Saturday, May 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

    ಎವರೆಸ್ಟ್ ಶಿಖರದಲ್ಲಿ ಮೊಳಗಿದ ‘ವಂದೇ ಮಾತರಂ’: ಬಿಎಸ್‌ಎಫ್‌ನ ಮೊದಲ ಮಹಿಳಾ ತಂಡದಿಂದ ಐತಿಹಾಸಿಕ ಸಾಧನೆ

    ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: 23 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

    ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

    ಸಿಬಿಎಸ್ಇಯಿಂದ ಕಡ್ಡಾಯ ಕನ್ನಡ ಕಲಿಕೆಗೆ ಅಡ್ಡಗಾಲು: ಎನ್ಒಸಿ ನಿಯಮ ಪರಿಷ್ಕರಣೆಗೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

    ದೇವಸ್ಥಾನಗಳ ಚಿನ್ನದ ಮೇಲೆ ಸರ್ಕಾರದ ಕಣ್ಣು? ಸಾಮಾಜಿಕ ಜಾಲತಾಣಗಳ ಸುದ್ದಿ ಸಂಪೂರ್ಣ ಸುಳ್ಳು ಎಂದ ಪಿಐಬಿ

  • Bengaluru Focus

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

    ಎವರೆಸ್ಟ್ ಶಿಖರದಲ್ಲಿ ಮೊಳಗಿದ ‘ವಂದೇ ಮಾತರಂ’: ಬಿಎಸ್‌ಎಫ್‌ನ ಮೊದಲ ಮಹಿಳಾ ತಂಡದಿಂದ ಐತಿಹಾಸಿಕ ಸಾಧನೆ

    ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: 23 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

    ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

    ಸಿಬಿಎಸ್ಇಯಿಂದ ಕಡ್ಡಾಯ ಕನ್ನಡ ಕಲಿಕೆಗೆ ಅಡ್ಡಗಾಲು: ಎನ್ಒಸಿ ನಿಯಮ ಪರಿಷ್ಕರಣೆಗೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

    ದೇವಸ್ಥಾನಗಳ ಚಿನ್ನದ ಮೇಲೆ ಸರ್ಕಾರದ ಕಣ್ಣು? ಸಾಮಾಜಿಕ ಜಾಲತಾಣಗಳ ಸುದ್ದಿ ಸಂಪೂರ್ಣ ಸುಳ್ಳು ಎಂದ ಪಿಐಬಿ

  • Bengaluru Focus

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಇಲಾಖೆ ದಿಟ್ಟ ಹೆಜ್ಜೆ; ಎಂಇಐ (MEI) ಸಂಸ್ಥೆಯಿಂದ ಸಿಎಸ್ಆರ್ ನಿಧಿಯಡಿ ಸುರಕ್ಷಾ ಕ್ಯಾಬಿನ್ ಹಸ್ತಾಂತರ.

by Bengaluru Wire Desk
May 22, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಮೇ.22 www.bengaluruwire.com: ರಾಜ್ಯಾದ್ಯಂತ ಬರೋಬ್ಬರಿ 50 ಸಾವಿರ ಕೋಟಿ ರೂಪಾಯಿ ಮೌಲ್ಯದ ಅರಣ್ಯ ಒತ್ತುವರಿ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

​ಬೆಂಗಳೂರಿನಲ್ಲಿ ಯಶವಂತಪುರ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ (MEI) ಸಂಸ್ಥೆಯ ಸಿಎಸ್ಆರ್ (CSR) ನಿಧಿ ಅಡಿಯಲ್ಲಿ, ಬಂಡೀಪುರ ಹಾಗೂ ಮಲೆಮಹದೇಶ್ವರ ಬೆಟ್ಟದ ದಟ್ಟ ಅರಣ್ಯ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರಣ್ಯ ಸಿಬ್ಬಂದಿಗಳಿಗೆ ಸುರಕ್ಷತೆಯ ದೃಷ್ಟಿಯಿಂದ ನಿರ್ಮಿಸಲಾದ ‘ಸುರಕ್ಷಾ ಕ್ಯಾಬಿನ್’ಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

​ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಕುಮಾರ್ ಪುಷ್ಕರ್, ಎಂ.ಇ.ಐ. ಸಂಸ್ಥೆಯ ಅಧ್ಯಕ್ಷ ಎಸ್.ಮನೋಹರ್, ವ್ಯವಸ್ಥಾಪಕ ನಿರ್ದೇಶಕಿ ಸಿ.ಅನಿತಾ ಹಾಗೂ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

​ಬೆಂಗಳೂರಿನಲ್ಲೇ 10 ಸಾವಿರ ಕೋಟಿ ರೂ. ಮೌಲ್ಯದ ಒತ್ತುವರಿ ತೆರವು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, “ರಾಜ್ಯದಲ್ಲಿ ಒತ್ತುವರಿಯಾಗಿದ್ದ ಅರಣ್ಯ ಭೂಮಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕೇವಲ ಬೆಂಗಳೂರು ನಗರ ವ್ಯಾಪ್ತಿಯಲ್ಲೇ 10 ಸಾವಿರ ಕೋಟಿ ರೂ. ಹಾಗೂ ರಾಜ್ಯಾದ್ಯಂತ ಒಟ್ಟು 50 ಸಾವಿರ ಕೋಟಿ ರೂ. ಬೆಲೆಬಾಳುವ ಒತ್ತುವರಿಯಾದ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ,” ಎಂದು ವಿವರಿಸಿದರು.

​ಮಾನವ-ವನ್ಯಜೀವಿ ಸಂಘರ್ಷ: ಸಚಿವರ ಕಳವಳ

ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದ ಸಚಿವರು, “ಹವಾಮಾನ ವೈಪರೀತ್ಯದಿಂದಾಗಿ ಮಳೆ, ಬೆಳೆ ಸರಿಯಾಗಿ ಆಗುತ್ತಿಲ್ಲ. ತಾಪಮಾನ 40ರಿಂದ 48 ಡಿಗ್ರಿವರೆಗೆ ತಲುಪುತ್ತಿರುವುದು ಆತಂಕಕಾರಿ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಿಶಿಷ್ಟ ಜೀವವೈವಿಧ್ಯತೆಯಿದೆ. ಆದರೆ ಇತ್ತೀಚೆಗೆ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗುತ್ತಿದೆ. ದುಬಾರೆ ಆನೆ ಶಿಬಿರದ ಬಳಿ ಆನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿರುವುದು ಅತ್ಯಂತ ಶೋಚನೀಯ,” ಎಂದು ವಿಷಾದ ವ್ಯಕ್ತಪಡಿಸಿದರು.

​ಬಂಡೀಪುರದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗಿದ್ದು, ದೇಶದಲ್ಲೇ ರಾಜ್ಯ 2ನೇ ಸ್ಥಾನದಲ್ಲಿದೆ. ಹಾಗೆಯೇ ಆನೆಗಳ ಸಂತತಿಯಲ್ಲಿ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಆದರೆ, ಪ್ರತಿ ವರ್ಷ ಮಾನವ-ಪ್ರಾಣಿ ಸಂಘರ್ಷದಲ್ಲಿ 30-40 ಸಾವುಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ ಎಂದರು.

​ಅರಣ್ಯ ರಕ್ಷಣೆಗೆ ಎಂಇಐ ಸಂಸ್ಥೆಯ ಸಾಥ್:

ಎಂ.ಇ.ಐ. ಸಂಸ್ಥೆಯ ಅಧ್ಯಕ್ಷ ಎಸ್.ಮನೋಹರ್ ಮಾತನಾಡಿ, “ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ನಮ್ಮ ಸಂಸ್ಥೆಯ ಸಿ.ಎಸ್.ಆರ್. ನಿಧಿಯಡಿ ಈಗಾಗಲೇ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ನೀಡಲಾಗಿದೆ. ವನ್ಯಜೀವಿಗಳ ದಾಳಿಯಿಂದ ರಕ್ಷಣೆ ಪಡೆಯಲು ಅರಣ್ಯ ಸಿಬ್ಬಂದಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸುರಕ್ಷಾ ಕ್ಯಾಬಿನ್ ನೀಡಲಾಗುತ್ತಿದೆ. 

ಅಷ್ಟೇ ಅಲ್ಲದೆ, ಆನೆ ದಾಳಿಗೆ ಒಳಗಾದ ವ್ಯಕ್ತಿಗಳಿಗೆ ನೆರವು, ಅರಣ್ಯಂಚಿನ ಶಾಲೆಗಳ ಅಭಿವೃದ್ಧಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಅರಣ್ಯ ಭೂಮಿ ಉಳಿಸುವಲ್ಲಿ ಸಚಿವ ಈಶ್ವರ್ ಖಂಡ್ರೆ ಅವರ ಶ್ರಮ ಅಪಾರವಾಗಿದೆ,” ಎಂದು ಪ್ರಶಂಸಿದರು.

WhatsApp Join our WhatsApp Channel
Previous Post

BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

Next Post

​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

Next Post

​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

Please login to join discussion

Like Us on Facebook

Follow Us on Twitter

Recent News

​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

May 22, 2026

ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

May 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

May 22, 2026

ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

May 22, 2026

BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

May 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group