Wednesday, August 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

BW ಸಂಪಾದಕೀಯ | Bengaluru Wire 5th Anniversary| ಐದು ವರ್ಷಗಳ ಸಾರ್ಥಕ ಪಯಣ; ಸುದ್ದಿಯು ಜಿದ್ದಾಜಿದ್ದಿಗಲ್ಲ, ಸತ್ಯದ ಶೋಧಕ್ಕೆ ನಮ್ಮ ಆದ್ಯತೆ

6ನೇ ವರ್ಷಕ್ಕೆ ಪಾದಾರ್ಪಣೆ: ಗುಣಮಟ್ಟ, ನಿಖರತೆ ಮತ್ತು ಜನಪರ ಕಾಳಜಿಯೇ ನಮ್ಮ ಬದ್ಧತೆ

by Bengaluru Wire Desk
April 1, 2026
in News Wire, Public interest
Reading Time: 1 min read
0

ಕಾಲದ ಓಟದಲ್ಲಿ ಐದು ವರ್ಷಗಳು ಕೇವಲ ಒಂದು ಸಣ್ಣ ಅವಧಿಯಂತೆ ಕಾಣಬಹುದು. ಆದರೆ 60 ತಿಂಗಳು, 260 ವಾರಗಳು ಹಾಗೂ 1825 ದಿನಗಳನ್ನು ಹೊಂದಿರುವ ಈ ಮೌಲ್ಯಯುತ ಸಮಯ ನಿಜಕ್ಕೂ ನಮಗೆ High Five ಅಂದರೆ ತಪ್ಪಾಗಲಾರದು.

ಯಾವುದೇ ರಾಜಿ ಇಲ್ಲದಂತೆ ಸದಾನೈತಿಕ ಮೌಲ್ಯಗಳನ್ನು ಎತ್ತಿಹಿಡಿದು, ಜನಪರ ಕಾಳಜಿಯೊಂದಿಗೆ ಮಾಧ್ಯಮ ಕ್ಷೇತ್ರವನ್ನು ಪ್ರವೇಶಿಸಿದ ‘ಬೆಂಗಳೂರು ವೈರ್’ಗೆ (Bengaluru Wire) ಈ ಐದು ವರ್ಷಗಳು ಅತ್ಯಂತ ಸಾರ್ಥಕ ಮತ್ತು ಹೆಮ್ಮೆಯ ಪಯಣ. 2021ರ ಜನವರಿಯಲ್ಲಿ ಮೊಳಕೆಯೊಡೆದ ನಮ್ಮ ಈ ಕನಸು, ಇಂದು ಮರವಾಗಿ ಮುಂದೆ ಹೆಮ್ಮರವಾಗಿ ಬೆಳೆಯುವ ಆಶೋತ್ತರದಿಂದ 6ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದೆ (ಜನವರಿ 14, 2026).

ಇಂದಿನ ಡಿಜಿಟಲ್ ಮಾಧ್ಯಮ ರಂಗದಲ್ಲಿ ‘ಬ್ರೇಕಿಂಗ್ ನ್ಯೂಸ್’ಗಳ ಭಾರೀ ಭರಾಟೆ ಮತ್ತು ಕ್ಷಣಕ್ಷಣದ ಸುದ್ದಿಗಳ ಪೈಪೋಟಿ ಜೋರಾಗಿದೆ. ಆದರೆ, ಆರಂಭದ ದಿನದಿಂದಲೂ ‘ಬೆಂಗಳೂರು ವೈರ್’ ಈ ರೀತಿ ಸುದ್ದಿಗಳ ರೇಸ್ ಗೆ ಇಳಿಯಲಿಲ್ಲ. ಇತರದೊಂದಿಗೆ ನಾವು ಸ್ಪರ್ಧೆಗಿಳಿದು ಸಿಕ್ಕಿದ್ದನ್ನೆಲ್ಲ ಸುದ್ದಿ ಮಾಡುವ ಕೆಲಸ ಮಾಡಲಿಲ್ಲ; ಬದಲಿಗೆ ಸಮಾಜದ ಸ್ವಾಸ್ಥ್ಯ ಕಾಪಾಡುವ, ಆಳುವ ಸರ್ಕಾರಗಳನ್ನು ಎಚ್ಚರಿಸುವ ಮತ್ತು ಬೆಂಗಳೂರು ನಗರದ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಸುದ್ದಿಗಳಿಗೆ ಮಾತ್ರ ನಮ್ಮ ಡಿಜಿಟಲ್ ವೇದಿಕೆಯನ್ನು ಮೀಸಲಿಟ್ಟಿದ್ದೇವೆ.

ನಮ್ಮ ಬದ್ಧತೆ: ಗುಣಮಟ್ಟ ಮತ್ತು ವಿಶ್ವಾಸಾರ್ಹತೆ:

ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರಕ್ಕೆ ಉದ್ಯಾನ ನಗರಿ ಎನ್ನುವ ಹೆಸರು ಇನ್ನೂ ಉಳಿದಿದೆ. ಈ ಹೆಸರಿನ ಜೊತೆಗೆ ದೇಶದ  ಜ್ಞಾನ ನಗರಿ(Knowledge Capital), ಸಿಲಿಕಾನ್ ಕಣಿವೆ, ಆರೋಗ್ಯ ನಗರಿ ಇತ್ಯಾದಿ ಅಭಿದಾನಗಳೂ ಸೇರ್ಪಡೆಯಾಗಿವೆ. ನಮ್ಮದು ಇಂತಹ ಬೆಂಗಳೂರು ಮಹಾನಗರದ ಸುದ್ದಿಗಳನ್ನೇ  ಕೇಂದ್ರವಾಗಿರಿಸಿಕೊಂಡಿರುವ ನ್ಯೂಸ್ ಪೋರ್ಟಲ್. 

ಹೀಗಿದ್ದರೂ ಕೂಡ, ನಮ್ಮ ದೃಷ್ಟಿ ಸಮಗ್ರವಾಗಿದ್ದು ಇಡೀ ಕನ್ನಡ ನಾಡಿನ ನೆಲ-ಜಲ, ಭಾಷೆ ಮತ್ತು ಸ್ವಾಭಿಮಾನದ ಪರವಾಗಿದೆ. ಸುದ್ದಿಗಳ ಸಂಖ್ಯೆಯನ್ನು ಹೆಚ್ಚಿಸುವುದು ನಮ್ಮ ಗುರಿಯಲ್ಲ, ಬದಲಾಗಿ ನಾವು ನೀಡುವ ಪ್ರತಿಯೊಂದು ವರದಿಯೂ ನೈಜತೆ (Fact), ನಿಖರತೆ (Accuracy) ಮತ್ತು ಗುಣಮಟ್ಟದಿಂದ (Quality) ಕೂಡಿರಬೇಕು ಎಂಬುದೇ ನಮ್ಮ ಸಿದ್ಧಾಂತ.

ವನ್ಯಜೀವಿ ಸಂರಕ್ಷಣೆ, ಪರಿಸರ ಕಾಳಜಿ, ವಿಜ್ಞಾನ-ತಂತ್ರಜ್ಞಾನದ ವಿಸ್ಮಯಗಳು, ಇಂಧನ, ಮಹಾನಗರ ಸಾರಿಗೆ ಸಂಪರ್ಕ ವ್ಯವಸ್ಥೆ, ಕಾನೂನು-ಸುವ್ಯವಸ್ಥೆ ಮತ್ತು ಹಣಕಾಸಿನಂತಹ ಗಂಭೀರ ವಿಷಯಗಳ ಮೇಲೆ ನಾವು ಬೆಳಕು ಚೆಲ್ಲುತ್ತಾ ಬಂದಿದ್ದೇವೆ. ಒಳಗೆ ಯಾವುದೇ ಹೂರಣವಿಲ್ಲದಿದ್ದರೂ ಕೇವಲ ಚಿತ್ರ-ವಿಚಿತ್ರ ಶೀರ್ಷಿಕೆ ಮೂಲಕವೇ ಓದುಗರನ್ನು ಸೆಳೆಯುವ ಆ ರೀತಿಯ ಕಸುಬಿನಿಂದ ನಾವು ತುಂಬಾ ದೂರ. ವಿಶೇಷ ವರದಿ,  ತನಿಖಾ ವರದಿಗಳು, ಆಳವಾದ ವಿಶ್ಲೇಷಣೆಗಳು, ನಗರದ ನಾಗರಿಕರಾಗಿ ತಿಳಿಯಲೇಬೇಕಾದ ಮಹತ್ವದ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಇದರ ಜೊತೆಗೆ ಕುಂಭ ಮೇಳದಂತಹ ಜಗತ್ತಿನ ಅತಿ ದೊಡ್ಡ ಉತ್ಸವಗಳನ್ನು ನೇರವಾಗಿ ಕಂಡು, ತಿಳಿದು ಅಲ್ಲಿಂದಲೇ ಪ್ರತ್ಯಕ್ಷ ವರದಿ ಮಾಡಿದ ಹೆಗ್ಗಳಿಕೆ ನಮ್ಮದು. 

ಒಟ್ಟಾರೆಯಾಗಿ ಬೆಂಗಳೂರು ಮಹಾನಗರದ ನಾಗರಿಕರ ಹಿತ ಕಾಯುವ ಕಾವಲುಗಾರನ ರೂಪದಲ್ಲಿ ಸದಾ ಶ್ರಮಿಸುತ್ತಿರುವ ನಮ್ಮ ಪ್ರಯತ್ನಕ್ಕೆ ಎಲ್ಲ ಕನ್ನಡಿಗರು ತೋರುತ್ತಿರುವ ಪ್ರೀತಿ ಮತ್ತು ವಿಶ್ವಾಸವೇ ಶ್ರೀರಕ್ಷೆ.

ನಮ್ಮ ಮುಂದಿನ ಹೆಜ್ಜೆ…

“ಸ್ವತಂತ್ರ ಮತ್ತು ವಾಸ್ತವ ಸುದ್ದಿ” ಎಂಬ ನಮ್ಮ ಮೂಲ ಮಂತ್ರಕ್ಕೆ ನಾವು ಸದಾ ಬದ್ಧ. ಮುಂದಿನ ದಿನಗಳಲ್ಲಿಯೂ ಬೆಂಗಳೂರು ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ, ಜನಸಾಮಾನ್ಯರ ಧ್ವನಿಯಾಗಿ, ಸರ್ಕಾರದ ಓರೆ, ಕೋರೆಗಳಿಗೆ ಹಿಡಿದ ಕನ್ನಡಿಯಾಗಿ ನಮ್ಮ ಜವಾಬ್ದಾರಿಯುತ ಪತ್ರಿಕೋದ್ಯಮ ಮುಂದುವರಿಯಲಿದೆ.

ನಮ್ಮ ಈ ಐದು ವರ್ಷಗಳ ಯಶಸ್ವೀ ಪಯಣದಲ್ಲಿ ಜೊತೆಯಾದ ಎಲ್ಲ ಓದುಗರಿಗೆ, ಹಿತೈಷಿಗಳಿಗೆ, ಸರ್ಕಾರ ಹಾಗೂ ಅದರ ಎಲ್ಲಾ ಅಂಗ ಸಂಸ್ಥೆಗಳಿಗೆ ಮತ್ತು ಜಾಹೀರಾತುದಾರರಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು.

  • ಶ್ಯಾಮ್ ಹೆಬ್ಬಾರ್.ಎಸ್, ಸಂಪಾದಕರು,

www.bengaluruwire.com

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಬೆಂಗಳೂರಿಗೆ ಬಂದಿಳಿದ ಜರ್ಮನಿ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ನೇತೃತ್ವದ ನಿಯೋಗ

Next Post

BENGALURU WIRE 5th Anniversary | BW Best Special Stories | ‘ಬೆಂಗಳೂರು ವೈರ್’ ನಲ್ಲಿ ಪ್ರಕಟವಾದ 5ನೇ ವರ್ಷದ ಬೆಸ್ಟ್ SPECIAL REPORTS : ಇಲ್ಲಿದೆ ಅವುಗಳ ಪಟ್ಟಿ ಹಾಗೂ ಲಿಂಕ್ಸ್

Next Post

BENGALURU WIRE 5th Anniversary | BW Best Special Stories | ‘ಬೆಂಗಳೂರು ವೈರ್’ ನಲ್ಲಿ ಪ್ರಕಟವಾದ 5ನೇ ವರ್ಷದ ಬೆಸ್ಟ್ SPECIAL REPORTS : ಇಲ್ಲಿದೆ ಅವುಗಳ ಪಟ್ಟಿ ಹಾಗೂ ಲಿಂಕ್ಸ್

BENGALURU WIRE 5th Anniversary | BW News Exclusives | ಐದು ವಸಂತ ಪೂರೈಸಿದ "ಬೆಂಗಳೂರು ವೈರ್" ವರದಿ ನಾಡಿನಲ್ಲಿ ಮೂಡಿಸಿದ ಪರಿಣಾಮಗಳೇನು? ಇಲ್ಲಿದೆ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group