ರಾಂಕಗಳ ಆಯುಕ್ತ ಮುಲ್ಲೈ ಮುಹಿಲನ್, ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ 1957ರ ನಿಯಮ 10(1)(ಡಿ) ಅನ್ವಯ ಇವರನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೆ, ಅಮಾನತು ಅವಧಿಯಲ್ಲಿ ಇವರು ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

ಈ ಹಗರಣವು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿರುವುದು ಮಾತ್ರವಲ್ಲದೆ, ಕಾವೇರಿ-2 ತಂತ್ರಾಂಶದ ಸುರಕ್ಷತೆಯ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KSRTC News | ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ: ಪ್ರತಿಷ್ಠಿತ ಬಸ್‌ಗಳ ಪ್ರಯಾಣ ದರದಲ್ಲಿ ಭರ್ಜರಿ ಕಡಿತ

Next Post

ಸೋಲಾರ್ ತ್ಯಾಜ್ಯ ನಿರ್ವಹಣೆಗೆ ಹೊಸ ಅಸ್ತ್ರ: 2029ರಿಂದ ಪ್ರತ್ಯೇಕ ನಿಯಮ, ಇ-ತ್ಯಾಜ್ಯ ಪಟ್ಟಿಯಿಂದ ಮುಕ್ತಿ

Next Post

ಸೋಲಾರ್ ತ್ಯಾಜ್ಯ ನಿರ್ವಹಣೆಗೆ ಹೊಸ ಅಸ್ತ್ರ: 2029ರಿಂದ ಪ್ರತ್ಯೇಕ ನಿಯಮ, ಇ-ತ್ಯಾಜ್ಯ ಪಟ್ಟಿಯಿಂದ ಮುಕ್ತಿ

ಆಧಾರ್ PVC ಕಾರ್ಡ್ ದರದಲ್ಲಿ ಏರಿಕೆ: ಬೆಲೆ ಹೆಚ್ಚಳಕ್ಕೆ ಕಾರಣವೇನು? ಅರ್ಜಿ ಸಲ್ಲಿಕೆ ಹೇಗೆ?

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d