Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

ಹಿಂದುಳಿದ ವರ್ಗಗಳ ಆಯೋಗದಿಂದ ಜಿಬಿಎಗೆ 21,186 ಸಮೀಕ್ಷಾದಾರರಿಗೆ ಪಾವತಿಸಲು ₹24 ಕೋಟಿ ಅನುದಾನ 5 ನಗರ ಪಾಲಿಕೆಗಳಿಗೆ ಬಿಡುಗಡೆಯಾಗಿದೆ | ಇದುವರೆಗೂ ಪಾಲಿಕೆಗಳು ಸಂಪೂರ್ಣ ಮೊತ್ತ ಪಾವತಿಸದಿರಲು ಕಾರಣವೇನು?

by Bengaluru Wire Desk
April 28, 2026
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಏ.28 www.bengaluruwire.com: ದೇಶದ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾದ ಜನಗಣತಿ-2026 ಗಣತಿ ಕಾರ್ಯಕ್ಕೆ ವಿವಿಧ ಸರ್ಕಾರಿ ಇಲಾಖೆಗಳ ನೌಕರರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಿಯೋಜಿಸಿದರೂ ಆ ಕಾರ್ಯಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿರುವುದ ಹಿಂದಿನ ಸತ್ಯ ಬಯಲಾಗಿದೆ.

ಕಳೆದ ವರ್ಷ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಅರ್ಥಾತ್ ಜಾತಿಗಣತಿಯಲ್ಲಿ ಸಮೀಕ್ಷೆದಾರರಾಗಿ ತೊಡಗಿಕೊಂಡ 130 ರಿಂದ 140 ವಿವಿಧ ಇಲಾಖೆಗಳು, ನಿಗಮ, ಮಂಡಳಿಯ 21,186 ಮಂದಿಯ ಬಹುತೇಕರಿಗೆ ಗೌರವ ಧನವನ್ನೇ ಐದು ಬೆಂಗಳೂರು ನಗರ ಪಾಲಿಕೆಗಳು ಸರಿಯಾಗಿ ಪಾವತಿಸಲ್ಲ. ಹೀಗಾಗಿ ಜಿಬಿಎ ವ್ಯಾಪ್ತಿಯಲ್ಲಿ ಈ ಬಾರಿಯ ಜನಗಣತಿ ಕಾರ್ಯಕ್ಕೆ ಬರಲು ಸಾವಿರಾರು ಜನರು ಸರ್ಕಾರಿ ನೌಕರರು ಹಿಂದೇಟು ಹಾಕಲು ಪ್ರಮುಖ ಕಾರಣವಾಗಿದೆ ಎಂದು ಜಿಬಿಎ ಉನ್ನತ ಮೂಲಗಳು ತಿಳಿಸಿವೆ.

ಈ ಬಾರಿ 23,000ಕ್ಕೂ ಹೆಚ್ಚು ಗಣತಿದಾರರು ಮತ್ತು ಸುಮಾರು 2,500 ಮೇಲ್ವಿಚಾರಕರನ್ನು ಗಣತಿ ಕಾರ್ಯಕ್ಕೆ ನಿಯೋಜಿಸಲಾಗಿದೆ. 7-8 ಸಾವಿರ ಸಿಬ್ಬಂದಿಗೆ ವಿವಿಧ ಕಾರಣಗಳಿಗಾಗಿ ವಿನಾಯಿತಿ ನೀಡಲಾಗಿದೆ ಎಂದು ಜಿಬಿಎ ವ್ಯಾಪ್ತಿಯ ಜನಗಣತಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. 

ಇತ್ತ ಗೌರವ ಧನವಿಲ್ಲ ಅತ್ತ ಪ್ರತಿ ಮನೆ ಸಮೀಕ್ಷೆ ಹಣವೂ ಇಲ್ಲ:

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ನಿಗಧಿಪಡಿಸಲಾದ ತಲಾ ₹5000 ಗೌರವಧನ ಈತನಕ ಪಾವತಿಯಾಗಿಲ್ಲ. ಇದಲ್ಲದೆ ಒಬ್ಬರಿಂದ ಇಬ್ಬರು ಸದಸ್ಯರಿರುವ ಮನೆ ಸಮೀಕ್ಷೆಗೆ ₹50 ಹಾಗೂ ಮೂರು ಹಾಗೂ ಅದಕ್ಕಿಂತ ಹೆಚ್ಚು ಸದಸ್ಯರಿರುವ ಪ್ರತಿ ಮನೆ ಸಮೀಕ್ಷೆಗೆ ₹100 ನಂತೆ ಒಟ್ಟಾರೆ 19,25,961 ಮನೆಗಳನ್ನು ಸಮೀಕ್ಷೆ ಮಾಡಿದ ಸರ್ಕಾರಿ ನೌಕರರ ಪೈಕಿ ಶೇ.60ರಷ್ಟು ಮಂದಿಗೆ ಮಾತ್ರ ಹಣ ಪಾವತಿಸಲಾಗಿದೆ ಎಂದು ಜಿಬಿಎ ಉನ್ನತ ಮೂಲಗಳು ತಿಳಿಸಿವೆ.

ಗೌರವಧನ ಪಾವತಿಸದ ಎಫೆಕ್ಟ್: ಗಣತಿ ಕಾರ್ಯಕ್ಕೆ ಹಿಂದೇಟು:

ಇತ್ತೀಚೆಗೆ ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಜಿಬಿಎ ವ್ಯಾಪ್ತಿಯಲ್ಲಿನ ಜನಗಣತಿ ಕಾರ್ಯಕ್ಕೆ ನಿಯೋಜಿಲಾಗಿದ್ದರೂ ಬಹುತೇಕ ಸಿಬ್ಬಂದಿ ಜನಗಣತಿ ಕಾರ್ಯಕ್ಕೆ ನೋಟಿಸ್ ಸೇರಿದಂತೆ ಹಲವು ರೀತಿಯ ಒತ್ತಡಗಳನ್ನು ಮಾಡಿಯೂ ಗಣತಿ ಕಾರ್ಯಕ್ಕರ ಬರಲು ಒಪ್ಪಲಿಲ್ಲ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕೇವಲ 495 ಬಿ ಮತ್ತು ಸಿ ವೃಂದದ ಸಿಬ್ಬಂದಿ ಮಾತ್ರ ಜಿಬಿಎ ವ್ಯಾಪ್ತಿಯಲ್ಲಿನ ಜನಗಣತಿ ಕಾರ್ಯದಲ್ಲಿ ತೊಡಗಿಕೊಂಡರು. ಇದು ಹಿಂದಿನ ಸಮೀಕ್ಷಾ ಕಾರ್ಯದಲ್ಲಿ ಗೌರವಧನ ಸರಿಯಾಗಿ ಪಾವತಿಯಾಗದಿರುವುದರ ಪರಿಣಮ ಎಂದು ವಿಶ್ಲೇಷಿಸಲಾಗುತ್ತಿದೆ.

​ಸ್ವಯಂ ಗಣತಿಯಲ್ಲಿ ಜಿಬಿಎ ಪೇಲ್!

​ಒಂದೆಡೆ ಸಿಬ್ಬಂದಿ ಕೊರತೆಯಾದರೆ, ಇನ್ನೊಂದೆಡೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಜಿಬಿಎ ಸಂಪೂರ್ಣ ವಿಫಲವಾಗಿದೆ. ಐಟಿ ಸಿಟಿಯಲ್ಲಿ ಆನ್‌ಲೈನ್ ಮೂಲಕ ಸ್ವಯಂ ಗಣತಿ ಮಾಡಿಕೊಳ್ಳಲು ನೀಡಿದ್ದ ಅವಕಾಶವನ್ನು ಬಳಸಿಕೊಂಡವರು ಕೇವಲ ಶೇ.2 ಕ್ಕಿಂತ ಕಡಿಮೆ. 1.45 ಕೋಟಿ ಜನಸಂಖ್ಯೆಯ ನಗರದಲ್ಲಿ ಈ ನೀರಸ ಪ್ರತಿಕ್ರಿಯೆ ಪಾಲಿಕೆಗಳ ಪ್ರಚಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

2025ರ ಡಿ.12ರಂದೇ 5 ನಗರ ಪಾಲಿಕೆಗಳಿಗೆ ಸಂಪೂರ್ಣ ಅನುದಾನ ಬಿಡುಗಡೆ:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗದ ಆಯೋಗದಿಂದ 40 ದಿನಗಳ ಕಾಲ ಬೆಂಗಳೂರಿನಲ್ಲಿ‌ ನಡೆದ ಸಮೀಕ್ಷಾ ಕಾರ್ಯದಲ್ಲಿ 21,186 ಸಮೀಕ್ಷಾದಾರರು ಒಟ್ಟು16,949 ಬ್ಲಾಕ್ ಗಳಲ್ಲಿ 19.25 ಲಕ್ಷ ಮನೆಗಳ ಸಮೀಕ್ಷೆ ನಡೆಸಿತ್ತು. ಇದಕ್ಕಾಗಿ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ.ದಯಾನಂದ ಅವರು ₹23,87,47,200 (₹23.87 ಕೋಟಿ) ಅನುದಾನವನ್ನು 18-11-2025 ರಂದೇ ಜಿಬಿಎಗೆ ಪಾವತಿಸುವಂತೆ ಆದೇಶಿಸಿದ್ದರು. ಅದಾದ ಬಳಿಕ ಜಿಬಿಎ ಮುಖ್ಯ ಲೆಕ್ಕಾಧಿಕಾರಿ ಕಚೇರಿ 12-12-2025 ರಂದು ಐದು ನಗರ ಪಾಲಿಕೆಗಳಿಗೆ ಹಿಂದುಳಿದ ವರ್ಗದ ಆಯೋಗದ ಇಡಿಸಿಎಸ್ (EDCS) ನಲ್ಲಿನ ಸಮೀಕ್ಷಾದಾರರ ವಿವರದಂತೆ ಆಯಾ ಪಾಲಿಕೆಗಳಿಗೆ ಹಣ ಪಾವತಿಸಿದೆ.

ಹಣ ಬಿಡುಗಡೆಯಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದಿಂದ ಹಣ ಪಾವತಿಯಾಗಿದ್ದರೂ ಐದು

ಕಾರ್ಪೊರೇಷನ್ ಗಳು ಇನ್ನೂ ಪೂರ್ತಿಯಾಗಿ ಸಮೀಕ್ಷಾದಾರರಿಗೆ ಹಣ ಪಾವತಿ ಮಾಡಿಲ್ಲ.

ಹಿಂದುಳಿದ ವರ್ಗಗಳ ಆಯೋಗದವರು ಏನಂತಾರೆ?:

ಈ ಬಗ್ಗೆ ಹಿಂದುಳಿದ ವರ್ಗದ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ.ದಯಾನಂದ್ ಬೆಂಗಳೂರು ವೈರ್ ಗೆ ಪ್ರತಿಕ್ರಿಯೆ ನೀಡಿದ್ದು, ಆಯೋಗದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಜಿಬಿಎ/ಪಾಲಿಕೆ ಅಧಿಕಾರಿಗಳನ್ನು ಕರೆಸಿ ಸಭೆ ಕರೆದು ಹೇಳಿದಿವಿ. ಸಮೀಕ್ಷೆ ಹಣ ಬಿಡಿಗಡೆ ಮಾಡಿದೆ. ಗೌರವಧನದ ಹಣ ಬಿಡುಗಡೆ ಮಾಡಿ ಅಂತ ಪತ್ರ ಬರೆದಿದ್ದೇವೆ. ಇಷ್ಟಾಗಿಯೂ ಸಂಪೂರ್ಣವಾಗಿ ಹಣ ಪಾವತಿಸಿಲ್ಲ ಅಂದರೆ ಹೇಗೆ?” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

“ಬೆಂಗಳೂರು ನಗರ ಪಾಲಿಕೆಯಲ್ಲಿ ಒಟ್ಟು 3971 ಸಮೀಕ್ಷೆದಾರರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗಿದ್ದರು. 3971 ರಲ್ಲಿ, 3851 ಗಣತಿದಾರರಿಗೆ ಮನೆಗಳ ಸಮೀಕ್ಷೆಗಾಗಿ ಹಣ ಪಾವತಿಸಲಾಗಿದೆ. ಪಾವತಿಸಿದ ಮೊತ್ತ 3,24,97,650 (₹3.24 ಕೋಟಿ). ಉಳಿದ 120 ಗಣತಿದಾರರ ಬ್ಯಾಂಕ್ ಮಾಹಿತಿಯಲ್ಲಿ ಸಮಸ್ಯೆಗಳಿದ್ದವು. ಅದನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ಗಣತಿ ಬ್ಲಾಕ್‌ಗೆ 5000 ರೂ.ಗಳ ಮೊತ್ತಕ್ಕೆ ಸಂಬಂಧಿಸಿದಂತೆ – ಈವರೆಗೆ 1000 ಗಣತಿದಾರರಿಗೆ ಹಣ ಪಾವತಿಸಲಾಗಿದೆ. ಉಳಿದ ಗಣತಿದಾರರಿಗೆ 7 ದಿನಗಳಲ್ಲಿ ಹಣ ಪಾವತಿಸಲಾಗುವುದು.”

– ಪೊಮ್ಮಲ ಸುನಿಲ್ ಕುಮಾರ್, ಆಯುಕ್ತರು, ಬೆಂಗಳೂರು ಉತ್ತರ ನಗರ ಪಾಲಿಕೆ

ಒಟ್ಟಾರೆಯಾಗಿ ಹಿಂದಿನ ಬಿಬಿಎಂಪಿ ಕೇಂದ್ರಾಡಳಿದಿಂದ ಈಗಿನ ಜಿಬಿಎ ಹಾಗೂ 5 ನಗರ ಪಾಲಿಕೆಗಳ ವಿಕೇಂದ್ರಿಕೃತ ವ್ಯವಸ್ಥೆಗೆ ಹೊಂದಿಕೊಳ್ಳಲು ಇನ್ನು ಸಮಯವಕಾಶ ಬೇಕಾಗುತ್ತದೆ. ಹೌದು.‌ ಆದರೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಂತಹ ಪ್ರಮುಖವಾದ ಕಾರ್ಯದಲ್ಲಿ ಪಾಲ್ಗೊಂಡವರಿಗೆ ಈತನಕ ಗೌರವ ಧನ ಪಾವತಿಯಾಗದಿರುವುದು ನಿಜಕ್ಕೂ ದುರ್ದೈವದ ಸಂಗತಿ ಎಂದು ಸಮೀಕ್ಷಾದಾರರು ಹಿಡಿಶಾಪ ಹಾಕುತ್ತಿದ್ದಾರೆ.

WhatsApp Join our WhatsApp Channel
Previous Post

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

Next Post

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

Next Post

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

Vidhana Soudha

ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group