Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

17th BIFFes | ಸಿನಿಮಾ ಕೇವಲ ಮನರಂಜನೆಯಲ್ಲ, ಅದು ಸಮಾಜದ ಕನ್ನಡಿಯಾಗಲಿ: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ಧೂರಿ ಚಾಲನೆ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ತಾರಾಮೆರುಗು; 70 ದೇಶಗಳ 240ಕ್ಕೂ ಹೆಚ್ಚು ಚಿತ್ರಗಳ ಪ್ರದರ್ಶನ; ಮಹಿಳಾ ನಿರ್ದೇಶಕರಿಗೆ ಈ ಬಾರಿಯ ಚಿತ್ರೋತ್ಸವ ಸಮರ್ಪಣೆ.

by Bengaluru Wire Desk
January 29, 2026
in Life Style, Public interest
Reading Time: 1 min read
0

ಬೆಂಗಳೂರು, ಜ.29 www.bengaluruwire.com : ಸಿನಿಮಾ ಎಂಬುದು ಕೇವಲ ಮೂರು ತಾಸಿನ ಮನರಂಜನೆಯ ಸರಕಾಗಬಾರದು. ಅದು ಸಮಾಜದ ಅಂಕುಡೊಂಕುಗಳನ್ನು ತಿದ್ದುವ, ವಾಸ್ತವ ಸ್ಥಿತಿಯನ್ನು ಎತ್ತಿ ಹಿಡಿಯುವ ಮತ್ತು ಅಸಮಾನತೆಯ ವಿರುದ್ಧ ದನಿ ಎತ್ತುವ ಪ್ರಬಲ ಮಾಧ್ಯಮವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಗರದ ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಗುರುವಾರ ಸಂಜೆ ಆಯೋಜಿಸಲಾಗಿದ್ದ ’17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ವನ್ನು (BIFFes) ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

ಸಮಾಜದಲ್ಲಿರುವ ಬಡತನ, ದಲಿತರು, ಹಿಂದುಳಿದವರು, ಮಹಿಳೆಯರು ಮತ್ತು ರೈತರ ಬದುಕಿನ ನೈಜ ಚಿತ್ರಣವನ್ನು ಸಿನಿಮಾಗಳು ಕಟ್ಟಿಕೊಡಬೇಕು. ಹಿಂದೆ ಡಾ. ರಾಜ್‌ಕುಮಾರ್ ಅವರ ಸಿನಿಮಾಗಳಲ್ಲಿ ಇಂತಹ ಸಾಮಾಜಿಕ ಕಳಕಳಿಯನ್ನು ನಾವು ಕಾಣಬಹುದಿತ್ತು. ಅಂತಹ ಮೌಲ್ಯಾಧಾರಿತ ಚಿತ್ರಗಳು ಹೆಚ್ಚು ಬರಬೇಕು. ಬೇರೆ ದೇಶಗಳ ಚಿತ್ರಗಳನ್ನು ನೋಡುವ ಮೂಲಕ ಅಲ್ಲಿನ ಸಂಸ್ಕೃತಿ, ರಾಜಕೀಯ ಮತ್ತು ಜೀವನವನ್ನು ಅರ್ಥಮಾಡಿಕೊಳ್ಳಲು ಚಿತ್ರೋತ್ಸವಗಳು ಸುವರ್ಣಾವಕಾಶ ಕಲ್ಪಿಸುತ್ತವೆ ಎಂದು ಸಿಎಂ ಅಭಿಪ್ರಾಯಪಟ್ಟರು.

ಮಹಿಳೆಯರಿಗೆ ಚಿತ್ರೋತ್ಸವ ಅರ್ಪಣೆ:

ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಮಾತನಾಡಿ, “ಫೆಬ್ರವರಿ 6ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ 70 ದೇಶಗಳ ಸುಮಾರು 255 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ವಿಶೇಷವೆಂದರೆ, ಇದರಲ್ಲಿ 65 ಮಹಿಳಾ ನಿರ್ದೇಶಕರ ಚಿತ್ರಗಳಿವೆ. ಹೀಗಾಗಿ ಈ ಬಾರಿಯ ಚಿತ್ರೋತ್ಸವವನ್ನು ಮಹಿಳೆಯರಿಗೆ ಅರ್ಪಿಸಲಾಗಿದೆ. ಮೈಸೂರಿನಲ್ಲಿ ಫಿಲ್ಮ್ ಸಿಟಿ ಸ್ಥಾಪನೆ ಹಾಗೂ ಅಕಾಡೆಮಿ ಕಟ್ಟಡದಲ್ಲಿ ಮಲ್ಟಿಪ್ಲೆಕ್ಸ್ ನಿರ್ಮಾಣಕ್ಕೆ ಸರ್ಕಾರ ಯೋಜನೆ ರೂಪಿಸಿದೆ,” ಎಂದು ಮಾಹಿತಿ ನೀಡಿದರು.

ರಾಜಕೀಯ ಪ್ರವೇಶಕ್ಕೆ ಪ್ರಕಾಶ್ ರೈ ಆಕ್ಷೇಪ:

ಚಿತ್ರೋತ್ಸವದ ರಾಯಭಾರಿ ಹಾಗೂ ಹಿರಿಯ ನಟ ಪ್ರಕಾಶ್ ರೈ ಮಾತನಾಡಿ, “ಚಿತ್ರೋತ್ಸವಗಳು ರಂಗನತಿಟ್ಟು ಪಕ್ಷಿಧಾಮವಿದ್ದಂತೆ. ಇಲ್ಲಿ ದೇಶ-ವಿದೇಶದ ಸಿನಿಮಾ ಪಕ್ಷಿಗಳು ಒಂದಾಗುತ್ತವೆ. ಇಂತಹ ಸಾಂಸ್ಕೃತಿಕ ವೇದಿಕೆಗಳಲ್ಲಿ ರಾಜಕೀಯ ಬೆರೆಸುವುದು ದುರಂತ. ಕೆಲವು ದೇಶಗಳ ಸಿನಿಮಾಗಳ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ತಡೆ ಒಡ್ಡಿರುವುದನ್ನು ರಾಜ್ಯ ಸರ್ಕಾರ ವಿರೋಧಿಸಬೇಕು,” ಎಂದು ಮನವಿ ಮಾಡಿದರು. ಅಲ್ಲದೆ, ಪ್ಯಾಲೇಸ್ತೀನಿ ಸಿನಿಮಾಗಳಿಗೆ ಬೆಂಬಲ ಸೂಚಿಸಿ ಕವನ ವಾಚಿಸಿದರು.

ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಟಿವಿ ಮತ್ತು ಮೊಬೈಲ್ ಹಾವಳಿಯ ನಡುವೆಯೂ ಸಿನಿಮಾ ತನ್ನ ಮಹತ್ವ ಉಳಿಸಿಕೊಂಡಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಿಜ್ವಾನ್ ಅರ್ಷದ್, ನಟಿ ರುಕ್ಮಿಣಿ ವಸಂತ, ವಾರ್ತಾ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ನೆದರ್ಲ್ಯಾಂಡ್ ದೇಶದ ‘ಪೋರ್ಟ್ ಬ್ಯಾಗೇಜ್’ ಉದ್ಘಾಟನಾ ಚಿತ್ರವಾಗಿ ಪ್ರದರ್ಶನಗೊಂಡಿತು.

ಕಾರ್ಯಕ್ರಮದಲ್ಲಿ ಹಿರಿಯ ನಟಿ ಹಾಗೂ ಮಾಜಿ ಸಚಿವರಾದ ಉಮಾಶ್ರೀ ಹಾಗೂ ಹಿರಿಯ ನಟಿ ಡಾ. ಜಯಮಾಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ ನಿಂಬಾಳ್ಕರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ವಿನೋದ್ ಚಂದ್ರ, ಅಕಾಡೆಮಿ ಸದಸ್ಯ ಚಿದಾನಂದ ಪಟೇಲ್, ವಾರ್ತಾ ಇಲಾಖೆಯ ಚಲನಚಿತ್ರ ಶಾಖೆಯ ಜಂಟಿ ನಿರ್ದೇಶಕ ಮಂಜುನಾಥ್ ಡೊಳ್ಳಿನ್ , ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು, ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಮುಖ್ಯಮಂತ್ರಿ ಚಂದ್ರು, ಚೇತನ್ ಅಹಿಂಸ, ಪೂಜಾ ಗಾಂಧಿ, ಶ್ರೀನಗರ ಕಿಟ್ಟಿ, ಶರತ್ ಲೋಹಿತಾಶ್ವ, ಅನು ಪ್ರಭಾಕರ್, ರಘು ಮುಖರ್ಜಿ, ರಾಕ್ಲೈನ್ ವೆಂಕಟೇಶ್, ಸುಂದರ್ ರಾಜ್ ಮುಂತಾದವರು ಹಾಜರಿದ್ದರು. 

17ನೇ ಚಿತ್ರೋತ್ಸವದ ವಿಶೇಷತೆಗಳೇನು?:

 * ಲುಲು ಮಾಲ್ ಆವರಣದಲ್ಲಿ ಪ್ರತಿದಿನ ಸಂಜೆ 7ಕ್ಕೆ ‘ಓಪನ್ ಏರ್ ಥಿಯೇಟರ್’ ಅಂದರೆ ಟೆಂಟ್ ಸಿನಿಮಾ ಮಾದರಿಯಲ್ಲಿ ಸಿನಿಮಾ ಪ್ರದರ್ಶನ.

 * ಕನ್ನಡದ ಸಾಧಕರಿಗೆ ‘ಸಿನಿಮಾಯಾನ’ ಮೂಲಕ ಗೌರವ 

 * ವಿಶ್ವದ 100ಕ್ಕೂ ಹೆಚ್ಚು ಪ್ರಸಿದ್ಧ ವಿದೇಶಿ ಚಿತ್ರಗಳು ಹಾಗೂ 30ಕ್ಕೂ ಹೆಚ್ಚು ಭಾರತೀಯ ಭಾಷಾ ಚಿತ್ರಗಳ ವೀಕ್ಷಣೆ ಲಭ್ಯ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ರಾಜ್ಯದಲ್ಲಿ ಫೆ.13ಕ್ಕೆ ಬೃಹತ್ ಹಕ್ಕುಪತ್ರ ಮೇಳ: 1 ಲಕ್ಷ ಕುಟುಂಬಗಳಿಗೆ ಸಿಗಲಿದೆ ‘ನೆಲೆ’ಯ ಭಾಗ್ಯ; ಸಚಿವ ಕೃಷ್ಣ ಬೈರೇಗೌಡ

Next Post

Inspiring Stories | 20 ವರ್ಷಗಳ ಕಾನೂನು ಹೋರಾಟಕ್ಕೆ ಜಯ: ರಸ್ತೆ ಉಳಿಸಿಕೊಟ್ಟ ವಕೀಲರ ಹೆಸರನ್ನೇ ರಸ್ತೆಗೆ ಇಟ್ಟ ಕಸ್ತೂರಿ ಬಡಾವಣೆ ನಿವಾಸಿಗಳು!!

Next Post

Inspiring Stories | 20 ವರ್ಷಗಳ ಕಾನೂನು ಹೋರಾಟಕ್ಕೆ ಜಯ: ರಸ್ತೆ ಉಳಿಸಿಕೊಟ್ಟ ವಕೀಲರ ಹೆಸರನ್ನೇ ರಸ್ತೆಗೆ ಇಟ್ಟ ಕಸ್ತೂರಿ ಬಡಾವಣೆ ನಿವಾಸಿಗಳು!!

ಬಡ ದಂಪತಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಇನ್ಮುಂದೆ ಐವಿಎಫ್ (IVF) ಚಿಕಿತ್ಸೆ ಲಭ್ಯ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d