Thursday, May 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

    ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

    ಸಿಬಿಎಸ್ಇಯಿಂದ ಕಡ್ಡಾಯ ಕನ್ನಡ ಕಲಿಕೆಗೆ ಅಡ್ಡಗಾಲು: ಎನ್ಒಸಿ ನಿಯಮ ಪರಿಷ್ಕರಣೆಗೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

    ದೇವಸ್ಥಾನಗಳ ಚಿನ್ನದ ಮೇಲೆ ಸರ್ಕಾರದ ಕಣ್ಣು? ಸಾಮಾಜಿಕ ಜಾಲತಾಣಗಳ ಸುದ್ದಿ ಸಂಪೂರ್ಣ ಸುಳ್ಳು ಎಂದ ಪಿಐಬಿ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಂಕಿ: ಜನಸಾಮಾನ್ಯರಿಗೆ ಮತ್ತೊಂದು ಶಾಕ್, ವಾರದಲ್ಲೇ ಎರಡನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ

    Agriculture News | ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ

    ​ಮೇ 20ರಿಂದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ‘ಕೆಲಸ ಮಾಡದಿದ್ದಾಗ, ವೇತನವಿಲ್ಲ’ ಎಚ್ಚರಿಕೆ ನೀಡಿದ ನಿಗಮ

    ಶ್ವಾಸಕೋಶ ಕ್ಯಾನ್ಸರ್ ರೋಗಿಗಳಿಗೆ ವರವಾದ ಹೊಸ ಇಂಜೆಕ್ಷನ್: ಇನ್ಮುಂದೆ ಗಂಟೆಗಟ್ಟಲೆ ಕಾಯಬೇಕಿಲ್ಲ, ಕೇವಲ 7 ನಿಮಿಷದಲ್ಲಿ ಚಿಕಿತ್ಸೆ

    ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

  • Bengaluru Focus

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

    ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

    ಸಿಬಿಎಸ್ಇಯಿಂದ ಕಡ್ಡಾಯ ಕನ್ನಡ ಕಲಿಕೆಗೆ ಅಡ್ಡಗಾಲು: ಎನ್ಒಸಿ ನಿಯಮ ಪರಿಷ್ಕರಣೆಗೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

    ದೇವಸ್ಥಾನಗಳ ಚಿನ್ನದ ಮೇಲೆ ಸರ್ಕಾರದ ಕಣ್ಣು? ಸಾಮಾಜಿಕ ಜಾಲತಾಣಗಳ ಸುದ್ದಿ ಸಂಪೂರ್ಣ ಸುಳ್ಳು ಎಂದ ಪಿಐಬಿ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಂಕಿ: ಜನಸಾಮಾನ್ಯರಿಗೆ ಮತ್ತೊಂದು ಶಾಕ್, ವಾರದಲ್ಲೇ ಎರಡನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ

    Agriculture News | ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ

    ​ಮೇ 20ರಿಂದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ‘ಕೆಲಸ ಮಾಡದಿದ್ದಾಗ, ವೇತನವಿಲ್ಲ’ ಎಚ್ಚರಿಕೆ ನೀಡಿದ ನಿಗಮ

    ಶ್ವಾಸಕೋಶ ಕ್ಯಾನ್ಸರ್ ರೋಗಿಗಳಿಗೆ ವರವಾದ ಹೊಸ ಇಂಜೆಕ್ಷನ್: ಇನ್ಮುಂದೆ ಗಂಟೆಗಟ್ಟಲೆ ಕಾಯಬೇಕಿಲ್ಲ, ಕೇವಲ 7 ನಿಮಿಷದಲ್ಲಿ ಚಿಕಿತ್ಸೆ

    ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

  • Bengaluru Focus

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

ಇನ್ನು ಮುಂದೆ ಗಡುವು ವಿಸ್ತರಣೆ ಇಲ್ಲ; ಜಿಬಿಎ 5 ಪಾಲಿಕೆಗಳ ಚುನಾವಣೆಗೆ ಕೊನೆಯ ಅವಕಾಶ.

by Bengaluru Wire Desk
May 20, 2026
in Bengaluru Focus, Public interest
Reading Time: 1 min read
0

ನವದೆಹಲಿ, ಮೇ.20 www.bengaluruwire.com: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಗೆ ಬರುವ ಐದು ನಗರ ಪಾಲಿಕೆಗಳ ಚುನಾವಣೆಯನ್ನು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಚುನಾವಣೆ ನಡೆಸಲು ಈ ಹಿಂದೆ ನೀಡಿದ್ದ ಜೂನ್ 30ರ ಗಡುವನ್ನು ಕೊನೆಯ ಅವಕಾಶವಾಗಿ ಆಗಸ್ಟ್ 31ರವರೆಗೆ ವಿಸ್ತರಿಸಿರುವ ನ್ಯಾಯಾಲಯ, “ಇನ್ನು ಮುಂದೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

​ನ್ಯಾಯಾಲಯದಲ್ಲಿ ನಡೆದ ವಾದ-ವಿವಾದ

​ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಗಳು ಜಂಟಿಯಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಬುಧವಾರ (ಮೇ.20) ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ನಡೆಸಿತು.

​ರಾಜ್ಯ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ರಾಜ್ಯದಲ್ಲಿ ಪ್ರಸ್ತುತ ವಿಶೇಷ ಪರಿಶೀಲನಾ ಕಾರ್ಯ (SIR exercise), ಮನೆ ಗಣತಿ ಹಾಗೂ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಇದರಿಂದ ಚುನಾವಣಾ ಪ್ರಕ್ರಿಯೆ ನಡೆಸಲು ತೀವ್ರ ಸಿಬ್ಬಂದಿ ಕೊರತೆ ಎದುರಾಗಿದೆ. ಹೀಗಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ಸೆಪ್ಟೆಂಬರ್ ವರೆಗೆ ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದರು.

​ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿವಾದಿಗಳ ಪರ ಹಿರಿಯ ವಕೀಲ ಕೆ. ಪರಮೇಶ್ವರ್, “ರಾಜ್ಯ ಸರ್ಕಾರವು ಈ ಹಿಂದೆ ಜೂನ್ 30ರೊಳಗೆ ಚುನಾವಣಾ ಪ್ರಕ್ರಿಯೆ ಮುಗಿಸುವುದಾಗಿ ಲಿಖಿತ ಭರವಸೆ ನೀಡಿತ್ತು. ಇದೀಗ ಮತ್ತೆ ಗಡುವು ವಿಸ್ತರಣೆ ಕೇಳುತ್ತಿರುವುದು ಚುನಾವಣೆ ಮುಂದೂಡುವ ತಂತ್ರವಷ್ಟೇ” ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಎರಡೂ ಕಡೆಯ ವಾದ ಆಲಿಸಿದ ಸುಪ್ರೀಂ ಕೋರ್ಟ್, ಅಂತಿಮವಾಗಿ ಆಗಸ್ಟ್ 31ರವರೆಗೆ ಮಾತ್ರ ಗಡುವು ವಿಸ್ತರಿಸಿ ಆದೇಶ ಹೊರಡಿಸಿತು.

​ಪ್ರಕರಣದ ಹಿನ್ನೆಲೆ ಮತ್ತು ವಿಳಂಬದ ಹಾದಿ

​ಆಡಳಿತಾಧಿಕಾರಿಗಳ ಆಡಳಿತ: 

ಬಿಬಿಎಂಪಿ ಚುನಾವಣೆ ಹಲವು ವರ್ಷಗಳಿಂದ ವಿಳಂಬವಾಗುತ್ತಿದ್ದು, ಜನಪ್ರತಿನಿಧಿಗಳಿಲ್ಲದೆ ಕೇವಲ ಆಡಳಿತಾಧಿಕಾರಿಗಳ ಸುಪರ್ದಿಯಲ್ಲಿ ಆಡಳಿತ ನಡೆಯುತ್ತಿದೆ. ಇದು ನಾಗರಿಕರ ಸಮಸ್ಯೆಗಳ ಪರಿಹಾರಕ್ಕೆ ಅಡ್ಡಿಯಾಗಿದೆ ಎಂಬ ಆರೋಪಗಳಿವೆ.

​ಹೈಕೋರ್ಟ್ ಆದೇಶ (2020): 2020ರ ಡಿಸೆಂಬರ್ 4ರಂದು ಕರ್ನಾಟಕ ಹೈಕೋರ್ಟ್, ಅಂತಿಮ ಮತದಾರರ ಪಟ್ಟಿ ಪ್ರಕಟವಾದ ಆರು ವಾರಗಳೊಳಗೆ ಬಿಬಿಎಂಪಿ ಚುನಾವಣೆ ಘೋಷಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.

​ಸುಪ್ರೀಂ ಕೋರ್ಟ್ ಪ್ರವೇಶ: ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿತ್ತು. 2020ರ ಡಿಸೆಂಬರ್ 18ರಂದು ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್, ನಂತರ 2022ರಲ್ಲಿ ವಾರ್ಡ್ ಮರುವಿಂಗಡಣೆಗೆ ಸೂಚಿಸಿತ್ತು.

​ಜೂನ್ 30ರ ಗಡುವು: ಇದೇ ಜನವರಿಯಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಗಡುವು ವಿಧಿಸಿತ್ತು. ಇದೀಗ ಈ ಗಡುವನ್ನು ಆಗಸ್ಟ್ 31ಕ್ಕೆ ವಿಸ್ತರಿಸಲಾಗಿದೆ. ಅಷ್ಟರೊಳಗೆ ಜಿಬಿಎ ವ್ಯಾಪ್ತಿಯಲ್ಲಿ 369 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ ಹಲವು ವರ್ಷಗಳಿಂದ ಚಾತಕಪಕ್ಷಿಗಳಂತೆ ಕಾಯುತ್ತಿರುವ ಅಭ್ಯರ್ಥಿಗಳು ಚುನಾವಣಾ ಆಖಾಡಕ್ಕೆ ಸಿದ್ದರಾಗಲು ಕಾಲ ಕೂಡಿ ಬಂದಂತಾಗಿದೆ.

WhatsApp Join our WhatsApp Channel
Previous Post

ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

Next Post

ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

Next Post

ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

Please login to join discussion

Like Us on Facebook

Follow Us on Twitter

Recent News

ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

May 20, 2026

GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

May 20, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

May 20, 2026

GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

May 20, 2026

ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

May 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group